Connect with us

LATEST NEWS

ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ರಘುಪತಿ ಭಟ್

Published

on

ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ರಘುಪತಿ ಭಟ್

ಉಡುಪಿ : ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಶಾಸಕ ಕೆ. ರಘುಪತಿ ಭಟ್ ಪರಿಹಾರ ವಿತರಣೆ ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿ ಸುಧಾಮ ಪೂಜಾರಿ ಎಂಬುವವರು ಇತ್ತೀಚೆಗೆ ಸುರಿದ ಭಾರಿ ಮಳೆಯ ನೆರೆಗೆ ಕೊಚ್ಚಿಹೋಗಿ ಮೃತಪಟ್ಟಿರುತ್ತಾರೆ.

ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸು ಮಾಡಿರುವಂತೆ ಪ್ರಾಕೃತಿಕ ಪರಿಹಾರ ನಿಧಿಯಿಂದ ರೂ. 5 ಲಕ್ಷ ಮಂಜೂರಾಗಿರುತ್ತದೆ.

ಮೃತರ ಮನೆಗೆ ಭೇಟಿ ನೀಡಿದ ಶಾಸಕ ಕೆ. ರಘುಪತಿ ಭಟ್ ರವರು ಮೃತ ಸುಧಾಮ ಪೂಜಾರಿ ಅವರ ಕುಟುಂಬದವರಿಗೆ ರೂ. 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.

ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ವಿಶ್ವನಾಥ್, ಕಲ್ಯಾಣಪುರ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

LATEST NEWS

ದನ ಅಡ್ಡ ಬಂದು ಸ್ಕೂಟರ್ ಪಲ್ಟಿ; ಸವಾರ ಸಾವು

Published

on

ಬ್ರಹ್ಮಾವರ : ದನ ಅಡ್ಡ ಬಂದ ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟ ಘಟನೆ ಉಡುಪಿಯ ಉಪ್ಪೂರು ಗ್ರಾಮದ ಕೊಳಲಗಿರಿ-ಆರೂರು ರಸ್ತೆಯ ಶ್ರೀ ವೀರಾಂಜನೆಯ ಭಜನಾ ಮಂದಿರದ ಬಳಿ ಏ.20 ರಂದು ಸಂಜೆ ವೇಳೆ ನಡೆದಿದೆ.

ಮಣಿಪಾಲ ಹೊಟೇಲ್ ಒಂದರ ಮೆನೇಜರ್ ಪ್ರವೀಣ್ ಸಾಲ್ಯಾನ್(44) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೃತ ಪ್ರವೀಣ್ ಸ್ಕೂಟರ್‌ನಲ್ಲಿ ಮಣಿಪಾಲದಿಂದ ನೀಲಾವರದಲ್ಲಿರುವ ಸಂಬಂಧಿಕರ ಮನೆಯ ಹೋಗು ತ್ತಿದ್ದಾಗ ದನವೊಂದು ಒಮ್ಮೇಲೆ ರಸ್ತೆಗೆ ಅಡ್ಡ ಬಂತ್ತೆನ್ನಲಾಗಿದೆ. ಇದರ ಪರಿಣಾಮ ಪ್ರವೀಣ್ ಒಮ್ಮೇಲೆ ಬ್ರೇಕ್ ಹಾಕಿದ್ದರಿಂದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರವೀಣ್‌ನನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಆಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಎ.21ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು  ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮಂಗಳೂರು : ವಕ್ಫ್ ಕಾಯ್ದೆ ವಿರುದ್ಧ ನಡೆಯಬೇಕಿದ್ದ ಪ್ರತಿಭಟನೆ ಮುಂದೂಡಿಕೆ

Published

on

ಮಂಗಳೂರು :ಈಗಾಗಲೇ ವಕ್ಫ್ ತಿದ್ದುಪಡಿಯನ್ನು ಕೇಂದ್ರ ಸರಕಾರ ಜಾರಿಗೊಳಿಸಿದ್ದು, ಈ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯು ಎ.29ರಂದು ಕೂಳೂರು ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿತ್ತು. ಆದರೆ ಈಗ ಅಚಾನಕ್‌ ಆಗಿ ಆ ಪ್ರತಿಭಟನೆಯನ್ನು ಮುಂದೂಡಲಾಗಿದೆ.

ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮೇ 16ರ ಶುಕ್ರವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಸಲಾಗಿದೆ ಎಂದು ಉಪಾಧ್ಯಕ್ಷ ಕೆ.ಅಶ್ರಫ್ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಲಹೆಗಾರರು ಪಾಲ್ಗೊಂಡಿದ್ದರು.

Continue Reading

DAKSHINA KANNADA

ಕ್ರಿಶ್ಚಿಯನ್‌ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶ; ಖಾದರ್ ಸಂತಾಪ

Published

on

ಮಂಗಳೂರು : ಪೋಪ್‌ ಫ್ರಾನ್ಸಿಸ್​​ ಅಂದರೆ ಜನರಿಗೆ ನೆರಳು ಕೊಡುವ ಮರ. ನಿಸ್ವಾರ್ಥ ಮನಸ್ಸಿನ ದೊರೆ. ತಂಪಾಗಿ ಮಳೆ ಸುರಿಯುವ ಸೋನೆ, ಹಿಂದುಳಿದ ಬಡಜನರ ಪಾಲಿಗೆ ಆತನೇ ದೈವ. ಬದುಕಿನಲ್ಲಿನ ಸುಖ ಶಾಂತಿ, ನೆಮ್ಮದಿಗಳಿರುವ ಆಟಕ್ಕೆ ಫ್ರಾನ್ಸಿಸ್​​ ಚಾಂಪಿಯನ್.ಈಗಲೂ ವ್ಯಾಟಿಕನ್ ಸಿಟಿಯ ಮಂದಿಗೆ ಪೋಪ್​ ಫ್ರಾನ್ಸಿಸ್​​ ಚಾಂಪಿಯನ್ನೇ. ಅಂತಹ ಮಹಾನ್ ವ್ಯಕ್ತಿ, 88 ವರ್ಷದ ಪೋಪ್ ಫ್ರಾನ್ಸಿಸ್ ಡಬಲ್​​ ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು.

ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಅಂಗಳದಲ್ಲಿ ಸಾವಿರಾರು ಭಕ್ತರು ಸೇರಿ “ಹ್ಯಾಪಿ ಈಸ್ಟರ್” ಆಚರಣೆ ನಡೆಸುವಾಗ, ಅವರನ್ನ ಹಾರೈಸಲು ಫ್ರಾನ್ಸಿಸ್ ವೀಲ್‌ಚೇರ್‌ನಲ್ಲಿ ಹೊರಬಂದಿದ್ದ ​​. ಅದೇ ಅವರ ಕೊನೆ ದರ್ಶನ ಎಂದು ಯಾರಿಗೂ ತಿಳಿದಿರಲಿಲ್ಲ. ಯಾಕೆಂದರೆ ಡಬಲ್ ನ್ಯುಮೋನಿಯಾ ಚಿಕಿತ್ಸೆ ಪಡೆದು ಮನೆಗೆ ಬಂದು ವಾರಗಳು ಕಳೆದಿದಷ್ಟೇ. ನಿನ್ನೆ (ಏ.21) ಪೋಪ್​ ಫ್ರಾನ್ಸಿಸ್ ಇಹಲೋಕ ತ್ಯಜಿಸಿದ್ದಾರೆ. ಫ್ರಾನ್ಸಿಸ್ ನಿಧನಕ್ಕೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ :  ಕ್ಯಾಥೊಲಿಕ್‌ ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

“ಆಧ್ಯಾತ್ಮಿಕ ಗುರುಗಳಾಗಿದ್ದ ಫ್ರಾನ್ಸಿಸ್ ಸಹಾನುಭೂತಿ, ಸರಳತೆ, ನ್ಯಾಯ ಮತ್ತು ಶಾಂತಿ ಬಯಸುವ ನೈತಿಕ ಧ್ವನಿಯಾಗಿದ್ದರು. ಪೋಪ್ ಆಗಿ ಅವರ ಸರಳ ಜೀವನ ಮತ್ತು ಬಡವರ ಬಗ್ಗೆ ಪ್ರೀತಿ, ವಿಶೇಷ ಕಾಳಜಿ, ಪ್ರತಿಯೊಬ್ಬ ಮನುಷ್ಯನ ಘನತೆಯ ಬಗ್ಗೆ ಆಳವಾದ ಕಾಳಜಿಯನ್ನು ಹೊಂದಿದ್ದರು. ಫ್ರಾನ್ಸಿಸ್ ಅವರ ಸೌಮ್ಯ ಸ್ವಭಾವ ಮತ್ತು ವಿವೇಕಪೂರ್ಣ ಮಾತುಗಳಿಗೆ ಬಹಳ ಆಕರ್ಷಿತನಾಗಿದ್ದೆ. ಈ ಉದಾತ್ತ ಗುಣಗಳು ನನ್ನಲ್ಲಿ ಮಾತ್ರವಲ್ಲ ಜಗತ್ತಿನ ಕೋಟ್ಯಂತರ ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿಯಲಿವೆ” ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಹೇಳಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರನ್ನು 2024ರ ಡಿಸೆಂಬರ್‌ನಲ್ಲಿ ಭೇಟಿಯಾಗಿ ಅವರ ಆಶೀರ್ವಾದವನ್ನು ಪಡೆದ ಕ್ಷಣಗಳನ್ನು ನೆನಪಿಸಿಕೊಂಡಿರುವ ಸ್ಪೀಕರ್ ಯು.ಟಿ.ಖಾದರ್ “ಪೋಪ್ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಸ್ವೀಕರಿಸಿರುವುದು ಬದುಕಿನ ಅಮೂಲ್ಯ ಕ್ಷಣವಾಗಿ ಸದಾ ನೆನಪಿನಲ್ಲಿ ಉಳಿಯಲಿದೆ. ಅವರು ನೀಡಿರುವ ಸಲಹೆಯು ತನ್ನ ಮೇಲೆ ಪ್ರಭಾವ ಬೀರಿದೆ. ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ನಮ್ಮ ರಾಜ್ಯದ ಜನರ ಪರವಾಗಿ, ಸಂತಾಪ ವ್ಯಕ್ತಪಡಿಸುವೆನು. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ . ಅವರ ದಯೆ ಮತ್ತು ಏಕತೆಯ ಪರಂಪರೆ ಮಾನವತೆಗಾಗಿ ಬೆಳಕು ನೀಡುವ ದಾರಿಯಾಗಿ ಮುಂದುವರಿಯಲಿ ಎಂದು ನಾವು ಆಶಿಸುತ್ತೇವೆ” ಎಂದು ಖಾದರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page