Connect with us

LATEST NEWS

ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

Published

on

ಗದಗ : ಗದಗ ಬೆಟಗೇರಿ ಅವಳಿ ನಗರದಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಬರ್ಬರ ಹ*ತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿದಂತೆ ನಾಲ್ವರನ್ನು ರಾತೋರಾತ್ರಿ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ್ ಓಣಿಯ ನಿವಾಸಿಯಾದ ಪ್ರಕಾಶ ಬಾಕಳೆ ಅವರ ಮನೆಯಲ್ಲಿ ಈ ಹ*ತ್ಯಾಕಾಂಡ ನಡೆದಿದೆ.


ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ 27 ವರ್ಷದ ಕಾರ್ತಿಕ್ ಬಾಕಳೆ, ಸಂಬಂಧಿಕರಾದ 66 ವರ್ಷದ ಪರಶುರಾಮ, 45 ವರ್ಷದ ಲಕ್ಷ್ಮಿ ಹಾಗೂ 16 ವರ್ಷದ ಆಕಾಂಕ್ಷಾ ಎನ್ನುವವರ ಕೊ*ಲೆಯಾಗಿದೆ.

 

ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ :

ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಮನೆಯ ಹಿಂದಿನ ಕಿಟಕಿ ಮೂಲಕ ಎಂಟ್ರಿ ಹೊಡೆದ ದುಷ್ಕರ್ಮಿಗಳು ಮೊದಲು ಒಂದನೇಯ ಮಹಡಿಯಲ್ಲಿ ಮಲಗಿಕೊಂಡಿದ್ದ ಕಾರ್ತಿಕ ಹಾಗೂ ಪರಶುರಾಮ ಅವರನ್ನು ಹ*ತ್ಯೆ ಮಾಡಿದ್ದಾರೆ. ಬಳಿಕ ತಳ ಮಹಡಿಯಲ್ಲಿ ಮಲಗಿಕೊಂಡಿದ್ದ ತಾಯಿ ಲಕ್ಷ್ಮಿ ಹಾಗೂ ಮಗಳು ಆಕಾಂಕ್ಷಾ ಅವರನ್ನು ಮಾರಕಾಸ್ತ್ರಗಳಿಂದ ಕೊ*ಚ್ಚಿ ಕೊ*ಲೆ ಮಾಡಿದ್ದಾರೆ.


ಈ ವೇಳೆ ಪಕ್ಕದ ರೂಮಿನಲ್ಲಿದ್ದ ಪ್ರಕಾಶ ಬಾಕಳೆ ಹಾಗೂ ಸುನಂದಾ ಬಾಕಳೆ ಎಂಬವರು ರೂಮ್ ಬಾಗಿಲು ತೆರೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರು ಬರುತ್ತಾ ಇದ್ದಂತೆ, ಹಂ*ತಕರು ಮನೆಯ ಹಿಂದಿನ ಕಿಟಕಿ ‌ಮೂಲಕ ಎಸ್ಕೇಪಾಗಿದ್ದಾರೆ. ಈ ವೇಳೆ ಹಂ*ತಕರು ಉಪಯೋಗ ಮಾಡಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ : ಚುನಾವಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ.. 40 ಮಂದಿಗೆ ಗಾಯ
ಬಿಜೆಪಿ ಮುಖಂಡ ಹಾಗೂ ನಗರಸಭೆ ಉಪಾಧ್ಯಕ್ಷೆಯ ಪತಿಯಾದ ಪ್ರಕಾಶ ಬಾಕಳೆಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ ಈ ಹಿಂದಿಯೇ ಸಾವನ್ನಪ್ಪಿದ್ದಾಳೆ. ಎರಡನೇಯ ಪತ್ನಿಯಾದ ಸುನಂದಾಳ ಜೊತೆಗೆ ಇದೇ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಏಪ್ರಿಲ್ 17 ರಂದು ಎರಡನೇಯ ಪತ್ನಿ ಸುನಂದಾ ಬಾಕಳೆ ಅವ್ರ ಪುತ್ರ ಕಾರ್ತಿಕ್ ಎಂಗೇಜ್ಮೆಂಟ್ ಸಮಾರಂಭ ನಡೆಸಲಾಗಿತ್ತು.
ಮೊದಲ ಪತ್ನಿಯ ಸಹೋದರ ಪರಶುರಾಮ ಅವರ ಪತ್ನಿ ಲಕ್ಷ್ಮಿ, ಅವರ ಪುತ್ರಿ ಆಕಾಂಕ್ಷಾ ಕೊಪ್ಪಳ ಜಿಲ್ಲೆಯಿಂದ ಎಂಗೇಜ್ಮೆಂಟ್ ಕಾರ್ಯಕ್ಕೆ ಬಂದಿದ್ದರು. ಆದ್ರೆ, ಎಂಗೇಜ್ಮೆಂಟ್ ಮುಗಿಸಿ ವಾಪಾಸಾಗಬೇಕಾದವರು ಕಾರಣಾಂತರದಿಂದ ಇಲ್ಲೇ ಉಳಿದುಕೊಂಡಿದ್ದರು.

ತನಿಖೆಗೆ 4 ತಂಡ ರಚನೆ :

ಉತ್ತರ ವಲಯ ಐಜಿಪಿ ವಿಕಾಸಕುಮಾರ ಅವರು ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದರು. ಈಗಾಗಲೇ ಗದಗ ಎಸ್ಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ 4 ತಂಡವನ್ನು ರಚನೆ ಮಾಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊ*ಲೆ ಮಾಡಿರೋದು ದರೋಡೆಕೋರರ ಅಲ್ಲಾ ಅಥವಾ ಇನ್ಯಾರು ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ‌‌ಮಾಡ್ತಾಯಿದ್ದೇವೆ, ಆದಷ್ಟು ಬೇಗ ಹಂತಕರನ್ನು ಪತ್ತೆ ಮಾಡುವ ಭರವಸೆ ನೀಡಿದ್ದಾರೆ.

ರಾಜಕೀಯ ಹಿನ್ನೆಲೆ, ರಿಯಲ್ ಎಸ್ಟೇಟ್, ಕೌಟುಂಬಿಕ ಕಲಹ ಸೇರಿದಂತೆ ಎಲ್ಲಾ ಆ್ಯಂಗಲ್ ‌ಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಒಂದು ಕುಟುಂಬದ ನಾಲ್ಕು ಜನರ ಹತ್ಯೆ ಮಾಡುವಷ್ಟು ದ್ವೇಷ ಏನೂ ಎನ್ನುವುದು ಪೊಲೀಸರ ಸಮಗ್ರ ತನಿಖೆಯಿಂದಲೇ ಬಯಲಾಗಬೇಕಾಗಿದೆ.

LATEST NEWS

ಪೋಷಕರ ಲೈಂ*ಗಿಕತೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ರಣವೀರ್ ಅಲ್ಹಾಬಾದಿಯಾಗೆ ಸಂಕಷ್ಟ!

Published

on

ನವದೆಹಲಿ :  ‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಜನಪ್ರಿಯ ಯೂಟ್ಯೂಬರ್ ಮತ್ತು ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ, ಹಾಸ್ಯನಟ ಸಮಯ್ ರೈನಾ ಮತ್ತು ಇತರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪೋಷಕರು ಮತ್ತು ಲೈಂ*ಗಿಕತೆ ಕುರಿತು ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಬಿಯಲ್ ಬೈಸೆಪ್ಸ್ ಹೆ ಎಂದೇ ಖ್ಯಾತರಾಗಿರುವ ರಣವೀರ್ ವೀಡಿಯೋ ಬಿಡುಗಡೆ ಮಾಡಿ ಕ್ಷಮೆಯಾಚಿಸಿದ್ದರು. ಹೇಳಿಕೆ ತೀವ್ರತೆ ಪಡೆಯುತ್ತಿದ್ದಂತೆ ಆಶಿಶ್ ಚಂಚಲಾನಿ, ಜಸ್ಪ್ರೀತ್ ಸಿಂಗ್, ಅಪೂರ್ವ ಮಖಿಜಾ, ರಣವೀರ್ ಅಲ್ಹಾಬಾದಿಯಾ, ಸಮಯ್ ರೈನಾ ಮತ್ತು ಇತರರ ವಿರುದ್ಧ ಪೊಲೀಸರು ಸೋಮವಾರ(ಫೆ.10) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು(ಫೆ.11) ರಣವೀರ್ ಅಲಹಾಬಾದಿಯಾ ಮತ್ತು ಇತರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಏನಿದು ಪ್ರಕರಣ?

‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಯೂಟ್ಯೂಬರ್‌ಗಳಾದ ಆಶಿಶ್ ಚಂಚಲಾನಿ, ಜಸ್ಪ್ರೀತ್ ಸಿಂಗ್, ಅಪೂರ್ವ ಮಖಿಜಾ, ರಣವೀರ್ ಅಲ್ಹಾಬಾದಿಯಾ, ಸಮಯ್ ರೈನಾ ಭಾಗವಹಿಸಿದ್ದರು.  ಈ ವೇಳೆ ರಣವೀರ್ ಅಲ್ಹಾಬಾದಿಯಾ ಪೋಷಕರ ಲೈಂ*ಗಿಕತೆ ಬಗ್ಗೆ ಯುವಕನೊಬ್ಬನಲ್ಲಿ ಪ್ರಶ್ನೆ ಕೇಳಿದ್ದರು. ಈ ವೀಡಿಯೋ ವೈರಲ್ ಆಗಿತ್ತು. ರಣವೀರ್ ಪ್ರಶ್ನೆ ಬಗ್ಗೆ ಭಾರೀ ಆಕ್ರೋಶ ಕೇಳಿ ಬಂದಿತ್ತು. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಅನೇಕ ಗಣ್ಯರೂ  ಆಕ್ಷೇ*ಪ ವ್ಯಕ್ತಪಡಿಸಿದ್ದರು.

ಸಂಚಿಕೆ ಪ್ರಸಾರಕ್ಕೆ ನಿರ್ಬಂಧ :

ಯೂಟ್ಯೂಬರ್ ಮತ್ತು ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆ ಅವರು ಭಾಗಿಯಾಗಿದ್ದ ಇಂಡಿಯಾ ಗಾಟ್  ಲ್ಯಾಟೆಂಟ್‌ನ ಸಂಚಿಕೆಯ ಪ್ರಸಾರಕ್ಕೆ ಬ್ರೇಕ್ ಹಾಕಲಾಗಿದೆ.

ಇದನ್ನೂ ಓದಿ : ಈ ರಾಶಿಯವರು ಮದುವೆಯಾದರೆ ಭೂಲೋಕದಿ ಸಾಕ್ಷಾತ್ ಶಿವ-ಪಾರ್ವತಿ ವಿವಾಹವಾದಂತೆ

ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.  ಇಂಡಿಯಾ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ರಣವೀರ್ ಅಲ್ಹಾಬಾದಿಯಾ ಅವರ ಆಕ್ಷೇಪಾರ್ಹ ಹೇಳಿಕೆ ಇರುವ ಸಂಚಿಕೆ ಪ್ರಸಾರವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Continue Reading

LATEST NEWS

ಆರ್‌ಸಿಬಿಗೆ ಮತ್ತೆ ಕೊಹ್ಲಿಯೇ ನಾಯಕ ?

Published

on

ಮಂಗಳೂರು/ಬೆಂಗಳೂರು : ಈ ಬಾರಿಯ ಐಪಿಎಲ್‌ನಲ್ಲಿ ಮತ್ತೆ ವಿರಾಟ್ ಕ್ಯಾಪ್ಟನ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. 2021ರಲ್ಲಿ ಆರ್‌ಸಿಬಿ ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಇದೀಗ ಮತ್ತೆ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)ಸೀಸನ್-18ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ಯಾರು ಅನ್ನೋ ಪ್ರಶ್ನೆಗೆ ಉತ್ತರ ಇನ್ನೂ ಸಿಕ್ಕಿಲ್ಲ. ಆದರೆ ಈ ಬಾರಿ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿಯೇ ಮುನ್ನಡೆಸಲಿದ್ದಾರೆ ಎಂಬ ಸುಳಿವು ಸಿಕ್ಕಿದೆ.

ಇಂಗ್ಲೆಂಡ್ ವಿರುದ್ದದ ಎರಡನೇ ಏಕದಿನ ಪಂದ್ಯದಲ್ಲಿ ಸುರೇಶ್ ರೈನಾ ಕಾಮೆಂಟರಿ ಬಾಕ್ಸ್‌ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ರೈನಾ ಸಂಭಾಷಣೆ ನಡೆಸಿದ್ದಾರೆ. ಇಂಗ್ಲೆಂಡ್ ಆಟಗಾರ ಆರ್‌ಸಿಬಿ ನಾಯಕನ ಕುಶಲೋಪರಿ ವಿಚಾರಿಸಿದ್ದಾರೆ ಎಂದು ಕಾಮೆಂಟರಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಗಂಡ ಮಾಡಿದ ಸಾಂಬಾರನ್ನು ಎರಡು ವರ್ಷಗಳ ಬಳಿಕ ತಿಂದ ಹೆಂಡತಿ..!

ಇತ್ತ ಸುರೇಶ್ ರೈನಾ ಹಾಗೂ ವಿರಾಟ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಅವರಿಗೆ ಆರ್‌ಸಿಬಿ ತಂಡದ ಮುಂದಿನ ನಾಯಕ ಯಾರೆಂಬುದು ಗೊತ್ತಿದೆ. ಇದೇ ಕಾರಣದಿಂದಾಗಿ ವಿರಾಟ್ ಕೊಹ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ನಾಯಕ ಎಂದು ಸುರೇಶ್ ರೈನಾ ಬಹಿರಂಗವಾಗಿ ಹೇಳಿದ್ದಾರೆ.

9 ವರ್ಷಗಳ ಕಾಲ ಆರ್‌ಸಿಬಿ ಕ್ಯಾಪ್ಟನ್ ಆಗಿ ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೇ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್‌ಸಿಬಿ 2016ರಲ್ಲಿ ಫೈನಲ್‌ಗೆ ಪ್ರವೇಶಿಸಿದರೆ, 3ಬಾರಿ ಪ್ಲೇಆಫ್ಸ್ ಆಡಿತ್ತು.

 

 

Continue Reading

LATEST NEWS

ಚಲಿಸುತ್ತಿದ್ದ ಬಸ್‌ನಲ್ಲಿ ಲೈಂ*ಗಿಕ ಕಿರುಕು*ಳಕ್ಕೆ  ಯತ್ನ; ವಾಹನದಿಂದ ಜಿ*ಗಿದ ವಿದ್ಯಾರ್ಥಿನಿಯರು

Published

on

ಮಂಗಳೂರು/ದಮೋಹ್ : ಚಲಿಸುತ್ತಿದ್ದ ಬಸ್ಸಿನಲ್ಲಿ ಇಬ್ಬರು ಬಾಲಕಿ ಕಂಡೆಕ್ಟರ್ ಸೇರಿ ನಾಲ್ವರು ಅಶ್ಲೀ*ಲವಾಗಿ ನಿಂದಿಸಿ, ಲೈಂ*ಗಿಕ ಕಿ*ರುಕುಳ ನೀಡಲು ಯತ್ನಿಸಿದ್ದು, ಈ ವೇಳೆ ಬಾಲಕಿಯರು ಬಸ್ಸಿನಿಂದ  ಜಿಗಿದಿದ್ದಾರೆ. ಈ  ಘಟನೆ ನಡೆದಿರೋದು ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ. ಸದ್ಯ ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಇಬ್ಬರು ಬಾಲಕಿಯರು 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆಯ ದಿನ ಅವರು ಅದ್ರೋಟಾದಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.  ಈ ಬಸ್‌ನ ಚಾಲಕ, ಕಂಡೆಕ್ಟರ್  ಸೇರಿ ನಾಲ್ವರು ಬಾಲಕಿಯರನ್ನು ನಿಂದಿಸಿದ್ದಾರೆ. ಬಳಿಕ ಬಸ್‌ನ ಹಿಂದಿನ ಬಾಗಿಲನ್ನು ಮುಚ್ಚಿದ್ದಾರೆ. ಇದರಿಂದ ಬಾಲಕಿಯರಿಗೆ ಆತಂಕವಾಗಿದೆ.  ಬಾಗಿಲು ತೆರೆಯುವಂತೆ ಕೇಳಿಕೊಂಡಿದ್ದಾರೆ. ಆದರೆ, ಬಸ್ ನಿಲ್ಲಿಸದೇ ಇದ್ದಾಗ ಬಸ್‌ನಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಹೆಚ್ಚುವರಿ ಮಟನ್ ಪೀಸ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ; ಬಳಿಕ ನಡೆದಿದ್ದು ಭ*ಯಾನಕ!

ಈ ಬಗ್ಗೆ ಫೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು,  ಬಸ್‌ ಚಾಲಕ ಮೊಹಮ್ಮದ್ ಆಶಿಕ್, ಕಂಡಕ್ಟರ್ ಬನ್ಶಿಲಾಲ್, ಹುಕುಮ್ ಸಿಂಗ್, ಮಾಧವ್ ಅಸತಿ ಬಂಧಿತ ಆರೋಪಿಗಳು.  ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page