Connect with us

LATEST NEWS

ನಾಗದೋಷ ನಿವಾರಣೆಗೆ ಮಗಳನ್ನೇ ನರಬಲಿ ನೀಡಿದ ತಾಯಿ ..! ಕೋರ್ಟ್ ನೀಡಿದ ತೀರ್ಪು ಏನು ಗೊತ್ತಾ ..?

Published

on

ಯಾವುದೇ ವಿಚಾರದಲ್ಲಿಯೂ ನಂಬಿಕೆ ಮುಖ್ಯ. ಆದರೆ ಮೂಢನಂಬಿಕೆ ಇರಲೇಬಾರದು. ಏಕೆಂದರೆ ಅದು ಜೀವನದ ದಿಕ್ಕನ್ನೇ ಬದಲಾಯಿಸಿ ನಮ್ಮನ್ನು ನರಕಕ್ಕೆ ತಳ್ಳಿಬಿಡುತ್ತದೆ. ಮೂಢನಂಬಿಕೆಯು ಒಂದು ಜೀವವನ್ನೇ ಬಲಿ ಕೊಡುತ್ತದೆ ಎಂದರೆ ಏನರ್ಥ ? ಅದರಲ್ಲೂ ತನ್ನದೇ ರಕ್ತದಿಂದ ಹುಟ್ಟಿದ ಮಗುವನ್ನು ಬಲಿ ಕೊಟ್ಟರೆ ಹೇಗಾಗಬಹುದು ? ಇದೀಗ ಅಂತಹದ್ದೇ ಘೋರ ಘಟನೆಯೊಂದು ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ನಡೆದಿದ್ದು, ಮಹಿಳೆಯೊಬ್ಬರು ತನ್ನ ಮಗಳನೇ ನರಬಲಿ ನೀಡಿದ್ದಾರೆ. ಆ ಮಹಾತಾಯಿ ಹಾಗೆ ಮಾಡಲು ಕಾರಣವೇನು ಗೊತ್ತಾ ? ಮಹಿಳೆ ಮಾಡಿದ ಆ ಕ್ಷಮಿಸಲಾಗದ ಅಪವಾದಕ್ಕೆ ನ್ಯಾಯಾಲಯ ಒದಗಿಸಿದ ಶಿಕ್ಷೆ ಏನು ? ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ಆಧುನಿಕ ಜಗತ್ತಿನಲ್ಲಿ, ಇಡೀ ಜಗತ್ತು ತಂತ್ರಜ್ಞಾನದ ಹಿಂದೆ ಓಡುತ್ತಿದೆ. AI ಅಂತಹ ವಿಚಾರಗಳ ಮುಂದೆಯೂ ಈ ಮೂಢನಂಬಿಕೆ ಎಂಬ ಭೂತ ಇನ್ನು ಹೋಗಿಲ್ಲ. ಇದೀಗ ನಡೆದಿರುವ ಘಟನೆಯಿಂದ ಇಡೀ ಮನುಕುಲವೇ ತಲೆತಗ್ಗಿಸುವಂತಾಗಿದೆ. ಅದರಲ್ಲೂ ತಾಯಿ ಎನ್ನುವ ಪದಕ್ಕೆ ಕಳಂಕ ತಂದಿದೆ. ತನ್ನ ಅತಿಯಾದ ಮೂಢನಂಬಿಕೆಯಿಂದ ಸ್ವಂತ ಮಗಳನ್ನೇ ಆ ತಾಯಿಯೊಬ್ಬಳು ಬಲಿ ನೀಡಿದ್ದಾಳೆ.

ಕೃಷ್ಣ ಮತ್ತು ಭಾರತಿ ಎಂಬ ದಂಪತಿಗಳು ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ವಾಸವಾಗಿದ್ದರು. ಭಾರತಿ ಮತ್ತು ಕೃಷ್ಣ ಅವರ ಮದುವೆಗೆ ಭಾರತಿ ಮನೆಯವರ ಒಪ್ಪಿಗೆ ಇರಲಿಲ್ಲ. ಬಲವಂತವಾಗಿ ಭಾರತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದಾರೆ. ಆದರೆ ಆಕೆ ಆತನ ಜತೆ ಸಂಸಾರ ನಡೆಸದೆ. ಕೃಷ್ಣನ ಜತೆಗೆ ಓಡಿ ಹೋಗಿ 2019ರಲ್ಲಿ ಕೃಷ್ಣ ಅವರನ್ನು ವಿವಾಹವಾದರು. ಹೀಗೆ ಅವರ ಪ್ರೀತಿಯ ಸಂಕೇತವಾಗಿ ಒಬ್ಬಳು ಮಗಳು ಜನಿಸಿದಳು.

ಭಾರತಿಗೆ ಮೊದಲಿನಿಂದಲ್ಲೂ ದೇವರ ಬಗ್ಗೆ ಅಥವಾ ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆಯುಳ್ಳ ಮಹಿಳೆ. ಆ ಕಾರಣಕ್ಕೆ ಆಕೆಗೆ ಒಬ್ಬ ಜ್ಯೋತಿಷ್ಯರು ಸರ್ಪ ದೋಷ ಇದೆ ಎಂದು ಹೇಳಿದರು. ಅಂದಿನಿಂದ ಆಕೆ ಎಲ್ಲ ಕಡೆ ಸರ್ಪ ದೋಷ ನಿವಾರಣೆಗಾಗಿ ಆ ಪೂಜೆ, ಈ ಪೂಜೆ ಎಲ್ಲ ಮಾಡುತ್ತಿದ್ದಳು. ಆದರೆ ತಾಯಿಯ ಈ ಮೂಢನಂಬಿಕೆ ಬಗ್ಗೆ ಆಕೆಯ ಮಗಳು ಅಸಡ್ಡೆ ತೋರುತ್ತಿದ್ದಳು. ಪತ್ನಿಯ ಈ ವರ್ತನೆ ನೋಡಿ ಗಂಡ ಕೃಷ್ಣ ಹಾಗೂ ಆಕೆಯ ಅತ್ತೆ-ಮಾವ ಮನೋವೈದ್ಯರ ಬಳಿಗೆ ಕರೆದೊಯ್ಯಲು ನಿರ್ಧಾರಿಸಿದರು. ಆದರೆ ಆಕೆ ಈ ಮೂಢನಂಬಿಕೆಗೆ ಒಳಗಾಗಿ, ನಾನು ಮಂತ್ರ ಶಕ್ತಿಯಿಂದ ಸರಿಯಾಗುತ್ತೇನೆ ಎಂದು ಚಿಕಿತ್ಸೆಯನ್ನು ವಿರೋಧಿಸಿದಳು.

ಸ್ವಲ್ಪ ದಿನಗಳ ನಂತರ ಭಾರತಿ ಈ ನಾಗದೋಷದಿಂದ ಮುಕ್ತಿ ಪಡೆಯಲು ನರಬಲಿ ಪೂಜೆ ಮಾಡಬೇಕು ಎಂದು ನಿರ್ಧರಿಸಿದಳು. ಹಾಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಸರ್ಪ ದೋಷದಿಂದ ಮುಕ್ತಿಗೆ ಈ ದಾರಿ ಸರಿ ಎಂದು ಭಾರತಿ ತನ್ನ ಏಳು ವರ್ಷ ಮಗಳ ನಾಲಿಗೆ ಮತ್ತು ಗಂಟಲನ್ನು ಕತ್ತರಿಸಿ ಕ್ರೂರವಾಗಿ ಕೊಂದು ಹಾಕಿದ್ದಾಳೆ. ನಂತರ ಸ್ಥಳದಿಂದ ಭಾರತಿ ಪರಾರಿಯಾಗಿದ್ದಾಳೆ. ಕೃಷ್ಣ ಮನೆಗೆ ಬಂದು ನೋಡಿದ್ರೆ, ತನ್ನ ಮಗುವು ರಕ್ತ ಮಡುವಿನಲ್ಲಿ ಬಿದ್ದಿತ್ತು ಕಂಡು ಅಘಾತಕ್ಕೆ ಒಳಗಾಗಿದ್ದ, ಬಳಿಕ ಆ ವಿಷಯನ್ನು ಪೋಲಿಸರಿಗೆ ತಿಳಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ತಾಯಿ ಭಾರತಿಯನ್ನು ಪತ್ತೆ ಮಾಡಿ ಬಂಧಿಸಿ ಕೋರ್ಟ್​​ ಮುಂದೆ ಹಾಜರು ಪಡಿಸಿದ್ದಾರೆ.

ಪೊಲೀಸ್​​​ ಇಲಾಖೆ ನಡೆಸಿದ ಎಲ್ಲ ತನಿಖೆಗಳ ವರದಿಯನ್ನು ಕೋರ್ಟ್​​ ಮುಂದೆ ಇಟ್ಟಿದ್ದಾರೆ. ಆಕೆ ತಪ್ಪಿಗೆ ಬಲವಾದ ಸಾಕ್ಷಿಗಳಿದ್ದು, ಕೋರ್ಟ್​ ಆಕೆಗೆ ಮರಣದಂಡನೆ ನೀಡಿದೆ. ಸೂರ್ಯಪೇಟೆ ಜಿಲ್ಲಾ ನ್ಯಾಯಾಲಯದ ಮೊದಲ ಹೆಚ್ಚುವರಿ ನ್ಯಾಯಾಧೀಶ ಎಂ. ಶ್ಯಾಮ್ ಶ್ರೀ ತೀರ್ಪು ನೀಡಿದ್ದಾರೆ. ಹಾಗೂ ಆಕೆಗೆ 5 ಸಾವಿರ ದಂಡ ವಿಧಿಸಲಾಯಿತು. ಒಂದು ವೇಳೆ ದಂಡ ಪಾವತಿಸದಿದ್ದಾರೆ. 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸುತ್ತದೆ ಎಂದು ಹೇಳಿದೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

LATEST NEWS

ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Published

on

ಮಂಗಳೂರು/ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

2022ರ ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿದ ಆರೋಪ ಹೊತ್ತಿರುವ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, ವಂಚನೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಖೇಡ್ಕರ್ ಅವರಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ದೆಹಲಿ ಪೊಲೀಸರ ವಕೀಲರು ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ತೀವ್ರವಾಗಿ ವಿರೋಧಿಸಿದರು. ತನಿಖೆಯಲ್ಲಿ ಅವರು ಸಹಕರಿಸದಿರುವುದು ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು.

ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ..!
ಇದನ್ನು ಆಲಿಸಿದ ಪೀಠ ಖೇಡ್ಕರ್ ಅಂತದ್ದೇನು ಗಂಭೀರ ಅಪರಾಧ ಮಾಡಿದ್ದಾರೆ “ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ ಅಥವಾ ಭಯೋತ್ಪಾದಕಿ ಅಲ್ಲ. ಆಕೆ ಕೊಲೆ ಮಾಡಿಲ್ಲ. ಆಕೆ ಎನ್‌ಡಿಪಿಎಸ್ ಅಪರಾಧಿಯೂ ಅಲ್ಲ. ನಿಮಗೆ ಒಂದು ವ್ಯವಸ್ಥೆ ಅಥವಾ ಸಾಫ್ಟ್‌ವೇರ್ ಇರಬೇಕು. ನೀವು ತನಿಖೆಯನ್ನು ಪೂರ್ಣಗೊಳಿಸಿ. ಆಕೆ ಎಲ್ಲವನ್ನೂ ಕಳೆದುಕೊಂಡಿದ್ದಾಳೆ ಇನ್ನು ಎಲ್ಲಿಯೂ ಆಕೆಗೆ ಸಿಗುವುದಿಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ. “ಪ್ರಕರಣದ ವಾಸ್ತವಾಂಶ ಮತ್ತು ಸನ್ನಿವೇಶಗಳನ್ನು ಪರಿಗಣಿಸಿ, ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿದೆ.

 

 

 

Continue Reading

LATEST NEWS

ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

Published

on

ಚಿಕ್ಕಮಗಳೂರು: ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಮ್ಯಾಪ್ ದಾರಿ ತೋರಿಸುತ್ತದೆ ಎಂದು ಅದು ಹೇಳಿದ ದಾರಿಯಲ್ಲಿ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ.

ಇಂತಹದ್ದೇ ಘಟನೆ ಒಂದು ಚಿಕ್ಕಮಗಳೂರಿನ ಆಲ್ದೂರು ಬಳಿ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ್ದಾರೆ.

ಹೌದು.. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ಇದನ್ನೂ ಓದಿ: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page