Connect with us

DAKSHINA KANNADA

ನಾರಾಯಣ ಗುರು ಜಯಂತಿ ಆಚರಣೆಗೆ ಯಾರ ಅನುಮತಿ ಅಗತ್ಯವಿಲ್ಲ-ಹರಿಕೃಷ್ಣ ಬಂಟ್ವಾಳ

Published

on

ಮಂಗಳೂರು: ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಾಡಲು ನಾವು ಯಾರನ್ನು ಕೇಳಿ ಮಾಡಬೇಕಾಗಿಲ್ಲ. ಬ್ರಹ್ಮಶ್ರೀಗಳು ಒಂದು ಜಾತಿಗೆ ಸೀಮಿತರಾದವರು ಅಲ್ಲ. ಅವರು ಸಮಸ್ತ ಭಾರತದ ಮಾನವ ಕುಲಕ್ಕೆ ಸೇರಿದವರು. ಆದರೆ ಯಾರನ್ನೋ ಕೇಳಿಕೊಂಡು ಅವರ ಜಯಂತಿ ಮಾಡುವ ಅಗತ್ಯ ಇಲ್ಲ. ಅವರ ಸ್ವಾರ್ಥಕ್ಕೋಸ್ಕರ, ಅವರ ರಾಜಕೀಯಕ್ಕೋಸ್ಕರ ಜಯಂತಿ ಮಾಡಲಿ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್‌ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗುರುಬೆಳದಿಂಗಳು ಸೇವಾ ಸಂಸ್ಥೆ ಅಧ್ಯಕ್ಷ ಆರ್ ಪದ್ಮರಾಜ್‌ ಅವರು ನೀಡಿದ ಹೇಳಿಕೆಗೆ ಪದ್ಮರಾಜ್ ಅವರ ಹೆಸರು ಎತ್ತದೇ ಮಾತನಾಡಿ ‘ಈ ವ್ಯಕ್ತಿಗೂ ನಮಗೂ ಸಂಬಂಧವಿಲ್ಲ.

ಇವರ ನಾರಾಯಣ ಗುರುಗಳು ಯಾರು ಎಂದು ಕೂಡಾ ನಮಗೆ ತಿಳಿದಿಲ್ಲ. ಒಂದೇ ಜಾತಿ, ಒಂದೇ ದೇವರು ಎಂದು ಹೇಳಿದ ನಾರಾಯಣ ಗುರು ಯಾವ ಒಂದು ಜಾತಿಯ ಗೋಡೆಯೊಳಗೂ ಇಲ್ಲ.

ಹಿಂದೆ ತಾಲ್ಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತ ನಾರಾಯಣ ಗುರುಗಳ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈ ಬಾರಿ ದ.ಕ ಜಿಲ್ಲೆಯ ಆಡಳಿತಕ್ಕೆ, ಸಿಎಂನ ಆದೇಶದಂತೆ ಅವರ ಜನ್ಮದಿನವನ್ನು ಸಮಸ್ತ ನಾಗರಿಕರ ಸಮ್ಮುಖದಲ್ಲಿ ಮಾಡಬೇಕೆಂದು ಆದೇಶ ಬಂದ ಕಾರಣ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದೇವೆ.

ಅವರು ಜಾತಿಗೆ ಸೀಮಿತವಾದ ದಾರ್ಶನಿಕರೇ ಅಲ್ಲ. ನಮಗೆ ಯಾರಲ್ಲೂ ಕೇಳಿ ಮಾಡುವ ಅಗತ್ಯವಿಲ್ಲ. ಇನ್ನೊಬ್ಬರ ಟೀಕೆ ನಮಗೆ ನಗಣ್ಯ. ನಾವು ವಿವಾದ ಮಾಡುವುದಿಲ್ಲ. ಕಳೆದ ಬಾರಿ ಗಣರಾಜ್ಯೋತ್ಸವ, ಪಠ್ಯಪುಸ್ತಕದಲ್ಲೂ ವಿನಾ ಕಾರಣ ವಿವಾದ ಎಬ್ಬಿಸಿದರು.


ಅಲ್ಲಿ ಕಾಂಗ್ರೆಸ್ಸಿಗರು ಇದ್ದರೆ ವಿನಾಃ ನಾರಾಯಣ ಗುರು ಅನುಯಾಯಿಗಳು ಇರಲಿಲ್ಲ. ಅವರು ಪ್ರತಿಭಟನೆ ಮಾಡುವವರೂ ಅಲ್ಲ.

ಈಗ ಬೇರೆ ವಿಚಾರ ಸಿಗದಿರುವುದಕ್ಕೆ ಜನ್ಮಜಯಂತಿ ವಿಚಾರದಲ್ಲಿ ವಿವಾದ ಎಬ್ಬಿಸಿದ್ದಾರೆ. ಅವರು ಯಾರ ಆಸ್ತಿಯೂ ಅಲ್ಲ. ವಿವಾದ ಹುಟ್ಟಿಸುವವರು ನಮಗೆ ಲೆಕ್ಕಕ್ಕೇ ಇಲ್ಲ. ಇವರ ಆಚರಣೆಗೆ ಸರ್ಕಾರ ಮಂಗಳೂರನ್ನು ಆಯ್ಕೆ ಮಾಡಿಕೊಂಡಿದೆ.

ಮುಂದೆ ಬೇರೆ ಬೇರೆ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಜನ್ಮದಿನೋತ್ಸವ ಆಗುವ ಸೂಚನೆಯಿದೆ. ಅದರಂತೆ ಮಾಡುತ್ತೇವೆ’ ಎಂದು ಹೇಳಿದರು.

ಅದೇನೇ ಆದರೂ ರಾಜ್ಯಮಟ್ಟದಲ್ಲಿ ಸೆಫ್ಟೆಂಬರ್ 10ರಂದು ನಾರಾಯಣ ಗುರು ಜಯಂತಿ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಧಾಕೃಷ್ಣ, ರವಿಶಂಕರ್ ಮಿಜಾರ್‌ ಉಪಸ್ಥಿತರಿದ್ದರು.

 

DAKSHINA KANNADA

ಕಾರ್ಕಳ: ಗೋಶಾಲೆಯಿಂದ 10,000 ರೂ. ಬೆಲೆಯ 3 ದನ ಕಳವು

Published

on

ಕಾರ್ಕಳ: ಗೋಶಾಲೆಯಿಂದ ಮೂರು ದನಗಳನ್ನು ಕಳವು ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಲ್ಲಿ ನಡೆದಿದೆ.

 

ಬಜಗೋಳಿಯಲ್ಲಿ ಅಹಿಂಸಾ ಅನಿಮಲ್‌ ಕೇರ್‌ ಟ್ರಸ್ಟ್‌ ನಡೆಸುತ್ತಿರುವ ಗೋಶಾಲೆಯಿಂದ ಜೂನ್‌ 16ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮೂರು ದನಗಳು ಕಳವಾಗಿವೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

READ IN ENGLISH : https://www.nammakudlaenglish.com/karkala-three-cows-worth-%e2%82%b910000-stolen-from-goshala/

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಕಳವಾದ ದನಗಳ ಮೌಲ್ಯ ಸುಮಾರು 10 ಸಾವಿರ ರೂಪಾಯಿ ಆಗ ಬಹುದೆಂದು ಟ್ರಸ್ಟ್ ಸಂಚಾಲಕ ಎಂ.ಕೆ. ವಿರಂಜಯ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬಜಗೋಳಿಯಲ್ಲಿ ಅಹಿಂಸಾ ಅನಿಮಲ್‌ ಕೇರ್‌ ಟ್ರಸ್ಟ್‌ ಗೋಶಾಲೆಯನ್ನು ನಡೆಸುತ್ತಿದ್ದು, ಇಲ್ಲಿ ಗಾಯಗೊಂಡ, ಕಾಯಿಲೆಗೊಳಗಾದ, ಬೀದಿ ಪಾಲಾದ ಬೆಕ್ಕು, ನಾಯಿ ಮತ್ತು ದನಗಳನ್ನು ತಂದು ಆರೈಕೆ ಮಾಡಲಾಗುತ್ತಿದೆ ಎಂದು ಎಂ.ಕೆ. ವಿರಂಜಯ್‌ ವಿವರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

Published

on

ಮಂಗಳೂರು: ಕಾರೊಂದು ಡಿವೈಡರ್‌ ಗೆ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತ ಪಟ್ಟ ದಾರುಣ ಘಟನೆ ಮಂಗಳೂರಿನ ಜಪ್ಪಿನಮೊಗರು ನಡು ಮೊಗೇರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ (ಜೂ.17) ರಾತ್ರಿ ಸಂಭವಿಸಿದೆ.

ಕದ್ರಿ ಮಲ್ಲಿಕಟ್ಟೆಯ ನಿವಾಸಿ ಅಮನ್ ರಾವ್‌ (23) ಮತ್ತು ಕೊಂಚಾಡಿಯ ಓಂ ಶ್ರೀ ಪೂಜಾರಿ (24) ಮೃತ ಯುವಕರು ಎಂದು ಗುರುತಿಸಲಾಗಿದೆ. ಕಾರು ಡಿವೈಡರಿಗೆ ಢಿಕ್ಕಿಯಾಗಿ ಬಳಿಕ ಮೋರಿಗೆ ಬಡಿದು ಅವಘಡ ಸಂಭವಿಸಿದೆ.

ಓಂ ಶ್ರೀ ಪೂಜಾರಿ ಅವರು ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿದ್ದರು. ಕಾರಿನಲ್ಲಿ 4- 5 ಮಂದಿ ಪ್ರಯಾಣಿಸುತ್ತಿದ್ದು, ಅಮನ್ ರಾವ್‌ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್‌ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

ವಂಶಿ ಮತ್ತು ಅಶಿಕ್‌ಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೊಬ್ಬ ಗೆಳೆಯ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಟ್ರಾಫಿಕ್‌ ದಕ್ಷಿಣ ಠಾಣೆಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.

Continue Reading

DAKSHINA KANNADA

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ

Published

on

ಮಂಗಳೂರು/ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ತಿಳಿಸಿದ್ದಾರೆ.


ದಶಮ ಸಂಭ್ರಮದ ಪ್ರಯುಕ್ತ ಯುಎಇಯ ಏಳು ಮಂದಿ ಸಾಧಕರಿಗೆ ಮತ್ತು ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸಂಘಟನೆ ಕ್ಷೇತ್ರದಲ್ಲಿ ಸರ್ವೋತ್ತಮ ಶೆಟ್ಟಿ, ಕಲಾ ಪೋಷಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಉದ್ಯಮ ಕ್ಷೇತ್ರದಲ್ಲಿ ಪುತ್ತಿಗೆ ವಾಸುದೇವ ಭಟ್, ಸಮಾಜ ಸೇವಾ ಕ್ಷೇತ್ರದಲ್ಲಿ ಬಾಲಕೃಷ್ಣ ಸಾಲಿಯಾನ್, ಮಾಧ್ಯಮ ಕ್ಷೇತ್ರದ ಬಿ. ಕೆ. ಗಣೇಶ ರೈ, ನಾಟಕ ಕ್ಷೇತ್ರದಲ್ಲಿ ಡೋನಿ ಕೊರೆಯಾ, ಭರತನಾಟ್ಯ ಕ್ಷೇತ್ರದಲ್ಲಿ ರೂಪ ಕಿರಣ್ ಹಾಗೂ ಶ್ರೀ ರಾಜರಾಜೇಶ್ವರಿ ಭಜನಾ ತಂಡ, ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯನ್ನು ಗೌರವಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page