Connect with us

DAKSHINA KANNADA

SSLC ಪರೀಕ್ಷಾ ಕೇಂದ್ರದಲ್ಲಿ ಸಿನಿಮಾ ಶೂಟಿಂಗ್; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

Published

on

ಪುತ್ತೂರು : ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್‌ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ.

ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ’ ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ಶಾಲಾ ಆವರಣದಲ್ಲಿ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದುವರೆ ತಿಂಗಳ ಹಿಂದೆಯೇ ಶಾಲಾ ಸಂಚಾಲಕರಿಂದ ಅನುಮತಿ ಪಡೆಯಲಾಗಿತ್ತು. ಆದರೆ, ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇರಲಿಲ್ಲ. ಜೊತೆಗೆ ಪರೀಕ್ಷಾ ಕೇಂದ್ರವಾಗಿದ್ದ ಪ್ರೌಢಶಾಲೆಯಲ್ಲಿ ಪರೀಕ್ಷಾ ದಿನದಂದೇ ಶೂಟಿಂಗ್‌ಗೆ ಅವಕಾಶ ಮಾಡಿಕೊಟ್ಟದ್ದು ಎಷ್ಟು ಸರಿ? ಎಂಬ ಪ್ರಶ್ನೆ ಪೋಷಕರಿಂದ ವ್ಯಕ್ತವಾಗಿದೆ. ಇದಕ್ಕೆ ಕಾರಣ ಬೆಳಗ್ಗೆ ಶೂಟಿಂಗ್ ನಡೆಯುತ್ತಿದ್ದ ಸಂದರ್ಭ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಲಾ ಗೇಟು ಬಳಿ ಬಂದಾಗ ಗೇಟು ತೆರೆಯಲು ಪೊಲೀಸರು, ಗೇಟ್ ಕೀಪರ್ ನಿರಾಕರಿಸಿದ್ದಾರೆ.

ಇಲ್ಲಿ ಶೂಟಿಂಗ್ ನಡೆಯುತ್ತಿದೆ ಎಂದು ಅಸಮರ್ಪಕ ಉತ್ತರ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಕೆರಳಿದ ಪೋಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಸೆಕ್ಷನ್ ಇರುವಾಗ ಯಾವ ರೀತಿ ಅವಕಾಶ ಮಾಡಿ ಕೊಟ್ಟಿದ್ದೀರಿ ಎಂದು ಶಾಲಾ ಆಡಳಿತ ಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಮುಂಜಾನೆ ಎದ್ದ ಕೂಡಲೇ ಹಲ್ಲು ಉಜ್ಜಬೇಡಿ ; ಆಯುರ್ವೇದವು ಹೀಗೆನ್ನಲು ಕಾರಣವೇನು ..?

ಇದಾದ ಬಳಿಕ ಸುದ್ದಿ ತಿಳಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಶೂಟಿಂಗ್ ಸ್ಪಾಟ್‌ಗೆ ಬಂದು ಸಿನಿಮಾ ಚಿತ್ರೀಕರಣ ನಿಲ್ಲಿಸುವಂತೆ ಸೂಚಿಸಿದರು. ಜೊತೆಗೆ ಪೊಲೀಸರ ಮುಖಾಂತರ ಚಲನಚಿತ್ರ ತಂಡಕ್ಕೆ ಶಾಲಾ ಬಳಿಯಿಂದ ತೆರಳುವಂತೆ ಸೂಚನೆ ನೀಡಿದರು. ಇಷ್ಟೆಲ್ಲ ಆದ್ರೂ ಪರೀಕ್ಷಾ ಕೇಂದ್ರದ 200 ಮೀಟರ್ ಒಳಗಡೆ, ಹಾಗೆಯೇ ಸೆಕ್ಷನ್ 144 ಜಾರಿ ಇರುವಾಗ ಶಾಲಾ ಆಡಳಿತ ಮಂಡಳಿಯ ಶೂಟಿಂಗ್‌ಗೆ ಹೇಗೆ ಅವಕಾಶ ಕೊಟ್ಟಿದ್ದಾರೆ ಎಂಬುದು ಪೋಷಕರ ವಾದ.

DAKSHINA KANNADA

WATCH : ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ವ್ಯಕ್ತಿ, ವೀಡಿಯೋ ವೈರಲ್

Published

on

ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೊಬ್ಬರು ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಎಂಬವರ ಮನೆಯಲ್ಲಿ  ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು. ವಿದ್ಯುನ್ಮಾಲಿ ಹಾಗೂ ಅದಿತಿ ಸಂಭಾಷಣೆ ನಡೆಯುತ್ತಿದ್ದ ವೇಳೆ  ಸಭೆಯಿಂದ ಏಕಾಏಕಿ ಓಡೋಡಿ ಬಂದ ವ್ಯಕ್ತಿಯೊಬ್ಬರು ವೇಷಧಾರಿಯ ಮೇಲೆ ಎರಗಿದ್ದಾರೆ.

ಇದನ್ನೂ ಓದಿ : ಕಾಡು ಹಂದಿ ಮಾಂಸದ ಆಮಿಷವೊಡ್ಡಿ ವಂಚನೆ; ಖದೀಮನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಏಕಾಏಕಿ ವೇದಿಕೆ ಮೇಲೆ ಹಾರಿ ಬಂದ ವ್ಯಕ್ತಿಯ ವರ್ತನೆಯಿಂದ   ಕಲಾವಿದರು, ಪ್ರೇಕ್ಷಕರು ದಿಗ್ಬ್ರಮೆಗೊಳಗಾಗಿ ಗಲಿಬಿಲಿಗೊಂಡಿದ್ದಾರೆ.  ಕೂಡಲೇ ಆತನನ್ನು ತಡೆದು ಇತರರ ಸಹಕಾರದಿಂದ ಎಳೆದುಕೊಂಡು ದೂರ ಹೋಗಿರುವುದು ವೀಡಿಯೋದಲ್ಲಿದೆ. ವೇದಿಕೆಗೆ ನುಗ್ಗಿದ ವ್ಯಕ್ತಿ ಸ್ಥಳೀಯ ನಿವಾಸಿ ರಾಧಾಕೃಷ್ಣ ಎಂದು ಗುರುತಿಸಲಾಗಿದ್ದು,  ಮೈಮೇಲೆ ಆವೇಶ ಬಂದ ರೀತಿಯಲ್ಲಿ ವರ್ತಿಸಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ.

Continue Reading

DAKSHINA KANNADA

ಕಾಡು ಹಂದಿ ಮಾಂಸದ ಆಮಿಷವೊಡ್ಡಿ ವಂಚನೆ; ಖದೀಮನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

Published

on

ಕಡಬ : ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವಾರು ಸಮಯಗಳಿಂದ ಹಲವರಿಂದ ಹಣ ಪಡೆದು  ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು  ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ  ಒಪ್ಪಿಸಿದ ಘಟನೆ ಮಂಗಳವಾರ(ಎ.15) ಕುಲ್ಕುಂದದಲ್ಲಿ  ನಡೆದಿದೆ.

ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ ಬಸ್ಸಿಗೆ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ  ಕಾಡು ಹಂದಿ ಉರುಳಿಗೆ ಬಿದ್ದಿದ್ದು ಮಾಂಸ ಬೇಕಾದರೆ ಹೇಳಿ ಎಂದು ಈತ  ಹೇಳಿದ್ದ. ಮಹಿಳೆಯು ನಿರಾಕರಿಸಿ ಅಲ್ಲಿನ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಈ ಸಂದರ್ಭ ಈ ಹಿಂದೆ ಹಣ ನೀಡಿ ಈತನಿಂದಲೇ ಮೋಸ ಹೋದ ವ್ಯಕ್ತಿಯೊಬ್ಬರು ಎದುರುಕೊಂಡಿದ್ದು ಈತನನ್ನು ಪ್ರಶ್ನಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಡಬ ತಾಲೂಕಿನ ಮರ್ದಾಳದ ಮಹೇಶ ಬಂಧಿತ ಆರೋಪಿ. ಈತ ಹಲವರಿಗೆ ವಿವಿಧ ರೀತಿಯಲ್ಲಿ  ವಂಚಿಸಿರುವುದು ತಿಳಿದು ಬಂದಿದೆ. ದೂರು ನೀಡಲು ಯಾರು ಮುಂದೆ ಬಾರದ ಕಾರಣ ಆತನನ್ನು ವಿಚಾರಿಸಿ ಪೊಲೀಸರು ಬಿಟ್ಟಿರುವುದಾಗಿ ತಿಳಿದುಬಂದಿದೆ.

ಈತ ಫೆಬ್ರವರಿ ತಿಂಗಳಲ್ಲಿ ಕೆಡ್ಡಸದ ಸಂದರ್ಭ  ಎಡಮಂಗಲದಲ್ಲಿ  ವ್ಯಕ್ತಿಯೊಬ್ಬರು  ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಬೈಕ್ ನಲ್ಲಿ ಬಂದು , ಹಂದಿ ಮಾಂಸ ಇದೆ. ಬೇಕಾದರೆ ಕೊಡುತ್ತೇನೆ ಎಂದು ಹೇಳಿ ಹಲವರಿಂದ  ಹಣ ಪಡೆದಿದ್ದ. ತನ್ನ ಜೊತೆ  ಹಿರಿಯ ವ್ಯಕ್ತಿಯನ್ನು ಕರೆದೊಯ್ದಿದ್ದ. ಅವರನ್ನು ಪಾಲೋಲಿ ಸೇತುವೆ ಬಳಿ  ಬೈಕ್ ನಿಂದ ಇಳಿಸಿ ಕ್ಷಣ ಮಾತ್ರದಲ್ಲಿ ಹಂದಿ ಮಾಂಸ ತರುವುದಾಗಿ ಹೇಳಿ  ಎಸ್ಕೇಪ್ ಆಗಿದ್ದ.

ಇದನ್ನೂ ಓದಿ : ಗರ್ಭಿಣಿ ಎಂದು ಸುಳ್ಳು ಹೇಳಿದ್ಲು…ಮಗುವಿಗಾಗಿ ಮಾಸ್ಟರ್ ಪ್ಲ್ಯಾನ್ ಮಾಡಿ ಜೈಲು ಸೇರಿದ್ಲು!

ವಂಚಿಸಿದ ವ್ಯಕ್ತಿ ತನ್ನ ಬೈಕ್ ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿತ್ತು. ಆ ಸಂದರ್ಭದಲ್ಲಿ ಯಾರೂ ಠಾಣೆಗೆ ದೂರು ನೀಡದ ಕಾರಣ ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ತಿಳಿದುಬಂದಿದೆ.

 

 

Continue Reading

DAKSHINA KANNADA

ಮಂಗಳೂರಿನಲ್ಲಿ ನಡೆಯಿತಾ ಸಾಮೂಹಿಕ ಅತ್ಯಾಚಾರ? ಅರೆ ಪ್ರಜ್ಞಾವಸ್ಥೆಯಲ್ಲಿ ಬಿಹಾರದ ಯುವತಿ ಪತ್ತೆ!

Published

on

ಮಂಗಳೂರು : ಬಿಹಾರ ಮೂಲದ ಯುವತಿಯೊಬ್ಬಳು ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಇದೊಂದು ಸಾಮೂಹಿಕ ಅತ್ಯಾ*ಚಾರ ಅಗಿರಬಹುದೆಂದು ಸಾರ್ವಜನಿಕರು ಅನುಮಾನಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ(ಮಾ.16) ತಡರಾತ್ರಿ ಸ್ಥಳೀಯ ಮನೆಬಾಗಿಲಿಗೆ ಬಂದು ಯುವತಿ ನೀರು ಕೇಳಿ ಅಲ್ಲೇ ಪ್ರಜ್ಷೆ ತಪ್ಪಿ ಬಿದ್ದಿದ್ದಾಳೆ. ತಕ್ಷಣ ಮನೆಯವರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು, ಪೊಲೀಸರು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವತಿ ನಶೆಯಲ್ಲಿದ್ದು, ಆಕೆಯ  ಮೈ ಮೇಲೆ ಗಾ*ಯದ ಗುರುತುಗಳು ಕಾಣಿಸಿದ್ದು ಇದೊಂದು ಅತ್ಯಾ*ಚಾರ ಆಗಿರುವ ಅನುಮಾನ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶವೊಂದರಲ್ಲಿ ಇರುವ ಮನೆಗೆ ನಿತ್ಯ ಗಾಂ*ಜಾ ವ್ಯಸನಿಗಳು ಬರುತ್ತಿದ್ದು ನಿನ್ನೆಯೂ ನಾಲ್ವರು ಅಲ್ಲಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯುವತಿ ಮನೆಯೊಂದರ ಬಾಗಿಲು ತಟ್ಟುತ್ತಿದ್ದಂತೆ ಯುವಕರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಸಚಿವೆ ಕಾರಿನ ಅಪಘಾ*ತದ ರಹಸ್ಯ ಬಯಲು ಮಾಡಿದ ಲಾರಿ ಬಣ್ಣ; ಆರೋಪಿ ಅಂದರ್

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಚಿಕಿತ್ಸೆಯಲ್ಲಿ ಪಡೆಯುತ್ತಿರುವ ಯುವತಿಯನ್ನು ವಿಚಾರಣೆ ನಡೆಸಬೇಕಾಗಿದೆ. ಆದರೆ, ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿರುವಾಕೆ ಈವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಭೇಟಿ ನೀಡಿದ್ದಾರೆ ಎಂಬ ಮಾಹಿತಇ ಲಭ್ಯವಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page