Connect with us

 ಶಾಸಕ ಜಮೀರ್‌ ಅಹಮದ್ ವಿರುದ್ಧ ಗೂಂಡಾ ಕೇಸ್‌ ದಾಖಲಿಸಿ : ನಳಿನ್‌ ಕುಮಾರ್ ಕಟೀಲ್ ಆಗ್ರಹ

Published

on

 ಶಾಸಕ ಜಮೀರ್‌ ಅಹಮದ್ ವಿರುದ್ಧ ಗೂಂಡಾ ಕೇಸ್‌ ದಾಖಲಿಸಿ : ನಳಿನ್‌ ಕುಮಾರ್ ಕಟೀಲ್ ಆಗ್ರಹ

ಬೆಂಗಳೂರು : ಪಾದರಾಯನಪುರ ಗಲಭೆಗೆ ಮಾಜಿ ಸಚಿವ ಶಾಸಕ ಜಮೀರ್ ಅಹಮದ್ ಅವರೇ ಕಾರಣ ಹೀಗಾಗಿ ಅವರ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಪಾದರಾಯನಪುರದಲ್ಲಿ ವೈದ್ಯ ಇಲಾಖೆ ಸಿಬ್ಬಂದಿಗಳು ಶಂಕಿತ ಕೊರೋನಾ ಸೋಂಕಿತರನ್ನು ಕ್ವಾರಂಟೈನ್‌ಗೆ ಒಳಪಡಿಸಲು ಮುಂದಾದ ಸಂದರ್ಭದಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.

ಇಡೀ ರಾಜ್ಯದ ಗಮನ ಸೆಳೆದ ಈ ಗಲಾಟೆಗೆ ಸಂಬಂಧಿಸಿದಂತೆ ಈವರೆಗೆ 120ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಈ ಗಲಭೆಗೆ ಆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಅವರೇ ಕಾರಣ ಎಂದು ಆರೋಪಿಸಲಾಗಿದೆ.

ಈ ಗಲಾಟೆಗೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,  ಕೊರೋನಾದಂತಹ ತುರ್ತು ಸಂದರ್ಭದಲ್ಲಿ ಪಾದರಾಯನಪುರ ಗಲಾಟೆ ಅಕ್ಷಮ್ಯ. ಈ ಗಲಭೆಕೋರರ ವಿರುದ್ದ ಸರ್ಕಾರ ಸೂಕ್ತ ಕ್ರಮ ಜರುಗಿಸುತ್ತಿದೆ.

ಆದರೆ, ಇದಕ್ಕೆ ಕಾರಣವಾದ ಶಾಸಜ ಜಮೀರ್ ಅಹಮದ್ ವಿರುದ್ಧ ಗೂಂಡಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಕುರಿತು ಮೆಚ್ಚುಗೆ ಸೂಚಿಸಿರುವ ಅವರು, “ಅಮೆರಿಕ, ಇಟಲಿ ದೇಶಗಳು ಕೊರೋನಾ ಕುರಿತು ಸೂಕ್ತ ಎಚ್ಚರಿಕೆವಹಿಸದ ಕಾರಣ ಅತಿಹೆಚ್ಚಿನ ಸಂಖ್ಯೆಯ ಸಾವು ನೋವನ್ನು ಎದುರಿಸಿದೆ.

ಆದರೆ, ಪ್ರಧಾನಿ ಮೋದಿ ಪ್ರಾರಂಭದ ಹಂತದಲ್ಲೇ ಉತ್ತಮವಾಗಿ ನಿರ್ವಹಣೆ ಮಾಡಿದ್ದರು.

ಇವತ್ತು ಇಡೀ ಜಗತ್ತು ಭಾರತದ ಕಡೆ, ಪ್ರಧಾನಿ ಮೋದಿ ತೆಗೆದುಕೊಳ್ಳುವ ತೀರ್ಮಾನದ ಕಡೆ ನೋಡುತ್ತಿದೆ. ಪ್ರಧಾನಿ ಮೋದಿ ತೆಗೆದುಕೊಂಡ ತೀರ್ಮಾನಗಳಿಂದಾಗಿ 3ನೇ ಸ್ಥಾನದಲ್ಲಿದ್ದ ಭಾರತ 11 ಸ್ಥಾನಕ್ಕೆ ಬಂದಿದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ವಿಶ್ವಕಪ್ ಗೆದ್ದ ರಿಚಾ ಘೋಷ್‌ಗೆ ಪೊಲೀಸ್ ಹುದ್ದೆ; ನೇಮಕಾತಿ ಪತ್ರ ಹಸ್ತಾಂತರಿಸಿದ ಸಿಎಂ ಮಮತಾ ಬ್ಯಾನರ್ಜಿ

Published

on

ಕೋಲ್ಕತಾ: ಮಹಿಳಾ ವಿಶ್ವಕಪ್‌ನಲ್ಲಿ ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಬುತ ಪ್ರದರ್ಶನ ನೀಡಿರುವ ರಿಚಾ ಘೋಷ್‌ಗೆ ಅವರ ರಾಜ್ಯ ಪಶ್ಚಿಮ ಬಂಗಾಳದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಹುದ್ದೆ ನೀಡಿ ಗೌರವಿಸಲಾಗಿದೆ.


ಶನಿವಾರ (ನವೆಂಬರ್ 8) ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಿಚಾ ಘೋಷ್‌ರಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದರು.ಇದೇ ವೇಳೆ ರಿಚಾಗೆ ಬಾಂಗ್ಲಾ ಭೂಷಣ್ ಪ್ರಶಸ್ತಿ ನೀಡಲಾಯಿತು.

ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ನಲ್ಲಿ 34 ರನ್ ಬಾರಿಸಿದ್ದಕ್ಕಾಗಿ ಪ್ರತೀ ರನ್ನಿಗೆ ತಲಾ 1 ಲಕ್ಷ ರೂ.ನಂತೆ ಒಟ್ಟಾರೆ 34 ಲಕ್ಷ ರೂ. ನಗದು ಪುರಸ್ಕಾರ ನೀಡಿತು. ಹೆಚ್ಚುವರಿಯಾಗಿ, ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ಪರವಾಗಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು.

ಇದನ್ನೂ ಓದಿ: IND vs AUS: ಟಿ20I ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಭಾರತದ ವಿಶ್ವಕಪ್ ಅಭಿಯಾನದುದ್ದಕ್ಕೂ ರಿಚಾ ಘೋಷ್ ಅತ್ಯುತ್ತಮ ಪ್ರದರ್ಶನ ನೀಡಿದ್ದು ಆಡಿರುವ ಎಂಟು ಪಂದ್ಯಗಳಲ್ಲಿ 39.16 ಸರಾಸರಿ ಮತ್ತು 133.52 ಪ್ರೈಕ್ ರೇಟ್‌ನಲ್ಲಿ 235 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧ 94 ರನ್ ಗಳಿಸುವ ಮೂಲಕ ವೈಜಾಜ್ ಮೈದಾನದಲ್ಲಿದ್ದ ಪ್ರೇಕ್ಷಕರನ್ನು ರಂಜಿಸಿದರು. ನವಿ ಮುಂಬೈನಲ್ಲಿ ನಡೆದ ಪೈನಲ್ ಪಂದ್ಯದಲ್ಲಿಯೂ ನಿರ್ಣಾಯಕ 34 ರನ್ ಬಾರಿಸಿದ್ದರು.

Continue Reading

LATEST NEWS

ಕಜ್ಜಾಯ ಕೊಡೋ ನೆಪದಲ್ಲಿ ವೃದ್ಧೆಯನ್ನ ಮನೆಗೆ ಕರೆದು ಕೊ*ಲೆ ಮಾಡಿದ ಪಾಪಿ ಮಹಿಳೆ

Published

on

ಆನೇಕಲ್: ಕಜ್ಜಾಯ ಕೊಡುವ ನೆಪದಲ್ಲಿ ಮನೆಗೆ ಕರೆದು ವೃದ್ಧೆಯನ್ನು ಕೊಲೆ ಮಾಡಿ ಮಹಿಳೆ ಚಿನ್ನಾಭರಣ ದೋಚಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ.


ಮೃತದೇಹವನ್ನು ಕೆರೆಗೆ ಎಸೆದು ಮಹಿಳೆ ಪರಾರಿಯಾಗಿದ್ದಳು. ದೀಪಾವಳಿ ಹಬ್ಬಕ್ಕೆ ಮಾಡಿದ ಕಜ್ಜಾಯ ನೀಡುತ್ತೇನೆ ಬನ್ನಿ ಎಂದು ಅಜ್ಜಿಯೊಬ್ಬರನ್ನು ಕರೆದ ಅದೇ ಊರಿನ ಮಹಿಳೆ, ಅಜ್ಜಿ ಬಳಿ ಇರುವ ಚಿನ್ನಕ್ಕಾಗಿ ಆಕೆಯನ್ನೇ ಕೊಂದು ಕೆರೆಗೆ ಎಸೆದಿರುವಂತಹ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಗೂರು ಬಳಿ ನಡೆದಿದೆ.

68 ವರ್ಷದ ಭದ್ರಮ್ಮ ಮೃತ ದುರ್ದೈವಿ. ದೀಪ ಕೊಲೆ ಮಾಡಿರುವ ಚಾಲಾಕಿ ಕಿಲ್ಲರ್ ಲೇಡಿ ಆಗಿದ್ದಾಳೆ. ಅ.30 ರಂದು ಭದ್ರಮ್ಮ ಕಾಣೆಯಾಗಿದ್ದಾಳೆಂದು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತನಿಖೆಯನ್ನು ಚುರುಕುಗೊಳಿಸಿದಾಗ ದೀಪಾ ಮೇಲೆ ಅನುಮಾನ ಮೂಡಿತ್ತು. ಪೊಲೀಸ್ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಅಸಲಿ ಕಹಾನಿ ಹೊರಬಂದಿದೆ. ಅಜ್ಜಿಯನ್ನು ಕಜ್ಜಾಯ ನೀಡಲು ಮನೆಗೆ ಕರೆದ ದೀಪ ಅಜ್ಜಿಯ ಬಳಿ ಚಿನ್ನಾಭರಣ ದೋಚಲು ಕೊಲೆ ಮಾಡಿದ್ದಾಳೆ. ಆನಂತರ ಎರಡು ದಿನ ಶವವನ್ನು ಮನೆಯಲ್ಲೇ ಬಚ್ಚಿಟ್ಟಿದ್ದಳು.

ಇದನ್ನೂ ಓದಿ: VIDEO: ವೇಟರ್ ಮುಖಕ್ಕೆ ಬಿಸಿ ಕಾಫಿಯನ್ನು ಎರಚಿದ ಮಹಿಳೆ! ಕಾರಣ?

ಆದರೆ, ದುರ್ವಾಸನೆ ಬರುತ್ತಿದ್ದಂತೆ ದೊಡ್ಡತಿಮ್ಮಸಂದ್ರ ಕೆರೆಗೆ ಕಾರಿನಲ್ಲಿ ತೆಗೆದುಕೊಂಡು ಹೋಗಿ ಹೆಣವನ್ನು ಎಸೆದು ಅಲ್ಲಿಂದ ಪರಾರಿಯಾಗಿದ್ದಾಳೆ. ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟಿದ್ದಾಳೆ. ಸದ್ಯ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಗ್ರಾಮಾಂತರ ಅಡಿಷನಲ್ ಎಸ್‌ಪಿ ಮಾಹಿತಿ ನೀಡಿದ್ದಾರೆ.

Continue Reading

INTERNATIONAL

VIDEO: ವೇಟರ್ ಮುಖಕ್ಕೆ ಬಿಸಿ ಕಾಫಿಯನ್ನು ಎರಚಿದ ಮಹಿಳೆ! ಕಾರಣ?

Published

on

ಏನೂ ತಪ್ಪೇ ಮಾಡದ ವೈಟರ್ ಮೇಲೆ ಮಹಿಳೆ ಬಿಸಿ ಬಿಸಿ ಕಾಫಿ ಎರಚಿರುವ ಘಟನೆ ಅಮೆರಿಕದಲ್ಲಿ ನಡೆದಿದ್ದು, ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಹೌದು, ಇಂದಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ ಅನ್ನೋದು ಕಡಿಮೆಯಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಅಮೆರಿಕದಲ್ಲೊಂದು ಘಟನೆ ನಡೆದಿದ್ದು, ಇದರ ವೀಡಿಯೋವನ್ನು ಬ್ಯೂನಾ ವಿಸ್ಟಾ ಪೊಲೀಸ್ ಇಲಾಖೆ ಹಂಚಿಕೊಂಡಿದೆ.

ವೀಡಿಯೋದಲ್ಲೇನಿದೆ?
ಮಹಿಳೆ ಅಂಗಡಿಯ ವೈಟರ್‌ನೊಂದಿಗೆ ವಾಗ್ವಾಧ ನಡೆಸುತ್ತಿರುತ್ತಾಳೆ. ಸಿಬ್ಬಂದಿ ಆ ಮಹಿಳೆಯನ್ನು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ, ಆಕೆ ಸಮಾಧಾನವಾಗದೇ ವಾದ ಮಾಡುವುದನ್ನ ವೀಡಿಯೋದಲ್ಲಿ ನೋಡಬಹುದು.

ಅಷ್ಟಕ್ಕೂ ಆಗಿದ್ದೇನು?
ಮಹಿಳೆ ತಾನೂ ಆರ್ಡರ್ ಮಾಡಿದ ಕಾಫಿ 1 ಗಂಟೆಯಾದರೂ ನೀಡಿಲ್ಲ ಎಂಬ ಕಾರಣಕ್ಕೆ ಮೆಕ್‌ಡೊನಾಲ್ಡ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿಯುತ್ತಾಳೆ. ವೈಟರ್‌ನ್ನು ಸುಳ್ಳುಗಾರ ಎಂದು ದೂಷಿಸುತ್ತಾಳೆ. ಇದಕ್ಕೆ ಪ್ರತಿಕ್ರಿಯಿಸುವ ಸಿಬ್ಬಂದಿ ನಿಮ್ಮ ಕಾಫಿ ಬಂದಿದೆ. ಇದಕ್ಕೆ ಶುಲ್ಕ ವಿಧಿಸಲಾಗಿದೆ. ನಿಮ್ಮ ಮರುಪಾವತಿಗೆ 48 ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿ ಹೋಗುತ್ತಾರೆ. ಇದಕ್ಕೆ ಕೋಪಗೊಂಡ ಆರೋಪಿ ಮಹಿಳೆ ಬಿಸಿ ಕಾಫಿಯನ್ನು ಸಿಬ್ಬಂದಿ ಮೈಮೇಲೆ ಎರಚಿದ್ದಾಳೆ.

ಘಟನೆಯ ಕುರಿತು ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಆರೋಪಿ ಮಹಿಳೆಯ ನಡವಳಿಕೆಯ ವಿರುದ್ದ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಪೊಲೀಸರು ಮಹಿಳೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page