Connect with us

DAKSHINA KANNADA

ಕೊಲೆಯತ್ನ ಪ್ರಕರಣ: ಐವರು ಆರೋಪಿಗಳ ಅಪರಾಧ ಸಾಬೀತು..!

Published

on

ಮಂಗಳೂರು: ಮಂಗಳೂರಿನ ಕುದ್ರೋಳಿ ಸಮೀಪದ ಅಳಕೆ ಮಾರ್ಕೆಟ್ ಬಳಿ 2015ರಲ್ಲಿ ನಡೆದ ಕುದ್ರೋಳಿಯ ಲತೀಶ್ ನಾಯಕ್ ಮತ್ತು ಇಂದ್ರಜಿತ್ ಕೊಲೆಯತ್ನ ಪ್ರಕರಣದ ಐವರು ಆರೋಪಿಗಳ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಸೋಮವಾರ ತೀರ್ಪು ನೀಡಿದ್ದಾರೆ.

ಮುಲ್ಕಿ ನಿವಾಸಿಗಳಾದ ರವಿಚಂದ್ರ ಯಾನೆ ವಿಕ್ಕಿ ಪೂಜಾರಿ ಯಾನೆ ಸೈಕೊವಿಕ್ಕಿ (32), ಆತನ ಸಹೋದರ ಶಶಿ ಪೂಜಾರಿ(30), ವಾಮಂಜೂರು ಪೆರ್ಮಂಕಿಯ ಧನರಾಜ್ ಪೂಜಾರಿ (31), ಬೋಳೂರಿನ ಮೋಕ್ಷಿತ್ ಸಾಲ್ಯಾನ್(28) ಮತ್ತು ರಾಜೇಶ್ (30) ಶಿಕ್ಷೆಗೊಳಗಾದ ಆರೋಪಿಗಳು. ಈ ಪ್ರಕರಣದ ಇನ್ನೋರ್ವ ಆರೋಪಿ ಗಣೇಶ್ (28) ಎಂಬಾತ ತಲೆಮರೆಸಿದ್ದಾನೆ.

2015ರ ಜು.27ರಂದು ಸಂಜೆ 6:30ಕ್ಕೆ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಳಕೆ ಮಾರ್ಕೆಟ್‌ನ ಮುಂದೆ ಲತೀಶ್ ನಾಯಕ್ ತನ್ನ ಗೆಳೆಯರಾದ ಇಂದ್ರಜಿತ್, ಸಿದ್ಧಾರ್ಥ್, ಪ್ರತಾಪ್, ಮಿಥುನ್, ಸುಶಾಂತ್ ಅವರೊಂದಿಗಿದ್ದ. ಮನೆಯಿಂದ ಕರೆ ಬಂದ ಮೇರೆಗೆ ಅಲ್ಲಿಂದ ಹೊರಟ ಲತೀಶ್ ನಾಯಕ್ ರಸ್ತೆ ದಾಟುತ್ತಿದ್ದಾಗ ಮಾರುತಿ 800 ಕಾರಿನಲ್ಲಿ ಬಂದ ಆರೋಪಿಗಳು ಲತೀಶ್‌ನಿಗೆ ಢಿಕ್ಕಿ ಹೊಡೆದಿದ್ದರು. ಬಳಿಕ ಕಾರಿನಿಂದ ಇಳಿದು ತಲವಾರನಿಂದ ಹಲ್ಲೆ ನಡೆಸಿದ್ದರು. ಲತೀಶ್‌ನನ್ನು ಬಿಡಿಸಲು ಬಂದ ಇಂದ್ರಜಿತ್‌ನ ಮೇಲೆ ಕೂಡ ದಾಳಿ ನಡೆಸಿದ್ದರು. ಇದರಿಂದ ಲತೀಶ್ ಮತ್ತು ಇಂದ್ರಜಿತ್ ಗಂಭೀರವಾಗಿ ಗಾಯಗೊಂಡಿದ್ದರು. ಹಳೆಯ ದ್ವೇಷದಿಂದ ಕೊಲೆಗೆ ಯತ್ನಿಸಿದ್ದ ಆರೋಪಿಗಳು ಬಳಿಕ ಲತೀಶ್‌ನ ಮೊಬೈಲ್ ದೋಚಿಕೊಂಡು ಪರಾರಿಯಾಗಿದ್ದರು ಎಂದು ತನಿಖೆ ನಡೆಸಿದ್ದ ಅಂದಿನ ಇನ್ಸ್‌ಪೆಕ್ಟರ್‌ಗಳಾದ ಟಿ.ಡಿ.ನಾಗರಾಜ್ ಮತ್ತು ಭಜಂತ್ರಿ ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page