Connect with us

BANTWAL

ಅಧಿಕಾರಿಗಳು 24 ಗಂಟೆಯೂ ಸಾರ್ವಜನಿಕರ ಕರೆ ಸ್ವೀಕರಿಸಬೇಕು-ಶಾಸಕ ರಾಜೇಶ್ ನಾಯ್ಕ್‌

Published

on

ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಕೆಲಸಗಳು ಆಗಬೇಕು , ಆ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಹೊಂದಾಣಿಕೆಯಿಂದ ಕೆಲಸ ಮಾಡಿ, ಟಾಸ್ಕ್ ಫೋರ್ಸ್‌ ಸಮಿತಿಯ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರು ಶಾಸಕರ ಕಚೇರಿಯಲ್ಲಿ ಗೂಗಲ್ ಮೀಟಿಂಗ್ ನಡೆಸಿ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಕೆಲವು ದಿನಗಳಿಂದ ಮಳೆಯಿಂದ ತೀವ್ರ ಹಾನಿಗಳು ಸಂಭವಿಸುವ ಹಿನ್ನೆಲೆಯಲ್ಲಿ ತಾಲೂಕಿನ ಅಧಿಕಾರಿಗಳು ಅಯಾಯ ಗ್ರಾಮದಲ್ಲಿ ಇರಬೇಕು ಎಂಬ ಉದ್ದೇಶದಿಂದ ಶಾಸಕರು ಕಚೇರಿಯಲ್ಲಿ ತಹಶೀಲ್ದಾರ್ ಸ್ಮಿತಾರಾಮು, ಹಾಗೂ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಅವರ ಉಪಸ್ಥಿತಿ ಯಲ್ಲಿ ತಾಲೂಕಿನ ಪಿ.ಡಿ.ಒ.ಗಳಿಗೆ ಹಾಗೂ ಅಧ್ಯಕ್ಷ ಉಪಾಧ್ಯಕ್ಷ , ಕಂದಾಯ ಇಲಾಖೆಯ ಅಧಿಕಾರ ಗಳ ಜೊತೆ ಗೂಗಲ್ ಮೀಟಿಂಗ್ ನಡೆಸಿ ಅವರ ಸಮಸ್ಯೆಗಳ ಮಾಹಿತಿ ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು.


39 ಗ್ರಾಮ ಪಂಚಾಯತ್ ಗಳಲ್ಲಿ ಮನೆಗಳಿಗೆ ಹಾನಿಯಾಗುವ ಸಂಭವವು ಕಂಡು ಬಂದಲ್ಲಿ ತುರ್ತಾಗಿ ಮನೆಯಲ್ಲಿರುವ ಕುಟುಂಬಗಳನ್ನು ಸ್ಥಳಾಂತರ ಮಾಡುವ ಕೆಲಸ ಆರಂಭಿಕ ಹಂತದಲ್ಲಿ ಮಾಡಬೇಕು ಎಂದು ತಿಳಿಸಿದರು.

ಸ್ಥಳಾಂತರ ಮಾಡಲು ಒಪ್ಪದ ಕುಟುಂಬಗಳು ಇದ್ದಲ್ಲಿ ಪೊಲೀಸರ ಮೂಲಕ ಅವರ ಮನವೊಲಿಸಿ ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರ ಮಾಡುವ ಕೆಲಸ ಮಾಡಬೇಕು.

ತಾಲೂಕಿನ ಎಲ್ಲಾ ಗ್ರಾ.ಪಂ.ಗಳು ಪಂಜಿಕಲ್ಲು ಗ್ರಾಮ ಪಂಚಾಯತ್ ಅವರ ಮಾದರಿಯಲ್ಲಿ ತಂಡ ರಚನೆ ಮಾಡಿ ಸಮಸ್ಯೆ ಗಳಿಗೆ ಸ್ಪಂದಿಸುವ ಕೆಲಸ ಮಾಡಿ ಎಂದು ಅವರು ಸಲಹೆ ನೀಡಿದರು. ತಾಲೂಕಿನ ಪ್ರತಿ ಶಾಲಾ ಕಟ್ಟಡದ ಮೇಲೆ ನಿಗಾವಹಿಸಿ, ಕಟ್ಟಡದ ಸಮಸ್ಯೆ ಗಳು ಇದ್ದಲಿ ಅಂತಹ ಶಾಲೆಯ ಮಕ್ಕಳನ್ನು ಸುರಕ್ಷಿತ ಕೊಠಡಿಗಳಿಗೆ ಸ್ಥಳಾಂತರ ಮಾಡುವ ಕೆಲಸ ಶಿಕ್ಷಣ ಬಿ.ಇ.ಒ.ಜ್ಞಾನೇಶ್ ಅವರು ಮಾಡಬೇಕು ಎಂದು ಸೂಚನೆ ನೀಡಿದರು.

ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ನಡೆದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳಿಗೆ ಶೀಘ್ರವಾಗಿ ಮಾಹಿತಿ ನೀಡುವ ಕೆಲಸ ಮಾಡಿ, ಅದರ ನಷ್ಟ ಹಾಗೂ ಇತರ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ನೀಡುವಂತೆ ಅವರು ಸೂಚಿಸಿದರು. ನದಿ ತೀರದ ಪ್ರದೇಶಗಳಲ್ಲಿ ನೀರಿನ ಹರಿವು ಹೆಚ್ಚಳವಾದಲ್ಲಿ ಅಂತಹ ಮನೆಯ ಸದಸ್ಯರ ನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡುವಂತೆ ತಹಶೀಲ್ದಾರ್ ಸ್ಮಿತಾರಾಮು ತಿಳಿಸಿದರು. ಜೊತೆಗೆ ಅಂತಹ ಮನೆಗಳಿಗೆ ಮುಂಜಾಗ್ರತಾ ಕ್ರಮವಾಗಿ ನೋಟೀಸ್ ಕೂಡ ಜಾರಿ ಮಾಡಬೇಕು ಎಂದು ಪಿ.ಡಿ.ಒ.ಗಳಿಗೆ ಸಲಹೆ ನೀಡಿದರು.

ಹಾನಿಯಾಗುವ ಪ್ರದೇಶಗಳು ಹಾಗೂ ಕ್ರಮಗಳು

ಅಮ್ಮುಂಜೆ ಕಿದೆಪಡ್ಪು ಎಂಬಲ್ಲಿ ಗುಡ್ಡ ಜರಿದು ಎರಡು ಮನೆಗಳಿಗೆ ಹಾನಿಯಾಗಿ ಬೀಳುವ ಹಂತದಲ್ಲಿ ರುವುದರಿಂದ ಅ ಎರಡು ಮನೆಯ ಸದಸ್ಯರುಗಳುನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅಲ್ಲಿನ ಗ್ರಾಮಪಂಚಾಯತ್ ಅಧ್ಯಕ್ಷ ರು ಮೂಡಬಿದಿರೆ ಹೆದ್ದಾರಿಯ ರಾಯಿ -ಕುದ್ಕೋಳಿ ರಸ್ತೆಯ ಮಧ್ಯೆ ಅಣ್ಣಳಿಕೆ ಎಂಬಲ್ಲಿ ಚರಂಡಿ ಹೂಳೆತ್ತುವ ಕಾರ್ಯ ಮಾಡದೆ ಇರುವ ಕಾರಣ ರಸ್ತೆಯಲ್ಲಿ ನೀರು ತುಂಬಿದೆ ಎಂದು ರಾಯಿ ಗ್ರಾ.ಪಂ.ನ ದೂರಿನ ಹಿನ್ನೆಲೆಯಲ್ಲಿ ನಾಳೆ ಚರಂಡಿ ಹೂಳೆತ್ತುವ ಕಾರ್ಯ ಮಾಡಲು ಶಾಸಕರು ಪಿ.ಡಬ್ಲೂ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟತ್ತಿಲ ಎಂಬಲ್ಲಿ ನಿರ್ಮಿಸಿದ ಚೆಕ್ ಡ್ಯಾಂನಿಂದ ಅಲ್ಲಿ ಸುತ್ತಲೂ ಮಣ್ಣು ಹಾಕದ ಹಿನ್ನೆಲೆಯಲ್ಲಿ ಶಾಲೆಗೆ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಮಣ್ಣು ಹಾಕುವಂತೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಅವರಿಗೆ ಶಾಸಕರು ಸೂಚಿಸಿದರು.

ತುಂಬೆ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ಓವರ್ ಬ್ರಿಡ್ಜ್ ನ ಕಬ್ಬಿಣ ತುಕ್ಕು ಹಿಡಿದು ಬೀಳುವ ಹಂತದಲ್ಲಿದ್ದು ಈ ಬಗ್ಗೆ ಗಮನ ಹರಿಸಲು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಹೆದ್ದಾರಿಯಲ್ಲಿ ನಿತ್ಯ ಸಂಚಾರಕ್ಕೆ ಅಡಚಣೆ ಒಂದೆಡೆಯಾದರೆ, ಗೋಳ್ತಮಜಲು ಗ್ರಾಮಪಂಚಾಯತ್ ಕಚೇರಿ ಹಾಗೂ ಕುದ್ರೆಬೆಟ್ಟು ಅಯ್ಯಪ್ಪ ಮಂದಿರ ಸಹಿತ ಅನೇಕ ಮನೆ ಹಾಗೂ ಅಂಗಡಿಗಳಿಗೆ ಹಾನಿಯಾಗುವ ಸಂಭವಿದೆ ಎಂಬ ದೂರಿಗೆ ಸ್ಪಂದಿಸಿಸದ ಶಾಸಕರು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ನ್ನು ಸ್ಥಳಕ್ಕೆ ಕರೆದು ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಇದರ ಜೊತೆಯಲ್ಲಿ ಅನೇಕ ಸಣ್ಣ ಪುಟ್ಟ ಸಮಸ್ಯೆ ಗಳಿಗೆ ಶಾಸಕರು ಸ್ಥಳದಿಂದಲೇ ಅಧಿಕಾರಿಗಳ ಜೊತೆ ಪೋನ್ ಮೂಲಕ ಸಂಪರ್ಕ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು.

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

BANTWAL

ಸ್ಕೂಟರಿಗೆ ಢಿ*ಕ್ಕಿ ಹೊಡೆದ KSRTC ಬಸ್; ಸವಾರ ಸಾ*ವು

Published

on

ಬಂಟ್ವಾಳ: ಕೆ.ಎಸ್.ಆ‌ರ್.ಟಿ.ಸಿ ಬಸ್ಸು ಓವ‌ರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿ*ಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ಪಾಣೆಮಂಗಳೂರಿನ ನೆಹರೂನಗರದಲ್ಲಿ ತಡರಾತ್ರಿ ನಡೆದಿದೆ.


ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃ*ತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಬಿರುಗಾಳಿ; 25 ಮಂದಿ ಬಲಿ

ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಡಿ*ಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಲಾರಿಗಳು ಪರಸ್ಪರ ಡಿಕ್ಕಿಯಾಗಿ ಪಲ್ಟಿ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಸಾ*ವು

Published

on

ಬಂಟ್ವಾಳ: ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾ*ವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಬಳಿ ಗುರುವಾರ ನಡೆದಿದೆ.

ಮೃತರನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಕ್ಲೀನರ್ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪ*ಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜೀಪನಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಡಾಮರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.​​​​​

ಅಪ*ಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ಟಿಪ್ಪರ್ ಲಾರಿಗಳು ಪಲ್ಟಿಯಾಗಿ ರಸ್ತೆಯ ಬದಿಯಲ್ಲಿರುವ ಅಡಿಕೆ ತೋಟದಲ್ಲಿ ಪಲ್ಟಿಯಾಗಿ ಬಿದ್ದಿದೆ. ಟಿಪ್ಪರ್‌ನಲ್ಲಿ ಸಂಗ್ರಹಿಸಲಾದ ಜಲ್ಲಿಕಲ್ಲು ಮಿಶ್ರಿತ ಬಿಸಿ ಡಾಮಾರು ಕೆಂಪು ಕಲ್ಲು ತುಂಬಿದ ಲಾರಿಯ ಚಾಲಕನ ಮೇಲೆ ಚೆಲ್ಲಿದ ಕಾರಣ ಅವರ ಮೈ ಸಂಪೂರ್ಣ ಬೆಂದು ಹೋಗಿದೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಫೀಕ್ ಜೊತೆಗಿದ್ದ ಕ್ಲೀನರ್ ಯೂಸುಫ್ ಅವರ ಮೇಲೂ ಬಿಸಿ ಡಾಮಾರು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರ ಆತ್ಮಹ*ತ್ಯೆ ಪ್ರಕರಣ; ಎಸ್ಪಿ ಡಾ. ಅರುಣ್‌ ಹೇಳಿದ್ದೇನು?

ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ.ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page