Connect with us

Baindooru

ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!

Published

on

ಫ್ರಿಜ್ಜಿನ್ನಲ್ಲಿರಿಸಿದ ಅಹಾರಗಳು ತಾಜಾತನವನ್ನು ಉಳಿಸಿಕೊಳ್ಳಲು ಕಾರಣವೆಂದರೆ ಶೀತಲೀಕರಣ. ಆದರೆ, ಈ ಪರಿ ಎಲ್ಲಾ ಬಗೆಯ ಅಹಾರಗಳಿಗೆ ಅನ್ವಯಿಸಲಾರದು. ಕೆಲವು ಫಲಗಳಂತೂ ಫ್ರಿಜ್ಜಿನಲ್ಲಿಟ್ಟರೇ ಸಾಕು, ಚೆನ್ನಾಗಿರುವ ಬದಲು ಹಾಳಾಗಲು ತೊಡಗುತ್ತವೆ. ಇಂದಿನ ಲೇಖನದಲ್ಲಿ ಈ ಗುಣವಿರುವ ಕೆಲವು ಫಲಗಳ ಬಗ್ಗೆ ವಿವರಿಸಲಾಗಿದೆ. ಇವನ್ನು ಫ್ರಿಜ್ಜಿನಲ್ಲಿಡುವ ಬದಲು ತಣ್ಣನೆಯ ಸ್ಥಳದಲ್ಲಿ ಗಾಳಿಯಾಡದಂತೆ ಶೇಖರಿಸಬೇಕು. ಈ ಫಲಗಳು ಯಾವುವು ಎಂಬುದನ್ನು ನೋಡೋಣ.

ಬಾಳೆಹಣ್ಣು

ಬಾಳೆಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಸಂಗ್ರಹಿಸಬಾರದು. ಏಕೆಂದರೆ ಬಾಳೆಹಣ್ಣಿನ ತಾಪಮಾನ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾದರೆ, ಇದರ ಸಿಪ್ಪೆ ಶೀಘ್ರವೇ ಕಪ್ಪಾಗುತ್ತದೆ ಹಾಗೂ ಸಿಪ್ಪೆಯ ಅಡಿಯಲ್ಲಿನ ತಿರುಳು ಕೂಡಾ ಕೊಳೆಯಲು ತೊಡಗುತ್ತದೆ.

 

ಕಲ್ಲಂಗಡಿ

ಬೇಸಿಗೆಯಲ್ಲಿ ಜನರು ಅತಿ ಹೆಚ್ಚಾಗಿ ಇಷ್ಟಪಡುವ ಫಲವಾದ ಕಲ್ಲಂಗಡಿಯನ್ನೂ ಫ್ರಿಜ್ಜಿನಲ್ಲಿ ಇರಿಸಬಾರದು. ಆದರೆ, ಸಾಮಾನ್ಯವಾಗಿ ಕಲ್ಲಗಂಡಿ ದೊಡ್ಡ ಗಾತ್ರದಲ್ಲಿದ್ದು ಇದನ್ನು ಕತ್ತರಿಸಿದಾಗ ದೊರಕುವ ಆಗಾಧ ಪ್ರಮಾಣವನ್ನು ಫ್ರಿಜ್ಜಿನಲ್ಲಿ ಸಂಗ್ರಹಿಸದೇ ಬೇರೆ ಮಾರ್ಗವಿಲ್ಲ. ಆದರೆ, ನಿಸರ್ಗಕ್ಕೆ ನಿಮ್ಮ ಈ ಅಗತ್ಯತೆಯ ಅರಿವಿಲ್ಲ. ಸೇಬನ್ನು ಕತ್ತರಿಸಿ ಕೊಂಚ ಹೊತ್ತು ಇರಿಸಿದಾಗ ಗಾಳಿಗೆ ತೆರೆದ ಭಾಗ ಕಪ್ಪಗಾಗುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿಯೂ ಹೀಗೇ, ಗಾಳಿಗೆ ಒಡ್ಡಿದ ಭಾಗದ ಆಂಟಿ ಆಕ್ಸಿಡೆಂಟುಗಳು ರಾಸಾಯನಿಕ ಕ್ರಿಯೆಗೆ ಒಳಪಟ್ಟು ಶೀಘ್ರವೇ ಹುಳಿಯಾಗುತ್ತದೆ.

 

ಸೇಬು

ಸೇಬು ಹಣ್ಣುಗಳು 90% ತೇವಾಂಶವನ್ನು ಹೊಂದಿರುವ ಪರಿಸರದಲ್ಲಿ ಹೆಚ್ಚು ಹೊತ್ತು ಕೆಡದೇ ತಾಜಾತನವನ್ನುಉಳಿಸಿಕೊಳ್ಳುತ್ತವೆ. ಆದರೆ ನಮ್ಮ ರೆಫ್ರಿಜರೇಟರ್ ನೈಸರ್ಗಿಕ ಡಿಹೈಡ್ರೇಟರ್ ಅಥವಾ ತೇವಾಂಶ ಇರದ ಸ್ಥಳವಾಗಿದೆ. ಹಾಗಾಗಿ, ಫ್ರಿಜ್ಜಿನಲ್ಲಿಟ್ಟ ಸೇಬು ತೇವಾಂಶದ ಕೊರತೆಗೆ ಒಡ್ಡಿಕೊಳ್ಳುತ್ತವೆ. ಈ ಸ್ಥಿತಿಯಲ್ಲಿ ಸೇಬಿನಲ್ಲಿರುವ ಇಥೈಲೀನ್ ಹಾಗೂ ಇತರ ಕಿಣ್ವಗಳು ತಿರುಳನ್ನು ಅತಿ ಶೀಘ್ರವಾಗಿ ಹಣ್ಣಾಗಿಸುತ್ತವೆ ಹಾಗೂ ಕೊಳೆಯಲು ಪ್ರಾರಂಭಿಸುತ್ತದೆ.

ಮಾವಿನ ಹಣ್ಣು

ಮಾವಿನ ಹಣ್ಣನ್ನು ಫ್ರಿಜ್ಜಿನಲ್ಲಿ ಇರಿಸಿದರೆ ಇದರಲ್ಲಿರುವ ಆಂಟಿ ಆಕ್ಸಿಡೆಂಟುಗಳ ಪ್ರಮಾಣ ತಗ್ಗತೊಡಗುತ್ತದೆ. ಹಾಗಾಗಿ ಮಾವಿನ ಹಣ್ಣಿನ ಪೌಷ್ಟಿಕ ಮೌಲ್ಯಗಳು ಕಡಿಮೆಯಾಗುತ್ತವೆ. ಈ ಹಣ್ಣುಗಳನ್ನು ಫ್ರಿಜ್ಜಿನಲ್ಲಿರಿಸಿದರೆ ಮಾವಿನ ಹಣ್ಣು ವಿಷಕಾರಿ ಯಾಗ ಬಹುದು. ಬದಲಿಗೆ ಇನ್ನೂ ಕಾಯಿಯಾಗಿರುವ ಮಾವು ಗಳನ್ನು ತಂದು ಬೆಚ್ಚಗಿರುವ ಮತ್ತು ನೆರಳಿನ ಸ್ಥಳದಲ್ಲಿ ಇರಿಸಿ ಒಂದೆರಡು ದಿನಗಳ ಬಳಿಕ ಸ್ವಾಭಾವಿಕವಾಗಿ ಹಣ್ಣಾಗುವಂತೆ ಮಾಡಿ ಸೇವಿಸಿ​.

ಲಿಚ್ಚಿ

ಬೇಸಿಗೆಯಲ್ಲಿ ಸೇವಿಸಲು ರುಚಿಕರವಾದ ಚಿಕ್ಕ ಗೋಲಿಗ ಳಂತಿರುವ ಲಿಚ್ಚಿ ಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಇರಿಸ ಬಾರದು. ಏಕೆಂದರೆ, ತಂಪಾದ ತಾಪಮಾನದಲ್ಲಿ ಇದರ ತಿರುಳು ಕೊಳೆಯಲು ಆರಂಭಿಸುತ್ತದೆ. ಆದರೆ, ಸಿಪ್ಪೆ ಮಾತ್ರ ಹಾಳಾಗದೇ ಹಾಗೇ ಉಳಿದಿರುತ್ತದೆ. ಫ್ರಿಜ್ಜಿ ನಿಂದ ತೆಗೆದು ನೋಡಿದ ಲಿಚ್ಚಿಯ ಸಿಪ್ಪೆ ಚೆನ್ನಾಗಿರು ವಂತೆಯೇ ಕಂಡುಬಂದರೂ ಒಳಗಿನ ತಿರುಳು ಕೊಳೆತಿರುತ್ತದೆ.

Baindooru

3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ

Published

on

By

ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್‌ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.

ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.

ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.

Continue Reading

Baindooru

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ

Published

on

By

ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ

ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

Baindooru

ಜಾರ್ಖಂಡ್‌ನಲ್ಲಿ ಬಿಗ್‌ ಟ್ವಿಸ್ಟ್‌; ಜೆಎಂಎಂ ಮುನ್ನಡೆ – ಎನ್‌ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ

Published

on

By

ರಾಂಚಿ: ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು. ಆದರೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಮತ್ತೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಬೆಳಗ್ಗೆ 10.30ಕ್ಕೆ ರಾಜ್ಯದ 81 ಸ್ಥಾನಗಳ ಪೈಕಿ 51ರಲ್ಲಿ ಇಂಡಿಯಾ ಮೈತ್ರಿಕೂಟ ಮುಂದಿದೆ. 28 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.

ಜಾರ್ಖಂಡ್ ವಿಧಾನಸಭೆಗೆ ಬಹುಮತಕ್ಕೆ 41 ಸ್ಥಾನಗಳು ಅಗತ್ಯವಿದೆ. ರಾಜ್ಯಕ್ಕೆ ನ.13 ರಂದು ಮೊದಲ ಹಂತದ ಮತದಾನವು 43 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನ ನಡೆದಿತ್ತು.

ಮ್ಯಾಟ್ರಿಜ್ ಪ್ರಕಾರ, ಎನ್‌ಡಿಎ 42-47 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಜೆಎಂಎಂ ನೇತೃತ್ವದ ಮೈತ್ರಿಕೂಟವು 25-30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಬಹುದು ಎಂದು ಸಮೀಕ್ಷೆಗಳು ಹೇಳಿತ್ತು. ಆದರೆ, ಬಹುಪಾಲು ಸಮೀಕ್ಷೆಗಳು ಉಲ್ಟ ಆದಂತಿದೆ. ಆದಾಗ್ಯೂ, ಆಕ್ಸಿಸ್ ಮೈ ಇಂಡಿಯಾ ಮತ್ತು ಪಿ ಮಾರ್ಕ್ ಸಮೀಕ್ಷೆ ಭಿನ್ನವಾಗಿತ್ತು. ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್‌ 49-59 ಮತ್ತು ಎನ್‌ಡಿಎ ಮೈತ್ರಿಕೂಟ 37-47 ಸ್ಥಾನ ಪಡೆಯಬಹುದು ಎಂದು ಅಂದಾಜಿಸಿದ್ದವು. ಬಹುಪಾಲು ಇದು ನಿಜವಾದಂತೆ ಕಾಣುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page