Connect with us

LATEST NEWS

ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದ ಸುಪ್ರೀಂ ಕೋರ್ಟ್‌

Published

on

ನವದೆಹಲಿ: ಶರ್ಮಾ ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.


ಪ್ರವಾದಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿ ಶರ್ಮಾ ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ಜೆ.ಬಿ. ಪರ್ದಿವಾಲಾ ಅವರಿದ್ದ ಪೀಠ, ಮನವಿಯನ್ನು ತಿರಸ್ಕರಿಸಿದ್ದು, ಅರ್ಜಿ ಹಿಂಪಡೆಯಲು ಕಾಲಾವಕಾಶ ನೀಡಿದೆ.
ದೇಶಾದ್ಯಂತ ಆಕೆ ಭಾವನೆಗಳನ್ನು ಪ್ರಚೋದಿಸಿರುವ ರೀತಿಗೆ ಆಕೆ ಹೊಣೆಗಾರರಾಗಿದ್ದು, ರಾಷ್ಟ್ರದಾದ್ಯಂತ ಆಗುತ್ತಿರುವ ಬೆಳವಣಿಗೆಗಳಿಗೆ ಆಕೆಯೇ ಏಕಮಾತ್ರ ಜವಾಬ್ದಾರಿಯಾಗಿದ್ದಾರೆ. ಚರ್ಚೆಯಲ್ಲಿ ಆಕೆ ಹೇಗೆ ಪ್ರಚೋದನೆ ನೀಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ.

ಇದೆಲ್ಲವನ್ನೂ ಹೇಳಿದ ನಂತರ ತಾನು ಓರ್ವ ವಕೀಲೆ ಎಂದು ಅವರು ಹೇಳಿದ್ದಾರೆ ಎಂಬುದನ್ನು ಕೇಳಿದೆವು. ಇದು ನಾಚಿಕೆಗೇಡು. ಆಕೆ ಇಡೀ ದೇಶದ ಕ್ಷಮೆ ಕೋರಬೇಕು” ಎಂದು ನ್ಯಾ. ಸೂರ್ಯಕಾಂತ್‌ ಹೇಳಿದರು.

LATEST NEWS

ಅಕ್ರಮ ಎಮ್ಮೆ ಸಾಗಾಟದ ಟೆಂಪೋ ಪಲ್ಟಿ ಪ್ರಕರಣ: ಆರೋಪಿಗಳಿಬ್ಬರಿಗೆ ಗಾಯ, ಓರ್ವ ಪರಾರಿ

Published

on

ಉಡುಪಿ: ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟೆಂಪೊವೊಂದು ಮಗುಚಿ ಬಿದ್ದ ಪರಿಣಾಮ ಎರಡು ಎಮ್ಮೆಗಳು ಗಾಯಗೊಡಿದ್ದು, ಇದೀಗ ಗಾಯಗೊಂಡಿರುವ ಆರೋಪಿಗಳಿಬ್ಬರನ್ನು ಅಂಬಾಗಿಲು ಜಂಕ್ಷನ್ ಬಳಿ ಫೆ.9 ರ ಬೆಳಗಿನ ಜಾವ ನಡೆದಿತ್ತು.

ಗಾಯಗೊಂಡ ಆರೋಪಿಗಳನ್ನು ಶೀತಲ್ ಗಣಪತಿ ಬಾಗಣ್ಣರ ಹಾಗೂ ಯಮನಪ್ಪ ರಮೇಶ್ ಅರ್ಜುನ ವಾಡ ಎಂದು ಗುರುತಿಸಲಾಗಿದೆ. ಪರಶು ಎಂಬ ಮತ್ತೋರ್ವ ಆರೋಪಿ ಓಡಿ ಪರಾರಿಯಾಗಿದ್ದಾನೆ. ಟೆಂಪೋದಲ್ಲಿದ್ಞ ಎರಡು ಎಮ್ಮೆಗಳು ತೀವ್ರ ಗಾಯಗೊಂಡಿವೆ.

ಇದನ್ನೂ ಓದಿ : ಉಡುಪಿ: ಅಕ್ರಮ ಕೋಣ ಸಾಗಾಟ ಮಾಡುತ್ತಿದ್ದ ವಾಹನ ಅಪಘಾತ

ಅಕ್ರಮವಾಗಿ ಎಮ್ಮೆಗಳನ್ನು ಸಂಕೇಶ್ವರದಿಂದ ಮಂಗಳೂರಿಗೆ ಸಾಗಿಸುತ್ತಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಟೆಂಪೊ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಗಾಯಾಳು ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ : ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬಶೀರ್ ಕಣ್ಣೂರು ಆಯ್ಕೆ

Published

on

ಮಂಗಳೂರು : ಅನ್‌ಲೈನ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆ ನಡೆದಿತ್ತು. ಅದರಲ್ಲಿ 9035 ಮತ ಪಡೆಯುವ ಮೂಲಕ ಮುಹಮ್ಮದ್ ಬಶೀರ್ ಕಣ್ಣೂರು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಶೀರ್ ಕಣ್ಣೂರು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬೀಯಿಂಗ್ ಹ್ಯೂಮನ್ ಫೌಂಡೇಶನ್‌ನ ಮಂಗಳೂರು ನಗರ ಅಧ್ಯಕ್ಷರಾಗಿ, ಮಂಗಳೂರು ಬ್ಯಾರಿ ಸೆಂಟ್ರಲ್ ಕಮಿಟಿಯ ಸದಸ್ಯರಾಗಿ, ಮೇಕ್ ಎ ಚೇಂಜ್‌ನ ಸಹ ಸ್ಥಾಪಕರಾಗಿರುವ ಬಶೀರ್ ಪ್ರಸ್ತುತ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದಾರೆ.

 

Continue Reading

DAKSHINA KANNADA

ಮಂಗಳೂರು : ಮಾದಕ ವಸ್ತು ಮಾರಾಟಕ್ಕೆ ಯತ್ನ; 6 ಜನರ ಬಂಧನ

Published

on

ಮಂಗಳೂರು: ಎಂಡಿಎಂಎ ಎಂಬ ನಿಷೇಧಿತ ಮಾದಕ ವಸ್ತುವಿನ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಸಹಿತ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಪಾಂಡೇಶ್ವರ ಗ್ರೀನ್‌ಲ್ಯಾಂಡ್ ಲೇಔಟ್ ನಿವಾಸಿ ಧನಿಶ್ ಡಿ. ಕಾಂಚನ್ (19), ಪಾಂಡೇಶ್ವರ ನಿವಾಸಿ ಪೃಥ್ವಿಕ್ (18), ಬಾವುಟಗುಡ್ಡ ನಿವಾಸಿ ಫೈಜ್ ಅಂಬರ್ (23), ಜಲ್ಲಿಗುಡ್ಡೆ ನಿವಾಸಿ ತುಷಾನ್ ಡಿ. ಸುವರ್ಣ (19), ಫಳ್ನೀರ್ ನಿವಾಸಿ ರಾಜಿನ್ (21), ಫಳ್ನೀರ್ ಸ್ಟರಕ್ ರೋಡ್ ನಿವಾಸಿ ಅಫ್ಘಾನ್ (20) ಎಂದು ಗುರುತಿಸಲಾಗಿದೆ.

 

ಇದನ್ನೂ ಓದಿ : ಮಕ್ಕಳ ಕಿಡ್ನ್ಯಾಪಿಗೆ ಯತ್ನ; ದೂರು ದಾಖಲು

 

ಮಂಗಳೂರಿನ ಫಳ್ನೀರ್ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಫೆ.8 ರಂದು ಸಂಜೆ 5:30ಕ್ಕೆ ಕಾರು ಮತ್ತು ದ್ವಿಚಕ್ರ ವಾಹನದಲ್ಲಿ 6 ಮಂದಿ ಯುವಕರು ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ದೊರಕಿತ್ತು. ಈ ಆಧಾರದ ಮೇಲೆ ಬಂದರು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಪಲೀಸರು ಆರೋಪಿಗಳ ವಾಹನವನ್ನು ಅಡ್ಡಗಟ್ಟಿ ಬಂಧಿಸಿ 20.52ಗ್ರಾಂ ಎಂಡಿಎಂಎ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಲ್ಲದೆ ಕೃತ್ಯಕ್ಕೆ ಬಳಸಿದ್ದ ಕಾರು, ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page