Connect with us

DAKSHINA KANNADA

ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌: ಇಬ್ಬರಿಗೂ ಕೊರೊನಾ ಸೋಂಕು ಇರಲಿಲ್ಲ-ಡೆತ್‌ ನೋಟ್‌ನಲ್ಲಿ ಏನಿತ್ತು? ಫುಲ್ ಡಿಟೇಲ್ಸ್‌

Published

on

ಮಂಗಳೂರು: ಇಂದು ಬೆಳಿಗ್ಗೆ ಬೈಕಂಪಾಡಿಯ ಚಿತ್ರಾಪುರ ಬಳಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಕೊರೊನಾ ಸೋಂಕಿನ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಡೆತ್ ನೋಟಲ್ಲಿ ನಮಗೆ ಕೊರೊನಾ ಇದೆ, ಬ್ಲ್ಯಾಕ್ ಫಂಗಸ್ ಬಂದರೆ ಸಮಸ್ಯೆ ಅಂತೆಲ್ಲಾ ಬರೆದಿದ್ದಾರೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಇರುವ ಬಗ್ಗೆ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.
ಕೊರೊನಾ ಭಯದಿಂದ ನಾನು ಮತ್ತು ನನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬೆಳಗ್ಗೆ 6.40ರ ಹೊತ್ತಿಗೆ ಕಮಿಷನರ್​ಗೆ ವಾಟ್ಸಾಪ್ ಮೆಸೇಜ್ ಮತ್ತು ಕಾಲ್ ಬಂದಿದೆ. ಈ ವೇಳೆ ತಕ್ಷಣ ಕಮಿಷನರ್ ಕಾಲ್ ಮಾಡಿದರೂ ಅವರು ಎತ್ತಲಿಲ್ಲ. ವಾಯ್ಸ್ ಮೆಸೇಜ್ ಮಾಡಿ ಧೈರ್ಯ ತುಂಬಿದರೂ ರಿಪ್ಲೈ ಮಾಡಿಲ್ಲ. ನಂತರ ಲೊಕೇಶನ್ ಟ್ರೇಸ್ ಮಾಡಿ, ಪೊಲೀಸ್ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಡಿಸಿಪಿ ಹರಿರಾಂ ಶಂಕರ್ ಮಾಹಿತಿ ನೀಡಿದರು.
ಅವರೇ ಸ್ವಂತ ನಿರ್ಧಾರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಸಲ ಮಗು ಪಡೆಯಲು ಯತ್ನಿಸಿ ವಿಫಲರಾಗಿದ್ದು, ಇದರ ಖಿನ್ನತೆ ಇರಬಹುದು. ಆದರೆ ಇವರು ಯಾರ ಜೊತೆಗೂ ಹೆಚ್ಚಾಗಿ ಬೆರೆತ ಬಗ್ಗೆ ಮಾಹಿತಿಯಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.
ಇನ್ನು ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಬಹಳ ನೋವಿನ ಸಂಗತಿಯಾಗಿದೆ. ಕೊರೊನಾ ಸೋಂಕು ಬಂದ ಕೂಡಲೇ ಯಾರೂ ಸಾಯಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾಡಿಕೊಂಡಿರಬಹುದು. ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಕೊರೊನಾ ಲಕ್ಷಣ ಕಂಡುಬಂದರೆ ತಪಾಸಣೆ ಮಾಡಿಸಿಕೊಳ್ಳಿ. ಆರೋಗ್ಯ ಇಲಾಖೆ, ವೈದ್ಯರು ನಿಮ್ಮ ಜೊತೆ ಇರುತ್ತಾರೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.
ಡೆತ್‌ ನೋಟ್‌ನಲ್ಲಿ ಏನಿತ್ತು?
ನಾನು ಗುಣ ಆರ್‌ ಸುವರ್ಣ,
ಈ ದಿನ ನಾನು ಮತ್ತು ನನ್ನ ಗಂಡ ಆತ್ಮಹತ್ಯೆಯ ನಿರ್ಧಾರವನ್ನು ನನ್ನ ಆರೋಗ್ಯದ ಈ ಸ್ಥಿತಿಯಲ್ಲಿ ಮಾಡಿರುತ್ತೇನೆ. ನನಗೆ 14ನೇ ವಯಸ್ಸಿನಲ್ಲಿ ಸರ್ಜರಿ ನಡೆದಿದೆ. 2000ನೇ ಇಸವಿಯಲ್ಲಿ ನಮಗೆ ಮದುವೆಯಾಗಿತ್ತು. 2001ರಲ್ಲಿ 1 ಪ್ರೆಗ್ನೆನ್ಸಿನಲ್ಲಿ 5ನೇ ತಿಂಗಳಿನಲ್ಲಿ ಸಕ್ಕರೆ ಖಾಯಿಲೆ ಕಂಡು ಬಂತು. ಆ ನಂತರ 2002 ಜನವರಿ 25ರಂದು ಸೋನಿಯಾ ಆಸ್ಪತ್ರೆ ಮಣಿಪಾಲದಲ್ಲಿ ಡೆಲಿವರಿ ಆಗಿ ಗಂಡು ಮಗು ಜನಿಸಿತ್ತು. ಮಗುವಿನ ಆರೋಗ್ಯ ಸಮಸ್ಯೆ ಕಂಡು ಬಂದು 12 ದಿನದಲ್ಲಿ ತೀರಿಕೊಂಡಿತ್ತು. ನಂತರ 2005ರಲ್ಲಿ ಮತ್ತೆ ಪ್ರಗ್ನೆಂಟ್‌ ಆದಾಗ ectopic pregencyಯಿಂದ surgery ಮಾಡಬೇಕಾದ ಸಂದರ್ಭ ಬಂದಿತ್ತು. ಮಂಗಳೂರಿನ ನರ್ಸಿಂಗ್‌ ಹೋಮ್‌ನ ವೈದ್ಯರು ಸರ್ಜರಿ ಮಾಡಿದ್ದರು. ಆಗ ನನಗೆ ಮೆಡಿಸಿನ್‌ ರಿಯಾಕ್ಟ್‌ ಆಗಿತ್ತು. ಆ ನಂತರ ನನಗೆ ಮೆಡಿಸಿನ್‌ ಅಷ್ಟಾಗಿ ನಡೆಯುತ್ತಿಲ್ಲ. ಶುಗರ್‌ ಕಂಟ್ರೋಲ್‌ ಸಿಗುತ್ತಿಲ್ಲ. 2020ರಿಂದ ಕೊರೋನಾ ಶುರು ಆದ ಮೇಲೆ ನಾನು ತುಂಬಾ ಜಾಗ್ರತೆ ಮಾಡಿಸುತ್ತಿದ್ದೇನೆ. ಆದರೆ ನನಗೆ 1 ವಾರದಿಂದ ಕೋವಿಡ್‌ನ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಆರೋಗ್ಯ ಸ್ಥಿತಿ ತುಂಬಾ ಹದಗೆಡುತ್ತಿದೆ. ನನಗೆ ಯಾವುದೇ ಮೆಡಿಸಿನ್‌ ತೆಗೆದುಕೊಂಡಾಗ ರಿಯಾಕ್ಷನ್‌ ಆಗಿ ಹಾಸ್ಪಿಟಲ್‌ಗೆ ಅಡ್ಮಿಟ್‌ ಆಗಲು ತುಂಬಾ ಭಯವಿದೆ. ಮಾಧ್ಯಮದಲ್ಲಿ ಕೊರೋನಾ ಬಗ್ಗೆ ನ್ಯೂಸ್‌ ನೋಡುವಾಗ ಸಕ್ಕರೆ ಖಾಯಿಲೆ ಇರುವವರಿಗೆ ಬ್ಲಾಕ್‌ ಫಂಗಸ್‌ನಿಂದ ಕಣ್ಣು ಹಾಗೂ ಶರೀರದ ಅಂಗಾಂಗಗಳನ್ನು ಕಳೆದುಕೊಂಡಿದ್ದು ನೋಡಿದಾಗ, ನನ್ನ ಆರೋಗ್ಯದಲ್ಲಿ ಆದ ಬದಲಾವಣೆಯನ್ನು ನೋಡಿದಾಗ ನನಗೂ ಆ ಥರ ಆಗಬಹುದೆಂಬ ಭಯ ಕಾಡುತ್ತಿದೆ. ಇಂತಹ ಸಮಯದಲ್ಲಿ ನಮಗೆ ಜೀವನವೇ ಬೇಡ ಎನ್ನುವ ಮನಸ್ಥಿತಿಗೆ ಬಂದಿದ್ದೇವೆ. ಆದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.
ನನ್ನ ತಂದೆ-ತಾಯಿ ಹಾಗೂ ತಮ್ಮನಿಗೂ ಕೋವಿಡ್‌ ಸೋಂಕು ತಗುಲಿ ಚೇತರಿಸಿಕೊಂಡಿದ್ದಾರೆ. ನನ್ನ ತಾಯಿ ಕೋವಿಡ್‌ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ತುಂಬಾ ಕಷ್ಟದಿಂದ ಚೇತರಿಸಿಕೊಂಡಿದ್ದಾರೆ. ಆದುದರಿಂದ ಅವರಿಗೆ ನಮ್ಮ ಅಂತ್ಯಕ್ರಿಯೆಯ ತೊಂದರೆ ಕೊಡಬಾರದಾಗಿ ವಿನಂತಿಸಿಕೊಳ್ಳುತ್ತಿದ್ದೇನೆ
ನನಗೆ 2 ಸಲ ಮಕ್ಕಳ ಸಮಸ್ಯೆ ಆದುದರಿಂದ ಎಲ್ಲಿ ಹೋದರೂ ಮಕ್ಕಳ ಬಗ್ಗೆಯೇ ಕೇಳುತ್ತಾರೆ. ಅದಕ್ಕಾಗಿ ನಾನು ಯಾರೊಂದಿಗೂ ಹೆಚ್ಚಾಗಿ ಬೆರೆಯಲು ಇಷ್ಟಪಡುವುದಿಲ್ಲ. ನಾನು ಮತ್ತು ನನ್ನ ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್‌ ಪಂಪ್‌ವೆಲ್‌ ಹಾಗೂ ಸತ್ಯಜಿತ್‌ ಸುರತ್ಕಲ್‌ ಅವರಲ್ಲಿ ವಿನಂತಿಸುವುದೇನೆಂದರೆ ನಮ್ಮಿಬ್ಬರ ಅಂತ್ಯಕ್ರಿಯೆಯನ್ನು ಹಿಂದೂ ಧರ್ಮದ ಪ್ರಕಾರ ಮಾಡಬೇಕಾಗಿ ವಿನಂತಿಸುತ್ತಿದ್ದೇವೆ. ನಮ್ಮ ಅಂತ್ಯಕ್ರಿಯೆಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ಇಟ್ಟಿದ್ದೇವೆ. ನಮ್ಮ ಅಂತ್ಯಕ್ರಿಯೆಗೆ ಮಂಗಳೂರಿನ ಕಮಿಷನರ್‌ ಆದ ಶಶಿಕುಮಾರ್‌ ಸರ್‌, ಶರಣ್‌ ಪಂಪ್‌ವೆಲ್‌ ಹಾಗೂ ಸತ್ಯಜಿತ್‌ ಸುರತ್ಕಲ್‌ ಅವರೊಂದಿಗೆ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ. ನನ್ನ ಹಾಗೂ ನನ್ನ ಗಂಡನ ಮನೆಯವರಿಗೆ ಈ ವಸ್ತುಗಳ ಅವಶ್ಯಕತೆ ಇರುವುದಿಲ್ಲ. ನಮ್ಮ ಮನೆಯ ಮಾಲೀಕರೇ ನಮ್ಮನ್ನು ಕ್ಷಮಿಸಿ.
ಇಂತೀ
ಗುಣ

DAKSHINA KANNADA

ಪುತ್ತೂರು : 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

Published

on

ಪುತ್ತೂರು : ಷರತ್ತು ಬದ್ದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಪುತ್ತೂರು ಕಸಬಾ ಗ್ರಾಮದ ಅಬ್ಬಾಸ್ ಆಲಿ ಅಲ್ತಾಫ್‌(55) ಬಂಧಿತ ಆರೋಪಿ.  ಮಂಗಳೂರು ಕುಲಶೇಖರ ಬಿಕರ್ನಕಟ್ಟೆ ಬಳಿ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : NSUI ನಾಯಕನ ಮೇಲೆ ತಲವಾರು ದಾ*ಳಿ ಪ್ರಕರಣ; ಐವರು ಅರೆಸ್ಟ್

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 27ರ ವರೆಗೆ  ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

DAKSHINA KANNADA

ಲಕ್ಷ್ಮಣ ಮರಕಡರಿಗೆ ಯಕ್ಷ ಸವ್ಯಸಾಚಿ ಬಿರುದು ಪ್ರದಾನ

Published

on

ಮಂಗಳೂರು : ಶ್ರೀಕಟೀಲು ಮೇಳದ ಕಲಾವಿದ, ಯಕ್ಷ ಗುರು ಲಕ್ಷ್ಮಣ ಕುಮಾರ್ ಮರಕಡರಿಗೆ ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀಭಗವದ್ಗೀತಾಮೃತ ಪುರಸ್ಕಾರದೊಂದಿಗೆ “ಯಕ್ಷ ಸವ್ಯ ಸಾಚಿ” ಬಿರುದು ನೀಡಿ ಗೌರವಿಸಲಾಯಿತು.

ಶ್ರೀ ಮದ್ ಭಗವದ್ಗೀತೆಯ  ಪ್ರಚಾರಕ, ಆಧ್ಯಾತ್ಮಿಕ ಗುರು ಸುಬ್ರಾಯ  ನಂದ್ಯೋಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಲಕ್ಷ್ಮಣ ಅವರು ಗಣೇಶ ಪುರ, ಸುರತ್ಕಲ್ ಸದಾಶಿವ ಮಹಾಗಣಪತಿ, ತಲಕಳ, ಬಪ್ಪನಾಡು, ಉಳ್ಳಾಲ ಚೀರುಂಭ ಭಗವತೀ , ಸಸಿಹಿತ್ಲು ಭಗವತಿ, ಎಡನೀರು ಮೇಳಗಳಲ್ಲಿ ತಿರುಗಾಟ ಮಾಡಿ ಕಟೀಲು  ಮೇಳದಲ್ಲಿ ಈಗ 7ನೇ ವರ್ಷದ  ತಿರುಗಾಟ ಮಾಡುತ್ತಿರುವ ನಿಷ್ಠಾವಂತ ಕಲಾಸಾಧಕ.

ಕಾಸರಗೋಡು ಮತ್ತು ಮಂಗಳೂರು ಪರಿಸರದಲ್ಲಿ ಯಕ್ಷಗಾನ ಶಿಕ್ಷಕನಾಗಿ ತರಗತಿ ನಡೆಸಿ ಸಮೃದ್ಧ ಶಿಷ್ಯ ಗಡಣ ಹೊಂದಿರುವ ಯಕ್ಷ ಗುರು.ಆಮೇರಿಕಾ, ಮಸ್ಕತ್, ಆಸ್ಟ್ರೇಲಿಯಾ, ದುಬೈ ದೇಶಗಳಲ್ಲಿ ಪುಂಡು, ಸ್ತ್ರೀ,ರಾಜವೇಷ,ಹಾಸ್ಯ, ಎದುರು ವೇಷಗಳೆಲ್ಲವನ್ನೂ ಸಮರ್ಥವಾಗಿ ನಿರ್ವಹಿಸುತ್ತಿರುವ  ಅಪೂರ್ವ ಯಕ್ಷ ಕಲಾ ಸಾಧಕ ಎಂದು ಕದ್ರಿ ನವನೀತ ಶೆಟ್ಟಿ ಅಭಿನಂದಿಸಿದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಕಾರ್ಯಕ್ರಮದಲ್ಲಿ  ಯಕ್ಷಗಾನ ಅಕಾಡೆಮಿ ಸದಸ್ಯ ಮೋಹನ್ ಕೊಪ್ಪಳ ಕದ್ರಿ, ಡಾ.ಶಶಾಂಕ್ ಮತ್ತಿತ್ತರರು ಉಪಸ್ಥಿತರಿದ್ದರು. ಮೇಳದ ಎಲ್ಲಾ ಕಲಾವಿದರಿಗೆ ಸೇವಾಕರ್ತರಾದ ಗೀತಾ ಪ್ರಚಾರಕಿ ಸವಿತಾ ಕೊರಗಪ್ಪ ಅವರು ಅರ್ಥ ಸಹಿತ ಭಗವದ್ಗೀತೆಯನ್ನು ವಿತರಿಸಿದರು. ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಸೇವೆ ಬಯಲಾಟ ಜರುಗಿತು.

 

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page