ಸೀಲ್ ಡೌನ್ ಪ್ರದೇಶಗಳಿಗೆ ಶಾಸಕರ ಭೇಟಿ: ಜನರಲ್ಲಿ ಧೈರ್ಯ ತುಂಬಿದ ವೇದವ್ಯಾಸ್ ಕಾಮತ್..!
DAKSHINA KANNADA
ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ
LATEST NEWS
ಬೆಂಗಳೂರು: ಟಿಪ್ಪರ್ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಜೀವಾಂತ್ಯ!
International news
ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್ ದಾ*ಳಿ
-
LATEST NEWS7 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
INTERNATIONAL7 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri7 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
LATEST NEWS7 days agoಮನೆಯಲ್ಲಿ ಒಬ್ಬರೇ ಇದ್ದ ವೃದ್ಧೆಯ ಹತ್ಯೆ: ಅಹಮದಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆ!
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

ತನ್ನ ಕ್ಷೇತ್ರದಲ್ಲಿ ಬರುವ ಸೀಲ್ ಡೌನ್ ಜಾರಿಗೊಳಿಸಿರುವ ಪಡೀಲ್ ಕಣ್ಣೂರು ವಾರ್ಡ್ ಕೊಡಕಲ್ , ಕುಲಶೇಖರದ ಶಕ್ತಿನಗರ ಮತ್ತು ಬೋಳೂರು ಸುಲ್ತಾನ್ ಬತ್ತೇರಿ ಪ್ರದೇಶಗಳಿಗೆ ಭೇಡಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಮತ್ತು ಸ್ಥಳಿಯ ಜನಪ್ರತಿನಿಧಿಗಳೊಂದಿಗೆ ವಿಚಾರ ವಿನಿಮಯ ಮಾಡಿಕೊಂಡರು.
ಪರಿಸರದ ಎಲ್ಲಾ ಕಡೆಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಸಾರ್ವಜನಿಕರು ನಿರ್ಭೀತರಾಗಿ ಧೈರ್ಯದಿಂದ ಇರುವಂತೆ ಜಾಗೃತಿ ಮೂಡಿಸಲಾಯಿತು.
ಅದೇ ರೀತಿ ಸ್ಥಳೀಯರಿಗೆ ಯಾವುದೇ ಸಮಸ್ಯೆ ಬಾರರ ರೀತಿ ಎಲ್ಲಾ ಮನೆಗಳಿಗೂ ಅಗತ್ಯ ವಸ್ತುಗಳಾದ ಹಾಲು, ತರಕಾರಿ ಹಾಗೂ ದಿನಸಿ ಸಾಮಾಗ್ರಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಸ್ಥಳಿಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ.
ಆ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರ ಅತೀ ಅಗತ್ಯವಾಗಿದೆ ಎಂದು ಪರಿಸರದ ನಾಗರಿಕರಲ್ಲಿ ವಿನಂತಿಸಿದರು. ನಮ್ಮೆಲ್ಲರ ರಕ್ಷಣೆಗಾಗಿ ಸೀಲ್ ಡೌನ್ ಜಾರಿಗೊಳಿಸಲಾಗಿದೆ.
ಜಿಲ್ಲಾಡಳಿತ ಹಾಗೂ ಅಧಿಕಾರಿ ವರ್ಗ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತರಾಗಿದ್ದಾರೆ. ಸ್ವಯಂ ರಕ್ಷಣಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವಚ್ಛತೆ, ಹಾಗೂ ಮನೆಯೊಳಗೆ ಇರುವಂತಹ ಕ್ರಮಗಳನ್ನು ಶಿಸ್ತಿನಿಂದ ಪಾಲಿಸಬೇಕು.
ತಾವು ಮನೆಯೊಳಗಿದ್ದರೂ ಸ್ವಚ್ಛತೆ ಮತ್ತು ಮನೆಯವರೊಂದಿಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.ಈಗಾಗಲೇ ಒಂದು ಹಂತದಲ್ಲಿ ಕಿಟ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಬಿದ್ದಾಗ ಮತ್ತಷ್ಟು ಆಹಾರ ಸಾಮಾಗ್ರಿಗಳನ್ನು ವಿತರಿಸಲಾಗುವುದು ಅಲ್ಲದೇ ಮನೆ ಮನೆಗೆ ಆಶಾಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬಂಧಿಗಳು ಬಂದಲ್ಲಿ ಅವರೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದರು.


