Connect with us

LATEST NEWS

ಅಡುಗೆ ಮನೆಯಲ್ಲಿ ಗ್ಯಾಸ್ ಸ್ಟವ್ ಪಕ್ಕ ಎಂದಿಗೂ ಈ ವಸ್ತುಗಳನ್ನು ಇಡಲೇಬೇಡಿ..!

Published

on

ಗ್ಯಾಸ್ ಸ್ಟವ್ ಗಳ ಮೇಲೆ ಅಡುಗೆ ಮಾಡುವಾಗ ಅನಿಲ ಸೋರಿಕೆ ಮತ್ತು ಬೆಂಕಿಯ ಸಾಧ್ಯತೆ ಇರುವುದರಿಂದ ನಾವು ಬಹಳ ಜಾಗರೂಕರಾಗಿರಬೇಕು. ಇದರ ಜೊತೆಗೆ ಕೆಲವು ವಸ್ತುಗಳನ್ನ ಗ್ಯಾಸ್ ಸ್ಟವ್ ಬಳಿ ಇಡಬಾರದು. ಏಕೆಂದರೆ ಈ ವಸ್ತುಗಳನ್ನ ಇಡುವುದರಿಂದ ಕೆಲವೊಮ್ಮೆ ಅನಿರೀಕ್ಷಿತ ಅಪಘಾತಗಳಿಗೆ ಕಾರಣವಾಗಬಹುದು. ಹಾಗಾದರೆ ಯಾವೆಲ್ಲಾ ವಸ್ತುಗಳನ್ನು ಗ್ಯಾಸ್ ಸ್ಟವ್ ಬಳಿ ಇಡಬಾರದು ಎಂಬುದನ್ನು ತಿಳಿಯೋಣ.

ಇದನ್ನೂ ಓದಿ: ಮಂಗಳೂರು : ತಲೆ ಮರೆಸಿಕೊಂಡಿದ್ದ ಕೊ*ಲೆ ಆರೋಪಿಯ ಬಂಧನ

ಅಡುಗೆ ಎಣ್ಣೆ :

ಕೆಲವರು ಅಡುಗೆ ಎಣ್ಣೆ ಡಬ್ಬಿಯನ್ನು ಗ್ಯಾಸ್ ಸ್ಟವ್ ಪಕ್ಕದಲ್ಲಿ ಇಡುತ್ತಾರೆ. ಇದರಿಂದ ಅಡುಗೆ ಮಾಡುವಾಗ ಎಣ್ಣೆ ಬಿಸಿಯಾಗಿ ಅದರ ಗುಣಮಟ್ಟ ಹದಗೆಡಬಹುದು. ಆದ್ದರಿಂದ ಅದನ್ನು ಗ್ಯಾಸ್ ಸ್ಟವ್ ಪಕ್ಕದಲ್ಲಿ ಇಡಬಾರದು.

ಪ್ಲಾಸ್ಟಿಕ್ ವಸ್ತುಗಳು :

ಪ್ಲಾಸ್ಟಿಕ್ ಪಾತ್ರೆಗಳು ಅಥವಾ ಇತರ ಪ್ಲಾಸ್ಟಿಕ್ ವಸ್ತುಗಳನ್ನು ಗ್ಯಾಸ್ ಸ್ಟವ್ ಬಳಿ ಇಡಬಾರದು. ಏಕೆಂದರೆ ಶಾಖವು ಪ್ಲಾಸ್ಟಿಕ್‌ನ ಕರಗಿಸಿ ಬೆಂಕಿಗೆ ಕಾರಣವಾಗಬಹುದು.

ಮಸಾಲೆಗಳು :

ಅಡುಗೆಗೆ ಸುಲಭವಾಗಿ ಸಿಗುವ ಕಾರಣ ಅನೇಕ ಮಹಿಳೆಯರು ಮಸಾಲೆ ಪಾತ್ರೆಯನ್ನು ಗ್ಯಾಸ್ ಸೇವ್ ಪಕ್ಕದಲ್ಲಿ ಇಡುತ್ತಾರೆ. ಹಾಗೆ ಮಾಡುವುದರಿಂದ ಮಸಾಲೆಗಳ ಗುಣಮಟ್ಟ ಹಾಳಾಗಬಹುದು.

ಸ್ಪ್ರೇ :

ಸ್ಪ್ರೇಗಳಂತಹ ಶುಚಿಗೊಳಿಸುವ ಉತ್ಪನ್ನಗಳನ್ನು ಗ್ಯಾಸ್ ಸ್ಟವ್ ಬಳಿ ಇಡಬಾರದು. ಇದು ಬೆಂಕಿಗೆ ಕಾರಣವಾಗಬಹುದು. ಆದ್ದರಿಂದ, ನೀವು ಈ ವಿಷಯದಲ್ಲಿ ಬಹಳ ಜಾಗರೂಕರಾಗಿರಬೇಕು.

ವಿದ್ಯುತ್ ಉಪಕರಣಗಳು:

ವಿದ್ಯುತ್ ಉಪಕರಣಗಳನ್ನು ತುಂಬಾ ಬಿಸಿಯಾದ ಸ್ಥಳಗಳಲ್ಲಿ ಇಡಬಾರದು. ಏಕೆಂದರೆ ಅತಿಯಾದ ಶಾಖವು ವಿದ್ಯುತ್ ಉಪಕರಣಗಳಿಗೆ ಹಾನಿಯನ್ನುಂಟು ಮಾಡುತ್ತದೆ ಮತ್ತು ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗಬಹುದು.

ಮಸಿ ಬಟ್ಟೆಗಳು:

ಕೆಲವರು ಗ್ಯಾಸ್ ಸ್ಟವ್ ಪಕ್ಕದಲ್ಲಿ ಮಸಿ ಹಿಡಿದ ಬಟ್ಟೆಗಳನ್ನು ಇಡುತ್ತಾರೆ. ಇದರಿಂದ ಕೆಲವೊಮ್ಮೆ ಬೆಂಕಿಯ ಅಪಾಯವಿದೆ. ಆದ್ದರಿಂದ, ಗ್ಯಾಸ್ ಸ್ಟವ್ ಪಕ್ಕದಲ್ಲಿ ಬಟ್ಟೆಗಳನ್ನು ಇಡದಿರುವುದು ಉತ್ತಮ.

DAKSHINA KANNADA

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವ ವಿವಾಹಿತ ಸಾ*ವು

Published

on

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃ*ತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32 ವರ್ಷದ ಭರತ್ ಎಂದು ತಿಳಿದುಬಂದಿದೆ.

ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಕಳೆದ ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃ*ತ ಯುವಕ ಭರತ್ ತಾಯಿ, ಪತ್ನಿ ಹಾಗೂ ಮೂವರು ಸೋದರಿಯರು ಅಗಲಿದ್ದಾರೆ.

Continue Reading

LATEST NEWS

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆಯ ಪ್ರಬಲ ಭೂಕಂಪನ

Published

on

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದ ಘಟನೆ ಇಂದು (ಜು. 10) ಮುಂಜಾನೆ ನಡೆದಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ತಿಳಿಸಿದ್ದು, ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಹೇಳಿದೆ.1 ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

Continue Reading

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading
Advertisement

Trending

Copyright © 2025 Namma Kudla News

You cannot copy content of this page