Connect with us

24 ಗಂಟೆಯೊಳಗೆ ನಡೆದ ಎರಡು ಪ್ರಮುಖ ರಸ್ತೆ ಅಪಘಾತದಲ್ಲಿ ಧಾರುಣ ಮೃತಪಟ್ಟ ವಲಸೆ ಕಾರ್ಮಿಕರು

Published

on

24 ಗಂಟೆಯೊಳಗೆ ನಡೆದ ಎರಡು ಪ್ರಮುಖ ರಸ್ತೆ ಅಪಘಾತದಲ್ಲಿ ಧಾರುಣ ಮೃತಪಟ್ಟ ವಲಸೆ ಕಾರ್ಮಿಕರು

ಭೋಪಾಲ್: ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ 24 ಗಂಟೆಯೊಳಗೆ ನಡೆದ ಎರಡು ಪ್ರಮುಖ ರಸ್ತೆ ಅಪಘಾತದಲ್ಲಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಎರಡು ರಸ್ತೆ ಅಪಘಾತದಲ್ಲಿ ಒಟ್ಟು 14 ಕಾರ್ಮಿಕರು ಮೃತಪಟ್ಟಿದ್ದು, ಮಧ್ಯಪ್ರದೇಶದ ಗುನಾದಲ್ಲಿ 8 ಹಾಗೂ ಉತ್ತರಪ್ರದೇಶದ ಮುಝಾಫರ್‌ ನಗರದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದ ಗುನಾ ನಗರದಲ್ಲಿ ಗುರುವಾರ ಬೆಳಗ್ಗಿನ ಜಾವ ವೇಗವಾಗಿ ಬಂದ ಬಸ್‌ ಒಂದು ಟ್ರಕ್‌ ಒಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ 8 ವಲಸೆ ಕಾರ್ಮಿಕರು ಮೃತಪಟ್ಟರೆ, 54ಕ್ಕೂ ಅಧಿಕ ಕಾರ್ಮಿಕರಿಗೆ ಗಾಯವಾಗಿದೆ.

ಉತ್ತರಪ್ರದೇಶದಲ್ಲಿ ವೇಗವಾಗಿ ಸಾಗುತ್ತಿದ್ದ ಸರಕಾರಿ ಬಸ್ ಕಾರ್ಮಿಕರ ಗುಂಪಿನ ಮೇಲೆ ಹರಿದು ಹೋದ ಪರಿಣಾಮ ಆರು ಕಾರ್ಮಿಕರು ಮೃತಪಟ್ಟಿದ್ದಾರೆ.

ಟ್ರಕ್ ‌ನಲ್ಲಿ ಸುಮಾರು 70 ಕಾರ್ಮಿಕರು ಮಹಾರಾಷ್ಟ್ರದಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ 3 ಗಂಟೆ ಸುಮಾರಿಗೆ ಗುನಾದ ಬೈಪಾಸ್ ರೋಡ್‌ ನಲ್ಲಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಹೆಚ್ಚಿನ ಕಾರ್ಮಿಕರು ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಗುನಾದಿಂದ ಅಹಮದಾಬಾದ್‌ ಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಕೇವಲ ಚಾಲಕ ಮತ್ತು ಕ್ಲೀನರ್ ಮಾತ್ರ ಇದ್ದರು.

ಬುಧವಾರ ರಾತ್ರಿ ನಡೆದ ಮತ್ತೊಂದು ದುರಂತ ಘಟನೆಯಲ್ಲಿ ಮುಝಾಫರ ನಗರ ಜಿಲ್ಲೆಯ ಹೆದ್ದಾರಿಯ ಟೋಲ್‌ ಪ್ಲಾಝಾ ಬಳಿ ನಿಯಂತ್ರಣ ಕಳೆದುಕೊಂಡಿದ್ದ,

ಉತ್ತರ ಪ್ರದೇಶದ ಸರಕಾರಿ ಬಸ್‌ ಒಂದು ಪಂಜಾಬ್‌ ನಿಂದ ಬಿಹಾರದ ಗೋಪಾಲ್‌ ಗಂಜ್‌ ಗೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ 6 ಜನ ಕಾರ್ಮಿಕರ ಮೇಲೆ ಹರಿದಿದೆ.

ಆರು ಜನ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಾಲಕ ಖಾಲಿ ಬಸ್‌ ಅನ್ನು ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಬಾವಿಗೆ ಹಾರಿ ಜೀವಾಂತ್ಯಗೊಳಿಸಿದ ಬಸ್ ಏಜೆಂಟ್

Published

on

ಉಡುಪಿ: ಬಸ್ ಏಜೆಂಟ್ ಓರ್ವರು ಮನೆಯ‌ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.

ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.  ಸಮಾಜಸೇವಕ ಈಶ್ವರ್ ಮಲ್ಪೆ ತಂಡದವರು ಕಾರ್ಯಾಚರಣೆ ಮೂಲಕ ಶವವನ್ನು ಬಾವಿಯಿಂದ ಮೇಲೆತ್ತಿದರು.

ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು. ನಗರ ಪೋಲಿಸ್ ಠಾಣೆಯ ಎಸ್. ಐ ನಾರಾಯಣ, ಹೆಡ್  ಕಾನ್ಸ್ಟೇಬಲ್  ನೇತಾವತಿ ಕಾನೂನು ಪ್ರಕ್ರಿಯೆ ನಡೆಸಿದರು.

Continue Reading

LATEST NEWS

ಹೆಲ್ಮೆಟ್‌ ಧರಿಸದ ಸವಾರನನ್ನು ನಿಲ್ಲಿಸಿ ದಂಡ ಹಾಕದೇ ಕಳುಹಿಸಿದ ಪೊಲೀಸ್‌ ಸಿಬ್ಬಂದಿ!

Published

on

ಶಹದೋಲ್: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಚಾಲನೆ ಹಾಗೂ ಅಪಘಾತಗಳಾಗುವ ಸಂದರ್ಭದಲ್ಲಿ ತಲೆಗೆ ಏಟು ಬೀಳಬಾರದೆನ್ನುವ ಕಾರಣಕ್ಕೆ ಹೆಲ್ಮೆಟ್‌ ಖಡ್ಡಾಯಗೊಳಿಸಿ ಸರಕಾರವೇ ಆದೇಶ ಹೊರಡಿಸಿದೆ. ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.

ಆದರೆ, ಮಧ್ಯಪ್ರದೇಶದ ಶಹದೋಲ್‌ನಲ್ಲಿ ಸಂಚಾರಿ ಪೊಲೀಸ್ ಹೆಲ್ಮೆಟ್ ಧರಿಸದೇ ಬಂದ ಬೈಕ್ ಸವಾರರನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಉತ್ತರ ಕೇಳಿ ಕಕ್ಕಾಬಿಕ್ಕಿಯಾಗಿದ್ದಾರೆ.

ತನ್ನ ದೊಡ್ಡ ತಲೆಗೆ ಚಿಕ್ಕ ಹೆಲ್ಮೆಟ್ ಸರಿಹೊಂದುವುದಿಲ್ಲ ಎಂದಾಗ ಪೊಲೀಸ್‌ ತನ್ನದೇ ಹೆಲ್ಮೆಟ್‌ ತೆಗೆದು ಸವಾರನ ತಲೆಗೆ ಇಟ್ಟು ನೋಡಿದ್ದಾರೆ. ಆದರೂ ಹೆಲ್ಮೆಟ್‌ ಅವರ ತಲೆಗೆ ಸರಿಹೊಂದಿಲ್ಲ. ಇವರಿಬ್ಬರ ನಡುವಿನ ಸಂವಾದ ಇದೀಗ ಭಾರೀ ವೈರಲ್‌ ಆಗಿದೆ.

“ದಿ ಟ್ರಾಫಿಕ್ ಕಾಪ್” ಎಂದು ಜನಪ್ರಿಯವಾಗಿರುವ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಮತ್ತು ಸೋಶಿಯಲ್ ಇನ್ಫ್ಲುಯೆನ್ಸರ್ ಆಗಿರುವ ವಿವೇಕಾನಂದ ತಿವಾರಿ, ಹೆಲ್ಮೆಟ್ ಇಲ್ಲದೆ ಮೋಟಾರ್‌ಸೈಕಲ್ ಸವಾರಿ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ತಡೆದಿದ್ದಾರೆ.

ಸುರಕ್ಷತಾ ಉಲ್ಲಂಘನೆಯ ಬಗ್ಗೆ ಪ್ರಶ್ನಿಸಿದಾಗ, ಸವಾರ ಬೈಕ್‌ನಿಂದ ಇಳಿದು ಮಾರುಕಟ್ಟೆಯಲ್ಲಿ ತನ್ನ ಗಾತ್ರದ ಹೆಲ್ಮೆಟ್ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಆರಂಭದಲ್ಲಿ ಸಂಶಯ ವ್ಯಕ್ತಪಡಿಸಿದ ತಿವಾರಿ, ಸವಾರನ ತಲೆಯ ಮೇಲೆ ತನ್ನದೇ ಆದ ಹೆಲ್ಮೆಟ್ ಹಾಕಲು ಪ್ರಯತ್ನಿಸಿದ್ದಾರೆ. ಹೆಲ್ಮೆಟ್ ಹೊಂದಿಕೆಯಾಗಲಿಲ್ಲ, ನಿಜವಾದ ಕಷ್ಟವನ್ನು ಅರಿತುಕೊಂಡ ಅಧಿಕಾರಿ, ದಂಡ ವಿಧಿಸಲ್ಲ ಎಂದರು.

ಇದನ್ನೂ ಓದಿ: ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

ಅಲ್ಲದೆ ದೊಡ್ಡ ತಲೆಗೆ ಸರಿ ಹೊಂದುವ ಹೆಲ್ಮೆಟ್‌ಗಳನ್ನು ತಯಾರಿಸಿ ಎಂದು ಕಂಪೆನಿಗಳಿಗೆ ಮನವಿ ಮಾಡಿದರು. ಈ ವಿಡಿಯೋ ವೈರಲ್‌ ಆಗಿದ್ದು, ಸ್ಟೀಲ್‌ಬರ್ಡ್ ಕಂಪೆನಿ ಹೆಲ್ಮೆಟ್ಸ್ ಕೂಡ ಪ್ರತಿಕ್ರಿಯೆ ನೀಡಿದೆ. ದೊಡ್ಡ ಹೆಲ್ಮೆಟ್‌ಗಳನ್ನು ತಯಾರಿಸುವುದಾಗಿ ಹೇಳಿದೆ.

Continue Reading

LATEST NEWS

ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

Published

on

ಕೇವಲ 10 ರೂಪಾಯಿಗೆ ಒಂದು ಬಟ್ಟೆ ಇಸ್ತ್ರಿ ಮಾಡುವ ಸಣ್ಣ ಉದ್ಯಮದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.


ನಳಿನಿ ಉನಾಗರ್ ಎಂಬುವವರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಅವರ ಮನೆಯ ಬಳಿಯಿರುವ ಡ್ರೈ ಕ್ಲೀನರ್ ಅಂಗಡಿಯ ಮಾಲೀಕರು ಮತ್ತು ಅವರ ಪತ್ನಿ ಇಬ್ಬರೂ ಸೇರಿ ಸಹಾಯಕರ ನೆರವಿನೊಂದಿಗೆ ಈ ಸಾಧನೆ ಮಾಡುತ್ತಿದ್ದಾರೆ.

ಪ್ರತಿದಿನ ಸುಮಾರು 350 ಬಟ್ಟೆಗಳನ್ನು ತಲಾ 10 ರೂಪಾಯಿಯಂತೆ ಇಸ್ತ್ರಿ ಮಾಡುತ್ತಾರೆ. ಇದರಿಂದ ದಿನಕ್ಕೆ 3,500 ರೂ. ಆದಾಯ ಬರುತ್ತದೆ. ಪ್ರತಿದಿನ ಸರಿಸುಮಾರು 20 ಭಾರೀ ಬಟ್ಟೆಗಳನ್ನು ತಲಾ 350 ರೂ. ರಂತೆ ಡ್ರೈ ಕ್ಲೀನ್ ಮಾಡುತ್ತಾರೆ. ಇದರಿಂದ ದಿನಕ್ಕೆ 7,000 ರೂ. ಆದಾಯ ಬರುತ್ತದೆ. ಎಲ್ಲಾ ಸೇರಿ ದಿನಕ್ಕೆ ಸುಮಾರು 10,500 ರೂಪಾಯಿ ಗಳಿಸುತ್ತಾರೆ. ತಿಂಗಳಿಗೆ 27 ದಿನ ಕೆಲ್ಸ ಮಾಡಿದ್ರೂ ಒಟ್ಟು ಆದಾಯ ಸುಮಾರು 2.8 ಲಕ್ಷ ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

ಅಂಗಡಿ ಅವರದ್ದೇ ಆದ ಕಾರಣ ಬಾಡಿಗೆ ಇರುವುದಿಲ್ಲ. ವಿದ್ಯುತ್ ಬಿಲ್ ಸುಮಾರು 6,000 ರೂ. ಮತ್ತು ಇಬ್ಬರು ಸಹಾಯಕರ ಸಂಬಳ 40,000 ರೂ. ಕಳೆದರೆ, ಅವರಿಗೆ ತಿಂಗಳಿಗೆ ಅಂದಾಜು 2.3 ಲಕ್ಷ ರೂಪಾಯಿ ಉಳಿಯುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page