Connect with us

LATEST NEWS

WATCH VIDEO : ಮಣಿಪಾಲ ಬಸ್ ನಿಲ್ದಾಣದಲ್ಲಿ ಹೊಡೆದಾಡಿಕೊಂಡ ಕಂಡೆಕ್ಟರ್ – ಡ್ರೈವರ್; ಕಚ್ಚಿ, ಉರುಳಾಡಿ ಫೈಟ್!

Published

on

ಮಣಿಪಾಲ : ಟೈಮಿಂಗ್ಸ್ ವಿಚಾರದಲ್ಲಿ ಬಸ್ ಚಾಲಕ, ನಿರ್ವಾಹಕರು ಜಗಳವಾಡೋದು ಸಾಮಾನ್ಯ ಸಂಗತಿ. ಆದ್ರೆ, ಮಣಿಪಾಲದಲ್ಲಿ ದೊಡ್ಡ ಕಾ*ಳಗವೇ ನಡೆದಿದೆ. ಎರಡು ಬಸ್ಸಿನ ಸಿಬ್ಬಂದಿ ರಾಡ್ ಹಿ*ಡಿದು, ಕ*ಚ್ಚಿ, ಉರು*ಳಾಡಿ ಬಿಗ್ ಫೈಟ್ ಮಾಡಿದ್ದಾರೆ.  ಬಸ್ಸಿನಲ್ಲಿದ್ದವರ್ಯಾರೋ ಈ ಹೊ*ಡೆದಾಟದ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಈ ಬೀದಿ ಕಾಳಗ ನಡೆಸಿದ  ಅಲ್ಫಾಜ್ ಮತ್ತು ವಿಜಯಕುಮಾರ್ ಬಂಧಿತರು.

ಬಸ್ಸು ಚಾಲಕ ಅಲ್ಫಾಜ್ ಮತ್ತು ನಿರ್ವಾಹಕ ವಿಜಯಕುಮಾರ್ ನಡುವೆ ಆರಂಭದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಅದು ವಿ*ಕೋಪಕ್ಕೆ ತಿರುಗಿ ರಾ*ಡ್ ಹಿಡಿದುಕೊಂಡು ಹೊ*ಡೆದಾಡಿದ್ದಾರೆ. ಇವರಿಬ್ಬರ ಹೊ*ಡೆದಾಟವನ್ನು ಸಿಬ್ಬಂದಿಯೊಬ್ಬರು ತಡೆಯಲು ಬಂದರೂ ಕೊನೆಗೆ ಸಾಧ್ಯವಾಗದೆ ಪಕ್ಕಕ್ಕೆ ಸರಿದಿದ್ದಾರೆ.

ಇದನ್ನೂ ಓದಿ : ಬೆಳಾಲು ಕಾಡಿನಲ್ಲಿ ಅನಾಥ ಮಗು ಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್; ಕ್ರೂರ ಹೆತ್ತವರ ಗುರುತು ಪತ್ತೆ

ಇಬ್ಬರೂ ಹೊ*ಡೆದಾಡಿ, ನೆಲಕ್ಕೆ ಬಿ*ದ್ದು ಹೊರಳಾಡಿಕೊಂಡು ಕಿವಿ, ಮೂಗು ಕ*ಚ್ಚಿಕೊಂಡು ಹೊ*ಡೆದಾಟ ಮುಂದುವರಿಸಿದ್ದಾರೆ. ಮಾಹಿತಿ ಪಡೆದ ಮಣಿಪಾಲ ಪೊಲೀಸರು  ಆಗಮಿಸಿ ಎರಡೂ ಬಸ್ಸುಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನೂ ಬಂಧಿಸಿದ್ದಾರೆ. ಮಣಿಪಾಲ ಮತ್ತು ಮಂಗಳೂರು ನಡುವೆ ಸಂಚರಿಸುವ ಬಸ್ಸುಗಳ ಸಿಬ್ಬಂದಿ ಟೈಮಿಂಗ್ಸ್ ವಿಚಾರದಲ್ಲಿ ಹೊ*ಡೆದಾಡಿದ್ದಾರೆ ಎಂದು ಹೇಳಲಾಗಿದೆ. ಎರಡೂ ಬಸ್ ಸಿಬ್ಬಂದಿ ಪರಸ್ಪರ ಪ್ರತಿದೂರುಗಳನ್ನು ದಾಖಲಿಸಿದ್ದಾರೆ.

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading

DAKSHINA KANNADA

ಶಾಸಕ ಹರೀಶ್ ಪೂಂಜಾ ವಿರುದ್ದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

Published

on

ಉಪ್ಪಿನಂಗಡಿ : ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿತ್ತು. ಇಂದು(ಮೇ 20) ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜಾಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ : ಶಿಶಿಲದ ಶ್ರೀ ಶಿಶಿಲೇಶ್ವರನಿಗೆ ವಿಭಿನ್ನ ಶೈಲಿಯಲ್ಲಿ ತೆಪ್ಪೋತ್ಸವ

ಈ ನಡುವೆ ಪೊಲೀಸರು ಶಾಸಕ ಪೂಂಜಾ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಶಾಸಕ ಹರೀಶ್ ಪೂಂಜಾಗೆ ಮತ್ತೊಂದು ಹಿನ್ನಡೆಯಾಗಿದೆ.

Continue Reading

FILM

35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

Published

on

ಮಂಗಳೂರು/ಚೆನ್ನೈ: ವಯಸ್ಸು 47 ಆಗಿದ್ದರೂ ಬ್ಯಾಚುಲರ್ ಆಗಿಯೇ ಉಳಿದಿದ್ದ ನಟ ವಿಶಾಲ್ ಕೊನೆಗೂ ಏಕಾಂಗಿ ಜೀವನಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ಕೊನೆಗೂ ವಿಶಾಲ್ ಅವರು ಮದುವೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅವರು ಕೈ ಹಿಡಿಯಲಿರುವ ವಧು ಯಾರು ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

ಹೌದು, ವಿಶಾಲ್ ಕೃಷ್ಣ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಹಾಗಾದರೆ ಹುಡುಗಿ ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ತಮಿಳು ಚಿತ್ರರಂಗದ ಖ್ಯಾತ ನಟಿ ಸಾಯಿ ಧನ್ಶಿಕಾ ಜೊತೆ ವಿಶಾಲ್ ಹಸೆಮಣೆ ಏರಲಿದ್ದಾರೆ. ಇದು ಲವ್ ಮ್ಯಾರೇಜ್ ಕೂಡ ಹೌದು. ಆಗಸ್ಟ್‌ನಲ್ಲಿ ಮದುವೆ ಆಗೋದಾಗಿ ಸಿಹಿಸುದ್ದಿ ಕೊಟ್ಟಿದ್ದಾರೆ.

ಕಳೆದ 15 ವರ್ಷಗಳಿಂದ ಪರಿಚಿತರಾಗಿರುವ ಧನ್ಶಿಕಾ ಜೊತೆ ವಿಶಾಲ್ ಮದುವೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ‘ಯೋಗಿದ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶಾಲ್, ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಅವರ ಆಶೀರ್ವಾದೊಂದಿಗೆ ನಾನು ಅವಳನ್ನು ಪರಿಚಯಿಸುತ್ತಿದ್ದೇನೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ಪವಿತ್ರಾ ಪ್ರೀತಿಯಲ್ಲಿ ಬಿದ್ರಾ ದರ್ಶನ್‌!?

ಬಳಿಕ ಮಾತನಾಡಿದ ಧನ್ಶಿಕಾ, ನಮ್ಮ ಸುದ್ದಿ ವರದಿ ವೈರಲ್ ಆದ ನಂತರ ನಮ್ಮ ಸಂಬಂಧವನ್ನು ಅಧಿಕೃತಗೊಳಿಸುವಂತೆ ಒತ್ತಾಯಿಸಲಾಯಿತು ಎಂದರು. ನಾವಿಬ್ಬರು ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಲು ಬಯಸಿರಲಿಲ್ಲ. ಆದಾಗ್ಯೂ, ಇಂದು ಬೆಳಗ್ಗೆ ಸುದ್ದಿ ವರದಿ ವೈರಲ್ ಆಯಿತು. ಹೀಗಾಗಿ ಮರೆಮಾಡಲು ಏನೂ ಉಳಿದಿಲ್ಲ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ನಡಿಗರ್ ಸಂಘದ ಕಟ್ಟಡ ಆ.15ರಂದು ಉದ್ಘಾಟನೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ. ಆಗಸ್ಟ್‌ 29ರಂದು ವಿಶಾಲ್ ಅವರ ಹುಟ್ಟುಹಬ್ಬ. ಅದೇ ದಿನ ವಿವಾಹ ನಿಶ್ಚಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಫುಲ್‌ ಖುಷ್‌ ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page