Connect with us

DAKSHINA KANNADA

ನವೋದಯ ಸ್ವಸಹಾಯ ಗುಂಪುಗಳ ಅದ್ದೂರಿ ರಜತ ಸಂಭ್ರಮ

Published

on

ಮಂಗಳೂರು: ಸಹಕಾರಿ ರತ್ನ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ ಸಂಸ್ಥಾಪಕರಾಗಿರುವ ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್ ಪ್ರವರ್ತಿತ ನವೋದಯ ಸ್ವ- ಸಹಾಯ ಗುಂಪುಗಳ ರಜತ ಸಂಭ್ರಮ ಮಂಗಳೂರಿನ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.

8 ಜಿಲ್ಲೆಗಳ 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿಬಣ್ಣದ ಸಮವಸ್ತ್ರದಲ್ಲಿ ಶಿಸ್ತು ಬದ್ಧವಾಗಿ ಭಾಗವಹಿಸಿರುವುದು ಈ ಸಮಾವೇಶದ ವೈಶಿಷ್ಟ್ಯ. ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಒಂದೇ ವೇದಿಕೆಯಲ್ಲಿ ಸಮಾವೇಶಗೊಂಡಿರುವುದು ರಾಜ್ಯದಲ್ಲೇ ಇದೇ ಪ್ರಥಮ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಮತ್ತು ಉಪ ಮುಖ್ಯ ಮಂತ್ರಿ ಡಿಕೆ. ಶಿವ ಕುಮಾರ್‌ ಹಾಗೂ ಸ್ಪೀಕರ್‌ ಯು.ಟಿ. ಖಾದರ್‌ ಅವರು ಸಹಕಾರಿ ಧ್ವಜವಂದನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ರಜತ ಸಂಭ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್ ಸಂಸ್ಥಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ, ಇಫ್ಕೋ ಸಂಸ್ಥೆಯ ಉದಯ ಶಂಕರ್ ಅವಸ್ತಿ, ಉಡುಪಿ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ, ಮಾಜಿ ಸಚಿವ ಮುರುಗೇಶ್‌ ನಿರಾಣಿ, ಶಾಸಕರಾದ ವಿ. ಸುನಿಲ್‌ ಕುಮಾರ್‌, ಕಿರಣ್‌ ಕೊ, ಗುರ್ಮೆ ಸುರೇಶ್ ಶೆಟ್ಟಿ, ಅಶೋಕ್‌ ಕುಮಾರ್‌ ರೈ, ಡಾ. ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಯಶ್ಪಾಲ್‌ ಸುವರ್ಣ, ಪರಿಷತ್‌ ಸದಸ್ಯರಾದ ಐವನ್‌ ಡಿ’ಸೋಜಾ, ಎಸ್.ಎಲ್‌ ಭೋಜೇ ಗೌಡ, ಬಂಟರ ಸಂಘದ ಐಕಳ ಹರೀಶ್ ಶೆಟ್ಟಿ, ಬಿ. ರಮಾನಾಥ ರೈ, ವಿನಯ ಕುಮಾರ್‌ ಸೊರಕೆ, ಅಭಯ ಚಂದ್ರ ಜೈನ್, ಮಿಥುನ್‌ ರೈ, ಇನಾಯತ್ ಆಲಿ, ಸಂಜೀವ ಮಠಂದೂರು, ಆರ್. ಪದ್ಮರಾಜ್‌, ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ಪ್ರಸಾದ್‌ ರಾಜ್‌ ಕಾಂಚನ್‌, ದಿನೇಶ್‌ ಮೊಳಹಳ್ಳಿ, ರಕ್ಷಿತ್‌ ಶಿವರಾಂ, ಕಿಶೋರ್ ಆಳ್ವ, ಅಪೆಕ್ಸ್ ಬ್ಯಾಂಕ್‌ ಮ್ಯಾನೇಜರ್‌ ದೇವರಾಜ್‌, ಡಾ. ಪಿ.ಎಲ್. ಧರ್ಮ, ಡಾ. ಮೋಹನ್‌ ಆಳ್ವ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಡಾ. ವಿದ್ಯಾ ಕುಮಾರಿ, ಸಹಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಆಶೀರ್ವಚನ ನೀಡಿದರು.

ರಜತ ಸಂಭ್ರಮ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿ ಪ್ರಸಾದ್‌ ಶೆಟ್ಟಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅವರು’ ಡಿ.ಕೆ. ಶಿವ ಕುಮಾರ್‌ ಅವರು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತರಾಗಿದ್ದಾರೆ’ ಎಂದು ಹೇಳಿದರು.

ಸೈನಿಕರ ಕಲ್ಯಾಣ ನಿಧಿಗೆ 3 ಕೋಟಿ ರೂ ದೇಣಿಗೆ ನೀಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಪ್ರಸ್ತಾವನೆಗೈದು ಭಯೋತ್ಪಾದನೆಯ ವಿರುದ್ಧದ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವ ಸೈನಿಕರಿಗೆ ಶಕ್ತಿ ತುಂಬುವುದಕ್ಕಾಗಿ ನವೋದಯ ಸಂಸ್ಥೆಯಿಂದ ಮತ್ತು ತನ್ನ ವೈಯಕ್ತಿಕ ನೆಲೆಯಲ್ಲಿ 3 ಕೋಟಿ ರೂ. ಸೈನಿಕರ ಕಲ್ಯಾಣಕ್ಕೆ ನೀಡಲಾಗುವುದು ಎಂದು ಘೋಷಿಸಿದರು. ಮಾಜಿ ಸಚಿವ ಎಸ್.ಎಸ್. ಪಾಟೀಲ್ ಪ್ರೇರಣೆಯಿಂದ ನಾನು ಮಹಿಳೆಯರಿಗೆ ಶಕ್ತಿ ನೀಡ ಬೇಕೆಂದು 25 ವರ್ಷಗಳ ಹಿಂದೆ ನವೋದಯ ಸ್ವ-ಸಹಾಯ ಸಂಘ ಆರಂಭಿಸಿದ್ದೆ. ಮಹಿಳೆಯರ ಶಕ್ತಿ ಎಷ್ಟಿದೆ, ಸ್ವಾವಲಂಬನೆ ಸಾಧಿಸಿದ್ದಾರೆ ಎನ್ನುವುದನ್ನು ತೋರಿಸಲು ಈ ಸಮಾವೇಶ. ಈಗಾಗಲೇ 8 ಜಿಲ್ಲೆಗಳಲ್ಲಿದ್ದು, ಸಾಧ್ಯವಾದರೆ ಇನ್ನೆರಡು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದರು.

ಕರಾವಳಿಯ ಸಹಕಾರಿ ವ್ಯವಸ್ಥೆ ಬಲಿಷ್ಟವಾಗಿದೆ ಎಂದ ಡಿಕೆಶಿ
ಉದ್ಘಾಟನೆಗೈದ ಡಿಸಿಎಂ ಡಿ.ಕೆ. ಶಿವ ಕುಮಾರ್‌ ಮಾತನಾಡಿ, 25 ವರ್ಷಗಳ ಹಿಂದೆ ತಾನು ಸಹಕಾರಿ ಸಚಿವನಾಗಿದ್ದ ಸಂದರ್ಭದಲ್ಲಿ ನವೋದಯ ಸ್ವ ಸಹಾಯ ಸಂಘಗಳ ಉದ್ಘಾಟಿಸಿದ್ದೆ ಎಂದು ಸ್ಮರಿಸಿದರು. ಹೆಣ್ಣು ಕುಟುಂಬದ ಕಣ್ಣು ಎಂದು ಸ್ತ್ರೀ ಶಕ್ತಿ ಗುಂಪುಗಳನ್ನು ಸರಕಾರ ಆರಂಭಿಸಿತ್ತು. ಹೆಣ್ಮಕ್ಕಳು ಸ್ವಾವಲಂಬಿಗಳಾಗಿ ದೊಡ್ಡ ಶಕ್ತಿಯಾಗಿದ್ದಾರೆ. ಅವರು ದೇಶದ ಆಸ್ತಿ. ಹೆಣ್ಮಕ್ಕಳಿಗೆ ಸಮಾಜದಲ್ಲಿ ಮೊದಲ ಸ್ಥಾನವಿದೆ.

ಕರಾವಳಿಯ ಸಹಕಾರಿ ವ್ಯವಸ್ಥೆ ಬಲಿಷ್ಟವಾಗಿದೆ. ಸಾಲ ಮರು ಪಾವತಿಯಲ್ಲಿ ಮುಂಚೂಣಿಯಲ್ಲಿದ್ದು, ಸಹಕಾರಿ ತತ್ವದ ಈ ಪರಂಪರೆ ಮುಂದುವರಿಯಲಿ ಎಂದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪರಂಪರೆ, ಸಂಸ್ಕೃತಿ, ಶಾಂತಿಯ ವಾತಾವರಣ ಉಳಿಯಬೇಕೆಂದು ಆಶಿಸಿದರು.

DAKSHINA KANNADA

ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಬಿಜೆಪಿ ಮುಖಂಡನ ಉಚ್ಚಾಟನೆ

Published

on

ವಿಟ್ಲ : ರಸ್ತೆ ವಿಚಾರವಾಗಿ ನಡೆದ ಜಗಳದ ವೇಳೆ ಮಹಿಳೆಗೆ ಗುಪ್ತಾಂ*ಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿದ್ದ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಅಸಭ್ಯ ವರ್ತನೆ ತೋರಿದ ಪದ್ಮನಾಭ ಸಫಲ್ಯ ವಿರುದ್ಧ  ಬಿಜೆಪಿ ಕ್ರಮ ಕೈಗೊಂಡಿದೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಿರುವ ಬಗ್ಗೆ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ತಿಳಿಸಿದೆ. ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪದ್ಮನಾಭ ಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ ಪಂಚಾಯತ್‌ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಪುತ್ತೂರು ಗ್ರಾಮಾಂತರ ಮಂಡಲ  ಅಧ್ಯಕ್ಷ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.

ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿಧ್ಯ ಕೊಡುವ ಪಾರ್ಟಿಯಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆ, ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪದ್ಮನಾಭ ಸಫಲ್ಯ ಹಾಗೂ ಮನೆ ಸಮೀಪದ‌ ಮಹಿಳೆಗೂ ರಸ್ತೆ ವಿಚಾರದಲ್ಲಿ ವಿವಾದ ಇತ್ತು. ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ಮನೆ ದಾರಿಗೆ ಗೇಟು ಅಳವಡಿಸಿದ್ದ. ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಮಹಿಳೆ ಪದ್ಮನಾಭ ಸಫಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : ಪೆಹಲ್ಗಾಮ್ ದಾಳಿ : ಮೂವರು ಉಗ್ರರ ಫೋಟೋ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ!

ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಲಾಗಿದೆ.  ಪದ್ಮನಾಭ ಸಫಲ್ಯನ ಅಸಭ್ಯ ವರ್ತನೆಯ ವೀಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

Continue Reading

DAKSHINA KANNADA

ಮಂಗಳೂರು : ಟಿಂಟೆಡ್ ಗ್ಲಾಸ್‌ ಅಳವಡಿಸಿದ್ದ ಕಾರುಗಳ ಮೇಲೆ ಬಿತ್ತು ಕೇಸ್

Published

on

ಮಂಗಳೂರು : ಬ್ಲಾಕ್ ಫಿಲ್ಮ್, ಸನ್ ಫಿಲ್ಮ್ ಅಥವಾ ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಮಂಗಳೂರು ನಗರ ಪೊಲೀಸರು ಪತ್ತೆ ಹಚ್ಚಿ ಕಾರುಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

10 ದಿನದಲ್ಲಿ 500ಕ್ಕೂ ಅಧಿಕ ಕಾರುಗಳ ವಿರುದ್ಧ ಕೇಸ್ :

ಮೇ 2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್‌ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಪೊಲೀಸರು ಸೂಕ್ತ ತಿಳುವಳಿಕೆಯನ್ನು ನೀಡಿದರು.

ಇದನ್ನೂ ಓದಿ : ಉಡುಪಿ : ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು

ಸರ್ವೋಚ್ಚ ನ್ಯಾಯಾಲಯದ ಆದೇಶ :

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳ ಪರಿಶೀಲನೆಯನ್ನು ನಡೆಸಲಾಯಿತು. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದ್ದು, ಸಾರ್ವಜನಿಕರು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ತಿಳುವಳಿಕೆ ನೀಡಲಾಯಿತು.

ವಿಡಿಯೋ ನೋಡಿ :

Continue Reading

BELTHANGADY

ನಿದ್ದೆ ಮಾತ್ರೆ ಸೇವನೆ ತಾಯಿ ಮಗ ಆತ್ಮಹತ್ಯೆ ಯತ್ನ ; ಡೆತ್‌ನೋಟ್‌ನಲ್ಲಿ ಏನಿದೆ ..?

Published

on

ಬೆಳ್ತಂಗಡಿ : ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ (ಮೇ.12) ಸಂಭವಿಸಿದೆ.

ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞರಾಮನ್ ನಾಯ‌ರ್ ಅವರ ಪತ್ನಿ ಕಲ್ಯಾಣಿ (96) ಸಾವನ್ನಪ್ಪಿದರೆ, ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರಾವಸ್ಥೆಯಲ್ಲಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯವೇ ಈ ದುರ್ಘಟನೆಗೆ ಮುಕ್ಯ ಕಾರಣ ಎನ್ನಲಾಗಿದೆ.

ಮಲಗಿದ ಸ್ಥಿತಿಯಲ್ಲಿ ತಾಯಿ- ಮಗ :

ಕಲ್ಯಾಣಿ ಮತ್ತು ಜಯರಾಂ ಅವರ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು ಗಮನಿಸಿ ನೆರೆ ಹೊರೆಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಊರವರು ಸೇರಿ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಡೆತ್‌ನೋಟ್‌ನಲ್ಲಿ ಏನಿದೆ ..?

ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ.

ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು. ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತಾಯಿಗೆ ಅವರು ಮೊದಲು ಮಾತ್ರೆ ನೀಡಿ ಬಳಿಕ ಮಾತ್ರೆ ಸೇವಿಸಿದರೇ ಅಥವಾ ಇಬ್ಬರೂ ಜತೆಗೆ ಮಾತ್ರೆ ಸೇವಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page