Connect with us

LATEST NEWS

ತಾನೇ ಗಂಡನ ಕೊಲೆ ಮಾಡಿಸಿದ್ದಾಗಿ ಒಪ್ಪಿಕೊಂಡ ಸೋನಮ್; ಮಂಗಳಸೂತ್ರ ನೀಡಿತ್ತು ಕಿರಾತಕಿಯ ಸುಳಿವು!

Published

on

ಮಂಗಳೂರು/ಶಿಲ್ಲಾಂಗ್: ಮೇಘಾಲಯದ ಶಿಲ್ಲಾಂಗ್‌ಗೆ ಹನಿಮೂನ್‌ಗೆ ಹೋಗಿದ್ದಾಗ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಸೋನಮ್ ರಘುವಂಶಿ ಸುದ್ದಿ ದೇಶಾದ್ಯಂತ ಸದ್ದು ಮಾಡಿತ್ತು. ಇದೀಗ ಕೊನೆಗೂ ತಾನೇ ಆ ಕೊಲೆ ಮಾಡಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ಈ ಮಧ್ಯೆ ರಾಜಾ ರಘುವಂಶಿ ಕೊಲೆ ನಂತರ ಸೋನಮ್ ಪತ್ತೆಯಾಗಿದ್ದು ಹೇಗೆ ಎಂದು ಮೇಘಾಲಯ ಪೊಲೀಸ್ ಮಹಾನಿರ್ದೇಶಕ ಐ ನೊಂಗ್ರಾಂಗ್ ಬಿಚ್ಚಿಟ್ಟಿದ್ದಾರೆ.


ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದರು.

ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಡುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

ಮಂಗಳಸೂತ್ರ ನೀಡಿತ್ತು ಕಿರಾತಕಿಯ ಸುಳಿವು!
ರಾಜಾ ರಘುವಂಶಿ ಮೃತದೇಹ ಪತ್ತೆಯಾದ ಬಳಿಕ ಸೋನಂಗಾಗಿ ಪೊಲೀಸರು ಹುಡುಕಾಟ ಚುರುಕುಗೊಳಿಸಿದ್ದರು. ನಾಪತ್ತೆಯಾಗಿದ್ದ ಸೋನಂ ಜೂ.9ರಂದು ಘಟನೆ ನಡೆದ ಸ್ಥಳದಿಂದ ಸುಮಾರು 1200 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಘಾಜಿಪುರದಲ್ಲಿ ಶರಣಾಗಿದ್ದಳು. ಪೊಲೀಸರು ಸೋನಂ ಗೆಳೆಯ ರಾಜ್ ಕುಶ್ವ ಮತ್ತು ಮೂರು ಬಾಡಿಗೆ ಹಂತಕರನ್ನು ಬಂಧಿಸಿದ್ದರು.

ಅಷ್ಟಕ್ಕೂ ಸೋನಂ ಸುಳಿವು ಸಿಕ್ಕಿದ್ದು ಹೇಗೆಂದರೆ, ಸೋಹ್ರಾ ಹೋಮ್ ಸ್ಟೇನಲ್ಲಿ ಬಿಟ್ಟುಹೋಗಿದ್ದ ಸೂಟ್‌ಕೇಸ್‌ನಲ್ಲಿ ಇರಿಸಿದ್ದ ಸೋನಂ ಮಂಗಳಸೂತ್ರ ಮತ್ತು ಉಂಗುರ ಈ ಘಟನೆಯಲ್ಲಿ ಆರೋಪಿಗಳ ದೊಡ್ಡ ಸುಳಿವು ನೀಡಿದೆ ಎಂದು ಮೇಘಾಲಯ ಡಿಜಿಪಿ ಐ ನೊಂಗ್ರಾಂಗ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು,”ವಿವಾಹಿತ ಮಹಿಳೆಯೊಬ್ಬರು ಆಭರಣಗಳನ್ನು ಬಿಟ್ಟು ಹೋಗಿರುವುದು, ಪ್ರಕರಣದಲ್ಲಿ ಶಂಕಿತಳಾಗಿ ಆಕೆಯನ್ನು ಬೆನ್ನಟ್ಟಲು ನಮಗೆ ಸುಳಿವು ನೀಡಿತು”ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಘಾಲಯದ ಹನಿಮೂನ್ ದುರಂತಕ್ಕೆ ಬಿಗ್ ಟ್ವಿಸ್ಟ್; ಗಂಡನ ಕೊ*ಲೆಯ ಹಿಂದೆ ಪತ್ನಿ ಕೈವಾಡ

ಕೊನೆಗೂ ಸತ್ಯ ಒಪ್ಪಿಕೊಂಡ ಸೋನಂ!
ಈ ಮೊದಲು ದರೋಡೆಕೋರರು ಆತನನ್ನು ಕೊಲೆ ಮಾಡಿದರು ಎಂದು ಕತೆ ಕಟ್ಟಿದ್ದ ಸೋನಂ ಇದೀಗ ತಾನೇ ಕೊಲೆ ಮಾಡಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ವರದಿಗಳ ಪ್ರಕಾರ, ಮುಖ್ಯವಾದ ಸಾಕ್ಷಿಗಳನ್ನು ಪ್ರಸ್ತುತಪಡಿಸಿದಾಗ ಸೋನಂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಮೇಘಾಲಯ ಪೊಲೀಸರ ಸಮ್ಮುಖದಲ್ಲಿ ಮಾಡಿದ ಅವರ ತಪ್ಪೊಪ್ಪಿಗೆಯು ಪೂರ್ವಯೋಜಿತ ಕೊಲೆಯಲ್ಲಿ ಅವರ ಭಾಗವಹಿಸುವಿಕೆ ಇದೆ ಎಂದು ದೃಢಪಡಿಸಿತು.

ಪೋಷಕರ ಮನೆಯಲ್ಲಿದ್ದಾಗ ಕೊಲೆ ಪ್ಲಾನ್ ಮಾಡಿದ್ದಳು ಹಂತಕಿ ಪತ್ನಿ
ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಸೋನಮ್ ಬೇರೆಡೆಗೆ ಹೋಗುವ ಮೊದಲು ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಒತ್ತಾಯಿಸುವ ಮೂಲಕ ರಾಜನನ್ನು ಭಾವನಾತ್ಮಕವಾಗಿ ಒಲಿಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಗುವಾಹಟಿಗೆ ಮತ್ತು ನಂತರ ಮೇಘಾಲಯಕ್ಕೆ ಪ್ರಯಾಣಿಸಲು ಅವಳು ಅವನನ್ನು ಮನವೊಲಿಸಿದ್ದಳು. ಅಲ್ಲಿ ಅವನನ್ನು ಕೊಲೆ ಮಾಡಲಾಯಿತು. ಇದೆಲ್ಲವನ್ನೂ ಮದುವೆಯ ನಂತರ ಅವಳು ತನ್ನ ಪೋಷಕರ ಮನೆಯಲ್ಲಿದ್ದಾಗ ಪ್ಲಾನ್ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಲಾನ್ 1 ಫೈಲ್ ಆದರೆ ಪ್ಲಾನ್ 2 ರೆಡಿ ಮಾಡಿದ್ದ ಸೋನಂ!
ರಾಜಾ ರಘುವಂಶಿ ಮತ್ತು ಸೋನಮ್ ಅವರ ಮದುವೆಯಾಗಿ 4 ದಿನಗಳ ನಂತರ ಮೇ 15ರಂದು ತನ್ನ ತಾಯಿಯ ಮನೆಗೆ ಮರಳಿದ್ದರು. ಅಲ್ಲಿಂದ, ಅವರು ಪ್ರಯಾಣ ಟಿಕೆಟ್‌ಗಳನ್ನು ಬುಕ್ ಮಾಡಿದ್ದರು ಮತ್ತು ಪ್ರಿಯಕರ ರಾಜ್ ಅವರೊಂದಿಗೆ ಫೋನ್ ಮೂಲಕ ಸಂಪೂರ್ಣ ಪ್ಲಾನ್ ಮಾಡಿದ್ದಳು. ಇಂದೋರ್‌ನಲ್ಲಿ ಮೇಘಾಲಯ ಪೊಲೀಸರು ಆರೋಪಿಯ ಆರಂಭಿಕ ವಿಚಾರಣೆಯ ಸಮಯದಲ್ಲಿ, ಸೋನಮ್‌ನ ಒಳಗೊಳ್ಳುವಿಕೆಯ ಪ್ರಮಾಣವು ಬೆಳಕಿಗೆ ಬಂದಿತು ಎಂದು ವರದಿಯಾಗಿದೆ. ಒಂದುವೇಳೆ ವಿಶಾಲ್, ಆನಂದ್ ಮತ್ತು ಆಕಾಶ್ ಎಂದು ಗುರುತಿಸಲ್ಪಟ್ಟಿರುವ ತನ್ನ ಸ್ನೇಹಿತರು ರಾಜನನ್ನು ಕೊಲ್ಲಲು ವಿಫಲವಾದರೆ, ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ಅವನನ್ನು ಬೆಟ್ಟದ ಸ್ಥಳಕ್ಕೆ ಕರೆದೊಯ್ದು ಕೊಲ್ಲುವುದಾಗಿ ಸೋನಮ್ ರಾಜ್‌ಗೆ ಹೇಳಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಅಪರಾಧ ಬಹಿರಂಗವಾದರೆ ನೇಪಾಳಕ್ಕೆ ಪರಾರಿಯಾಗಲು ಇಬ್ಬರೂ ಪ್ಲಾನ್ ಮಾಡಿದ್ದರು ಎಂದು ವರದಿಯಾಗಿದೆ.

 

 

 

LATEST NEWS

IND vs ENG: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೆಯಿಂಗ್ 11 ಪ್ರಕಟ

Published

on

ಮಂಗಳೂರು/ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಎರಡು ತಂಡಗಳು ಈಗಾಗಲೇ ಪ್ಲೇಯಿಂಗ್​ ಇಲೆವೆನ್ ಘೋಷಿಸಿದೆ.


ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಎರಡನೇ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದ ವೇಗಿ ಬುಮ್ರಾ ತಂಡಕ್ಕೆ ವಾಪಸ್ಸಾಗಿದ್ದು, ಪ್ರಸಿದ್ದ್ ಕೃಷ್ಣ ಅವರು ಜಾಗ ಬಿಟ್ಟಿದ್ದಾರೆ. ಕನ್ನಡಿಗ ಕರುಣ್ ನಾಯರ್‌ಗೆ ಈ ಬಾರಿಯೂ ಅವಕಾಶ ದೊರೆತಿದ್ದು, ಸವಾಲಿನ ಪಿಚ್‌ನಲ್ಲಿ ರನ್‌ ಮಳೆ ಸುರಿಸಬೇಕಾದ ಒತ್ತಡದಲ್ಲಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೋಶ್ ಟಂಗ್ ಬದಲಿಗೆ ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಆಗಮಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳು
ಇಂಗ್ಲೆಂಡ್ : ಜಾಕ್ ಕ್ರಾಲಿ, ಬೆನ್ ಡಕೆಟ್, ಓಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಡನ್ ಕಾರ್, ಜೋಫ್ರಾ ಆರ್ಚರ್, ಶೋಯಿಬ್ ಬಶೀರ್.

ಭಾರತ :ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್, ರವೀಂದ್ರ ಜಡೇಜ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

Continue Reading

DAKSHINA KANNADA

‘ಎಲ್ಲಾ ಆದ ಮೇಲೆ ಶಾಂತಿಸಭೆ’: ಸಂಸದ ಕೋಟ

Published

on

ಉಡುಪಿ: ಚರ್ಚೆ, ವಾದ-ವಿವಾದ, ಪ್ರಕರಣಗಳು ಆದ ಬಳಿಕ ಶಾಂತಿ ಸಭೆ ಇಷ್ಟು ದಿನಗಳ ನಂತರವಾ.. ಎಂಬ ಚರ್ಚೆ ಸಮಾಜದಲ್ಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇವತ್ತು ಎಲ್ಲಾ ಶಾಂತಿ ಸಭೆಗಳು, ಪೊಲೀಸ್ ಕ್ರಮಗಳು ಹಾಗೂ ಪೊಲೀಸ್ ಫೋರ್ಸ್‌ಗಳು ಎಲ್ಲವೂ ಕೂಡ ಈ ಸಮಾಜದ ಮುಖ್ಯ ವಾಹಿನಿಯಿಂದ ಬದುಕುತ್ತಿರುವಂತಹ ಹಿಂದೂಗಳ ಮೇಲೆ ಗಧಾ-ಪ್ರಹಾರ ಮಾಡಲು ರೂಪಿಸಿದ್ದಾರೆಯೇ ಎಂಬ ಭಾವನೆ ಮೂಡುತ್ತಿದೆ. ಇಂದು ಯಾವ ರೀತಿಯ ವಾತಾವರಣ ಇದೆ ಎಂದರೆ ಯಾರೇ ಒಬ್ಬ ಕಾರ್ಯಕರ್ತ ಅದು ಬಿಜೆಪಿ ಕಾರ್ಯಕರ್ತನೋ, ಹಿಂದೂತ್ವದ ಬಗ್ಗೆ ಮಾತನಾಡುವ ಸಾಮಾನ್ಯ ಕಾರ್ಯಕರ್ತ ಆಗಿರಬಹುದು, ಅವನ ಬದುಕಿನ ಹಕ್ಕನ್ನೇ ಮೊಟಕುಗೊಳಿಸುವಂತಹ ಪ್ರಯತ್ನಗಳು, ರೌಡಿಶೀಟರ್ ಹಾಕುವಂತಹ ಕೆಲಸಗಳು ನಡೆಯುತ್ತಿವೆ. ಪರಮೇಶ್ವರ್ ಅವರು ತಿಳುವಳಿಕೆ ಇರುವಂತಹ ಮಂತ್ರಿ. ಒಂದು ಸಮಾಜವನ್ನು ಒಡೆಯುವ, ಸಮಾಜದ ಮೇಲೆ ಗಧಾಪ್ರಹಾರ ಮಾಡುವ, ಸಮಾಜದ ಮೇಲೆ ದೌರ್ಜನ್ಯ ಮಾಡುವ ಕೆಲಸಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

WATCH VIDEO

Continue Reading

DAKSHINA KANNADA

ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

Published

on

ಉಡುಪಿ: ಘೋಷನ್ ಇವೆಂಟ್ಸ್ ಮೀಡಿಯಾ ಮತ್ತು ಪ್ರಿಯಾ ಫ್ಯಾಶನ್ ದುಬೈ ಇದರ ಆಶ್ರಯದಲ್ಲಿ ತುಂಬೆ ಮೆಡಿ ಸಿಟಿ ಅಜ್ಮನ್ ಇದರ ಸಹಯೋಗದಲ್ಲಿ “ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡಲ್ ಈಸ್ಟ್- 2025” ಅಂತಾರಾಷ್ಟ್ರೀಯ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ನವೆಂಬರ್ ತಿಂಗಳಲ್ಲಿ ದುಬೈನಲ್ಲಿ ಆಯೋಜಿಸಲಾಗಿದೆ.


ಈ ಸ್ಪರ್ಧೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಘೋಷನ್ ಇವೆಂಟ್ಸ್ ಮೀಡಿಯಾದ ದೆಚಮ್ಮ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ತುಳುನಾಡಿನ ಮಹಿಳೆಯರಿಗೆ ವೇದಿಕೆ‌ ಒದಗಿಸುವ ನಿಟ್ಟಿನಲ್ಲಿ ಈ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದೆ. “ಮಿಸ್ ಮಂಗಳೂರು ದಿವಾ” ಸ್ಪರ್ಧೆಯಲ್ಲಿ 18ರಿಂದ 35ವರ್ಷದೊಳಗಿನ ಅವಿವಾಹಿತ ಮಹಿಳೆಯರು ಭಾಗವಹಿಸ ಬಹುದು. ಮಿಸಸ್ ಮಂಗಳೂರು ದಿವಾ ಸ್ಪರ್ಧೆಯಲ್ಲಿ ಎಲ್ಲ ವಯೋಮಿತಿಯ ವಿವಾಹಿತ ಮಹಿಳೆಯರು ಪಾಲ್ಗೊಳ್ಳಬಹುದು ಎಂದರು. ಆಗಸ್ಟ್ ಅಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಅಂತ್ಯಗೊಳ್ಳಲಿದೆ. ಆ ಬಳಿಕ ಮಂಗಳೂರಿನಲ್ಲಿ ಅಡಿಷನ್ ನಡೆಯಲಿದ್ದು, ಅಲ್ಲಿ ಆಯ್ಕೆಯಾಗುವ ಸ್ಪರ್ಧಿಗಳು ನವೆಂಬರ್ ತಿಂಗಳು ದುಬೈನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಯಲ್ಲಿ ಪ್ರದರ್ಶನ ನೀಡಲಿದ್ದಾರೆ.

ಫೈನಲ್ ಗೆ ಆಯ್ಕೆಯಾಗುವ ಸ್ಪರ್ಧಿಗಳಿಗೆ ವಿಸಾ, ವಿಮಾನ ಟಿಕೆಟ್, ಮೂರು ದಿನಗಳ ವಾಸ್ತವ್ಯವನ್ನು ಒದಗಿಸಲಾಗುವುದು. ಅಲ್ಲದೆ, ಊಟ, ಪ್ರಯಾಣ, ಫೋಟೋ ಶೂಟ್‌, ರ್ಯಾಂಪ್ ವಾಕ್ ತರಬೇತಿ, ಮೇಕಪ್ ಹಾಗೂ ಕಾಸ್ಟ್ಯೂಮ್ ಅನ್ನು ಉಚಿತವಾಗಿ ಆಯೋಜಕರು ಒದಗಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ತಲೆ ಸಿಮಿಯಾ ರೋಗಿಗಳಿಗೆ ನ್ಯೂಟ್ರಿಶಿಯನ್‌ ಬಾರ್‌ ಕೊಡುಗೆ ನೀಡಿದ ಎಂಆರ್‌ಪಿಎಲ್‌

ಘೋಷನ್ ಇವೆಂಟ್ಸ್ ಮೀಡಿಯಾದ ಸಬಿತಾ ಕರ್ಲೋ ಮಾತನಾಡಿ, ಫೈನಲ್ ನಲ್ಲಿ ಮೂರು ಸುತ್ತುಗಳಲ್ಲಿ ಸ್ಪರ್ಧೆ ನಡೆಯಲಿದೆ. ಮೊದಲ ಸುತ್ತಿನಲ್ಲಿ ಸಾಂಪ್ರದಾಯಿಕ ವಸ್ತ್ರ ಧರಿಸಿ ಪ್ರದರ್ಶನ ನೀಡಬೇಕು. ಎರಡನೇ ಸುತ್ತಿನಲ್ಲಿ ಫಿಜನ್ ಹಾಗೂ ಮೂರನೇ ಸುತ್ತಿನಲ್ಲಿ ಗೌನ್ ಧರಿಸಿ ವಾಕ್ ಮಾಡಬೇಕು. ಮೂರನೇ ಸುತ್ತಿನ ಬಳಿಕ ಪ್ರಶ್ನಾವಳಿ ಸುತ್ತು ನಡೆಯಲಿದೆ. ಟಾಪ್ ಮೂವರು ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಿಯಾ ಫ್ಯಾಶನ್ ಮಾಲಕಿ ಪ್ರಿಯಾ ಫೆರ್ನಾಂಡಿಸ್, ಮಿಸ್ಟರ್ ಯುಎಇ ವಿನ್ನರ್ ಗೌತಮ್ ಬಂಗೇರ, ವಿಷ್ಣುವರ್ಧನ್ ಭಟ್ ಇದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page