Connect with us

BANTWAL

ರಾಜ್ಯದ ಕಾನೂನು ವ್ಯವಸ್ಥೆ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆಯ ಮಳೆಗರೆದ ಎಂ.ಎಲ್.ಸಿ ಕಿಶೋರ್ ಕುಮಾರ್

Published

on

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ  ಕಿಶೋರ್ ಕುಮಾರ್ ಪುತ್ತೂರು ರಾಜ್ಯದಲ್ಲಿ ಹೆಚ್ಚುತ್ತಿರುವ ದರೋಡೆ, ಸುಲಿಗೆ, ಮನೆಕಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ಕುರಿತಾಗಿ ಗೃಹಸಚಿವರನ್ನು ಕಠಿಣವಾಗಿ ಪ್ರಶ್ನಿಸಿದರು.

ಕಳೆದ ಮೂರು ವರ್ಷಗಳ ಅಂಕಿಅಂಶವೇ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದನ್ನು ಸಾಬೀತುಪಡಿಸುತ್ತದೆ. 2023ರಲ್ಲಿ ದಾಖಲಾಗಿದ 45 ಸಾವಿರಕ್ಕೂ ಹೆಚ್ಚು ಪ್ರಕರಣಗಳಲ್ಲಿ 28 ಸಾವಿರ ಪತ್ತೆಯಾಗಿಲ್ಲ. 2024ರಲ್ಲಿ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳಲ್ಲಿ 23 ಸಾವಿರ ಪತ್ತೆಯಾಗಿಲ್ಲ. 2025ರಲ್ಲೇ ಈಗಾಗಲೇ 30 ಸಾವಿರ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 8 ಸಾವಿರ ಪ್ರಕರಣ ಪತ್ತೆಯೇ ಆಗಿಲ್ಲ. ಇದು ಜನರನ್ನು ಭಯಕ್ಕೆ ತಳ್ಳುವಂತೆ ಆಗಿದೆ.

ರಾಜ್ಯದಲ್ಲಿ ಕಳೆದ ಎಂಟು ತಿಂಗಳಲ್ಲಿ ಒಬ್ಬ ಎಸಿಪಿ ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಕುಗ್ಗಿಸಿದೆ ಎಂದು ಉದ್ಧರಿಸಿದರು. “ನಮ್ಮ ರಾಜ್ಯ ‘ಕಳ್ಳಕಾಕರ ರಾಜ್ಯವಾಗುತ್ತಿರುವಂತೆ ಕಂಡುಬರುತ್ತಿದೆ. ಗೃಹಸಚಿವರಿಗೆ ಇಲಾಖೆಯ ಮೇಲಿನ ಹಿಡಿತವಿಲ್ಲ, ಸರ್ಕಾರಕ್ಕೆ ಗೃಹ ಇಲಾಖೆಯ ಮೇಲಿನ ಕಂಟ್ರೋಲ್ ಕಾಣುತ್ತಿಲ್ಲ. ಜನರ ಸುರಕ್ಷತೆಯೇ ಚಿಂತಾಜನಕವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಸಿಸ್ ಉಗ್ರ ಮೊಬೈಲ್ ಬಳಸುವುದರ ಮೂಲಕ ವಾಟ್ಸಪ್ ವೀಡಿಯೋ ಕಾಲ್ ಮಾಡಿದ ಘಟನೆಯನ್ನು ಉಲ್ಲೇಖಿಸಿ, “ಇಂತಹ ಭದ್ರತಾ ವೈಫಲ್ಯಗಳು ರಾಷ್ಟ್ರದ ಮಾನವನ್ನು ಹರಾಜು ಮಾಡುತ್ತಿವೆ. ರಾಜ್ಯದ ಜೈಲು ನಿರ್ವಹಣೆಯಲ್ಲಿಯೇ ಗಂಭೀರ ಲೋಪವಿದೆ ಎಂದು ಗೃಹಸಚಿವರ ಗಮನಕ್ಕೆ ತಂದರು.

ಇದೇ ವೇಳೆ ಪಿಎಸ್‌ಐ ನೇಮಕಾತಿ ಇನ್ನೂ ನಡೆಯದೆ ಇರುವುದನ್ನು ಪ್ರಶ್ನಿಸಿದ ಶಾಸಕರು, ಯುವಕರ ಭವಿಷ್ಯವನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಸಚಿವರ ಉಡಾಫೆ ಉತ್ತರಕ್ಕೆ ಆಕದಷೇಪವನ್ನು ವ್ಯಕ್ತಪಡಿಸಿದರು.

ರಾಜ್ಯದ ಹೊರರಾಜ್ಯ ಗಡಿಗಳು ಕಳ್ಳತನಕ್ಕೆ ಪ್ರಮುಖ ಮಾರ್ಗವಾಗಿರುವುದರಿಂದ, ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆಯ ಸಿಸಿಟಿವಿ, ನಿಗಾವ್ಯವಸ್ಥೆ ಮತ್ತು ಕಣ್ಗಾವಲುಗಳನ್ನು ಬಲಪಡಿಸಲು ಶಾಸಕರು ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಪ್ರಾಮಾಣಿಕ ಅಧಿಕಾರಿಗಳ ಸೇವೆಯನ್ನು ಮೆಚ್ಚಿಕೊಂಡ ಶಾಸಕರು, ದ.ಕ. ಎಸ್‌ಪಿ  ಡಾ. ಅರುಣ್ ಶಂಕರ್, ಹಿಂದಿನ ದ.ಕ. ಎಸ್‌ಪಿ ಯತೀಶ್, ಮಂಗಳೂರು ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ಅವರ ಶಿಸ್ತಿನ ಕಾರ್ಯನೈಪುಣ್ಯವನ್ನು ಶ್ಲಾಘಿಸಿದರು. ರಾಜ್ಯದಲ್ಲಿ ಇದೇ ರೀತಿಯ ಪ್ರಾಮಾಣಿಕ ಮತ್ತು ಪರಿಣಾಮಕಾರಿ ಅಧಿಕಾರಿಗಳು ಇನ್ನಷ್ಟು ಬೇಕು ಎಂದು ಹೇಳಿದರು.

 

 

BANTWAL

ಬ್ರಹ್ಮರಕೊಟ್ಲು ಟೋಲ್ ಗೇಟ್ ಗೆ ಹಾನಿ ಮಾಡಿ ಸಿಬಂದಿ ಮೇಲೆ ಹಲ್ಲೆ; ಲಾರಿ ಚಾಲಕ, ಕ್ಲೀನರ್ ಬಂಧನ

Published

on

ಬಂಟ್ವಾಳ: ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ನಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸೇರಿಕೊಂಡು ಟೋಲ್ ಗೇಟ್ ಗೆ ಹಾನಿ ಮಾಡಿ ಸಿಬಂದಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದ್ದು, ಘಟನೆಗೆ ಸಂಬಂಧಿಸಿ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಲಾರಿ ಚಾಲಕ ಭರತ್ (23) ಮತ್ತು ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಮೇಲ್ವಿಚಾರಕ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಗಳು ಸೋಮವಾರ ಮುಂಜಾನೆ ಟಾಟಾ ಲಾರಿಯಲ್ಲಿ ಟೋಲ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದಿದ್ದು, ಟೋಲ್ ಸಿಬಂದಿ ಹಣ ಕೇಳಿದಾಗ ಲಾರಿಯನ್ನು ಮುಂದಕ್ಕೆ ಚಲಾಯಿಸಿಕೊಂಡು ಹೋಗಿ ಟೋಲ್ ಗೇಟ್ ಗೆ ಹಾನಿ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು| ಕಾರ್ಮಿಕನ ಮೇಲೆ ಭೀಕರವಾಗಿ ಹಲ್ಲೆ ಗೈದ ಅಪ್ರಾಪ್ತ ವಯಸ್ಕರು

ಬಳಿಕ ಚಾಲಕ ಹಾಗೂ ಕ್ಲೀನರ್ ಟೋಲ್ ಸಿಬಂದಿ ಅಂಕಿತ್ ಮತ್ತು ರೋಹಿತ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರನ್ನು ಕರೆದುಕೊಂಡು ಟೋಲ್ ಬೂತ್ ಗೆ ಅಕ್ರಮವಾಗಿ ಪ್ರವೇಶಿಸಿ ಮತ್ತೆ ಸಿಬಂದಿಗೆ ಹಲ್ಲೆ ನಡೆಸಿರುತ್ತಾರೆ.

ಈ ಕುರಿತ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

BANTWAL

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯೊಳಗೆ ಪತ್ತೆ

Published

on

ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆಯಾಗಿತ್ತು. ಇದು ಹಲವು ಸಮಯಗಳ ಹಿಂದೆ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ ಪೂವಪ್ಪ ಪೂಜಾರಿ ಅವರ ಶವ ಎಂದು ಗುರುತು ಪತ್ತೆಹಚ್ಚಲಾಗಿದೆ.

ಸ್ಥಳೀಯರಿಗೆ ದುರ್ವಾಸನೆ ಬಂದ ಕಾರಣ ಹುಡುಕಾಡಿದಾಗ ವಾಸ್ತವ್ಯವಿಲ್ಲದ ಪಾಳು ಬಿದ್ದ ಮನೆಯಂಗಳದ ಬಾವಿಯಲ್ಲಿ ಶವ ಕಂಡುಬಂದಿತ್ತು. ತಕ್ಷಣವೇ ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಮುರಳೀಧರ ವಿಟ್ಲ ನೇತೃತ್ವದ “ಫ್ರೆಂಡ್ಸ್ ವಿಟ್ಲ” ತಂಡದವರು ಸ್ಥಳಕ್ಕಾಗಮಿಸಿ 57 ಅಡಿ ಆಳದ ಬಾವಿಯೊಳಗೆ ಇದ್ದ ಶವ ಮೇಲಕ್ಕೆತ್ತಿದ್ದಾರೆ.

ಇದನ್ನೂ ಓದಿ: ಮದ್ವೆಯಾಗು ಅಂದಿದಕ್ಕೆ ಪ್ರೇಯಸಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪ್ರಿಯಕರ!

ಫ್ರೆಂಡ್ಸ್ ವಿಟ್ಲ ತಂಡದ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದು ಸ್ಥಳೀಯರು ಸಹಕಾರ ನೀಡಿದ್ದಾರೆ. ಪೂವಪ್ಪ ಪೂಜಾರಿ ಆತ್ಮಹತ್ಯೆ ಬಗ್ಗೆ ಪತ್ನಿ ಸುಶೀಲಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಬಂಟ್ವಾಳ: ಮೆದುಳಿನ ರಕ್ತ ಸ್ರಾವದಿಂದ ಮೃತಪಟ್ಟ ಯುವತಿ; ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ತಾಯಿ

Published

on

ಬಂಟ್ವಾಳ: ಮೆದುಳಿನ ರಕ್ತ ಸ್ರಾವದಿಂದ ಮೃತಪಟ್ಟ ಅವಿವಾಹಿತ ಯುತಿಯೋರ್ವಳ ಅಂಗಾಂಗವನ್ನು ದೊಡ್ಡ ಮನಸ್ಸು ದಾನ ಮಾಡಿದ ತಾಯಿ ಹೃದಯದ ಶ್ರೀಮಂತಿಕೆಗೆ ತಲೆಬಾಗುವಂತೆ ಮಾಡಿದೆ.


ಸುಳ್ಯದ ರಥಬೀದಿ ನಿವಾಸಿಯಾಗಿದ್ದ ಮಮತಾ ಶೆಟ್ಟಿ ಅವರು ಎಂಬವರ ಪುತ್ರಿ ಸಿಂಧು ಶೆಟ್ಟಿ ಮೃತಪಟ್ಟ ಯುವತಿ.

ಏನಿದು ಘಟನೆ
ಸಿಂಧು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ಡಿ.16 ರಂದು ಬ್ಯಾಂಕ್ ನಿಂದ ಮನೆಗೆ ಬಸ್ ನಲ್ಲಿ ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ತಲೆನೋವು ಬಂದು ಸ್ಥಳೀಯ ಆಸ್ಪತ್ರೆಗೆ ಹೋಗಿ ಪರೀಕ್ಷೆ ನಡೆಸಿದರು. ಅಲ್ಲಿಂದ ಬಳಿಕ ಸುಳ್ಯದ ಕೆ.ವಿ‌.ಜಿ., ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಯಿತು.

ಮೆದುಳಿನ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆ ಬಳಿಕ ಒಮ್ಮೆ ಪ್ರಜ್ಞೆ ಬಂದಿತ್ತಾದರೂ ಬಳಿಕ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಕೋಮಾಗೆ ಜಾರಿದ್ದರು.

ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡರೂ, ಯಂತ್ರಗಳ ಸಹಾಯದಿಂದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್, ಕಣ್ಣುಗಳು ಮುಂತಾದ ಪ್ರಮುಖ ಅಂಗಗಳನ್ನು ಉಳಿಸಬಹುದಾಗಿದೆ. ಈ ಅಂಗಗಳನ್ನು ದಾನ ಮಾಡುವುದರಿಂದ ಇತರರಿಗೆ ಜೀವದಾನ ಮಾಡಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಯಿ ಮಮತಾ ಅವರು ಮನೆಯವರೊಂದಿಗೆ ಚರ್ಚಿಸಿ ಅಂಗಾಂಗಗಳನ್ನು ದಾನಮಾಡುವ ನಿರ್ಧಾರ ಮಾಡಿದರು.

ಮೆದುಳು ನಿಷ್ಕ್ರಿಯಗೊಂಡಿದ್ದ ಕಾರಣ ಆಕೆಯ ಅಂಗಾಂಗಗಳನ್ನು ದಾನ ಮಾಡಲು ಮನೆಯವರು ನಿರ್ಧರಿಸಿದ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಮೈಸೂರಿನ ಅಪೋಲೋ ಹಾಗೂ ಮಂಗಳೂರು ಎ.ಜೆ, ಕೆ.ಎಂ.ಸಿ, ಹಾಗೂ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನಿಸಿದರು. ಈ ಪೈಕಿ ಮೈಸೂರಿಗೆ ಅಂಗಾಂಗವನ್ನು ಸುಮಾರು 3 ಗಂಟೆ ವೇಳೆಗೆ ಆಂಬುಲೆನ್ಸ್ ಮೂಲಕ ಸಾಗಿಸಿದ್ದಾರೆ.

ಅಂಗಾಂಗ ದಾನ ಮಾಡಿದ ಬಳಿಕ ಸಿಂಧು ಅವರ ಮೃತದೇಹವನ್ನು ಸಿದ್ದಕಟ್ಟೆಯ ಮಾವ ರಾಜೇಶ್ ಎಂಬವರ ಮನೆಗೆ ಕರೆತರಲಾಯಿತು. ಅಲ್ಲಿ ವಿಧಿವಿಧಾನಗಳನ್ನು ಮಾಡಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಮೃತ ಸಿಂಧು ಅವರುತಾಯಿ, ಸಹೋದರಿಯನ್ನು ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page