Connect with us

LATEST NEWS

ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಎರಡೇ ದಿನದಲ್ಲಿ ಪತ್ತೆ-ಕಾರ್ಣಿಕ ಮೆರೆದ ಉಜಿರಡ್ಕದ ಕೊರಗಜ್ಜ

Published

on

ಸುಬ್ರಹ್ಮಣ್ಯ: ಬೆಂಗಳೂರಿನಿಂದ ಅ.17ರಂದು ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಸುಳ್ಯದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಬೇಡಿಕೆ ಸಲ್ಲಿಸಿದ್ದು ದೈವದ ನುಡಿಯಂತೆ ಬಾಲಕಿ ಎರಡೇ ದಿನದಲ್ಲಿ ಪತ್ತೆಯಾಗಿದ್ದಳು. ಈ ಹಿನ್ನೆಲೆ ಆದಿತ್ಯವಾರ ಬಾಲಕಿ ಸಮೇತ ಕುಟುಂಬಸ್ಥರು ಸಾನಿಧ್ಯಕ್ಕೆ ಬಂದು ಕೊರಗಜ್ಜನ ದರ್ಶನ ಪಡೆದರು.


ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಬಾಲಕಿ ಭಾರ್ಗವಿ ಬೆಂಗಳೂರಿನಿಂದ ಬಂದು ಮಂಗಳೂರಿನಿಂದ ನಾಪತ್ತೆಯಾಗಿದ್ದಳು.

ಆಕೆಯ ಪತ್ತೆಗಾಗಿ ಯುವ ತೇಜಸ್ಸು ಟ್ರಸ್ಟ್ ಕಾರ್ಯಕರ್ತನಾದ ನಿತಿನ್ ಭಟ್ ನೂಚಿಲ ಅವರ ಮನೆಯವರು ಅ.19ರಂದು ಪ್ರಾರ್ಥನೆ ಸಲ್ಲಿಸಿದ್ದರು.

ಇಟ್ಟ ಹರಕೆಯಂತೆ ಬಾಲಕಿ ಗೋವಾದಲ್ಲಿ ಪತ್ತೆಯಾಗಿದ್ದಳು. ಈ ಹಿನ್ನೆಲೆ ಭಾನುವಾರ ಆಕೆಯ ಕುಟುಂಬಸ್ಥರು ಸುಳ್ಯಕ್ಕೆ ಬಂದು ಕೊರಗಜ್ಜನ ದರ್ಶನ ಪಡೆದರು.

LATEST NEWS

ಪ್ರೀತಿಸುತ್ತಿದ್ದವಳನ್ನೇ ಕೊ*ಲೆ ಮಾಡಿದ ಪ್ರಿಯಕರ 6 ತಿಂಗಳ ಬಳಿಕ ಸಿಕ್ಕಿಬಿದ್ದ

Published

on

ಮಂಗಳೂರು/ಗದಗ: ಮದವೆಯಾಗು ಎಂದು ಪೀಡಿಸುತ್ತಿದ್ದ ಪ್ರೇಯಸಿಯನ್ನೆ ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿಟ್ಟಿದ್ದ ಪ್ರಕರಣವನ್ನು ಗದಗ ಪೊಲೀಸರು ಭೇದಿಸಿದ್ದಾರೆ.


ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಸಂಭವಿಸಿದ ಒಂದು ಭೀಕರ ಕೊಲೆ ಪ್ರಕರಣವು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶವನ್ನು ಹುಟ್ಟುಹಾಕಿತ್ತು.

ಈ ಘಟನೆಯಲ್ಲಿ ಸತೀಶ್ ಹಿರೇಮಠ (25) ಎಂಬ ಯುವಕ ತನ್ನ ಪ್ರೇಯಸಿ ಮಧುಶ್ರೀ (23) ಎಂಬ ಯುವತಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ಹತ್ತಿರದ ಹಳ್ಳದಲ್ಲಿ ಹೂತು ಮುಚ್ಚಿಹಾಕಿದ್ದ. ಈ ಘಟನೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದಿದ್ದರೂ, ಆರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಸತೀಶ್ ಮತ್ತು ಮಧುಶ್ರೀ ಒಂದೇ ಗ್ರಾಮದವರಾಗಿದ್ದು, ಐದಾರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದ್ರೆ ಮಧುಶ್ರೀ ಕುಟುಂಬಸ್ಥರಿಗೆ ಈ ಪ್ರೀತಿ ಪ್ರೇಮದ ವಿಷಯ ಗೊತ್ತಾಗಿದೆ. ಹೀಗಾಗಿ ಗದಗದಲ್ಲಿ ಅವರ ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ಕೆಲವು ತಿಂಗಳು ಕಾಲ ದೂರ ಇದ್ದ ಈ ಜೋಡಿ ಪುನಃ ಒಂದಾಗಿತ್ತು. ಅದು 2024 ಡಿಸೆಂಬರ್ 16 ರ ರಾತ್ರಿ ಮಧುಶ್ರೀ ಗದಗ ನಗರದ ಅವರ ಸಂಬಂಧಿಕರ ಮನೆಯಿಂದ ನಾಪತ್ತೆಯಾಗಿದ್ದಳು. ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿ ಕೊನೆಗೆ 2025 ಜನವರಿ 12ರಂದು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದರು. ಆಗ ಪೊಲೀಸರು ಸತೀಶ್ ಮೇಲೆ ಅನುಮಾನದಿಂದ ವಿಚಾರಣೆ ಆರಂಭ ಮಾಡಿದ್ದು, ನನಗೆ ಏನು ಗೊತ್ತಿಲ್ಲ ಎಂದು ನಾಟಕ ಮಾಡಿದ್ದ.

ಕೇಸಿಗೆ ಟ್ವಸ್ಟ್ ಕೊಟ್ಟಿದ್ದು ಆ ಒಂದು ಮೆಸೇಜ್?
ಆದರೆ ಇಬ್ಬರು ಒಂದೇ ಬೈಕ್ ನಲ್ಲಿ ಹೋಗಿರುವ ಸಿಸಿಟಿವಿ ವಿಡಿಯೋ ಸಹ ಸಿಕ್ಕಿತ್ತು. ಇದರ ಆಧಾರದ ಮೇಲೆ ಪೊಲೀಸರು ಮತ್ತೆ ಸತೀಶ್ ನನ್ನು ವಿಚಾರಣೆಗೆ ಒಳಪಡಿಸಿದ್ದರು. ಆಗ ಬೈಕ್ ಮೇಲೆ ಇಬ್ಬರು ಹೊಗಿದ್ದು ನಿಜ. ಆದ್ರೆ, ಮಧುಶ್ರೀಯನ್ನು ಹಾತಲಗೇರಿ ಗ್ರಾಮದ ಬಳಿ ಬಿಟ್ಟು ನಾನು ಪೆಟ್ರೋಲ್ ಬಂಕ್ ನಲ್ಲಿ ಕೆಲಸಕ್ಕೆ ಹೋಗಿದ್ದೇನೆ. ಅವಳು ಎಲ್ಲಿಗೆ ಹೋಗಿದ್ದಳೆಂದು ಗೊತ್ತಿಲ್ಲ ಎಂದಿದ್ದ. ಆಗ ಪೊಲೀಸರು ಸತೀಶ್​ ನನ್ನು ಬಿಟ್ಟು ಕಳಿಸಿದ್ದರು. ಕಲೆ ದಿನಗಳ ನಂತರ ಸತೀಶ್ ನ ಮೊಬೈಲ್ ಒಂದು‌‌ ಕಂಪನಿ ಮೆಸೇಜ್ ಬಂದಿತ್ತು. ಆಗಲೇ ನಾಪತ್ತೆ ಕೇಸ್​ ಗೆ ಟ್ವಿಸ್ಟ್ ಸಿಕ್ಕಿದ್ದು, ಈ ಮೆಸೇಜ್​ ಜಾಡು ಹಿಡಿದು ಹೋದ ಪೊಲೀಸರಿಗೆ ಸತೀಶನ ನೌಟಂಕಿ ಆಟ ಗೊತ್ತಾಗಿದೆ. ಸತೀಶನ ಮೊಬೈಲ್​ ಗೆ ಬಂದಿದ್ದ ಲೊಕೇಶನ್ ಬೇರೆಯಾಗಿತ್ತು. ಆಗ ಪೊಲೀಸರಿಗೆ ಆರೋಪಿ ಸತೀಶ್‌ ಮೇಲೆ ಅನುಮಾನ ಜಾಸ್ತಿಯಾಗಿದ್ದು, ಮತ್ತೆ ವಿಚಾರಣೆ ಮಾಡಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

ಅಂದಹಾಗೇ 2024 ಡಿಸೆಂಬರ್ 16 ರಂದು ಪ್ರೇಯಸಿ ಮಧುಶ್ರೀಯನ್ನು ಕರೆದುಕೊಂಡು ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಹೊರವಲಯದ, ತಮ್ಮ ಜಮೀನಿಗೆ ಹೋಗಿದ್ದ. ಆಗ ಮಧುಶ್ರೀ ಮದುವೆಯಾಗು ಎಂದು ಹಠ ಹಿಡಿದಿದ್ದಾಳೆ. ಇದರಿಂದ ಇಬ್ಬರ ನಡುವೆ ಜಗಳವಾಗಿದ್ದು, ಗಲಾಟೆ ವಿಕೋಪಕ್ಕೆ ಹೋಗಿದೆ. ರೊಚ್ಚಿಗೆದ್ದ ಸತೀಶ್ ಮಧುಶ್ರೀಯ ವೇಲ್ ನಿಂದ ಕುತ್ತಿಗೆಗೆ ಬಿಗಿದು, ಕೊಲೆ ಮಾಡಿದ್ದಾನೆ. ನಂತರ ಪಕ್ಕದ ಹಳ್ಳದಲ್ಲಿ ಅವಳ ಶವವನ್ನು ಹೊತು ಹಾಕಿ, ಏನೂ ಗೊತ್ತಿಲ್ಲದ ರೀತಿ ಇದ್ದ.

ಇದನ್ನೂ ಓದಿ: ತಾನೇ ಗಂಡನ ಕೊಲೆ ಮಾಡಿಸಿದ್ದಾಗಿ ಒಪ್ಪಿಕೊಂಡ ಸೋನಮ್; ಮಂಗಳಸೂತ್ರ ನೀಡಿತ್ತು ಕಿರಾತಕಿಯ ಸುಳಿವು!

ಬಳಿಕ ಮೃತದೇಹ ಹೂತು ಹಾಕಿದ್ದ ಸ್ಥಳಕ್ಕೆ ಆಗಾಗ ಬಂದು ಎಲುಬುಗಳನ್ನು ಬೇರೆ ಕಡೆ ಹಾಕಿ, ಸಾಕ್ಷಿ ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದ. ಆದ್ರೆ, ಅಂದು ಸ್ವಿಚ್ ಆಫ್ ಆದ ಮೊಬೈಲ್ ಗೆ ಕಂಪನಿಯ ಒಂದು ಮೆಸೇಜ್ ಬಂದಿದ್ದು, ಆರೋಪಿ ಸತೀಶ್ ಹೇಳೋ ಲೊಕೇಶನ್ ಬೇರೆ, ಮೊಬೈಲ್ ಗೆ ಬಂದಿರೋ ಮೆಸೇಜ್ ಲೊಕೇಶನ್ ಬೇರೆಯಾಗಿತ್ತು. ಹೀಗಾಗಿ ಕೇಸ್ ಬೆನ್ನತ್ತಿದ ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಮಾರುತಿ, ಪೊಲೀಸ್ ಸ್ಟೈಲ್ ನಲ್ಲಿ ವಿಚಾರಣೆ ಮಾಡಿದಾಗ ಕೊಲೆ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಬಳಿಕ ಶವವನ್ನು ಹೊತು ಹಾಕಿದ ಜಾಗವನ್ನು ತೋರಿಸಿದ್ದಾನೆ. ಸದ್ಯ ದೇಹದ ಕೆಲವು ಎಲುಬು ಸಿಕ್ಕಿದ್ದು, ಇನ್ನೂ ಅವಳ ರುಂಡ ಸಿಕ್ಕಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಪೊಲೀಸರು ರುಂಡಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ಪೊಲೀಸರು ಮಧುಶ್ರೀ ಶವದ ಅವಶೇಷಗಳನ್ನು ಹಳ್ಳದಲ್ಲಿ ಪತ್ತೆ ಮಾಡಿದ್ದು, ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಬಿಡಿಸುವಲ್ಲಿ ಜಾಣತನದ ತನಿಖೆ ಪ್ರದರ್ಶಿಸಿದ್ದಾರೆ. ಸತೀಶ್ ಸಾಕ್ಷ್ಯಗಳನ್ನು ನಾಶಪಡಿಸುವಲ್ಲಿ ಯಶಸ್ವಿಯಾಗಿದ್ದರೂ, ಮೊಬೈಲ್ ಸಂದೇಶವೊಂದು ಪ್ರಕರಣದ ಜಾಡು ಬಿಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಇದರ ಜೊತೆಗೆ, ಸತೀಶ್‌ನ ಸಂಪರ್ಕದ ವಿವರಗಳು ಮತ್ತು ಆತನ ಚಲನವಲನಗಳನ್ನು ಪರಿಶೀಲಿಸಿದ್ದು ಪೊಲೀಸರಿಗೆ ಸಹಾಯಕವಾಯಿತು.

ಆದರೆ ಮದುವೆಯಾಗು ಎಂದಿದ್ದಕ್ಕೆ ಪ್ರೀಯಕರ ಸತೀಶ್ ಪ್ರೇಯಸಿ ಮಧುಶ್ರೀಯನ್ನು ಕೊಲೆ ಮಾಡಿರುವುದು ನಿಜಕ್ಕೂ ವಿಪರ್ಯಾಸವೇ ಸರಿ.

 

Continue Reading

FILM

ದುಬಾರಿ ಬೆಲೆಯ ಕಾರು ಖರೀದಿಸಿದ ಆಂಕರ್‌ ಅನುಶ್ರೀ.. ಈ ಕಾರಿನ ವಿಶೇಷತೆ ಏನು ಗೊತ್ತಾ..?

Published

on

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ ಅವರು ದುಬಾರಿ ಬೆಲೆಯ ಕಾರೊಂದನ್ನು ಖರೀದಿ ಮಾಡಿದ್ದಾರೆ. ಈ ಕಾರು ಖರೀದಿ ಮಾಡುವ ಫೋಟೋವನ್ನು ಅವರು ತಮ್ಮ ಇನ್‌ಸ್ಟಾ ಸ್ಟೋರಿಯನ್ನು ಹಾಕಿಕೊಂಡಿದ್ದಾರೆ. ಹಾಗಾದರೆ ಅನುಶ್ರೀ ಖರೀದಿಸಿದ ಹೊಸ ಕಾರು ಯಾವುದು? ಆ ಕಾರಿನ ಬೆಲೆ ಎಷ್ಟು? ಅನ್ನೋದನ್ನು ತಿಳಿಯೋಣ..

ಹೌದು.. ಅನುಶ್ರೀ ಖರೀದಿಸಿದ ಹೊಸ ಕಾರಿನ ಹೆಸರು ಟೊಯೊಟಾ ಇನ್ನೋವಾ ಹೈಕ್ರಾಸ್ ಹೈಬ್ರಿಡ್. ನೀಲಿ ಬಣ್ಣದ ಈ ಕಾರು ನೋಡುವುದಕ್ಕಂತೂ ಸಖತ್ ಆಗಿದೆ. ಈ ಕಾರಿನ ಆರಂಭಿಕ ಬೆಲೆಯೇ 25 ಲಕ್ಷ ರೂಪಾಯಿ. 25 ಲಕ್ಷದಿಂದ ಶುರುವಾದರೆ ಟಾಪ್ ಮಾಡಲ್ ₹40 ಲಕ್ಷದವರೆಗೂ ಹೋಗುತ್ತೆ.

ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ಈ ಕಾರು ಪೆಟ್ರೋಲ್ ಹಾಗೂ ಬ್ಯಾಟರಿ ಎರಡೂ ತಂತ್ರಜ್ಞಾನವನ್ನು ಹೊಂದಿದೆ. ಕಾರು ಚಲಾಯಿಸುವಾಗ ಬ್ಯಾಟರಿ ಮುಗಿದು ಹೋದರೆ, ಪೆಟ್ರೋಲ್‌ಗೆ ಶಿಫ್ಟ್ ಆಗಬಹುದು. ಇದರಿಂದ ಚಾರ್ಜಿಂಗ್ ಪಾಯಿಂಟ್ ಅನ್ನು ಹುಡುಕುವ ಅಗತ್ಯವಿರುವುದಿಲ್ಲ. ಅಲ್ಲಿದೆ ಕಾರಿನ ಮೈಲೇಜ್ ಕೂಡ ಸುಮಾರು 25 ಕಿ.ಮೀ ಪ್ರತಿ ಲೀಟರ್‌ಗೆ ನೀಡುತ್ತದೆ ಎಂದು ಹೇಳಲಾಗಿದೆ.

ಆದರೆ, ಅವರು ಶೇರ್ ಮಾಡಿಕೊಂಡಿರುವ ವಿಡಿಯೋದಲ್ಲಿ ಕಾರು ಯಾವ ವೇರಿಯೆಂಟ್ ಅನ್ನೋದು ಗೊತ್ತಾಗಿಲ್ಲ. ಸದ್ಯ ಈ ಕಾರಿನ ಬೆಲೆ ಅಂತೂ ದುಬಾರಿ ಅನ್ನೋದಂತೂ ಸದ್ಯ.

Continue Reading

LATEST NEWS

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ

Published

on

ಮಂಗಳೂರು/ಅಹಮದಾಬಾದ್: ಗುಜರಾತ್‌ನ ಅಹಮಾದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ದುರಂತ ನಡೆದು 4 ದಿನಗಳ ಬಳಿಕ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃ*ತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.


ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದ 241 ಪ್ರಯಾಣಿಕರ ದೇಹ ಸುಟ್ಟು ಕರಕಲಾಗಿದ್ದು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿತ್ತು. ಅದರಂತೆ ಡಿಎನ್ ಎ ಪರೀಕ್ಷೆ ಮೂಲಕ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸಲಾಗಿದ್ದು, ಅದರಂತೆ ಭಾನುವಾರ (ಜೂ.15) ದಂದು ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಅವರ ದೇಹದ ಗುರುತನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆಹಚ್ಚಲಾಗಿದೆ. ಇದಾದ ಬಳಿಕ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ನಿಧ*ನ

ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆಗೆ ಸರ್ಕಾರ ಸಕಲ ಸಿದ್ದತೆ ಮಾಡಿಕೊಂಡಿದೆ. ಇಂದು ಅಹಮದಾಬಾದ್ ನಿಂದ ರಾಜ್ ಕೋಟ್ ಗೆ ಪಾರ್ಥಿವ ಶರೀ*ರ ತರಲಾಗುತ್ತಿದೆ. ನಂತರ ಸಾರ್ವಜನಿಕ ದರ್ಶನ ಮತ್ತು ಜೂನ್ 17, 19 ರಂದು ಸಂತಾಪ ಸಭೆಗಳು ನಡೆಯಲಿವೆ. ಜೊತೆಗೆ ರೂಪಾನಿ ಅವರ ಸ್ಮರಣಾರ್ಥ ಒಂದು ದಿನ ಶೋಕಾಚರಣೆಯನ್ನು ನಡೆಸಲು ಸರ್ಕಾರ ನಿರ್ಧರಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page