Connect with us

LATEST NEWS

ಮುಂಬೈ : ಸಂಸದೆ ನವನೀತ್ ರಾಣಾ ವಿರುದ್ದ ಮತ್ತೊಂದು FIR ದಾಖಲು..!

Published

on

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ  ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿಯನ್ನು “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ” ಆರೋಪದ ಮೇಲೆ ಬಂಧಿಸಿದ ಮುಂಬೈ ಪೊಲೀಸರು ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇಂದು ರವಿವಾರ ರಾಣಾ ದಂಪತಿಯನ್ನು ಬಾಂದ್ರಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಮುಂಬೈ ಪೊಲೀಸರು ಸಂಸದೆ-ಶಾಸಕ ದಂಪತಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ಹೇಳಿದ್ದಾರೆ.
ನವನೀತ್ ರಾಣಾ ಅವರ ಪತಿ ರವಿ ರಾಣಾ ಅವರು ನ್ಯಾಯಾಲಯವನ್ನು ತಲುಪಿದಾಗ “ಉದ್ಧವ್ ಠಾಕ್ರೆ ಮುರ್ದಾಬಾದ್” ಎಂದು ಘೋಷಣೆಗಳನ್ನು ಕೂಗಿದರು.
ರಾಣಾ ವಿರುದ್ಧದ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, “ಹನುಮಾನ್ ಚಾಲೀಸಾ ಪಠಿಸುವ ನೆಪದಲ್ಲಿ ಎರಡು ಗಲಭೆಗಳನ್ನು ಪ್ರಚೋದಿಸುವ ಘಟನೆಗಳು ನಡೆದಿದ್ದು, ರಾಷ್ಟ್ರಪತಿ ಆಳ್ವಿಕೆ ಹೇರುವ ವಾತಾವರಣವನ್ನು ನಿರ್ಮಿಸಲಾಗುತ್ತಿದೆ.

ಹೀಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

ಲೋಕಸಭೆ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ, ಪಕ್ಷೇತರ ಶಾಸಕ ರವಿ ರಾಣಾ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಮುಂಬೈ ಭೇಟಿಯನ್ನು ಉಲ್ಲೇಖಿಸಿ ಅವರು ಶನಿವಾರ ಪ್ರತಿಭಟನೆಯನ್ನು ಹಿಂಪಡೆದಿದ್ದರು.

DAKSHINA KANNADA

ಕುಂಭದ್ರೋಣ ಮಳೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

Published

on

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ.

 

ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಇದೀಗ ಮಳೆಗಾಲ ಸಮೀಪಿಸ್ತಾ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.

ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿ ಹೋಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading

LATEST NEWS

ಯುದ್ಧದ ಬಗ್ಗೆ ಪ್ರಧಾನಿ, ರಕ್ಷಣಾ ಸಚಿವರು ನಿರ್ಧಾರ ಮಾಡುತ್ತಾರೆ : ಪುತ್ತಿಗೆ ಶ್ರೀ

Published

on

ಉಡುಪಿ : ಭಾರತ ಹಾಗೂ ಪಾಕ್ ನಡೆವೆ ಈಗಾಗಲೇ ಉದ್ವಿಗ್ನತೆ ಉಂಟಾಗಿದ್ದು ಭವಿಷ್ಯ ಹೇಳುವುದು ಕಠಿಣ. ಈ ಕುರಿತು ಮಾತನಾಡಿದ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ “ಯುದ್ಧ ಬೇಕೋ ಬೇಡವೋ ಎನ್ನುವುದು ಪ್ರಧಾನಿ ಮತ್ತು ರಕ್ಷಣಾ ಸಚಿವರು ತೆಗೆದುಕೊಳ್ಳಬೇಕಾದ ನಿರ್ಧಾರ” ಎಂದು ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಪುತ್ತಿಗೆ ಶ್ರೀಗಳು “ಕಾಶ್ಮೀರ ಘಟನೆಗೆ ಹಿನ್ನೆಲೆ ಮತ್ತು ಕಾರಣವೇನೇಂದು ನಮಗೆ ಗೊತ್ತಿಲ್ಲ. ಕಾಶ್ಮೀರ ದಲ್ಲಿ ಭದ್ರತೆಯನ್ನು ಹೆಚ್ಚಿಸ ಬೇಕು. ಭದ್ರತೆಗೆ ಪ್ರಥಮ ಪ್ರಾಶಸ್ತ್ಯ ನೀಡ ಬೇಕು. ಶಾಂತಿಯಿಂದ ಸಮಸ್ಯೆ ಪರಿಹಾರ ಆಗುವುದು ಎಷ್ಟು ಮುಖ್ಯವೋ ಶಾಶ್ವತ ಪರಿಹಾರ ಸಿಗುವುದು ಕೂಡ ಅಷ್ಟೇ ಮುಖ್ಯ ಶಾಂತಿ, ಶಾಂತಿ ಎಂದು ಹೇಳಿ ನಾವೇ ಯಾವಾಗಲೂ ಸಂಕಷ್ಟಕ್ಕೀಡಾಗುತ್ತಿದ್ದರೆ ಅರ್ಥವಿಲ್ಲ. ಶಾಶ್ವತ ಪರಿಹಾರವೇ ಮುಖ್ಯ” ಎಂದರು.

ಪೆಹಲ್ಗಾಂವ್  ಘಟನೆಯಿಂದ ನನಗೆ ಆಶ್ಚರ್ಯವಾಗಿದೆ. ಈವರೆಗೆ ಧರ್ಮವನ್ನು ನೋಡಿ ಭಯೋತ್ಪಾದನೆ ನಡೆಯುತ್ತಿರಲಿಲ್ಲ. ಮಾರ್ಕೆಟ್ ನಲ್ಲಿ , ಬಸ್ ಸ್ಟ್ಯಾಂಡ್ ನಲ್ಲಿ ಎಲ್ಲೆಂದರಲ್ಲಿ  ಬಾಂಬ್ ಹಾಕುತ್ತಿದ್ದರು. ಅದನ್ನು ಮಾನಸಿಕ ದೌರ್ಬಲ್ಯ ಎಂದು ಭಾವಿಸ ಬಹುದಿತ್ತು. ಈಗ ಧರ್ಮವನ್ನು ಕೇಳಿ ಹೊಡೆಯುತ್ತಿದ್ದಾರೆ. ಹಿಂದೂ ಸಮಾಜ ಜಾಗೃತವಾಗ ಬೇಕು, ಒಗ್ಗಟ್ಟಾಗ ಬೇಕು. ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು, ಭಯೋತ್ಪಾದಕರಿಗೆ ಕಠಿನ ಶಿಕ್ಷೆಯಾಗ ಬೇಕು. ತಾತ್ಕಾಲಿಕ ಪರಿಹಾರಗಳಿಂದ ಸಮಸ್ಯೆ ಬಗೆಹರಿಯಲ್ಲ. ಶಾಶ್ವತ ಪರಿಹಾರ ಏನು ಅನ್ನೋದನ್ನ ಪ್ರಧಾನ ಮಂತ್ರಿಗಳು ಮತ್ತು ಸಚಿವ ಸಂಪುಟ ನಿರ್ಧಾರ ಮಾಡ ಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

Published

on

ಉಡುಪಿ : ನವರಾತ್ರಿ ಸಮಯ ಹುಲಿ ವೇಷ ಹಾಕಿ ಮನರಂಜನೆ ನೀಡುತ್ತಿದ್ದ ಯುವ ಹುಲಿ ವೇಷದಾರಿ ಅಜ್ಜರಕಾಡು ನಿವಾಸಿ ಅನಿಲ್ ಕುಮಾರ್(31) ಇಂದು ಬೆಳಿಗ್ಗೆ (ಏ.28) ಹೃದಯಘಾತದಿಂದ ವಿಧಿವಶರಾಗಿದ್ದಾರೆ.

ಅನಿಲ್ ಕುಮಾರ್ ಕಾಡಬೆಟ್ಟು ಅಶೋಕ್ ರಾಜ್ ಅವರ ತಂದಡಲ್ಲಿ ಹುಲಿ ಕುಣಿತದಲ್ಲಿ ಕಲಾವಿದರಾಗಿ ಗುರುತಿಸಿ ಕೊಂಡಿದ್ದರು. ಜೊತೆಗೆ  ಪೈಂಟಿಂಗ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ : ರೈಲ್ವೇ ಇಲಾಖೆ ಪರೀಕ್ಷೆಯಲ್ಲೂ ಎಡವಟ್ಟು; ಜನಿವಾರದ ಜೊತೆ ತಾಳಿಗೂ ಕಂಟಕ

ಈ ಘಟನೆ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page