Connect with us

DAKSHINA KANNADA

ಹೈಡ್ರೋಲಿಕ್‌ ಜ್ಯಾಕ್‌ ಮೂಲಕ ಮರವೂರು ಸೇತುವೆ ಲಿಫ್ಟ್‌: ಶೀಘ್ರದಲ್ಲಿ ಸಂಚಾರಕ್ಕೆ ಅನುವು

Published

on

ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆಯನ್ನು ಮತ್ತೆ ಸರಿಪಡಿಸಲಾಗುತ್ತಿದ್ದು, ಇದಕ್ಕಾಗಿ ಹೈಡ್ರೋಲಿಕ್‌ ಜ್ಯಾಕ್‌ ಬಳಸುವ ಮೂಲಕ ತಾತ್ಕಾಲಿಕವಾಗಿ ಸಂಚಾರಕ್ಕೆ ಅನುವು ಮಾಡಿಕೊಲಾಗುತ್ತದೆ.

ಮುಗರೋಡಿ ಕನ್‌ಸ್ಟ್ರಕ್ಸನ್‌ ಸಂಸ್ಥೆಯು ನಿನ್ನೆ ಬೆಳಿಗ್ಗೆಯಿಂದ ಇಂದು ಬೆಳಗಿನ ಜಾವದ ವರೆಗೆ ನಡೆದ ಕಾಮಗಾರಿಯಲ್ಲಿ 1000 ಟನ್‌ ತೂಕದ ಜ್ಯಾಕ್‌ ಮೂಲಕ ಕುಸಿತಗೊಂಡ ಸೇತುವೆಯನ್ನು ಮೇಲಕ್ಕೆತ್ತಿ ಸರಿಮಾಡುತ್ತಿದ್ದಾರೆ. ಈ ಹಿಂದೆ ಹೊನ್ನಾವರ ಸೇತುವೆಯಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗಿತ್ತು. ಪಿಡಬ್ಲೂಡಿ ಇಲಾಖೆಯ ಮಾರ್ಗದರ್ಶನದಲ್ಲಿ ಈ ಕಾಮಗಾರಿಯ ನಡೆಯುತ್ತಿದೆ.

ಜೂನ್‌.15ರಂದು ಮಂಗಳೂರಿನಿಂದ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕಟೀಲು ಕಡೆಗೆ ಸಂಪರ್ಕಿಸುವ ಸೇತುವೆ ಮೂರು ಅಡಿ ಕುಸಿತಗೊಂಡು ಬಿುರುಕು ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಸೇತುವೆಯ ಆ ಬದಿಯಲ್ಲಿರುವ ಬಜಪೆ, ಕಟೀಲುವಿನ ಜನರು ಮಂಗಳೂರು ಬರಬೇಕಾದರೆ ಜೋಕಟ್ಟೆ ಮೂಲಕ ಬರಬೇಕಾಗಿತ್ತು.

ಅದರಲ್ಲೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಸಹ ಜೋಕಟ್ಟೆ ಮೂಲಕ ಬರಬೇಕಾದುದರಿಂದ ಕೇರಳದ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾರೆ. ಇದರಿಂದ ಮಂಗಳೂರು ವಿಮಾನನಿಲ್ದಾಣಕ್ಕೆ ಬರುವ ಆದಾಯದಲ್ಲಿ ತುಂಬಾ ವ್ಯತ್ಯಯವಾಗಿದೆ. ಇದರಿಂದ ಈ ಸೇತುವೆಯನ್ನು ಸರಿಪಡಿಸಿ ಶೀಘ್ರದಲ್ಲಿಯೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದ ಪಿಡಬ್ಲ್ಯುಡಿ ಇಲಾಖೆ ತಿಳಿಸಿದೆ.

DAKSHINA KANNADA

ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ಚಿರತೆಯ ಶ*ವ ಪತ್ತೆ!

Published

on

ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾ*ವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ನಡೆದಿದೆ. ಉಳೆಪಾಡಿ ಸಾನದ ಬಳಿ ಇಂದು ಬೆಳಗ್ಗೆ(ಮಾ.16) ಚಿರತೆಯ ಶ*ವ ಕಂಡು ಬಂದಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ  ಹಲವು ಬಾರಿ ಚಿರತೆ ಕಂಡು ಬಂದಿದ್ದು, ಅನೇಕ ಕಡೆಗಳಲ್ಲಿ ಸಾಕು ನಾಯಿಗಳು ಚಿರತೆಗೆ ಆಹಾರವಾಗಿವೆ.

ಇದನ್ನೂ ಓದಿ  : ರಾಜ್ಯದಲ್ಲೇ ಅತೀ ದೊಡ್ಡ ಕಾರ್ಯಾಚರಣೆ; ಮಂಗಳೂರು ಸಿಸಿಬಿ ಪೊಲೀಸರಿಂದ ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ

ಹಲವು ಕಡೆಗಳಲ್ಲಿ ಚಿರತೆ ಓಡಾಡುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ದಾಖಲಾಗಿದ್ದು, ಕೆಲ ತಿಂಗಳ ಹಿಂದೆ ಮೂಲ್ಕಿಯಲ್ಲಿ ಮನೆಯೊಳಗೆ ಚಿರತೆ ನುಗ್ಗಿ ಸಮಸ್ಯೆಯುಂಟಾಗಿತ್ತು.

Continue Reading

DAKSHINA KANNADA

ಅಕ್ರಮ ಪಿಸ್ತೂಲ್ ಸಹಿತ ಅಂತಾರಾಜ್ಯ ಕ್ರಿಮಿನಲ್ ಬಂಧನ

Published

on

ಮಂಗಳೂರು : ಎರಡು ದಿನಗಳ ಹಿಂದೆ ಎರಡು ದಿನಗಳ ಹಿಂದೆ ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರು ಡ್ರಗ್ ಮಾರಾಟಗಾರ ಬಂಧನವಾಗಿತ್ತು. ಅವರಿಂದ 3 ಪಿಸ್ತೂಲ್, 6 ಸಜೀವ ಮದ್ದುಗುಂ*ಡುಗಳನ್ನು, ಕಾರುಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಬೆನ್ನು ಹತ್ತಿರುವ ಪೊಲೀಸರು, ಈ ಪೈಕಿ ಓರ್ವನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಬ್ದುಲ್ ಫೈಜಲ್.ಎಂ ಅಲಿಯಾಸ್ ಫೈಜು (26) ಬಂಧಿತ ಆರೋಪಿ. ಈತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಮೊರ್ತಾನಾ ಎಂಬಲ್ಲಿ ಮಾರ್ಚ್ 15 ರಂದು ಬಂಧಿಸಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲೇ ಅತೀ ದೊಡ್ಡ ಕಾರ್ಯಾಚರಣೆ; ಮಂಗಳೂರು ಸಿಸಿಬಿ ಪೊಲೀಸರಿಂದ ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ

ಆತನಿಂದ 1 ಪಿಸ್ತೂಲ್, 1 ಸಜೀವ ಮದ್ದು ಗುಂಡು ಹಾಗೂ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 2,10,000 ರೂ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಎರಡು ಹ*ಲ್ಲೆ ಪ್ರಕರಣಗಳು ದಾಖಲಾಗಿವೆ.

Continue Reading

DAKSHINA KANNADA

ರಾಜ್ಯದಲ್ಲೇ ಅತೀ ದೊಡ್ಡ ಕಾರ್ಯಾಚರಣೆ; ಮಂಗಳೂರು ಸಿಸಿಬಿ ಪೊಲೀಸರಿಂದ ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ

Published

on

ಮಂಗಳೂರು :  ‘ಡ್ರಗ್ ಫ್ರೀ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಪಣ ತೊಟ್ಟಿದ್ದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆಸಿದ್ದಾರೆ.  ಮಂಗಳೂರು ನಗರಕ್ಕೆ, ರಾಜ್ಯಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾ*ದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ದೇಶದ ವಿದೇಶಿ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿದ್ದಾರೆ.

ಬಾಂಬಾ ಫಾಂಟಾ ಅಲಿಯಾಸ್ ಅಡೋನಿಸ್ ಜಬುಲಿಲ್(31), ಅಬಿಗೈಲ್ ಅಡೋನಿಸ್(30) ಬಂಧಿತರು. ಇವರಿಂದ 75 ಕೋಟಿ ಮೌಲ್ಯದ 37.870 ಕೆಜಿ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಿಂಗ್ ಪೆಡ್ಲರ್‌ಗಳ ಹಿಂದೆ ಬಿದ್ದ ಸಿಸಿಬಿ ಪೊಲೀಸ್ :

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಉಳಿದುಕೊಂಡು ಮಾ*ದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಹೈದರ್ ಅಲಿಯಾಸ್ ಹೈದರ್ ಅಲಿ ಎಂಬಾತನನ್ನು 2024 ರಲ್ಲಿ ದಸ್ತಗಿರಿ ಮಾಡಲಾಗಿತ್ತು. ಆತನಿಂದ 15 ಗ್ರಾಂ  ಎಂಡಿಎಂಎಯನ್ನು ಸ್ವಾಧೀನಪಡಿಸಿಕೊಂಡು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಡ್ರಗ್ ಪೆಡ್ಲರ್‌ಗಳನ್ನು ಪತ್ತೆ ಹಚ್ಚುವ ಸಲುವಾಗಿ ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು.

ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಪ್ರಕರಣದಲ್ಲಿ ಹೈದರ್ ಆಲಿ ಮತ್ತು ಇನ್ನಿತರ ವ್ಯಕ್ತಿಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಡ್ರ*ಗ್ ಪೆಡ್ಲರ್ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ನೈಜೇರಿಯಾ ದೇಶದ ವಿದೇಶಿ ಪ್ರಜೆ ಪೀಟರ್ ಇಕೆಡಿ ಬೆಲೆನ್ವು ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ 6.248 ಕೆಜಿ ಮಾದಕ ವಸ್ತುವಾದ ಎಂಡಿಎಂಎಯನ್ನು ಈ ಹಿಂದೆ ವಶಪಡಿಸಿಕೊಳ್ಳಲಾಗಿತ್ತು.

ಪೀಟರ್‌ಗೆ ಮಾದಕ ವಸ್ತುವನ್ನು ಪೂರೈಕೆ ಮಾಡುವ ಕಿಂಗ್ ಪಿನ್ ಡ್ರಗ್ಸ್ ಪೆಡ್ಲರ್‌ಗಳನ್ನು ಪತ್ತೆ ಹಚ್ಚುವ ಸಲುವಾಗಿ ಕಳೆದ 6 ತಿಂಗಳಿನಿಂದ ಮಂಗಳೂರು ಸಿಸಿಬಿ ಪೊಲೀಸರು ನಿರಂತರ ತನಿಖೆ ನಡೆಸಿದ್ದು, ಈ ಪ್ರಕರಣದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಹಾಗೂ ದೇಶದ ಇತರ ಕಡೆಗಳಿಗೆ ಮಾದಕ ವಸ್ತುವಾದ ಎಂಡಿಎಂಎಯನ್ನು ಬೃಹತ್ ಪ್ರಮಾಣದಲ್ಲಿ ವಿದೇಶಿ ಮಹಿಳಾ ಪ್ರಜೆಗಳು ವಿಮಾನದಲ್ಲಿ ಸಾಗಾಟ ಮಾಡುವ ಬಗ್ಗೆ  ಮಾಹಿತಿ ದೊರೆತಿದೆ.

ಬೆಂಗಳೂರಿನ ಡ್ರಗ್ ಪೆಡ್ಲರ್ ಪೀಟರ್‌ ಇಕೆಡಿ ಬೆಲೆನ್ವುಗೆ ಮಾದಕ ವಸ್ತುವನ್ನು ಸಾಗಾಟ ಮಾಡಿದ ಆರೋಪಿಗಳು ಮಾರ್ಚ್ 14 ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ, ಆರೋಪಿಗಳನ್ನು ದಸ್ತಗಿರಿ ಮಾಡಲು ಮಂಗಳೂರು ಸಿಸಿಬಿ ಪೊಲೀಸರ ತಂಡ ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ಮಹಡಿಯಿಂದ ಬಿದ್ದು13 ವರ್ಷದ ಬಾಲಕ ಸಾ*ವು, ಪಬ್‌ಜಿ ಆಟದ ಬಗ್ಗೆ ಅನುಮಾನ..!

ದೆಹಲಿಯಿಂದ ವಿಮಾನದಲ್ಲಿ ಬಂದಿದ್ದ ದಕ್ಷಿಣ ಅಫ್ರಿಕಾ ದೇಶದ ಇಬ್ಬರು ಮಹಿಳಾ ಪ್ರಜೆಗಳನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹತ್ತಿರದ ನೀಲಾದ್ರಿ ನಗರ ಎಂಬಲ್ಲಿ ವಶಕ್ಕೆ ಪಡೆದುಕೊಂಡರು. ಈ ವೇಳೆ ಅವರ ವಶದಲ್ಲಿದ್ದ ಎರಡು ಟ್ರಾಲಿ ಟ್ರಾವೆಲ್ ಬ್ಯಾಗ್ ನಲ್ಲಿ ಸಾಗಿಸುತ್ತಿದ್ದ 75 ಕೋಟಿ ಮೌಲ್ಯದ 37.878 ಕೆಜಿ ಮಾದಕ ವಸ್ತುವಾದ ಎಂಡಿಎಂಎ, 4 ಮೊಬೈಲ್ ಫೋನುಗಳು, ಟ್ರಾಲಿ ಬ್ಯಾಗ್ ಗಳು 2, ಪಾಸ್ ಪೋರ್ಟ್2, ನಗದು 18,460 ರೂ. ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ದೆಹಲಿಯಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ವಿಮಾನದಲ್ಲಿ ಬೆಂಗಳೂರು ಹಾಗೂ ಇತರ ಕಡೆಗಳಿಗೆ ಸಾಗಾಟ ಮಾಡಿಕೊಂಡು ನೈಜೇರಿಯನ್ ಪ್ರಜೆಗಳಿಗೆ ಹಾಗೂ ಇತರ ಜನರಿಗೆ ಬೃಹತ್ ಪ್ರಮಾಣದಲ್ಲಿ ಮಾರಾಟ ಮಾಡಿಕೊಂಡು ಹಣವನ್ನು ಸಂಪಾದಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದರು  ಎಂಬುದು ತನಿಖೆ ವೇಳೆ ಬಯಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page