Connect with us

LATEST NEWS

ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ ಸಚಿವ ದಿನೇಶ್ ಗುಂಡುರಾವ್; ಪತ್ರದಲ್ಲೇನಿದೆ?

Published

on

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಪತ್ರ ಬರೆದಿದ್ದು, ಅವರ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರಧಾನಿಗೆ ಮನವಿ ಪತ್ರ ನೀಡಿದ್ದಾರೆ.


ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ಹಿನ್ನೆಲೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.

ಪತ್ರದಲ್ಲೇನಿದೆ?
ಈ ಕುರಿತು ಸಚಿವ ದಿನೇಶ್ ಗುಂಡುರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಪತ್ರದಲ್ಲಿರುವಂತೆ ನಮ್ಮ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ವಿವರಿಸಿದ್ದೇನೆ. ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು (ಮೂಂಗ್‌) ಬೆಳೆಗಳ ತೀವ್ರ ಬೆಲೆ ಕುಸಿತದಿಂದ ರೈತರು‌ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ ಕಾರಣ ಈ ಬಗ್ಗೆ‌ ನಿಮ್ಮ ಗಮನಕ್ಕೆ ತಂದು ಬೆಂಬಲ ಬೆಲೆಯಲ್ಲಿ ರೈತರ‌ ಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡುವ ಕುರಿತು ಈ ಪತ್ರ ಬರೆಯಲಾಗಿದೆ. ನಮ್ಮ ಲಕ್ಷಾಂತರ ರೈತರು ಜೀವನೋಪಾಯಕ್ಕಾಗಿ ಕೃಷಿ ಮಾಡಿರುವ ಬೆಳೆಗಳನ್ನು ಖರೀದಿಸುತ್ತಿರುವ ಬೆಲೆ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಬಹಳಷ್ಟು ಕಡಿಮೆ ಇದ್ದು, ಕೃಷಿಕರಲ್ಲಿ ವ್ಯಾಪಕ ಸಂಕಷ್ಟವನ್ನು ಸೃಷ್ಟಿಸಿದೆ.

ಈ ಮುಂಗಾರು ಹಂಗಾಮಿನಲ್ಲಿ ಕರ್ನಾಟಕವು 17.94 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 4.16 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೆಸರು ಕಾಳನ್ನು ಬೆಳೆದಿದ್ದು, ರಾಜ್ಯವು 54.74 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಮೆಕ್ಕೆಜೋಳ ಮತ್ತು 1.983 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಸರು ಕಾಳಿನ ಅಂದಾಜು ಉತ್ಪಾದನೆಯನ್ನು ನಿರೀಕ್ಷಿಸುತ್ತಿದೆ. ಇದು ಸಮೃದ್ಧಿಗೆ ಒಂದು ಅವಕಾಶವಾಗಿರಬೇಕಾಗಿದ್ದರೂ, ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಗಳು ಇದನ್ನು ಬಿಕ್ಕಟ್ಟಾಗಿ ಪರಿವರ್ತಿಸಿವೆ.

ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 2,400 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 8,768 ರೂ.ರಂತೆ ಒSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 1,600-1,800 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 5,400 ರೂ. ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ, ಭಾರತ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ಕೆಳಗಿನಂತೆ, ದರ ನಿಗದಿ ಮಾಡುವಂತೆ ವಿನಂತಿ ಮಾಡಲಾಗಿದೆ.

1. NAFED, FCI ಮತ್ತು NCCF ಗಳಿಗೆ MSPಯಲ್ಲಿ ವಿಳಂಬವಿಲ್ಲದೆ ಸಂಗ್ರಹಣೆಯನ್ನು ಪ್ರಾರಂಭಿಸಲು ನಿರ್ದೇಶಿಸುವುದು
ಕರ್ನಾಟಕವು ಮೆಕ್ಕೆಜೋಳವನ್ನು ತನ್ನ PDS (ಸಾರ್ವಜನಿಕ ವಿತರಣಾ ವ್ಯವಸ್ಥೆ) ವಿತರಣೆಯಲ್ಲಿ ಸೇರಿಸದ ಕಾರಣ, ರೈತರಿಗೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ. ಹಾಗಾಗಿ, FCI, NAFED ಮತ್ತು ಇತರ ಸಂಗ್ರಹಣಾ ಏಜೆನ್ಸಿಗಳಿಗೆ ಪ್ರೈಸ್ ಸಪೋರ್ಟ್ ಸ್ಕೀಮ್ ಅಥವಾ ಸೂಕ್ತ ಮಾರುಕಟ್ಟೆ ಮಧ್ಯಸ್ಥಿಕೆ ಕಾರ್ಯವಿಧಾನದ ಅಡಿಯಲ್ಲಿ ತಕ್ಷಣವೇ MSP ಯಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳಿನ ಸಂಗ್ರಹಣೆಯನ್ನು ಪ್ರಾರಂಭಿಸಲು ನಿರ್ದೇಶನ ನೀಡಬೇಕು.

2. ಎಥನಾಲ್ ಪೂರೈಕೆ ಸರಪಳಿಯಲ್ಲಿ ಕರ್ನಾಟಕದ ರೈತರ ನ್ಯಾಯಯುತ ಭಾಗವಹಿಸುವಿಕೆಯನ್ನು ಖಚಿತಪಡಿಸುವುದು
ಮೆಕ್ಕೆಜೋಳದಿಂದ ಉತ್ಪಾದಿಸುವ ಎಥನಾಲ್‌ಗೆ ಮೂಲ ದರ ಲೀಟರ್‌ಗೆ 66.07ರೂ. ಆಗಿದೆ. ಮತ್ತು ಮೆಕ್ಕೆಜೋಳದಿಂದ ಪಡೆಯುವ ಎಥನಾಲ್‌ಗೆ ಲೀಟರ್‌ಗೆ ಹೆಚ್ಚುವರಿ 5.79 ರೂ. (GST ಹೊರತುಪಡಿಸಿ) ಪ್ರೋತ್ಸಾಹಧನವನ್ನು ಪಾವತಿಸಬೇಕು. ಆದಾಗ್ಯೂ, ಕರ್ನಾಟಕದ ಅನೇಕ ಎಥನಾಲ್ ಘಟಕಗಳು ರೈತರನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿ ಮಧ್ಯವರ್ತಿಗಳು ಮತ್ತು ವ್ಯಾಪಾರಿಗಳಿಂದ ಮೆಕ್ಕೆಜೋಳವನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ಇದು MSP ಯ ಮತ್ತು ಕೃಷಿಕರಿಗೆ ಪ್ರಯೋಜನ ನೀಡಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹಕ ರಚನೆಯ ಉದ್ದೇಶವನ್ನು ಸೋಲಿಸುತ್ತದೆ. ಕೇಂದ್ರ ಸರ್ಕಾರವು ಎಥನಾಲ್ ಘಟಕಗಳಿಗೆ ರೈತರಿಂದ ಅಥವಾ ರೈತ-ಉತ್ಪಾದಕ ಸಂಸ್ಥೆಗಳಿಂದ (FPO) ನೇರವಾಗಿ ಮೆಕ್ಕೆಜೋಳವನ್ನು ಸಂಗ್ರಹಿಸಲು ನಿರ್ದೇಶಿಸಬೇಕು. ನೇರ ಸಂಗ್ರಹಣೆಯನ್ನು ಖಚಿತಪಡಿಸದಿದ್ದರೆ, ಎಥನಾಲ್ ಉತ್ಪಾದಕರಿಗೆ ನೀಡುವ ಪ್ರೋತ್ಸಾಹಕವನ್ನು ಮರುಪರಿಶೀಲಿಸಬೇಕು.

ಇದನ್ನೂ ಓದಿ: ಉಡುಪಿಯಲ್ಲಿ ‘ನಮೋ’ : ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ

3. ಕರ್ನಾಟಕದ ಎಥನಾಲ್ ಹಂಚಿಕೆಯನ್ನು ಹೆಚ್ಚಿಸುವುದು
ಕರ್ನಾಟಕವು 272 ಕೋಟಿ ಲೀಟರ್‌ಗಳ ಹೆಚ್ಚಿನ ಡಿಸ್ಟಿಲರಿ ಸಾಮರ್ಥ್ಯದಿಂದ ಬೆಂಬಲಿತವಾದ ದೊಡ್ಡ ಮೆಕ್ಕೆಜೋಳದ ಉತ್ಪಾದನೆಯನ್ನು ಹೊಂದಿದ್ದು, ಎಥನಾಲ್ ಉತ್ಪಾದನೆಗೆ ಸೂಕ್ತವಾದ ದೊಡ್ಡ ಪ್ರಮಾಣದ ಮೆಕ್ಕೆಜೋಳದ ಹೆಚ್ಚುವರಿ ಸಂಗ್ರಹವನ್ನು ಹೊಂದಿದೆ. 2025-26ರ ಎಥನಾಲ್ ಟೆಂಡರ್ ಹಂಚಿಕೆಯ ಪ್ರಕಾರ, OMCs ಗಳು 1050 ಕೋಟಿ ಲೀಟರ್‌ಗಳ ಎಥನಾಲ್‌ಗಾಗಿ ಟೆಂಡರ್ ಕರೆದಿದ್ದು, ಅದರಲ್ಲಿ 758.6 ಕೋಟಿ ಲೀಟರ್‌ಗಳನ್ನು (72.45%) ಧಾನ್ಯ ಆಧಾರಿತ ಎಥನಾಲ್‌ಗೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ 478 ಕೋಟಿ ಲೀಟರ್‌ಗಳನ್ನು ಕೇವಲ ಮೆಕ್ಕೆಜೋಳದಿಂದ ಪಡೆಯಲಾಗುತ್ತದೆ. ಕರ್ನಾಟಕವು, 49 ಘಟಕಗಳಲ್ಲಿ 272 ಕೋಟಿ ಲೀಟರ್‌ಗಳ ಸ್ಥಾಪಿತ ಎಥನಾಲ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದ್ದರೂ, ಅದಕ್ಕೆ ಕೇವಲ ಒಂದು ಸಣ್ಣ ಭಾಗವನ್ನು ಮಾತ್ರ ಹಂಚಿಕೆ ಮಾಡಲಾಗಿದೆ. ಇದು ಅದರ ಸಾಮರ್ಥ್ಯ, ಉತ್ಪಾದನಾ ಬಲ ಮತ್ತು ರಾಜ್ಯದಲ್ಲಿ ಲಭ್ಯವಿರುವ ಗಣನೀಯ ಮೆಕ್ಕೆಜೋಳದ ಹೆಚ್ಚುವರಿ ಸಂಗ್ರಹಕ್ಕೆ ಹೋಲಿಸಿದರೆ ಅಸಮಾನವಾಗಿ ಕಡಿಮೆಯಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಧಾನ್ಯ ಆಧಾರಿತ ಎಥನಾಲ್‌ನ ಅಗ್ರ ಉತ್ಪಾದಕರಲ್ಲಿ ಸೇರಿದ್ದರೂ, ಈ ವರ್ಷ ಅಳವಡಿಸಿಕೊಂಡಿರುವ ವಲಯವಾರು ಹಂಚಿಕೆ ವಿಧಾನವು ಕರ್ನಾಟಕದಂತಹ ಹೆಚ್ಚುವರಿ ಸಂಗ್ರಹ ಇರುವ ರಾಜ್ಯಗಳಿಗೆ ಅನಾನುಕೂಲ ಮಾಡಿದೆ ಎಂಬುದು ನಿರ್ದಿಷ್ಟವಾಗಿ ಕಳವಳಕಾರಿಯಾಗಿದೆ. ನಮ್ಮ ಗಣನೀಯ ಹೆಚ್ಚುವರಿ ಸಂಗ್ರಹ ಮತ್ತು ಸಾಮರ್ಥ್ಯವನ್ನು ಗಮನಿಸಿದರೆ, ಕರ್ನಾಟಕವು ಧಾನ್ಯ ಆಧಾರಿತ ಎಥನಾಲ್ ಹಂಚಿಕೆಯಲ್ಲಿ ಹೆಚ್ಚಿನ ಪಾಲಿಗೆ ಅರ್ಹವಾಗಿದೆ. ಇದು MSP ಮಟ್ಟದ ಬೆಲೆಗಳಲ್ಲಿ ಮೆಕ್ಕೆಜೋಳಕ್ಕೆ ವಿಶ್ವಾಸಾರ್ಹ ಬೇಡಿಕೆಯನ್ನು ಸೃಷ್ಟಿಸುತ್ತದೆ ಮತ್ತು ಮುಕ್ತ ಮಾರುಕಟ್ಟೆಗಳಲ್ಲಿನ ಏರಿಳಿತಗಳಿಂದ ರೈತರನ್ನು ರಕ್ಷಿಸುತ್ತದೆ.

4. ಮೆಕ್ಕೆಜೋಳದ ಆಮದಿನ ಮೇಲೆ ನಿರ್ಬಂಧ ಹೇರಿರುವುದು
ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದ್ದು, ಕಳೆದ ವರ್ಷ ಮ್ಯಾನ್ಮಾರ್, ಉಕ್ರೇನ್ ಮತ್ತು ಇತರ ರಾಷ್ಟ್ರಗಳಿಂದ ದೊಡ್ಡ ಪ್ರಮಾಣದ ಮೆಕ್ಕೆಜೋಳದ ಆಮದು. ಅಂತಹ ಆಮದುಗಳು ದೇಶೀಯ ಬೆಲೆಗಳನ್ನು ಕುಗ್ಗಿಸಿವೆ ಮತ್ತು ರೈತರ ನ್ಯಾಯಯುತ ಆದಾಯಕ್ಕೆ ಹಾನಿ ಮಾಡಿವೆ. ವಿಶ್ವದ ಅತ್ಯುತ್ತಮ ಮೆಕ್ಕೆಜೋಳವನ್ನು ಉತ್ಪಾದಿಸುವ ಭಾರತೀಯ ರೈತರನ್ನು ಬಲವಂತದ ಸಂಕಷ್ಟ ಮಾರಾಟಕ್ಕೆ ತಳ್ಳದಂತೆ, ಮೆಕ್ಕೆಜೋಳದ ಆಮದುಗಳನ್ನು ತಕ್ಷಣವೇ ತಡೆಹಿಡಿಯಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.

5. ಹೆಸರು ಕಾಳು ಸಂಗ್ರಹಣೆಗಾಗಿ ಗುಣಮಟ್ಟದ ಮಾನದಂಡಗಳನ್ನು ಸಡಿಲಿಕೆ ಮಾಡಬೇಕು

ಅಕಾಲಿಕ ಮಳೆಯ ಕಾರಣದಿಂದಾಗಿ, ಕರ್ನಾಟಕದ ಹೆಸರು ಕಾಳು ಬೆಳೆಯ ಒಂದು ಭಾಗವು ಶೇ.6-10ರಷ್ಟು ಸಣ್ಣ ಬಣ್ಣಗುಂದಿಕೆಯನ್ನು ಹೊಂದಿದೆ. ಕೇಂದ್ರ ಸರ್ಕಾರದ FAQ ಗಳು MSP ಅಡಿಯಲ್ಲಿ ಶೇ.4ರವರೆಗೆ ಬಣ್ಣಗುಂದಿದ ಸಂಗ್ರಹಣೆಗೆ ಅನುಮತಿ ನೀಡಿದ್ದರೂ, ನಮ್ಮ ಉತ್ಪನ್ನವು, ಸ್ವಲ್ಪ ಬಣ್ಣಗುಂದಿದ್ದರೂ, ಸಂಪೂರ್ಣವಾಗಿ ಖಾದ್ಯ ಮತ್ತು ಬಳಕೆಗೆ ಸೂಕ್ತವಾಗಿದೆ. ಆದ್ದರಿಂದ, ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಮಸ್ಯೆಯಾಗುವುದನ್ನು ತಪ್ಪಿಸಲು ಈಗಿರುವ ಮಾನದಂಡಗಳನ್ನು ಸಡಿಲಿಸಿ ಶೇ.10ರಷ್ಟು ಬಣ್ಣಗುಂದಿದ ಹೆಸರು ಕಾಳನ್ನು MSP ಯಲ್ಲಿ ಸಂಗ್ರಹಿಸಲು ಅವಕಾಶ ನೀಡುವಂತೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಿಗೆ ನಿರ್ದೇಶನ ನೀಡಬೇಕೆಂದು ನರೇಂದ್ರ ಮೋದಿಯವರಿಗೆ ಒತ್ತಾಯಿಸಲಾಗಿದೆ.

ಕರ್ನಾಟಕದ ಪ್ರತಿಯೊಂದು ಕೃಷಿ ಕುಟುಂಬಕ್ಕೆ MSP ಒಂದು ಭರವಸೆಯಾಗಿ, ಘನತೆ ಮತ್ತು ನ್ಯಾಯಯುತ ಗಳಿಕೆಯ ದಾರಿಯಾಗಿದೆ. ಆದರೆ, ಪ್ರಸ್ತುತದ ಮಾರುಕಟ್ಟೆ ಪರಿಸ್ಥಿತಿಯಲ್ಲಿ, ಬೆಲೆಗಳು MSP ಗಿಂತ ಕುಸಿದಿರುವಾಗ, ಕೇಂದ್ರ ಸರ್ಕಾರದ ಸಕಾಲಿಕ ಮಧ್ಯಪ್ರವೇಶದಿಂದ ರೈತರಲ್ಲಿ ವಿಶ್ವಾಸ ಮೂಡಿಸುತ್ತದೆ.

ಕರ್ನಾಟಕದ ರೈತರು ದೇಶದ ಆಹಾರ ಭದ್ರತೆ, ಎಥನಾಲ್ ಸಾಮರ್ಥ್ಯ ವಿಸ್ತರಣೆ ಮತ್ತು ಆರ್ಥಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ನ್ಯಾಯಯುತ ಸಂಗ್ರಹಣೆ ಮತ್ತು ಸಮಾನ ಎಥನಾಲ್ ಹಂಚಿಕೆಯನ್ನು ಖಚಿತಪಡಿಸುವುದು ಅವರ ಹಕ್ಕು ಮಾತ್ರವಲ್ಲ, ಅದು ರಾಷ್ಟ್ರದ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ರೈತರ ತೀವ್ರ ಸಂಕಷ್ಟವನ್ನು ತಪ್ಪಿಸಲು ಮತ್ತು ನಮ್ಮ ರಾಷ್ಟ್ರದ ಕೃಷಿ ಬೆನ್ನೆಲುಬಾದವರ ಬದುಕನ್ನು ಸುಸ್ಥಿರವಾಗಿಡಲು ಮಾನ್ಯ ಪ್ರಧಾನಿಗಳು ಮನಸ್ಸು ಮಾಡಬೇಕಾಗಿ, ರೈತರ ಹಿತ ಕಾಯಬೇಕಾಗಿ ವಿನಂತಿಸಲಾಗಿದೆ.

 

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page