Connect with us

DAKSHINA KANNADA

ಮಂಗಳೂರು ವಿವಿಯಲ್ಲಿ ಯಾವುದೇ ಹಗರಣ ನಡೆದಿಲ್ಲ: ಕುಲಪತಿ ಪ್ರೊ.ಯಡಪಡಿತ್ತಾಯ ಸ್ಪಷ್ಟನೆ

Published

on

ಮಂಗಳೂರು: ಮುಂದಿನ ವರ್ಷದಿಂದ ಡಿಜಿಟಲ್ ವೌಲ್ಯಮಾಪನದ ಅನಿವಾರ್ಯತೆ ಇದೆ. ಈ ಬಗ್ಗೆ ಇ ಟೆಂಡರ್ ಪ್ರಕ್ರಿಯೆ ನಡೆದಿದೆ. ಸಿಂಡಿಕೇಟ್ ಅನುಮತಿ ಪಡೆದು ಶೀಘ್ರವೇ ಕ್ರಮ ವಹಿಸಲಾಗುವುದು.

ಈ ಬಾರಿ ಕೋವಿಡ್ ಲಾಕ್‌ಡೌನ್ ಒತ್ತಡದ ನಡುವೆಯೂ ಪರೀಕ್ಷೆ ನಡೆಸಲಾದ ಕಾರಣ ಕೆಲವೊಂದು ಕಾಲೇಜುಗಳಲ್ಲಿ ಇಂಟರ್‌ನಲ್ ಪೇಪರ್ ಕೋಡ್ ಲಿಂಕ್ ಮಾಡುವಾಗ ಆಗಿರುವ ಸಮಸ್ಯೆಯಿಂದ ತೊಂದರೆ ಹಾಗೂ ವಿಳಂಬ ಆಗಿರುವುದು ನಿಜ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.

ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಕುರಿತಂತೆ ಸಮಸ್ಯೆ ಆಗಿರುವ 38 ಕಾಲೇಜುಗಳ ಪ್ರಾಂಶುಪಾಲರಿಂದ ದಾಖಲೆಗಳನ್ನು ಪಡೆದುಕೊಂಡು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗಿದೆ ಎಂದರು.

ಪರೀಕ್ಷಾಂಗ ವಿಭಾಗಕ್ಕೆ ಪ್ರತ್ಯೇಕ ವೆಬ್‌ಸೈಟ್‌ ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವೆಬ್‌ಸೈಟ್ ಮಾಡಲು ಸಿಂಡಿಕೇಟ್‌ ನಿಂದ ಅನುಮತಿ ದೊರಕಿದೆ.

ಮುಂದಿನ ದಿನಗಳಲ್ಲಿ ಈಗಿರುವ ಸಮಸ್ಯೆಗಳು ಬಗೆಹರಿಯಲಿವೆ ಎಂದು ಹೇಳಿದರು.

ಕರಾವಳಿ ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ವಿಚಾರಕ್ಕೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಇವರು ಇಂತಹ ಭಾವನಾತ್ಮಕ ವಿಚಾರಗಳಿಂದ ಕಾಲೇಜುಗಳಲ್ಲಿ ಕಲಿಕಾ ವಾತಾವರಣ ಕೆಡದಂತೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು.

ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ ಪಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ತಿಳಿಸಿದ್ದಾರೆ.

ಸಿಂಡಿಕೇಟ್ ಸದಸ್ಯರು, ನಗರದ ಕೆಲ ಪ್ರತಿಷ್ಠಿತ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಸಲಹೆ ಸೂಚನೆಗಳನ್ನು ಆದರಿಸಿ ಕೆಲವೊಂದು ಮಾರ್ಗಸೂಚಿಗಳನ್ನು ರಚಿಸಿ ಅದನ್ನು ಸಿಂಡಿಕೇಟ್ ಸಭೆಯ ಒಪ್ಪಿಗೆ ಪಡೆದು ಎಲ್ಲಾ ಕಾಲೇಜುಗಳಿಗೆ ಕಳುಹಿಸಲಾಗುವುದು ಎಂದರು.

ಈ ಕುರಿತಂತೆ ಈ ಸಂದರ್ಭ ಕುಲಸಚಿವರುಗಳಾದ ಪಿ.ಎಲ್. ಧರ್ಮ, ನಾರಾಯಣ, ಪ್ರೊ. ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

 

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

Published

on

 

ಸಾಂದರ್ಭಿಕ ಚಿತ್ರ

ಮಂಗಳೂರು : ವಿವಿಧ ಡಾಕ್ಯುಮೆಂಟ್ಸ್‌ ಗಳಿದ್ದ ಪರ್ಸೊಂದು ಕಳೆದುಹೋಗಿದೆ. ಚೇತನ್ ಎಂಬವರು ಬಂಟ್ವಾಳದಿಂದ ಕುಂಟಲ್ ಪಲ್ಕೆಯವರೆಗೆ ಆಟೋದಲ್ಲಿ ಪ್ರಯಾಣಿಸಿದ್ದು, ಈ ವೇಳೆ ಅವರ ಪರ್ಸ್  ಜೇಬಿನಿಂದ ಕೆಳಗೆ ಬಿದ್ದಿದೆ. ಅದರಲ್ಲಿ ಆಧಾರ್ ಕಾರ್ಡ್, ಹಣ ಹಾಗೂ ಇತರೆ ಡಾಕ್ಯುಮೆಂಟ್ಸ್‌ ಗಳಿದ್ದವು. ಯಾರಿಗಾದರೂ ಪರ್ಸ್ ಸಿಕ್ಕಿದ್ದಲ್ಲಿ 9036015784 ನಂಬರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Continue Reading

DAKSHINA KANNADA

ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

Published

on

ಮಂಗಳೂರು : ಹಂಚಿನ ಫ್ಯಾಕ್ಟರಿಯೊಂದರಲ್ಲಿ ಇಂದು(ಜ.20) ನಸುಕಿನ ಜಾವ ಆಕಸ್ಮಿಕವಾಗಿ ಬೆಂ*ಕಿ ಕಾಣಿಸಿಕೊಂಡ ಘಟನೆ ಮಂಗಳೂರಿನ ಹೊಯ್ಗೆ ಬಜಾರ್‌ನಲ್ಲಿ ನಡೆದಿದೆ. ಬೆಂ*ಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿ ಆತಂಕಕ್ಕೆ ಕಾರಣವಾಯಿತು.

ತಕ್ಷಣವೇ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಮತ್ತು ಕದ್ರಿ ಅ*ಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂ*ಕಿ ನಂದಿಸುವ ಕಾರ್ಯಾಚರಣೆ ಮಾಡಿದರು. ದಟ್ಟವಾದ ಹೊಗೆಯ ನಡುವೆಯೂ ಸಿಬ್ಬಂದಿ ಹರಸಾಹಸ ಪಟ್ಟು ಬೆಂ*ಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ :ಲಕ್ಷಾಂತರ ಮೌಲ್ಯದ ಗಾಂ*ಜಾ ಸಾಗಾಟ; ಇಬ್ಬರ ಬಂಧನ

ಬೆಂ*ಕಿಯ ತೀವ್ರತೆಗೆ ಕಾರ್ಖಾನೆಯ ಆವರಣದಲ್ಲಿ ಹಂಚು ಸು*ಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ವಸ್ತುಗಳು ಕಾರಣ ಎನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page