Connect with us

ಪಾದರಾಯನಪುರ ಗೂಂಡಾ ಪ್ರಕರಣ ಕುರಿತು ಸರ್ಕಾರಕ್ಕೆ ಶಾಸಕ ಖಾದರ್ ಸವಾಲ್.!

Published

on

ಪಾದರಾಯನಪುರ ಗೂಂಡಾ ಪ್ರಕರಣ ಕುರಿತು ಸರ್ಕಾರಕ್ಕೆ ಶಾಸಕ ಖಾದರ್ ಸವಾಲ್.!

ಮಂಗಳೂರು: ಬೆಂಗಳೂರಿನ ಪಾದರಾಯನಪುರದ ಸಾದೀಕ್ ನಗರದಲ್ಲಿ ಹಲ್ಲೆ ನಡೆದಾಗ ಸರಕಾರ ಸೂಕ್ತ ಕ್ರಮ ಕೈಗೊಂಡಿದ್ದರೆ ಮತ್ತೊಮ್ಮೆ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ. ಕಿಡಿಗೇಡಿಗಳು‌ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ದೋಷಿಸುವುದು ತಪ್ಪು.

ಯಾವ ಸಮುದಾಯದವರು ಇಂತಹ ನೀಚ ಕೃತ್ಯವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಶಾಸಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ.

ಪಾದರಾಯನಪುರದಲ್ಲಿ ಗೂಂಡಾಗಿರಿ ಮಾಡಿದವರ ವಿರುದ್ಧ ಕಿಡಿಕಾರಿದ ಶಾಸಕ, ‘ಗೂಂಡಾಗಳಿಗೆ ಸರಕಾರ ಸೂಕ್ತವಾದ ಕ್ರಮ ತೆಗೆದುಕೊಳ್ಳಲಿ.

ಗೂಂಡಾಗಳಿಗೆ ಬೆಂಬಲಿಸುವ ಕೆಲಸ ಸರಕಾರದಿಂದ ಮಾಡಬಾರದು. ಸಮಾಜದ ಸ್ವಾಸ್ಥ ಕೆಡಿಸುವ ಕೆಲಸ ನಡೆಯಬಾರದು.

ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸೋಣ. ಸರಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳಲೇಬೇಕು. ಈ ರೀತಿಯ ಘಟನೆ ನಮ್ಮೆಲ್ಲರಿಗೂ ಕಪ್ಪು ಚುಕ್ಕೆ ಇದ್ದಂತೆ.

ಕಾರಣ ಏನೇ ಇರಲಿ, ಆದ್ರೆ ಗೂಂಡಾಗಿರಿಗೆ ನಮ್ಮ ಬೆಂಬಲವಿಲ್ಲ. ತಂದೆ ತಾಯಿಯ ಮಾತೆ ಕೇಳದವರು ನಾಯಕರ‌ ಮಾತು ಕೇಳುತ್ತಾರಾ.?.

ಪದೇ ಪದೇ ಇಂತಹ ‌ಕೃತ್ಯ ನಡೆಯದಂತೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಸಮುದಾಯ ದಂಗೆ ಎಬ್ಬಿಸಿ ದಾಂಧಲೆ ಮಾಡಿ ಎಂದು ಹೇಳುವುದಿಲ್ಲ.

ಎಲ್ಲವನ್ನು ಸಮುದಾಯ ನಿರ್ವಹಿಸುದಾದರೆ ಸರಕಾರ ಏಕೆ.?. 70 ವರ್ಷದ ವೃದ್ಧರಿಗೆ ಲಾಟಿ ಬೀಸುವ ಪೊಲೀಸರು ಈ ಗೂಂಡಾಗಳ ಮೇಲೆ ಯಾಕೆ ಚಾರ್ಜ್ ಮಾಡುವುದಿಲ್ಲ.? ಎಂದು ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಖಾದರ್ ಖಡಕ್ ಪ್ರಶ್ನೆ ಮಾಡಿದ್ದಾರೆ.

ಇತ್ತ ಮಾಧ್ಯಮ ಕೂಡ ಸಮುದಾಯಕ್ಕೆ ಪ್ರಶ್ನೆ ಹಾಕುವ ಬದಲು, ಸರಕಾರವನ್ನು ಪ್ರಶ್ನಿಸಲಿ. ರಾಜ್ಯದ ಆರೂವರೆ ಕೋಟಿ ಜನರಿಗೆ ಇರುವುದು ಒಂದೇ ಕಾನೂನು.

ಸರಕಾರ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾರೋ ಕೆಲವರು ಮಾಡಿದ ಅಮಾನವೀಯ ಕೆಲಸಕ್ಕೆ ಇಡೀ ಸಮುದಾಯದವರನ್ನು ದೂಷಿಸುವುದು ತಪ್ಪು. ಸರಕಾರದ ಭಯ ಜನರಿಗಿಲ್ಲ ಎಂದು ಖಾದರ್ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಶ್ರೀರಾಮಲು ಕೊಟ್ಟ ಹೇಳಿಕೆಗೆ ತಿರುಗೇಟು ನೀಡಿದ ಖಾದರ್, ಶ್ರೀರಾಮುಲು ಹೇಳಿದಂತೆ ರಾತ್ರಿ ಹೋಗಲು ಇದೇನೂ ಕಾರ್ಯಕ್ರಮವಲ್ಲ. ವೈರಸ್ ಹರಡದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು.ಇಂತಹ ಹೇಳಿಕೆ ಸಮಂಜಸವಲ್ಲ ಎಂದಿದ್ದಾರೆ.

ಇತ್ತ ಯಾವುದೇ ರೀತಿಯ ಮುಂದಾಲೋಚನೆ ಇಲ್ಲದೆ ಲಾಕ್ ಡೌನ್ ತಂದು ಜನ ಹೊಟ್ಟೆ ಬಟ್ಟೆಗಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

25 ದಿನ ಸಹಿಸಿಕೊಂಡ ಜನರಿಗೆ ಇನ್ನು ಕೂಡ ಮುಂದೇನೂ ಎಂಬ ಪ್ರಶ್ನೆ ಕಾಡುತ್ತಿದೆ. ಸರಕಾರದ ಬಳಿ ಯಾವುದಕ್ಕೂ ಉತ್ತರವಿಲ್ಲ.

ಕೊರೊನಾ ಯಾವ ಹಂತಕ್ಕೆ ಮುಟ್ಟಿದೆ ಮುಂದಿನ ಕ್ರಮವೇನು ಎಂದು ಸರಕಾರಕ್ಕೆ ತಿಳಿದಿಲ್ಲ. ಆಸ್ಪತ್ರೆಯಲ್ಲಿ ಯಾವ ವ್ಯವಸ್ಥೆ ಇದೆ.

ವೈದ್ಯರಿಗೆ ಸುರಕ್ಷತಾ ಕವಚ ಸರಕಾರದಿಂದ ಲಭ್ಯವಿದೆಯಾ. ? ಸರಕಾರಕ್ಕೆ ಸಹಕಾರ ನೀಡಿದರೂ ಲೀಡರ್ ಶೀಪ್ ಮಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ.

ಯಾವುದೇ ಒಂದು ಸಚಿವ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ನೇಮಿಸದೆ ಸರಕಾರ ಇಂದು ಈ ಹಂತಕ್ಕೆ ತಲುಪಿದ್ದು, ಸಮಾಜದ ಸ್ವಾಸ್ಥದ ಜೊತೆಗೆ ಆರೋಗ್ಯ ಕಾಪಾಡುವಲ್ಲಿ ಕೂಡ ಸಂಪೂರ್ಣ ವಿಫಲವಾಗಿದೆ ಎಂದು ಖಾದರ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಇನ್ನು ದೆಹಲಿ ತಬ್ಲಿಘಿ ಸಮಾವೇಶದ ಬಗ್ಗೆ ಮಾತನಾಡಿದ ಖಾದರ್, ನಿಜಾಮುದ್ದೀನ್ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ದೆಹಲಿ ಸರಕಾರ ಅನುಮತಿ ನೀಡಿದ್ದಲ್ಲದೇ, ಕೊರೊನಾ ಪೀಡಿತ ದೇಶಗಳ ಜನರಿಗೆ ವೀಸಾ ನೀಡಿ ಭಾರತಕ್ಕೆ ಬರಲು ಕೇಂದ್ರ ಸರಕಾರ ಅನುಮತಿ ನೀಡಿತ್ತು.

ಆದರೂ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಮಾಡಿದ ಕೆಲಸ ತಪ್ಪು ಎಂದೆ ನಾವು ಹೇಳುತ್ತೇವೆ. ಇಂತಹವರಿಗೆ ನಮ್ಮ ಬೆಂಬಲವಿಲ್ಲ. ಆದರೆ ಸರಕಾರ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ನಿದ್ರಾವಸ್ಥೆಗೆ ಜಾರಿದೆ ಎಂದು ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಇತ್ತ ರೇಷನ್ ಕಾರ್ಡ್ ಬಗ್ಗೆಯೂ ಫೈರ್ ಮಾಡಿದ ಖಾದರ್, ರೇಷನ್ ಕಾರ್ಡ್ ಇಲ್ಲದವರಿಗೆ ಅಕ್ಕಿ ಇಲ್ಲ. ಹಾಗಾದರೆ ರೇಷನ್ ಕಾರ್ಡ್ ಇಲ್ಲದವರಿಗೆ ಹಸಿವೆ ಆಗಲ್ವಾ.?.

ಸಿದ್ಧರಾಮಯ್ಯ ಸರಕಾರವಿದ್ದಾಗ ಐದು ನಿಮಿಷಗಳಲ್ಲಿ ರೇಷನ್ ಕಾರ್ಡ್ ನೀಡುವ ವ್ಯವಸ್ಥೆ ಆಗಿತ್ತು. ಇಂತಹ ಕ್ರಮ ಈ ಪರಿಸ್ಥಿತಿಯಲ್ಲಿ ಸರಕಾರ ಕೈಗೊಳ್ಳಬೇಕು.

ಜೊತೆಗೆ ಆಶಾಕಾರ್ಯಕರ್ತರಿಗೆ ಟೆಸ್ಟಿಂಗ್ ಕಿಟ್ ನೀಡಿ‌ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸಲು ಸರಕಾರ ಆದೇಶದ ಜೊತೆ ವ್ಯವಸ್ಥೆ ಮಾಡಬೇಕು.

ಒಟ್ಟಾರೆಯಾಗಿ ಸರಕಾರವೆ ಗೊಂದಲದಲ್ಲಿದ್ದು ಕೊರೊನಾ ತಡೆಗಟ್ಟಲು ದಿನಕ್ಕೊಂದು ಮಂತ್ರಿಗಳನ್ನು ನೇಮಕ ಮಾಡುತ್ತಿದೆ. ಇನ್ನು ಜನರು ಯಾರ ಮೇಲೆ ವಿಶ್ವಾಸವಿಡಬಹುದು. ಎಂದು ಯುಟಿ ಖಾದರ್ ಮಾರ್ಮಿಕವಾಗಿ ನುಡಿದಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page