Connect with us

LATEST NEWS

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ: ಮಾರ್ಗಸೂಚಿ ಬಿಡುಗಡೆ

Published

on

ಬೆಂಗಳೂರು: ದೀಪಾವಳಿ ದಿನಾಂಕ ಸಮೀಪಿಸುತ್ತಿರುವಂತೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.


ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ.

ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.
ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಅಷ್ಟೇ ಅಲ್ಲದೆ, ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ.

ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

LATEST NEWS

ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ಹಾಡಿನ ಮೂಲಕ ಜನ್ಮದಿನದ ಶುಭಾಶಯ ಕೋರಿದ ಅಂಧ ಮಕ್ಕಳು

Published

on

ಮಂಗಳೂರು/ಡೆಹಾರಡೂನ್: 67ನೇ ಜನ್ಮದಿನದ ಸಂಭ್ರಮದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಂಧ ಮಕ್ಕಳು ಹಾಡಿನ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಈ ವೇಳೆ ರಾಷ್ಟ್ರಪತಿ ಮುರ್ಮು ಭಾವುಕರಾಗಿದ್ದಾರೆ.


ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಾಷ್ಟ್ರಪತಿ ದೌಪದಿ ಮುರ್ಮು ಅವರ 67ನೇ ಜನ್ಮದಿನ ಅತ್ಯಂತ ಸ್ಮರಣೀಯವಾಗಿತ್ತು.

ಅಂಧ ವ್ಯಕ್ತಿಗಳ ಸಬಲೀಕರಣದ ರಾಷ್ಟ್ರೀಯ ಸಂಸ್ಥೆಗೆ ರಾಷ್ಟ್ರಪತಿ ಮುರ್ಮು ಅವರು ಶುಕ್ರವಾರ ಭೇಟಿ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಅಲ್ಲಿನ ವಿದ್ಯಾರ್ಥಿಗಳು ‘ಹ್ಯಾಪಿ ಬರ್ತ್ ಡೇ ಟು ಯೂ’ ಎಂಬ ಹಾಡನ್ನು ಹಾಡಿದರು. ಮಕ್ಕಳ ಹಾಡು ಕೇಳಿ ಭಾವುಕರಾದ ಅವರು, ಗಳಗಳನೆ ಅತ್ತರು.

‘ಮಕ್ಕಳು ಎಷ್ಟು ಸುಂದರವಾಗಿ ಹಾಡಿದರೆಂದರೆ ನನಗೆ ಕಣ್ಣೀರು ತಡೆಯಲೇ ಆಗಲಿಲ್ಲ. ಹೃದಯಾಳದ ಆ ಹಾಡು ಕೇಳಿ ಭಾವುಕಳಾದೆ’ ಎಂದು ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್‌ ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟ

‘ಅಂಗವೈಕಲ್ಯತೆಯೊಂದಿಗೆ ಹುಟ್ಟಿದ ಮಕ್ಕಳಿಗೆ ವಿಶೇಷವಾದ ಶಕ್ತಿಯೊಂದು ಇದ್ದೇ ಇರುತ್ತದೆ. ಹೀಗಾಗಿ ಆತ್ಮವಿಶ್ವಾಸದಿಂದ ಮುನ್ನುಡಿ ಇಟ್ಟಲ್ಲಿ ಯಶಸ್ಸು ಸಿಕ್ಕೇ ಸಿಗುತ್ತದೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೂ ಸಮಾನ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರ್ಕಾರವು ಹಲವು ನೀತಿಗಳನ್ನು ರೂಪಿಸಿದೆ’ ಎಂದರು.

Watch video

Continue Reading

FILM

ಲಕ್ಷ್ಮೀ ನಿವಾಸ ಧಾರಾವಾಹಿಯಿಂದ ಹೊರ ನಡೆದ ನಟಿ ಶ್ವೇತಾ; ಕಾರಣವೇನು?

Published

on

ಬೆಂಗಳೂರು/ಮಂಗಳೂರು : ಕೌಟುಂಬಿಕ ಕಥಾಹಂದರ ಹೊಂದಿರುವ ಧಾರಾವಾಹಿ ‘ಲಕ್ಷ್ಮೀ ನಿವಾಸ’. ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಈ ಧಾರಾವಾಹಿಯಿಂದ ಇತ್ತೀಚೆಗಷ್ಟೇ ತನು ಪಾತ್ರಧಾರಿ ಯುಕ್ತಾ ಹೊರ ನಡೆದಿದ್ದರು. ಇದೀಗ ಹಿರಿಯ ನಟಿ ಶ್ವೇತಾ ಧಾರಾವಾಹಿ ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಶ್ವೇತಾ ಈ ಧಾರಾವಾಹಿಯಲ್ಲಿ ಲಕ್ಷ್ಮೀಯಾಗಿ ಕಾಣಿಸಿಕೊಂಡಿದ್ದರು. ಗಂಡನಿಗೆ ಸದಾ ಜೊತೆಯಾಗಿ ನಿಲ್ಲುವ ಪತ್ನಿಯಾಗಿ, ಮಕ್ಕಳ ಹಿತ ಬಯಸುವ ತಾಯಿಯಾಗಿ ಮನೋಜ್ಞ ಅಭಿನಯ ನೀಡುತ್ತಿದ್ದರು. ಆದರೆ, ಇದೀಗ ದಿಢೀರಾಗಿ ಧಾರಾವಾಹಿಯಿಂದ ಹೊರ ಬಂದಿರುವುದು ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ.

ಕಾರಣವೇನು ?

ಧಾರಾವಾಹಿಯಿಂದ ಹೊರಬಂದಿರುವ ವಿಚಾರದ ಬಗ್ಗೆ ನಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವೈಯಕ್ತಿಕ ಕಾರಣ ಹಾಗೂ ತಾಯಿಯ ಅನಾರೋಗ್ಯದಿಂದ ಲಕ್ಷ್ಮೀ ನಿವಾಸದಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ.  ಬಹಳ ದಯೆಯಿಂದ ವರ್ತಿಸಿ ಮತ್ತು ನನ್ನನ್ನು ಸಂಪೂರ್ಣವಾಗಿ ಸ್ವೀಕರಿಸಿದ್ದಕ್ಕಾಗಿ ಕರ್ನಾಟಕಕ್ಕೆ ಧನ್ಯವಾದಗಳು.  ಸೆಟ್‌ನ ಕೆಲವರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ನನ್ನನ್ನು ಮತ್ತೆ ಕನ್ನಡ ಪ್ರೇಕ್ಷಕರಿಗೆ ಪರಿಚಯಿಸಿದಕ್ಕಾಗಿ ಝೀ ಕನ್ನಡ ವಾಹಿನಿಗೆ ಧನ್ಯವಾದಗಳು. ನೀವೆಲ್ಲ  ಅದ್ಭುತ ಮಂದಿ. ಶೀಘ್ರದಲ್ಲೇ ಮತ್ತೆ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಒಂದೇ ಧಾರಾವಾಹಿಯಲ್ಲಿ ತಾಯಿ, ಮಗ, ಮಗಳು; ಲಕ್ಷ್ಮೀ ನಿವಾಸಕ್ಕೆ ಬಂದ ಹೊಸ ನಟಿ ಯಾರು ಗೊತ್ತಾ?

ಲಕ್ಷ್ಮೀಯಾಗಿ ಮಾಧುರಿ ಎಂಟ್ರಿ :

ಶ್ವೇತಾ ಜಾಗಕ್ಕೆ ಮತ್ತೊಬ್ಬ ಹಿರಿಯ ನಟಿಯ ಪ್ರವೇಶವಾಗಿದೆ. ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿ ಜನಮನಸೂರೆಗೊಳಿಸಿದ್ದ ಮಾಧುರಿ, ಲಕ್ಷ್ಮೀಯಾಗಿ ಎಂಟ್ರಿ ಕೊಟ್ಟಿದ್ದಾರೆ . ಜಗ್ಗೇಶ್, ಪ್ರಭಾಕರ್, ದೇವರಾಜ್ ಮೊದಲಾದವರ ಜೊತೆ ನಟಿಸಿರುವ ಮಾಧುರಿ ಕನ್ನಡ ಮಾತ್ರವಲ್ಲದೇ ಹಿಂದಿ ಧಾರಾವಾಹಿಗಳಿಗೂ ಬಣ್ಣ ಹಚ್ಚಿಸಿದ್ದಾರೆ.

Continue Reading

LATEST NEWS

ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿ ನಿಗೂಢ ಸಾವು!

Published

on

ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿ ನಿಗೂಢ ಸಾವನ್ನಪ್ಪಿದ್ದಾಳೆ. ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿನಿ ತಾನ್ಯ ತ್ಯಾಗಿ ಮೃತಪಟ್ಟಿದ್ದು, ಈವರೆಗೂ ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಇನ್ನೂ ವಕೀಲರೊಬ್ಬರು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬವು ಪ್ರಧಾನಿ ಮೋದಿಯವರ ಸಹಾಯವನ್ನು ಕೋರಿದೆ.

ಲಿಂಕ್ಡ್‌ಇನ್ ಪ್ರಕಾರ, ತಾನ್ಯಾ ಅವರು ಕೆನಡಾದ ಆಲ್ಬರ್ಟಾ ವಿಶ್ವವಿದ್ಯಾಲಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಅವರು ಜಯಪೀ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯನ್ನು ಸಹ ಪೂರ್ಣಗೊಳಿಸಿದ್ದಾರೆ. ಈ ಹಿಂದೆ ಡೆಲ್ಲಿಯ ಮೆಟ್ರೋ ಮಾರ್ಟ್ ಸ್ಟೋರ್‌ನಲ್ಲಿ ರಿಟೇಲ್ ಸೇಲ್ಸ್ ಮ್ಯಾನೇಜರ್ ಆಗಿ ತಾನ್ಯ ಕೆಲಸ ಮಾಡುತ್ತಿದ್ದರು. ತಾನ್ಯ ತ್ಯಾಗಿ ಅವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕಾಪು: ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

ತಾನ್ಯ ತ್ಯಾಗಿ, ಈಶಾನ್ಯ ದೆಹಲಿಯ ವಿಜಯ್ ಪಾರ್ಕ್‌ನ ನಿವಾಸಿ. ಅವರು ಕೆನಡಾಕ್ಕೆ ವಿದ್ಯಾಭ್ಯಾಸಕ್ಕಾಗಿ ಹೋಗಿದ್ದರು. ಜೂನ್ 17, 2025 ರಂದು ಹೃದಯಾಘಾತದಿಂದ ನಿಧನರಾದರು. ವಿದ್ಯಾರ್ಥಿನಿಯ ಮೃತದೇಹವನ್ನು ಭಾರತಕ್ಕೆ ತರಲು ಪ್ರಧಾನಿ ಮೋದಿಯವರ ಸಹಾಯವನ್ನು ಕುಟುಂಬ ಕೋರಿದೆ ಎಂದು ಇಶು ತ್ಯಾಗಿ ಹೆಸರಿನ ವಕೀಲರೊಬ್ಬರು ಎಕ್ಸ್‌ನಲ್ಲಿ ಟ್ವೀಟ್‌ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page