Connect with us

DAKSHINA KANNADA

ದ.ಕ ಜಿಲ್ಲೆಯ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಆರ್. ಅಶೋಕ್

Published

on

ಮಂಗಳೂರು: ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಿನ್ನೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿದ ಕಂದಾಯ ಸಚಿವ ಆರ್. ಅಶೋಕ್ ‘ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಿನಪೂರ್ತಿ ಅಲ್ಲಿಯೇ ಮೊಕ್ಕಂ ಹೂಡಿ ಬಾಕಿ ಉಳಿದ ಕಡತಗಳ ವಿಲೇವಾರಿ ಅಭಿಯಾನ ನಡೆಸಲಾಗುವುದು’ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಕಡತ ವಿಲೇವಾರಿ ಅಭಿಯಾನದಿಂದ ಪ್ರೇರಿತರಾದ ಸಚಿವರು, ರಾಜ್ಯಾದ್ಯಂತ ಕಡತ ವಿಲೇವಾರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು,

ಸ್ವತಃ ತಾವೇ ಜಿಲ್ಲೆಯ ಕೇಂದ್ರ ಸ್ಥಾನಕ್ಕೆ ತೆರಳಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಅಲ್ಲಿನ ಜಿಲ್ಲಾಧಿಕಾರಿ, ತಹಶೀಲ್ದಾರರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಕಿ ಉಳಿದ ಕಡತಗಳ ಇತ್ಯರ್ಥ ಮಾಡಲಾಗುವುದು ಎಂದು ತಿಳಿಸಿದರು.

ಸರ್ಕಾರದಿಂದ ಆಗಬೇಕಾದ ಕೆಲಸ ಕಾರ್ಯಗಳಿಗೆ ಹತ್ತಾರು ವರ್ಷ ಅಲೆದು ಅಲೆದು ಕೆಲಸ ಆಗದೇ ತೀವ್ರ ನಿರಾಸೆಗೊಂಡ ಜನಸಾಮಾನ್ಯರಿಗೆ ಇದರಿಂದ ಅನುಕೂಲವಾಗಲಿದೆ, ಕಡತ ವಿಲೇವಾರಿ ಎಲ್ಲೆಡೆ ನಡೆಯಬೇಕು,

ಆಯಾ ಕ್ಷೇತ್ರಗಳ ಶಾಸಕರು ತಾಲೂಕುಗಳಲ್ಲಿ ಒಂದು ದಿನ ಅಥವಾ ಒಂದು ವಾರ ಕಡತ ವಿಲೇವಾರಿ ಅಭಿಯಾನ ಹಮ್ಮಿಕೊಂಡರೆ ಜನಸಾಮಾನ್ಯರಿಗೆ ಸಾಕಷ್ಟು ಉಪಯೋಗವಾಗುತ್ತದೆ ಎಂದು ಹೇಳಿದರು.

ಕಡತ ವಿಲೇವಾರಿಯಂತಹ ಕಾರ್ಯಕ್ರಮ ಅಭಿಯಾನದಂತೆ ಕೈಗೊಳ್ಳಲಾಗಿದೆ, ಆ ಮೂಲಕ ಜಿಡ್ಡುಗಟ್ಟಿದ ವ್ಯವಸ್ಥೆಗೆ ಚುರುಕು ಮುಟ್ಟಿಸಲಾಗುತ್ತಿದೆ, ಸರ್ಕಾರದ ಸೌಲಭ್ಯಗಳು ತಲುಪದ ಅಸಹಾಯಕರು ಸಾಕಷ್ಟಿದ್ದಾರೆ,

ಅವರಿಗೆ ಸವಲತ್ತುಗಳು ದೊರೆಯಬೇಕು, ವೃದ್ದಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ವೇತನಕ್ಕಾಗಿ ಅರ್ಹರಿಗೆ ಕೂಡಲೇ ತಲುಪಬೇಕು, ಕಳೆದ ಬಾರಿ ಉಡುಪಿ, ಮಂಗಳೂರಿಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಪಿಂಚಣಿ ಯೋಜನೆಯನ್ನು ಆರಂಭಿಸಲಾಯಿತು,

ಪಿಂಚಣಿಗಾಗಿ ಅರ್ಹರನ್ನು ಅಲೆದಾಡಿಸಬಾರದು ಎಂಬ ಕಾರಣಕ್ಕೆ ಸರ್ಕಾರದ ಬಳಿಯೇ ಅವರ ದಾಖಲಾತಿಗಳು, ವಿಳಾಸ ಇರುವ ಕಾರಣ ಮನೆ ಬಾಗಿಲಿಗೆ ಪಿಂಚಣಿ ಒದಗಿಸುವ ವ್ಯವಸ್ಥೆ ರೂಪಿಸಲಾಗಿದೆ, ಕಂದಾಯ ಕಾಯ್ದೆಗೆ ತಿದ್ದುಪಡಿ, ಮೂರೇ ದಿನದಲ್ಲಿ ಕನ್ವರ್ಷನ್ ಮಂಜೂರು, ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆಗೆ ಹೀಗೆ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

DAKSHINA KANNADA

ಮಂಗಳೂರು : ಕೂಳೂರು ಸೇತುವೆ ಬಳಿ ದರ್ಪ ; ಪೊಲೀಸರಿಂದ ಸ್ಪಷ್ಟನೆ

Published

on

ಮಂಗಳೂರು : ಮಾ.21ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರು” ಎಂಬ ವೀಡಿಯೊ 2024ರ ಡಿ.23ರಂದು ಕುದುರೆಮುಖ ಜಂಕ್ಷನ್‌ ನಲ್ಲಿ ನಡೆದಿತ್ತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕುರಿತು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

ಪಾನಮತ್ತನಾದ ಓರ್ವ ವ್ಯಕ್ತಿ ಕುದುರೆಮುಖ ಜಂಕ್ಷನ್ ನಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಆ ವ್ಯಕ್ತಿಯನ್ನು ಬದಿಗೆ ಕಳುಹಿಸಿದರೂ ಆತ ಮತ್ತೆ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಸಮಯ ತುಂಬಾ ಕುಡಿದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿರುತ್ತದೆ.

ಈ ವೇಳೆ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಆ ವ್ಯಕ್ತಿಯನ್ನು ಮೇಲಕ್ಕೆತ್ತಿ ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಯಾರೋ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ವೀಡಿಯೊ ಮಾಡಿ ವೈರಲ್‌ ಮಾಡಿದ್ದಾರೆ ಎಂದು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

DAKSHINA KANNADA

ಸದನದಲ್ಲಿ ಗದ್ದಲ; 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು!

Published

on

ಮಂಗಳೂರು/ ಬೆಂಗಳೂರು :  ಇಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ  ಬಜೆಟ್ ಅಂಗೀಕಾರಗೊಂಡಿದೆ. ಈ ವೇಳೆ ವಿಪಕ್ಷ ಸದಸ್ಯರು ಬಜೆಟ್ ನಲ್ಲಿ ಸೇರಿಸಿರುವ ಕೆಲವೊಂದು ವಿಚಾರಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಹನಿಟ್ರ್ಯಾಪ್ ವಿಚಾರವೂ ಸದ್ದು ಮಾಡಿದ್ದು, ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಿಟ್ಟ ನಾಲ್ಕು ಶೇಕಡ ಮೀಸಲಾತಿ ರದ್ದು ಮಾಡುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಅಲ್ಲದೇ, ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು
ಖಾದರ್ ಮೇಲೆ ಪೇಪರ್‌ಗಳನ್ನು ಹರಿದು ಹಾಕಿ ಗಲಾಟೆ ಮಾಡಿದ್ದರು. ಮಧ್ಯಾಹ್ನ ಭೋಜನ ವಿರಾಮದ ಬಳಿಕವೂ ಇದು ಮುಂದುವರಿದಿತ್ತು.

ಹೀಗಾಗಿ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆ ಕರಾವಳಿಯ ಮೂವರು ಸೇರಿದಂತೆ ಒಟ್ಟು 18 ಬಿಜೆಪಿ ಶಾಸಕರನ್ನು 6 ತಿಂಗಳ ವರೆಗೆ ಅಮಾನತುಗೊಳಿಸಿ ಸ್ಪೀಕರ್ ಖಾದರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಗದ್ದಲದ ನಡುವೆ ಅಂಗೀಕಾರವಾದ ಬಜೆಟ್; ಮುಸ್ಲಿಂ ಮೀಸಲಾತಿ ರದ್ಧಿಗೆ ಆಗ್ರಹಿಸಿ ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು

ಯಾರೆಲ್ಲ ಅಮಾನತು?

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮೂಡುಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ದೊಡ್ಡಣ್ಣ ಗೌಡ ಪಾಟೀಲ್, ಸಿ ಕೆ ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್ ಆರ್ ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ.ಸುರೇಶ್ ಗೌಡ, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಹರೀಶ್ ಬಿಪಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು, ಡಾ. ಚಂದ್ರು ಲಮಾಣಿ.

Continue Reading

DAKSHINA KANNADA

ನಕಲಿ ಪತ್ರಕರ್ತರ ಹಾವಳಿ; ಮನವಿ ಸಲ್ಲಿಸಿದ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಮಪಮ್ ಅಗರ್ವಾಲ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.


ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಜಾಸ್ತಿಯಾಗಿದ್ದು, ಕೆಲವರು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ತಯಾರಿಸಿ ಬಳಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಸಲಿ ಪತ್ರಕರ್ತರಿಗೂ ಇವರನ್ನು ಪತ್ತೆ ಮಾಡುವುದು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತವರಿಂದ ಪತ್ರಕರ್ತರ ಹೆಸರಿಗೆ ಮಸಿ ಬಳಿಯುವ ಕೃತ್ಯಗಳು ನಡೆಯುತ್ತಿದೆ ಅನ್ನೋದನ್ನು ಅಲ್ಲಗಳೆಯುವಂತಿಲ್ಲ.

ನಿನ್ನೆ ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತದ ಬಳಿ ನಡೆದ ಸರಣಿ ಅಪಘಾತ ಮಾಡಿದ ಕಾರಿನಲ್ಲಿ ನಕಲಿ ಐಡಿಯೊಂದು ಪತ್ತೆಯಾಗಿದೆ. ಅಪಘಾತವಾದ ತಕ್ಷಣವೇ ಕಾರಿನಿಂದ ಇಳಿದಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ ಆತನ ಐಡಿ ಕಾರ್ಡ್ ಮೂಲಕ ಆತನ ಹೆಸರು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಪ್ರತಿಷ್ಠಿತ ಮುದ್ರಣ ಸಂಸ್ಥೆಯಲ್ಲಿ ಉಪ ಸಂಪಾದಕ ಎಂದು ಐಡಿಯಲ್ಲಿ ನಮೂದಿಸಲಾಗಿದೆ.

ಆದ್ರೆ ಆ ಮುದ್ರಣ ಸಂಸ್ಥೆಯಲ್ಲಿ ಅಂತಹ ಹೆಸರಿನವರು ಯಾರೂ ಕೂಡಾ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಕರ್ತರ ಹೆಸರು ದುರ್ಬಳಕೆ ತಡೆಯುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಮಪಮ್ ಅಗರ್ವಾಲ್ ಅವರನ್ನು ಭೇಟಿಯಾದ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ, ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ತಡೆ ಮತ್ತು ಪತ್ರಕರ್ತರು ಸುಲಲಿತವಾಗಿ ಕರ್ತವ್ಯ ನಿರ್ವಹಿಸಲು ಭದ್ರತೆ ಖಾತ್ರಿಪಡಿಸುವಂತೆ ಮನವಿ ಸಲ್ಲಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page