Connect with us

LATEST NEWS

ಫಸ್ಟ್ ನೈಟ್ ಕೋಣೆಯಲ್ಲಿ ವಧು-ವರ ನಿಗೂಢ ಸಾ*ವು

Published

on

ಉತ್ತರ ಪ್ರದೇಶ: ಮದುವೆಯ ಫಸ್ಟ್ ನೈಟ್ ಕೋಣೆಯಲ್ಲಿ ನವ ವಧು-ವರ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ನಡೆದಿದೆ.

ಅಯೋಧ್ಯೆಯಲ್ಲಿ ಮಾರ್ಚ್‌ 7 ರಂದು ಇವರ ವಿವಾಹ ಸಮಾರಂಭವು ನಡೆದಿತ್ತು. ನಂತರ ವಧು-ವರ ಇಬ್ಬರನ್ನು ಫಸ್ಟ್‌ ನೈಟ್ ಕೋಣೆಯಲ್ಲಿ ಹಾಕಿದ್ದರು. ಮಾರನೇ ದಿನ ಕುಟುಂಬ ಸದಸ್ಯರು ಆರತಕ್ಷತೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು. ಆದರೆ ಬೆಳ್ಳಗ್ಗೆಯಾದರೂ ದಂಪತಿಗಳು ಏಳದ ಕಾರಣ ಕುಟುಂಬದ ಸದಸ್ಯರಲ್ಲಿ ಗಾಬರಿ ಮೂಡಿತು.

ಬಳಿಕ ಅವರಿದ್ದ ಕೋಣೆಯ ಬಾಗಿಲನ್ನು ಬಡಿಯಲು ಯತ್ನಿಸಿದರು. ಆದರೆ ಯಾವೂದೇ ರೀತಿಯ ಶಬ್ಧವಾಗಲಿ, ಸ್ವರವಾಗಲಿ ಕೇಳಲಿಲ್ಲ. ನಂತರ ಬಾಗಿಲನ್ನು ಒಡೆದು ಕೋಣೆಯ ಒಳಗೆ ಹೋದಾಗ ದೊಡ್ಡ ಅಘಾತ ಕಾದಿತ್ತು. ವಧುವು ಹಾಸಿಗೆಯ ಮೇಲೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದರೆ, ವರನು ಚಾವಣಿಯ ಕೊಕ್ಕೆಯಿಂದ ನೇತಾಡುತ್ತಿದ್ದನು.

ಅಯೋಧ್ಯೆಯ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

DAKSHINA KANNADA

ಬಿಜೆಪಿ ಮಾಡಿದ ಕೆಲಸಗಳಿಗೆ ಕಾಂಗ್ರೆಸ್‌ ಕ್ರೆಡಿಟ್ ಪಡೆದುಕೊಳ್ತಿರೋದು ನಾಚಿಕೇಡು-ಶಾಸಕ ಕಾಮತ್ ಗರಂ

Published

on

ಮಂಗಳೂರು:  ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಮಸ್ಯೆ ಇರುವ ಕಡೆಗಳಲ್ಲಿ ಅನುದಾನ ಮಂಜೂರು ಆಗಿದೆ ಎಂದು 28 ಜಾಗಗಳಿಗೆ ತೆರಳಿ ಕಾಮಗಾರಿಗೆ ಅನುದಾನ ನೀಡಲಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕರು ದಿನನಿತ್ಯ ಪತ್ರಿಕೆಗಳಲ್ಲಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿರಂತರವಾಗಿ ಒತ್ತಡ ಹೇರಿದ ಫಲವಾಗಿ ಪ್ರಕೃತಿ ವಿಕೋಪದಡಿ ಹಲವು ಕಡೆಗಳಲ್ಲಿ ಕಾಮಗಾರಿ ಮಾಡಲು ಅನುದಾನ ಮಂಜೂರು ಮಾಡಲಾಗಿದೆ. ಆದರೆ ಒಂದು ರೂಪಾಯಿ ಕೆಲಸ ಮಾಡದೆ ಅದರ ಕ್ರೆಡಿಟ್‌ ಅನ್ನು ಕಾಂಗ್ರೆಸ್ಸಿಗರು ಪಡೆಯುತ್ತಿದ್ದಾರೆ ಎಂದು ದೂರಿದರು.

ಸರಕಾರಕ್ಕೆ ಅದರದ್ದೇ ಆದ ನಿಯಮಗಳಿವೆ. ಅದನ್ನು ಮೀರಿ ಯಾರೂ ಹೋಗಬಾರದು. ಆದರೆ ವೇದವ್ಯಾಸ್ ಕಾಮತ್‌ ಪ್ರಯತ್ನ ಪಟ್ಟು ಈ ಬಗ್ಗೆ ಅಧಿವೇಶನದಲ್ಲಿ ಮಾತನಾಡಿ ಕಷ್ಟಪಟ್ಟು  ತಂದಿರುವ ಅನುದಾನದ ವಿಚಾರಗಳನ್ನು ತಮ್ಮದೆಂದು ಬಿಂಬಿಸುವುದನ್ನು ಖಂಡಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ತರಲಾಗದೆ ಹತಾಶರಾಗಿ ಕಾಂಗ್ರೆಸ್ ನಾಯಕರು  ಇದು ನಾನೇ ತಂದ್ದು ಎಂದು ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ನೀಡೋದು ಸಣ್ಣತನ. ಕಾಂಗ್ರೆಸ್ಸಿಗರ  ಪ್ರಚಾರದ ಭರಾಟೆಯಲ್ಲಿ ನಿಜವಾಗಿಯೂ ಅನ್ಯಾಯವಾಗುತ್ತಿರುವ ಆಶಾ ಕಾರ್ಯಕರ್ತರಿಗೆ ಇವರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ವೇದವ್ಯಾಸ್‌ ಆಶಾ ಕಾರ್ಯಕರ್ತರನ್ನು ಬೀದಿಪಾಲು ಮಾಡುವ ಕೆಲಸ ನಿಲ್ಲಿಸಿ. ಇದನ್ನು ಬಿಜೆಪಿ ಪಕ್ಷ ಒಪ್ಪಲ್ಲ.  ಮುಂದೆ ನಮ್ಮ ಸರ್ಕಾರ ಕೂಡಾ ಬರುತ್ತದೆ. ರಾಜ್ಯಸರ್ಕಾರದ ಆರೋಗ್ಯ ಇಲಾಖೆಯಿಂದ ಅನುದಾನ ತರುವ ಕೆಲಸ ನಾವು ಮಾಡುತ್ತೇವೆ. ಕೇಂದ್ರ ಸರಕಾರದ ಜೊತೆ ಮಾತನಾಡಿ ಅವರ ನೋವಿಗೆ ಬಿಜೆಪಿ ಸ್ಪಂದಿಸುವುದಾಗಿ ನುಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Continue Reading

LATEST NEWS

ದೇವಸ್ಥಾನದ ಸ್ನಾನಗೃಹದಲ್ಲಿ ಇಬ್ಬರು ಯುವತಿಯರ ಶವ ಪತ್ತೆ

Published

on

ಗಾಂಧೀನಗರ: ದೇವಾಲಯದ ಆವರಣದಲ್ಲಿ ಇಬ್ಬರು ಯುವತಿಯರ ಮೃತದೇಹಗಳು ಪತ್ತೆಯಾಗಿರುವ ಘಟನೆ ಗುಜರಾತ್‌ ಗಾಂಧೀನಗರದ ಸೂರತ್‌ನ ಸ್ವಾಮಿನಾರಾಯಣ ದೇವಾಲಯದಲ್ಲಿ ನಡೆದಿದೆ.


ದೇವಾಲಯದ ಆವರಣದಲ್ಲಿರುವ ಸ್ನಾನಗೃಹದಲ್ಲಿ ಇಬ್ಬರು ಯುವತಿಯರು ಶವವಾಗಿ ಪತ್ತೆಯಾಗಿದ್ದಾರೆ. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಇಬ್ಬರು ಹುಡುಗಿಯರು ಮನೆಯಿಂದ ಕಾಲೇಜಿಗೆ ಹೊರಟಿದ್ದು, ಆದರೆ ಮಧ್ಯಾಹ್ನದ ವೇಳೆಗೆ ಹಿಂತಿರುಗಲಿಲ್ಲ. ಬಳಿಕ ಮಾಹಿತಿ ತಿಳಿದ ಪೊಲೀಸರು ಹುಡುಕಾಟ ಆರಂಭಿಸಿದ್ದು, ಫೋನ್‌ಗಳ ಲೊಕೇಷನ್‌ ಆಧರಿಸಿ ದೇವಾಲಯ ಸಂಕೀರ್ಣದಲ್ಲಿ ಕೊನೆಯದಾಗಿ ಇದ್ದ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದರು. ಶನಿವಾರವೂ ಮುಂದುವರಿದ ಹುಡುಕಾಟದಲ್ಲಿ ಅವರ ಸ್ಕೂಟರ್‌ಗಳು ನಿಂತಿರುವುದು ಕಂಡುಬಂದಿದೆ.

ದೇವಾಲಯದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಹುಡುಗಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಲಾಕ್‌ ಆಗಿದ್ದ ಸ್ನಾನಗೃಹದ ಬಾಗಿಲನ್ನು ಒಡೆದು ಒಳನುಗ್ಗಿದಾಗ ಹುಡುಗಿಯರು ಸತ್ತಿರುವುದು ಕಂಡುಬಂದಿದೆ. ಅವರ ದೇಹದ ಬಳಿ ಬಿದ್ದಿದ್ದ ಒಂದು ಸಿರಿಂಜ್ ಮತ್ತು ಮೂರು ಬಾಟಲಿ ವಿಷಕಾರಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ದುರಂತ: ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ

ಯುವತಿಯರ ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading

INTERNATIONAL

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾ*ಳಿ

Published

on

ಮಂಗಳೂರು/ದುಬೈ : ವಿಶ್ವದ ಎರಡನೇ ಅತ್ಯಂತ ಜನನಿಬಿಡ  ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಘಟನೆಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಡ್ರೋನ್ ಬಿದ್ದ ಜಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿದ್ದು ಸಾ*ವು, ನೋ*ವಿನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ದುಬೈಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳನ್ನು ಮುಂದಿನ ಸೂಚನೆ ಬರುವ ವರೆಗೆ ಸ್ಥಗಿತಗೊಳಿಸಲು ಎಮಿರೇಟ್ಸ್ ಸರ್ಕಾರ ಸೂಚಿಸಿತ್ತು. ಇನ್ನು ಘಟನೆಗೆ ಸಂಬಂಧಪಟ್ಟ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಮೂರು ದಿನದ ಸಾಂಬಾರ್‌ನಿಂದ ಜಗಳ….ಪ್ರಾ*ಣ ಬಿಟ್ಟ ಗೃಹಿಣಿ!

ಇದೀಗ ಭಾಗಶಃ ವಿಮಾನಗಳ ಹಾರಾಟ ಪ್ರಾರಂಭಿಸಲಾಗಿದೆ ಎಂದು ವರದಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page