Connect with us

LATEST NEWS

MITಯಲ್ಲಿ ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರಾಧ್ಯಾಪಕ : ಇಂಜಿನಿಯರಿಂಗ್‌ ವಿದ್ಯಾರ್ಥಿಯ ತೀವ್ರ ಆಕ್ಷೇಪಕ್ಕೆ ಪ್ರೊಫೆಸರ್ ಅಮಾನತು..!

Published

on

ಉಡುಪಿ : ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಘಟನೆ ನಡೆದಿದೆ.

ಕ್ಲಾಸಲ್ಲೇ ಪ್ರಾಧ್ಯಾಪಕರನ್ನು ವಿದ್ಯಾರ್ಥಿ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ಬಗ್ಗೆ ಆಂತರಿಕ ತನಿಖೆಗೆ ಎಂಐಟಿ ಆಡಳಿತ ಆದೇಶಿಸಿದ್ದು, ಪ್ರಾಧ್ಯಾಪಕನನ್ನು ವಿಚಾರಣೆ ಮುಗಿಯುವವರೆಗೂ ತರಗತಿ ತೆಗೆದುಕೊಳ್ಳದಂತೆ ಅಮಾನತಿಸಲಾಗಿದೆ.

ಕಳೆದ ಶುಕ್ರವಾರ ಈ ಘಟನೆ ನಡೆದಿದ್ದು, ಆ ಬಗ್ಗೆ ವಿಡಿಯೋ ಕೂಡ ವೈರಲ್ ಆಗಿದೆ. ವಿದ್ಯಾರ್ಥಿ ಹಂಝಾ ತನ್ನನ್ನು ಭಯೋತ್ಪಾದಕ ಎಂದು ಕರೆದ ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಅವರನ್ನು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಪ್ರಾಧ್ಯಾಪಕ ರವೀಂದ್ರನಾಥ್‌ ತರಗತಿಯಲ್ಲಿ ವಿದ್ಯಾರ್ಥಿಯ ಹೆಸರನ್ನು ಕೇಳಿದ್ದು, ವಿದ್ಯಾರ್ಥಿ ಮುಸ್ಲಿಂ ಹೆಸರು ಹೇಳಿದ ತಕ್ಷಣ ಓ ನೀನು ಕಸಬ್‌ ರೀತಿಯಾ ಎಂದು ಪ್ರಶ್ನಿಸಿದ್ದಾರೆ.

2008ರ 26/11 ಮುಂಬೈ ದಾಳಿಯಲ್ಲಿ ಸೆರೆ ಸಿಕ್ಕ ಏಕೈಕ ಉಗ್ರ ಅಜ್ಮಲ್‌ ಕಸಬ್‌ಗೆ ವಿದ್ಯಾರ್ಥಿಯನ್ನು ಹೋಲಿಸಿದ್ದಕ್ಕೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ನೀವು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಪ್ರಾಧ್ಯಾಪಕನಿಗೆ ವಿದ್ಯಾರ್ಥಿ ಪ್ರಶ್ನಿಸಿದ್ದು, ನಾನು ಹಾಸ್ಯದ ಧಾಟಿಯಲ್ಲಿ ಆ ರೀತಿ ಹೇಳಿದೆ ಎಂದು ಪ್ರಾಧ್ಯಾಪಕ ಹೇಳಿದ್ದಾನೆ.

ಆಗ ವಿದ್ಯಾರ್ಥಿ 26/11 ಮುಂಬೈ ದಾಳಿ ಹಾಸ್ಯ ಘಟನೆ ಅಲ್ಲ ಮತ್ತು ಮುಸ್ಲಿಮನಾಗಿ ಈ ರೀತಿಯ ವರ್ತನೆಯನ್ನು ಪ್ರತಿನಿತ್ಯ ಅನುಭವಿಸುತ್ತಿರೋದು ಕೂಡ ಹಾಸ್ಯವಲ್ಲ ಸರ್‌. ನನ್ನ ಧರ್ಮದ ಬಗ್ಗೆ ನೀವು ಜೋಕ್‌ ಮಾಡಬೇಡಿ ಎಂದು ಹೇಳಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಐಟಿ ನಿರ್ದೇಶಕರಾದ ಪಿಆರ್ ಎಸ್.ಪಿ.ಕರ್ ಅವರು, “ಈ ಘಟನೆ ಗುರುವಾರ ಅಥವಾ ಶುಕ್ರವಾರ ನಮ್ಮ ಸಂಸ್ಥೆಯಲ್ಲಿ ನಡೆದಿದೆ.

ಈ ಬಗ್ಗೆ ಆಂತರಿಕ ವಿಚಾರಣೆ ನಡೆಯುವವರೆಗೆ ತರಗತಿ ತೆಗೆದುಕೊಳ್ಳದಂತೆ ಸಂಬಂಧಪಟ್ಟ ಸಹಾಯಕ ಪ್ರಾಧ್ಯಾಪಕರಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಈ ವಿವಾದದ ಬಳಿಕ ಹೇಳಿಕೆ ನೀಡಿರುವ ವಿದ್ಯಾರ್ಥಿ ಹಂಝಾ, ಜನಾಂಗೀಯ ಟೀಕೆ ಎಂದಿಗೂ ಒಪ್ಪುವಂತದಲ್ಲ.

ನಾನು ನನ್ನ ಪ್ರಾಧ್ಯಾಪಕರನ್ನು ಪ್ರಶ್ನಿಸುವ ವೀಡಿಯೊ ವೈರಲ್ ಆಗಿದೆ.

ಈ ದೇಶ ಕಂಡ ದೊಡ್ಡ ಭಯೋತ್ಪಾದಕರಲ್ಲಿ ಒಬ್ಬನಾದ ಕಸಬ್ ಎಂಬ ಸ್ವೀಕಾರಾರ್ಹವಲ್ಲದ ಹೆಸರಿನಿಂದ ಅವರು ನನ್ನನ್ನು ಕರೆದಿರುವುದೇ ನನ್ನ ಆಕ್ಷೇಪಕ್ಕೆ ಕಾರಣ.

ಬಳಿಕ ನಾನು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಕ್ಷಮೆಯಾಚಿಸಿದ್ದಾರೆ. ಪ್ರಾಧ್ಯಾಪಕರಿಂದ ತಪ್ಪಾಗಿದೆ.

ಅದೂ ಕೂಡ ನಾನು ಮೆಚ್ಚುವ ವ್ಯಕ್ತಿ ಹೀಗೆ ಮಾಡಿರುವುದು ಬೇಸರ ತಂದಿದೆ. ಆದರೆ ಒಂದು ಬಾರಿ ಇದನ್ನು ಕ್ಷಮಿಸಿ ಇಲ್ಲಿಗೇ ಬಿಟ್ಟು ಬಿಡಬೇಕು ಎಂದು ತಿಳಿಸಿದ್ದಾರೆ.

LATEST NEWS

ಜೈನ ದರ್ಮವ ನಿರಾಕರಿಸಿದರೆ ಸಲ್ಲೇಖನ ವೃತ ಕೈಗೊಳ್ಳಲಾಗುವುದು; ಜೈನಮುನಿ ಹೀಗೆನ್ನಲು ಕಾರಣವೇನು ?

Published

on

ಹುಬ್ಬಳ್ಳಿ :  “ಜೈನ ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಭರವಸೆ ನೀಡಿತ್ತು. ಆದರೆ , ಇದುವರೆಗೆ ಮೂರು ಬೇಡಿಕೆಗಳು ಮಾತ್ರ ಈಡೇರಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಜೈನ ಸಮುದಾಯದ ಯಾವುದೇ ಬೇಡಿಕೆಗಳನ್ನು ಈಡೇರಿಸದೇ ನಿರ್ಲಕ್ಷಿಸಿದ್ದಾರೆ. ಹೀಗಾಗಿ ಶೀಘ್ರವೇ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ. ರಾಜ್ಯ ಸರ್ಕಾರ ನಿರ್ಲಕ್ಷ್ಯ ಮುಂದುವರೆಸಿದರೆ ಬೆಂಗಳೂರಿನ ವಿಧಾನಸೌಧದ ಎದುರು ಅನ್ನ, ನೀರು ತ್ಯಜಿಸುವ ಮೂಲಕ ಸಲ್ಲೇಖನ ವೃತ ಕೈಗೊಳ್ಳುತ್ತೇವೆ” ಎಂದು  ಗುಣಧರನಂದಿ ಮಹಾರಾಜರು ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯ ವರೂರು ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಜೈನ ಧರ್ಮದ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ಮುಂದುವರಿದರೆ ಸಲ್ಲೇಖನ ವೃತ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮಾಧ್ಯಮಗಳ ಎದುರು ಜೈನ ಮುನಿ ಕಣ್ಣೀರು ಹಾಕಿ ನೋವು ಹಂಚಿಕೊಂಡಿದ್ದಾರೆ.

ರಾಜ್ಯ ಸರ್ಕಾರದಿಂದ ಜೈನ ಧರ್ಮದ ಬಗ್ಗೆ ದಿವ್ಯ ನಿರ್ಲಕ್ಷ್ಯ ಎಂದು ಆರೋಪಿಸಿರುವ ಗುಣಧರನಂದಿ ಮಹಾರಾಜ, ಮಾಧ್ಯಮಗಳ ಎದುರೇ ಅಳಲು ವ್ಯಕ್ತಪಡಿಸಿದ್ದಾರೆ. ಜೈನ ಅಭಿವೃದ್ಧಿ ನಿಗಮ – ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೋರಿದ್ದಾರೆ. ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ಸದ್ಯದಲ್ಲಿಯೇ ‘ಬೆಂಗಳೂರು ಚಲೋ’ ಗೆ ಗುಣಧರನಂದಿ ಮಹಾರಾಜ ಕರೆ ಕೊಟ್ಟಿದ್ದಾರೆ.

Continue Reading

DAKSHINA KANNADA

ನಿರೂಪಕ ಸಾಯಿಹೀಲ್ ರೈಗೆ ಪಿತೃ ವಿಯೋಗ

Published

on

ಮಂಗಳೂರು : ನಿರೂಪಕ ಸಾಯಿಹೀಲ್ ರೈ ಅವರ ತಂದೆ, ಉದ್ಯಮಿ, ಸಾಯಿ ಭಕ್ತ ಬೋಳಾರ ಮಂಗಳಾದೇವಿ ನಿವಾಸಿ ಬೆಳ್ಳಿಪ್ಪಾಡಿ ಸತೀಶ್ ರೈ ಅಗರಿ (66) ಅವರು ಇಂದು(ಮಾ.20) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.

ಮೃತರು ಪತ್ನಿ ಶೋಭಾ ರೈ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಬಿ. ಸಿ. ರೋಡ್, ಸಜೀಪ – ನಾಲ್ ಕೈ ತ್ತಾಯ ದೈವಸ್ಥಾನದ ಸಮೀಪ ಇರುವ “ಅಗರಿ ಮನೆ”  ಯಲ್ಲಿ ಸಂಜೆ 4.30 ರಿಂದ 7 ನಡೆಯಲಿದೆ.

 

Continue Reading

FILM

ಟಾಲಿವುಡ್‌ನ 25 ಖ್ಯಾತ ನಟ, ನಟಿಯರ ಮೇಲೆ ಕೇಸ್ ದಾಖಲು

Published

on

ಮಂಗಳೂರು/ಹೈದರಾಬಾದ್: ಟಾಲಿವುಡ್‌ನ 25 ಖ್ಯಾತ ನಟ, ನಟಿಯರಿಗೆ ತೆಲಂಗಾಣ ಪೊಲೀಸರು ಶಾಕ್ ಕೊಟ್ಟಿದ್ದಾರೆ.

ವಿಜಯ್‌ ದೇವರಕೊಂಡ, ಪ್ರಕಾಶ್‌ ರಾಜ್, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ನಿಧಿ ಅಗರವಾಲ್, ಕನ್ನಡದ ನಟಿ ಪ್ರಣೀತಾ ವಿರುದ್ದ ಕೇಸ್ ದಾಖಲಾಗಿದೆ.

32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ಸಲ್ಲಿಸಿದ ಅರ್ಜಿಯ ಮೇರೆಗೆ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 318 (4), ಸೆಕ್ಷನ್ 112, 49ರಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾಗೆ ಭರ್ಜರಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಯುವಜನರು ಹಾಳಾಗುತ್ತಿದ್ದಾರೆ. ಸಮಾಜದಲ್ಲಿ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಬೆಟ್ಟಿಂಗ್ ಆ್ಯಪ್‌ಗಳ ಆಘಾತಕಾರಿ ವಿಚಾರ ಗೊತ್ತಿದ್ದರೂ ಖ್ಯಾತ ನಟ, ನಟಿಯರು ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.

ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ದೂರು ಸಲ್ಲಿಕೆಯಾಗಿತ್ತು. ಈ ದೂರಿನ ಆಧಾರದ ಮೇಲೆ ನಟ, ನಟಿಯರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page