Connect with us

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಶ್ರೀಲಂಕಾದ ಸ್ಟಾರ್ ಆಟಗಾರ

Published

on

ಮಂಗಳೂರು/ಗಾಲೆ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಶ್ರೀಲಂಕಾದ ಸೋಲನುಭವಿಸಿದೆ. ಹೀಗಾಗಿ ಮಾಜಿ ನಾಯಕ ದಿಮುತ್ ಕರುಣಾರತ್ನ ಸೋಲಿನೊಂದಿಗೆ ತಮ್ಮ 36ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಇಂಟರ್​ನ್ಯಾಷನಲ್​ ಕೆರಿಯರ್ ಅಂತ್ಯಗೊಳಿಸಿದ್ದಾರೆ. ವಿಶೇಷ ಎಂದರೆ ಇದು ದಿಮುತ್ ಕರುಣರತ್ನೆ ಅವರ 100ನೇ ಟೆಸ್ಟ್ ಪಂದ್ಯವಾಗಿತ್ತು.

ಈ ಸ್ಮರಣೀಯ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ದಿಮುತ್ ಮೊದಲ ಇನಿಂಗ್ಸ್​ನಲ್ಲಿ 36 ರನ್​ಗಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 14 ರನ್​ ಬಾರಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ತಮ್ಮ 100ನೇ ಪಂದ್ಯದಲ್ಲಿ ಕೇವಲ 40 ರನ್​ ಮಾತ್ರ ಕಲೆಹಾಕಿದ್ದಾರೆ.

ಇದನ್ನೂ ಓದಿ: ಗೂಗಲ್ ಮ್ಯಾಪ್: ಮತ್ತೊಂದು ಭೀಕರ ಅಪಘಾತ !

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡವು 9 ವಿಕೆಟ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಲಂಕಾ ದಾಂಡಿಗ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

2011 ರಲ್ಲಿ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ  ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಒಟ್ಟು 237 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಶತಕ ಹಾಗೂ 50 ಅರ್ಧಶತಕಗಳೊಂದಿಗೆ ಒಟ್ಟು 8538 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಶ್ರೀಲಂಕಾದ 12ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Continue Reading

LATEST NEWS

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ

Published

on

ಧಾರವಾಡ: ಮನೆಗಳಿಗೆ ನೇರ ಸಂಪರ್ಕವನ್ನು ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಇದಾಗಿದ್ದು, ಬಡಾವಣೆಯಲ್ಲಿ ಗ್ಯಾಸ್ ಪೈಪ್ ಲೈನ್‌ನ ಎರಡೂ ಕಡೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ.

ಪೈಪ್‌ ಲೈನ್‌ಗೆ ಬೆಂಕಿ ಹೊತ್ತಿದ ಪರಿಣಾಮ ಮಾರ್ಗದುದ್ದಕ್ಕೂ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಹತ್ತಿರದ ನಿವಾಸಿಗಳು ಭಯದಿಂದ ಮನೆಯಿಂದ ಹೊರಗಡೆ ನಡೆದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

DAKSHINA KANNADA

ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪ್ರಕಟ

Published

on

ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳ ನಿನ್ನೆ (ಶನಿವಾರ) ಬೆಳಗ್ಗೆ ಆರಂಭವಾಗಿ ಇಂದು ಮಧ್ಯಾಹ್ನ ಕೊನೆಗೊಂಡಿದೆ.

ಈ ಬಾರಿಯ ಕಂಬಳ ಕೂಟದಲ್ಲಿ 144 ಜೊತೆ ಕೋಣಗಳು ಭಾಗವಹಿಸಿದ್ದವು. ಅದರಲ್ಲಿ  ಕನೆ ಹಲಗೆ  8 ಜೊತೆ, ಅಡ್ಡ ಹಲಗೆ 8 ಜೊತೆ, ಹಗ್ಗ ಹಿರಿಯ 19 ಜೊತೆ, ನೇಗಿಲು ಹಿರಿಯ 27 ಜೊತೆ, ಹಗ್ಗ ಕಿರಿಯ  22 ಜೊತೆ, ನೇಗಿಲು ಕಿರಿಯ  60 ಜೊತೆ ಕೋಣಗಳು ಭಾಗವಹಿಸಿದ್ದವು. ಇದೀಗ  “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪ್ರಕಟವಾಗಿದೆ.

ಕನೆ ಹಲಗೆ:

( ನೀರು ನೋಡಿ ಬಹುಮಾನ)

ಪ್ರಥಮ: ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

 

ದ್ವಿತೀಯ: ನಿಡ್ಡೋಡಿ ಕಾನ ರಾಮ ಸುವರ್ಣ

ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡ್ಡಾಪಿ ಸುರೇಶ್ ನಾಯ್ಕ್

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ “ಎ” (11.14)

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

 

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ” (11.68)

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಇದನ್ನೂ ಓದಿ: ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” (10.91)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

 

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.52)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.14)

ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

 

ದ್ವಿತೀಯ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.20)

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ನೇಗಿಲು ಹಿರಿಯ:

ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (10.94)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

 

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ(11.31)

ಓಡಿಸಿದವರು: ಆದಿ ಉಡುಪಿ ಜಿತೇಶ್

ನೇಗಿಲು ಕಿರಿಯ:

ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ “ಎ” (11.29)

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

 

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.57)

ಓಡಿಸಿದವರು: ಸೂರಾಲ್ ಪ್ರದೀಪ್

 

 

Continue Reading
Advertisement

Trending

Copyright © 2025 Namma Kudla News

You cannot copy content of this page