Connect with us

BANTWAL

ಬಂಟ್ವಾಳ: ಬಸ್‌ನಲ್ಲಿ ಮಹಿಳೆ ಬ್ಯಾಗ್ ಹಿಡಿದುಕೊಂಡಿದ್ದೇ ತಪ್ಪಾಯ್ತ…?-ಅಸಭ್ಯ ವರ್ತನೆ ಎಂದು ಆರೋಪಿಸಿ ಅನ್ಯಧರ್ಮದ ಯುವಕನನ್ನು ಥಳಿಸಿದ ಯುವಕರ ತಂಡ

Published

on

ಬಂಟ್ವಾಳ: ಬಸ್‌ನಲ್ಲಿ ಅನ್ಯಧರ್ಮದ ಯುವಕನೋರ್ವ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರ ಎನ್ನಲಾದ ತಂಡವೊಂದು ಆತನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ರಾಯಿ ಎಂಬಲ್ಲಿ ನಡೆದಿದೆ.

ಮೂಲರಪಟ್ನ ನಿವಾಸಿ ಇಸಾಕ್ (45) ಹಲ್ಲೆಗೊಳಗಾದ ಯುವಕ.


ಬಸ್‌ ರಶ್ ಇದ್ದ ಕಾರಣ ಮಹಿಳೆಯೊಬ್ಬರು ಸೀಟಿನಲ್ಲಿ ಕುಳಿತಿದ್ದ ಇಸಾಕ್‌ ಅವರಲ್ಲಿ ತನ್ನ ಬ್ಯಾಗ್ ಹಿಡಿದುಕೊಳ್ಳುವಂತೆ ಕೊಟ್ಟಿದ್ದರು.

ನಂತರ ತನ್ನ ಇಳಿಯುವ ಸ್ಥಳ ಬಂದಾಗ ಬ್ಯಾಗ್ ಪಡೆದುಕೊಂಡು ಮಹಿಳೆ ಹೋಗಿದ್ದಾರೆ.
ಆದರೆ ಇದಾದ ಬಳಿಕ ಕಂಡಕ್ಟರ್ ಇಸಾಕ್‌ನ ಬಳಿ ನೀವು ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಸ್‌ನಿಂದ ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ತನ್ನ ಉಳಿದ ಸಂಗಡಿಗರನ್ನು ಕರೆಸಿ ಇಸಾಕ್‌ನನ್ನು ಆ ತಂಡಕ್ಕೆ ಹಸ್ತಾಂತರಿಸಿದ್ದಾರೆ.

ನಂತರ ಇಸಾಕ್‌ನನ್ನು ಅವರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಇದಾದ ನಮತರ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಇಸಾಕ್‌ನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

BANTWAL

ವಿಟ್ಲ: ಏಕಾಏಕಿ ಬಟ್ಟೆ ಅಂಗಡಿಗೆ ನುಗ್ಗಿ ಬಟ್ಟೆಗಳನ್ನು ದೋಚಿ ಪರಾರಿಯಾದ ಗ್ಯಾಂಗ್

Published

on

ವಿಟ್ಲ: ಬಟ್ಟೆ ಅಂಗಡಿಗೆ ನುಗ್ಗಿ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಗ್ಯಾಂಗ್‌ವೊಂದು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ.

ನವೀನ್ ಕುಂಪಲ ಮತ್ತು ಇತರ ಮೂರು ಮಂದಿಯ ಗ್ಯಾಂಗ್ ಬಟ್ಟೆ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ಬಟ್ಟೆ ಹಾಗೂ ಇತರ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ನಾಲ್ಕು ಮಂದಿಯ ತಂಡವು ಏಕಾಏಕಿ ಬಟ್ಟೆ ಅಂಗಡಿಗೆ ಪ್ರವೇಶಿಸಿದ್ದು, ವಸ್ತುಗಳನ್ನು ಹಾಗೂ ಬಟ್ಟೆಯನ್ನು ತಮ್ಮ ಬ್ಯಾಗಿನೊಳಗೆ ತುಂಬಿಸಿ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದರು. ಆಗ ಅಲ್ಲಿದ್ದ ಮಹಿಳಾ ಸಿಬ್ಬಂದಿಯು ಯಾಕೆ ಬಟ್ಟೆಗಳನ್ನು ತುಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿಗಳು “ನಿನಗೆ ಎಷ್ಟು ಕೆಲಸವಿದೆಯೋ ಅಷ್ಟೇ ಮಾಡು, ನಮ್ಮ ಸುದ್ದಿಗೆ ಬಂದ್ರೆ ಜಾಗ್ರತೆ” ಎಂದು ಬೆದರಿಸಿ ಬಲಾತ್ಕಾರದಿಂದ ಬಟ್ಟೆ ಮತ್ತು ವಸ್ತುಗಳನ್ನು ಕೊಂಡೊಯ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Continue Reading

BANTWAL

ಬಂಟ್ವಾಳ: ರಸ್ತೆಯಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ

Published

on

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಕೆಲ ದಿನಗಳಿಂದ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಇಲ್ಲಿನ ಮನೋರೋಗ ಚಿಕಿತ್ಸಕರು ರಕ್ಷಣೆ ಮಾಡಿದ್ದಾರೆ. ಕಲ್ಲಡ್ಕದ ಡಾಕ್ಟರ್ ಚಂದ್ರಶೇಖರ್ ಅವರ ಚೇತನಾ ಕ್ಲಿನಿಕ್ ನ ಮನೋರೋಗ ತಜ್ಞ ಡಾ. ರಾಜೇಶ್ ಈ ಕಾರ್ಯ ಮಾಡಿದವರಾಗಿದ್ದಾರೆ.

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ರಸ್ತೆಯಲ್ಲಿ ತಿರುಗಾಡುವುದನ್ನು ಕಂಡ ಅವರು ಆತನಿಗೆ ಸೂಕ್ತ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಹೀಗಾಗಿ ಆತನನ್ನು ವಿಚಾರಿಸಿದಾಗ ಆತ ತಮಿಳುನಾಡು ಮೂಲದ ಕಾಂಜಿಪುರಂನವನು ಎಂಬುದಾಗಿ ಹೇಳಿದ್ದಾನೆ. ಆತನನ್ನು ಚಿಕಿತ್ಸೆಗೆ ಒಳಪಡಿಸಲು ಕರೆದುಕೊಂಡು ಹೋಗಲು ಮುಂದಾದಾಗ ಈತ ತಪ್ಪಿಸಕೊಳ್ಳಲು ಯತ್ನಿಸಿದ್ದಾನೆ.

ಈ ವೇಳೆ ವ್ಯಕ್ತಿಯನ್ನು ಸ್ಥಳಿಯರಾದ ಚೇತನ ಕ್ಲಿನಿಕ್ ಸಿಬ್ಬಂದಿ ವಿನಯಾ ಮಿತಬೈಲು , ಜಮಾಲ್ ಕರಾವಳಿ ಮೆಡಿಕಲ್, ಸೌಕತ್ ಕಲ್ಲಡ್ಕ,ಅರಿಶ್ ಅಮರ್ ಹಾಗೂ ಇನ್ನಿತರ ಸಹಕಾರದೊಂದಿಗೆ ಹಿಡಿದು ಅಂಬ್ಯುಲೆನ್ಸ್ ನಲ್ಲಿ ಕೂರಿಸಿದ್ದಾರೆ. ಬಳಿಕ ದೈಗೂಳಿ ಸತ್ಯಸಾಯಿ ಸೇವಾಶ್ರಮಕ್ಕೆ ಬಿಡಲಾಗಿದೆ. ಇದೀಗ ಈತನಿಗೆ ಸತ್ಯಸಾಯಿ ಸೇವಾಶ್ರಮದಲ್ಲಿ ಚಿಕಿತ್ಸೆ ನಡೆಯುತ್ತಿದ್ದು, ಅಲ್ಪ ಪ್ರಮಾಣದಲ್ಲಿ ಸುದಾರಿಸಿಕೊಂಡಿದ್ದಾನೆ. ಇವರ ಈ ಸೇವೆಯನ್ನು ಸ್ಥಳೀಯರು ಕೊಂಡಾಡಿದ್ದಾರೆ.

Continue Reading

BANTWAL

ಬಂಟ್ವಾಳ: ಮೂಡೂರು- ಪಡೂರು ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟ

Published

on

ಬಂಟ್ವಾಳ: 14 ನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟಗೊಂಡಿದೆ.


ಕೆನೆಹಲಗೆ 10 ಜೊತೆ , ಅಡ್ಡಹಲಗೆ 06 ಜೊತೆ , ಹಗ್ಗ ಹಿರಿಯ 20 ಜೊತೆ, ನೇಗಿಲು ಹಿರಿಯ 24 ಜೊತೆ, ಹಗ್ಗ ಕಿರಿಯ 22 ಜೊತೆ, ನೇಗಿಲು ಕಿರಿಯ 86 ಜೊತೆ ಹೀಗೆ ಒಟ್ಟು 168 ಜೊತೆ ಕೋಣಗಳು ಭಾಗವಹಿಸಿದ್ದವು. ಇನ್ನು ಬಹುಮಾನ ವಿಜೇತರ ವಿವರ ಹೀಗಿದೆ..

ಕನೆ ಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ಬೀಯಪಾದೆ ಕೆರೆಕೋಡಿ ಗುತ್ತು ಶೇಖರ ಪೂಜಾರಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ (11.53)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಅಲ್ಲಿಪಾದೆ ಕೆಳಗಿನ ಮನೆ ವಿನ್ಸೆಂಟ್ ಪಿಂಟೋ “ಎ” (12.62)
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್

ಹಗ್ಗ ಹಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ” (11.48)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಎ” (11.55)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಲೊರೆಟ್ಟೋ ಮಹಲ್ ತೋಟ ಆನ್ಯ ಅವಿಲ್ ಮಿನೇಜಸ್ (11.68)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಸುರತ್ಕಲ್ ಖಂಡಿಗೆ ಕುಸುಮಾಕರ್ ಸುವರ್ಣ (11.77)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:

ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (11.25)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.41)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಕಿರಿಯ:

ಪ್ರಥಮ: ದೂಜ ಅಭಿಮಾನಿ ಬಳಗ (11.80)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಪ್ರಸಿದ್ಧ್ ಶೆಟ್ಟಿ (12.13)
ಓಡಿಸಿದವರು: ಬಾರಾಡಿ ನತೇಶ್

 

Continue Reading
Advertisement

Trending

Copyright © 2025 Namma Kudla News

You cannot copy content of this page