Connect with us

LATEST NEWS

ಮುಂಬಯಿ: ಕೋವಿಡ್  ಆಸ್ಪತ್ರೆಯಲ್ಲಿ ಅಗ್ನಿ ದುರಂತ ತುರ್ತು ನಿಗಾ ಘಟಕದಲ್ಲಿದ್ದ 13 ಮಂದಿ ಸಜೀವ ದಹನ..!

Published

on

ಮುಂಬಯಿ: ಮುಂಬೈನ ವಿರಾರ್‌ ವಿಜಯ ವಲ್ಲಭ್‌ ಕೋವಿಡ್‌ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಸಜೀವ ದಹನವಾಗಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ವಿಪತ್ತು ನಿಯಂತ್ರಣ ವಿಭಾಗದ ಮುಖ್ಯಸ್ಥ ವಿವೇಕಾನಂದ್ ಕದಂ ಅವರು, ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದೆ. ಆಸ್ಪತ್ರೆಯ ಐಸಿಯು ಎಸಿ ಘಟಕದಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಈ ವೇಳೆ ಐಸಿಯುವಿನಲ್ಲಿ ಹಲವು ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.ಆಸ್ಪತ್ರೆಯ ವೈದ್ಯ ದಿಲೀಪ್ ಶಾ ಎಂಬುವವರು ಪ್ರತಿಕ್ರಿಯೆ ನೀಡಿ, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ, ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದ ಗಂಭೀರ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದವರು ಸೇರಿ ಒಟ್ಟು 21 ಮಂದಿ ರೋಗಿಗಳನ್ನು ಇತರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ದುರ್ಘಟನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಪಾಲ್ಘರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ರೋಗಿಗಳು ಸಾವನ್ನಪ್ಪಿದ್ದು, ಘಟನೆ ಅತ್ಯಂತ ಬೇಸರ ತರಿಸಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ.

ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಮುಂಬೈನ ವಿರಾರ್ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ತನಿಖೆಗೆ ಆದೇಶಿಸಿದ್ದಾರೆಂದು ತಿಳಿಸಿದೆ.

LATEST NEWS

ಯತ್ನಾಳ್ ಬಾಯಿಗೆ ಬೀಗ ಜಡಿದ ಬಿಜೆಪಿ ಕೇಂದ್ರಿಯ ಸಮಿತಿ ; ಪಕ್ಷದಿಂದ 6 ವರ್ಷ ಉಚ್ಛಾಟನೆ

Published

on

ಮಂಗಳೂರು/ಬೆಂಗಳೂರು: ಕಳೆದ ಕೆಲ ಸಮಯದಿಂದ ಬಿಜೆಪಿ ಪಕ್ಷದೊಳಗೆ ಆಂತರಿಕವಾಗಿ ನಡಿತಾ ಇದ್ದ ಕಿತ್ತಾಟಕ್ಕೆ ಹೈ ಕಮಾಂಡ್ ಬ್ರೇಕ್ ಹಾಕಿದೆ.

ಪಕ್ಷದ ಅಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಿದೆ.

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಪಕ್ಷದಿಂದ ಗೇಟ್ ಪಾಸ್ ನೀಡಿದೆ. ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ನಡೆಸುತ್ತಿದ್ದ ವಿಚಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿತ್ತು. ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಸುಮ್ಮನಿರುವಂತೆ ಎಚ್ಚರಿಕೆ ಕೂಡಾ ನೀಡಿತ್ತು.

ಇದನ್ನೂ ಓದಿ: ‘ಹನಿಟ್ರ್ಯಾಪ್’ ಪ್ರಕರಣ; ಅರ್ಜಿದಾರನಿಗೆ ಸುಪ್ರೀಂಕೋರ್ಟ್ ಕ್ಲಾಸ್!

ಆದ್ರೆ, ತಮ್ಮ ಹಿಂದಿನ ಅಭ್ಯಾಸ ಮುಂದುವರೆಸಿದ್ದ ಯತ್ನಾಳ್ ಮತ್ತೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮೇಲೆ ಆರೋಪ ಮಾಡಿದ್ದರು. ಇದಾದ ಬಳಿಕ ಮತ್ತೊಂದು ಶೋಕಾಸ್ ನೀಡಲಾಯ್ತಾದ್ರೂ ತಮ್ಮ ದಾಳಿಯನ್ನು ಮಾತ್ರ ಯತ್ನಾಳ್ ಬಿಟ್ಟಿರಲಿಲ್ಲ.

ಇದೀಗ ಕಠಿಣ ನಿರ್ಧಾರ ತೆಗೆದುಕೊಂಡಿರುವ ಕೇಂದ್ರಿಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿದೆ.

 

Continue Reading

LATEST NEWS

ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿಯ ವರದಿ ತಿರಸ್ಕರಿಸಿದ ಭಾರತ..!

Published

on

ಮಂಗಳೂರು/ನವದೆಹಲಿ: ಭಾರತದಲ್ಲಿ ಅಲ್ಪಸಂಖ್ಯಾತರು ತೀರಾ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಸೂಚಿಸುವ USCIRF ನ 2025 ರ ವರದಿಯನ್ನು ಭಾರತದ ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ.


ಇದರೊಂದಿಗೆ ಭಾರತೀಯ ಬೇಹುಗಾರಿಕಾ ಸಂಸ್ಥೆ ‘ರಾ’ ಮೇಲೆಯೂ ನಿರ್ಬಂಧ ಹೇರಲೂ ವರದಿ ಶಿಫಾರಸು ಮಾಡಿತ್ತು. ಈ ವರದಿ ಪಕ್ಷಪಾತ ಮತ್ತು ರಾಜಕೀಯ ಪ್ರೇರಿತ ಎಂದು ಭಾರತ ವರದಿಯನ್ನು ತಿರಸ್ಕಾರ ಮಾಡಿದೆ.

ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ ಅಮೆರಿಕದ ಆಯೋಗ (USCIRF) ವನ್ನು ‘ಕಳವಳಕಾರಿ ಘಟಕ’ ಎಂದು ಹೆಸರಿಸಬೇಕು ಎಂದು ಭಾರತ ಪ್ರತಿಪಾದಿಸಿದೆ. ಭಾರತದ ಪ್ರಜಾಪ್ರಭುತ್ವ ಮತ್ತು ಸಹಿಷ್ಣುತೆಯ ಸಂಕೇತ ಎಂಬ ಖ್ಯಾತಿಯನ್ನು ಕುಗ್ಗಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ತನ್ನ ಕಠಿಣ ಹೇಳಿಕೆಯಲ್ಲಿ ತಿಳಿಸಿದೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮಮ್ಮುಟ್ಟಿ ಹೆಸರಿನಲ್ಲಿ ಮೋಹನ್‌ಲಾಲ್ ವಿಶೇಷ ಪೂಜೆ: ಏನಿದು ವಿವಾದ ?

ಧಾರ್ಮಿಕ ಸ್ವಾತಂತ್ರ್ಯ ವರದಿ ಏನು ಹೇಳಿದೆ..?
2024ರಲ್ಲಿ ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ತಾರತಮ್ಯ ಹೆಚ್ಚುತ್ತಲೇ ಇದೆ ಎಂದು 2025 ರ ವರದಿಯು ಉಲ್ಲೇಖಿಸಿದೆ. ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ಮುಸ್ಲಿಮರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ “ದ್ವೇಷಪೂರಿತ ಭಾಷಣ” ವನ್ನು ಪ್ರಚಾರ ಮಾಡಿದೆ ಎಂದು ಆರೋಪಿಸಿದೆ.

ಅಲ್ಲದೆ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕೊಲೆ ಸಂಚುಗಳಲ್ಲಿ ಭಾಗಿಯಾಗಿರುವ ಆರೋಪ ಮಾಡಿದೆ. ಈ ಹಿನ್ನಲೆಯಲ್ಲಿ ಬೇಹುಗಾರಿಕಾ ಸಂಸ್ಥೆ ‘ರಾ’ವಿರುದ್ಧ ನಿರ್ಬಂಧ ವರದಿ ಶಿಫಾರಸು ಮಾಡಿದೆ.

ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ವಿಫಲವಾದ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ರಾ ಏಜೆಂಟ್ ವಿಕಾಸ್ ಯಾದವ್ ವಿರುದ್ಧ ಆರೋಪ ಹೊರಿಸಿದೆ. ಇದರಿಂದ ಉಭಯ ದೇಶಗಳ ನಡುವೆ ಭಿನ್ನಾಭಿಪ್ರಾಯ ಮೂಡಲು ಕಾರಣವಾಗಿದೆ.

 

Continue Reading

LATEST NEWS

ಮಮ್ಮುಟ್ಟಿ ಹೆಸರಿನಲ್ಲಿ ಮೋಹನ್‌ಲಾಲ್ ವಿಶೇಷ ಪೂಜೆ: ಏನಿದು ವಿವಾದ ?

Published

on

ಮಂಗಳೂರು/ತಿರುವನಂತಪುರ: ಮಲಯಾಳಂ ನಟ ಮೋಹನ್ ಲಾಲ್ ಅವರು ಮಾ.18ರಂದು ಮಮ್ಮುಟ್ಟಿ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.


ನಟ ಮಮ್ಮುಟಿ ಆರೋಗ್ಯ ಸಮಸ್ಯೆಯಲ್ಲಿದ್ದಾರೆಂದು ವರದಿ ಬಂದ ಬೆನ್ನಲ್ಲೇ ನಟ ಮೋಹನ್ ಲಾಲ್ ಶಬರಿಮಲೆಗೆ ತೆರಳಿ ವಿಶೇಷ ಉಷಃ ಪೂಜೆಯೆಂಬ ಸೇವೆಯನ್ನು ಮಮ್ಮುಟ್ಟಿಗಾಗಿ ನಡೆಸಿದ್ದರು.

ಅಷ್ಟಕ್ಕೂ ವಿವಾದಕ್ಕೆ ಕಾರಣವಾಗಿದ್ದು, ದೇಗುಲವು ನೀಡಿದ್ದ ರಸೀದಿಯಲ್ಲಿ ಮಮ್ಮುಟ್ಟಿ ಅವರ ಹೆಸರನ್ನು ಮಹಮ್ಮದ್ ಕುಟ್ಟಿ ಎಂದು ನಮೂದಿಸಲಾಗಿತ್ತು. ಪೂಜೆ ಸೇವಾ ರಶೀದಿ ಸಹಿತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕೆಲವರು ಮಮ್ಮುಟ್ಟಿ ಅವರು ಇಸ್ಲಾಂ ಸಮುದಾಯಕ್ಕೆ ಸೇರಿದವರು. ಅವರ ಹೆಸರಿನಲ್ಲಿ ಹಿಂದೂ ದೇಗುಲದಲ್ಲಿ ಪೂಜೆ ಮಾಡಿಸಲಾಗಿದೆ ಎಂದು ತಕರಾರು ಎತ್ತಿದ್ದಾರೆ.

ಈ ಬಗ್ಗೆ ಕೇರಳದ ಪ್ರಮುಖ ರಾಜಕೀಯ ವಿಶ್ಲೇಷಕ, ಮಾಧ್ಯಮ ಪ್ರತಿನಿಧಿಯಾದ ಹಿರಿಯ ಪತ್ರಕರ್ತ ಓ. ಅಬ್ದುಲ್ಲಾ ಅವರು, ಮಮ್ಮುಟ್ಟಿಯ ಅನುಮತಿ ಇಲ್ಲದೇ ಮೋಹನ್ ಲಾಲ್ ತನ್ನಿಚ್ಛೆಯಂತೆ ಪೂಜೆ ನಡೆಸಿರಲಾರರು. ಮುಮ್ಮುಟ್ಟಿಯ ಅರಿವಿನಿಂದಲೇ ಪೂಜೆ ನಡೆಸಿದ್ದಾದರೆ ಮಮ್ಮುಟ್ಟಿ ಕ್ಷಮೆಯಾಚಿಸಬೇಕು. ಅದು ನಟನ ಕಡೆಯಿಂದ ಆದ ಗಂಭೀರ ಲೋಪ. ಮಮ್ಮುಟ್ಟಿ ಅವರ ಅರಿವಿಗೆ ಬಾರದೆ ಮೋಹನ್ ಲಾಲ್ ಪೂಜೆ ಮಾಡಿದ್ದರೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ಮೋಹನ್ ಲಾಲ್ ಅವರ ಅಯ್ಯಪ್ಪನ ಮೇಲಿನ ನಂಬಿಕೆಯನ್ನು ಸೂಚಿಸುತ್ತದೆ. ಆ ನಂಬಿಕೆ ಆಧಾರದ ಮೇಲೆ ಅವರು ಪೂಜೆ ಮಾಡಿರಬಹುದು.

ಆದಾಗ್ಯೂ, ಮಮ್ಮುಟ್ಟಿ ಅವರ ಸೂಚನೆಯಂತೆ ಪೂಜೆಯನ್ನು ಸಲ್ಲಿಸಿದ್ದರೆ, ಅದು ದೊಡ್ಡ ಅಪರಾಧ. ಏಕೆಂದರೆ ಇಸ್ಲಾಂ ನಂಬಿಕೆಗಳ ಪ್ರಕಾರ, ಮುಸಲ್ಮಾನನಿಗೆ ಅಲ್ಲಾಹುವಲ್ಲದೇ ಅನ್ಯ ದೇವರಿಲ್ಲ. ಈ ಕುರಿತು ಮಮ್ಮುಟ್ಟಿ ತನ್ನ ಸಮುದಾಯಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

ಅಸಮಾಧಾನ ವ್ಯಕ್ತಪಡಿಸಿದ ಮೋಹನ್‌ಲಾಲ್
ವಿಶೇಷ ಪೂಜೆ ಕುರಿತ ರಸೀದಿಯನ್ನು ದೇಗುಲದ ಕೆಲವು ಅಧಿಕಾರಿಗಳೇ ಬಹಿರಂಗಪಡಿಸಿದ್ದಾರೆ ಎಂದು ಮೋಹಾನ್‌ಲಾಲ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ತಿರುವಾಂಕೂರು ದೇವಸ್ವಂ ಮಂಡಳಿಯು,”ನಮ್ಮ ಕಡೆಯಿಂದ ರಸೀದಿಯು ಬಹಿರಂಗಗೊಂಡಿಲ್ಲ” ಎಂದು ಸ್ಪಷ್ಟನೆ ನೀಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page