Connect with us

DAKSHINA KANNADA

ಅಲ್ಪಸಂಖ್ಯಾತರ ಕಲ್ಯಾಣ ಭವನ ಕಲ್ಲೆಸೆತ ಪ್ರಕರಣ : ಬಾಲಕ ಸೇರಿ 6 ಅರೋಪಿಗಳ ಬಂಧನ..

Published

on

ಅಲ್ಪಸಂಖ್ಯಾತರ ಕಲ್ಯಾಣ ಭವನ ಕಲ್ಲೆಸೆತ ಪ್ರಕರಣ : ಬಾಲಕ ಸೇರಿ 6 ಅರೋಪಿಗಳ ಬಂಧನ..

ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ನಗರದ ಗೂಡುಶೆಡ್ಡೆ ನಿವಾಸಿ ಧನರಾಜ್ ಶೆಟ್ಟಿ , ಎಮ್ಮೆಕೆರೆ ನಿವಾಸಿ ಸುಶಾಂತ್ , ಕಂದುಕ ನಿವಾಸಿ ಕಾರ್ತಿಕ್ ಶೆಟ್ಟಿ , ಹೊಯ್ಗೆ ಬಝಾರ್ ನಿವಾಸಿಗಳಾದ ಸಾಗರ್ ಬಂಗೇರ , ಮನೀಶ್ ಪುತ್ರನ್ ಮತ್ತೋರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.

ಬಂಧಿತರನ್ನು ನ್ಯಾಯಾಧೀಶರ ಸಮ್ಮುಖ ಹಾಜರು ಪಡಿಸಲಾಗಿದ್ದು ಅಪ್ರಾಪ್ತ ಬಾಲಕನಿಗೆ ಜಾಮೀನು ಮಂಜೂರು ಮಾಡಲಾಗಿದ್ದು ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ .13ರಂದು ತಡರಾತ್ರಿ ಪಾಂಡೇಶ್ವರದಲ್ಲಿನ ಮೌಲಾನ ಆಝಾದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ದುಷ್ಕರ್ಮಿಗಳು ಕಲ್ಲು ಎಸೆದು.ಕಿಟಕಿಯ ಗಾಜುಗಳನ್ನು ಪುಡಿಗೈದಿದ್ದರು.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಟ್ಟಡದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ಫೂಟೇಜ್‌ಗಳನ್ನು ಪೊಲೀಸರು ಕೂಲಂಕಶವಾಗಿ ಪರಿಶೀಲನೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

DAKSHINA KANNADA

ಪುತ್ತೂರಿನ ಬಿಜೆಪಿ ಮುಖಂಡನ ಪುತ್ರನ ವಂಚನೆ ಪ್ರಕರಣದಲ್ಲಿ ಭೂಗತ ಪಾತಕಿ ಎಂಟ್ರಿ !?

Published

on

ಪುತ್ತೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ ರಾವ್ ಓರ್ವ ಯುವತಿಯನ್ನು ಪ್ರೀತಿಸಿ ಗರ್ಭಿಣಿ ಮಾಡಿದ್ದ ಪ್ರಕರಣದಲ್ಲಿ ಈಗ ಭೂಗತ ಪಾತಕಿ ಕಲಿ ಯೋಗೀಶ್ ಎಂಟ್ರಿಯಾಗಿದೆ.

ವರದಿಗಾರರೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ​​ ಕರೆ ಮಾಡಿದ ವ್ಯಕ್ತಿ, ಕೃಷ್ಣ ಜೆ.ರಾವ್‌ ಜೈಲಿನಿಂದ ಹೊರ ಬಂದ ಮೇಲೆ ಯುವತಿಯನ್ನು ಮದುವೆ ಆಗಿಲ್ಲ ಎಂದಾದರೆ ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ ನೀಡಿದ್ದು, ಅಷ್ಟೇ ಅಲ್ಲದೆ, ಹಿಂದೂ ಸಂಘಟನೆ ಮತ್ತು ಬಿಜೆಪಿ ನಾಯಕರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದ ಆಡಿಯೋ ವೈರಲ್ ಆಗಿದೆ.

ವರದಿಗಾರರೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೇಶ್ ಅಂತೇಳಿ ಕರೆ ಮಾಡಿದ ವ್ಯಕ್ತಿ, ಬಿಜೆಪಿ ಮುಖಂಡನ ಪುತ್ರನ ಪ್ರಕರಣದ ಬಗ್ಗೆ ನಮಗೂ ದೂರು ಬಂದಿದೆ. ಓರ್ವ ಯುವತಿಯನ್ನು ಗಭಿ೯ಣಿ ಮಾಡಿ ಮೋಸ ಮಾಡಿದ್ದು, ಈಗ ಜೈಲಿನಲ್ಲಿ ಇರಬೇಕು. ಅನ್ಯಾಯವಾಗಿದೆ ಎಂದು ದೂರು ಬಂದಿದೆ. ಸಂತ್ರಸ್ತೆ ಮನೆಯವರ ಪರ ರಾಜಕೀಯದವರು ಯಾರೂ ನಿಲ್ಲುತ್ತಿಲ್ಲ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಹಿಂದೂ ಅಲ್ಲವೇ? ಅವರ ಬಳಿ ಹಣವಿಲ್ಲ ಅಂತ ಬಿಟ್ಟುಬಿಡುವುದಾ ಹಿಂದೂ ಸಂಘಟನೆ ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು: ಪ್ರೀತಿಸಿ ವಂಚನೆ, ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ಮೈಸೂರಿನಲ್ಲಿ ಅರೆಸ್ಟ್

ನಾನು ಹೇಳುವುದು ಇಷ್ಟೇ ಎರಡು ಸಮುದಾಯದರು ಕೂತು ಮಾತನಾಡಿ ಇತ್ಯರ್ಥ ಮಾಡಿ ಯುವತಿಯೊಂದಿಗೆ ಆ ಯುವಕನ ಮದುವೆ ಮಾಡಬೇಕು. ಜೈಲಿನಿಂದ ಹೊರ ಬಂದ ಮೇಲೆ ಹಿಂದೂ ಸಂಘಟನೆಗಳು ಮುಂದೆ ನಿಂತು ಮದುವೆ ಮಾಡಿಸಲಿ. ಒಂದು ವೇಳೆ ಮದುವೆ ಆಗಿಲ್ಲ ಅಂದರೆ ಆರೋಪಿ ಕೃಷ್ಣ ಜೆ.ರಾವ್​ಗೆ ಗುಂಡು ಹೊಡೆಯುತ್ತೇವೆ ಬದುಕುವುದೇ ಬೇಡ ಎಂದು ಹೇಳಿದ್ದಾನೆ.

ಮತ್ತೆ ಮಾತು ಮುಂದುವರೆಸಿದ ವ್ಯಕ್ತಿ, ನಟ ಗಣೇಶ್-ಶಿಲ್ಪಾ ವಿಚಾರದಲ್ಲೂ ಹೀಗೇ ಆಗಿತ್ತು. ಆವಾಗ ನನ್ನ ಬಾಸ್ ರವಿ ಪೂಜಾರಿ ಜನ ಕಳಿಸಿದ್ದರು. ಗಣೇಶ್-ಶಿಲ್ಪಾ ಮದುವೆಯನ್ನು ನಾವೇ ಮಾಡಿಸಿದ್ದು ಎಂದಿದ್ದಾರೆ.

 

Continue Reading

DAKSHINA KANNADA

“ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧವನ್ನು ಪುನರಾವರ್ತಿಸುವಂತಿಲ್ಲ” ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

Published

on

ಮಂಗಳೂರು/ಬೆಂಗಳೂರು: ಇನ್ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇಂದು ಆದೇಶ ನೀಡಿದೆ.

ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ ಭಾಷಣ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ದೂರುದಾರು ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂತು.

ಸರ್ಕಾರದ ಪರ ವಕೀಲರು ಮತ್ತು ಹರೀಶ್ ಪೂಂಜ ಪರ ವಕೀಲರು ಸಮಯಾವಕಾಶ ಕೇಳಿದರು. ಆದರೆ ಇಬ್ರಾಹಿಂ ಪರ ವಕೀಲ ಎಸ್ ಬಾಲನ್ ಅವರು ಸಮಯಾವಕಾಶ ನೀಡುವುದನ್ನು ವಿರೋಧಿಸಿ ವಾದ ಪ್ರಾರಂಭಿಸಿದರು. ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸದೇ ಇದ್ದರೆ ಅವರು ಅಪರಾಧವನ್ನು ಪುನರಾವರ್ತಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಿ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಪಡೆಯುತ್ತಾರೆ. ಇದು ಸರಿಯಾದ ಕ್ರಮವಲ್ಲ ಎಂದು ಎಸ್ ಬಾಲನ್ ವಾದಿಸಿದರು.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆ ಇಟ್ಟ ಹೆಡ್‌ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ತಸ್ಲಿಂ ಸೇರಿ 5 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಆಗಸ್ಟ್ 0 7ರವರೆಗೆ ತಡೆಯಾಜ್ಞೆ ಮುಂದುವರೆಸಿ “ಅರ್ಜಿದಾರ ಹರೀಶ್ ಪೂಂಜ ಯಾವುದೇ ದ್ವೇಷ ಭಾಷಣ, ಈಗಾಗಲೇ ಅವರ ವಿರುದ್ಧ ದಾಖಲಾಗಿರುವ ಅಪರಾಧಿಕ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

Continue Reading

DAKSHINA KANNADA

ಲಂಚಕ್ಕೆ ಬೇಡಿಕೆ ಇಟ್ಟ ಹೆಡ್‌ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ತಸ್ಲಿಂ ಸೇರಿ 5 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

Published

on

ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಕಾರಿನ ದಾಖಲೆಯನ್ನು ದೂರುದಾರರಿಗೆ ವಾಪಸು ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಸ್ಲಿಂ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಚಿನ್ನದಂಗಡಿಗೆ ನುಗ್ಗಿ 3 ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿಯಾದ ಕಳ್ಳರು

ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page