Connect with us

LATEST NEWS

ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಸಾವು..!

Published

on

ತಿರುವನಂತಪುರಂ: ಒಂದೂವರೆ ವರ್ಷದ ಪುಟ್ಟ ಕಂದಮ್ಮನ ಗಂಟಲಲ್ಲಿ ಚಕ್ಕುಲಿ ಸಿಲುಕಿ ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ವಿಜೇಶ್ ಹಾಗೂ ದಿವ್ಯಾ ದಾಸ್ ಎಂಬವರ ಅವಳಿ ಮಕ್ಕಳಲ್ಲಿ ಒಬ್ಬನಾದ ವೈಷ್ಣವ್ ಮೃತಪಟ್ಟ ಮಗು. ಆಟ ಆಡಿಕೊಂಡಿದ್ದ ಒಂದೂವರೆ ವರ್ಷದ ಪುಟ್ಟ ಮಗು ಆಡುತ್ತಾ ಆಡುತ್ತಾ ಚಕ್ಕುಳಿಯನ್ನು ಬಾಯಿಗೆ ಹಾಕಿದೆ. ಆದರೆ ಈ ಚಕ್ಕುಲಿ ಆ ಮಗುವಿನ ಗಂಟಲಲ್ಲಿ ಸಿಲುಕಿ ಉಸಿರಾಡಲು ಆಗದೆ ಒದ್ದಾಡುತ್ತಿತ್ತು. ಈ ಕೂಡಲೆ ಮಗುವನ್ನು ಪೋಷಕರು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರ ವೇಳೆಗೆ ಮಗು ಕೊನೆಯುಸಿರೆಳೆದಿದೆ. ಇದೀಗ ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲೇರಿದೆ.

 

LATEST NEWS

ಮಮ್ಮುಟ್ಟಿ ಹೆಸರಿನಲ್ಲಿ ಮೋಹನ್‌ಲಾಲ್ ವಿಶೇಷ ಪೂಜೆ: ಏನಿದು ವಿವಾದ ?

Published

on

ಮಂಗಳೂರು/ತಿರುವನಂತಪುರ: ಮಲಯಾಳಂ ನಟ ಮೋಹನ್ ಲಾಲ್ ಅವರು ಮಾ.18ರಂದು ಮಮ್ಮುಟ್ಟಿ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.


ನಟ ಮಮ್ಮುಟಿ ಆರೋಗ್ಯ ಸಮಸ್ಯೆಯಲ್ಲಿದ್ದಾರೆಂದು ವರದಿ ಬಂದ ಬೆನ್ನಲ್ಲೇ ನಟ ಮೋಹನ್ ಲಾಲ್ ಶಬರಿಮಲೆಗೆ ತೆರಳಿ ವಿಶೇಷ ಉಷಃ ಪೂಜೆಯೆಂಬ ಸೇವೆಯನ್ನು ಮಮ್ಮುಟ್ಟಿಗಾಗಿ ನಡೆಸಿದ್ದರು.

ಅಷ್ಟಕ್ಕೂ ವಿವಾದಕ್ಕೆ ಕಾರಣವಾಗಿದ್ದು, ದೇಗುಲವು ನೀಡಿದ್ದ ರಸೀದಿಯಲ್ಲಿ ಮಮ್ಮುಟ್ಟಿ ಅವರ ಹೆಸರನ್ನು ಮಹಮ್ಮದ್ ಕುಟ್ಟಿ ಎಂದು ನಮೂದಿಸಲಾಗಿತ್ತು. ಪೂಜೆ ಸೇವಾ ರಶೀದಿ ಸಹಿತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕೆಲವರು ಮಮ್ಮುಟ್ಟಿ ಅವರು ಇಸ್ಲಾಂ ಸಮುದಾಯಕ್ಕೆ ಸೇರಿದವರು. ಅವರ ಹೆಸರಿನಲ್ಲಿ ಹಿಂದೂ ದೇಗುಲದಲ್ಲಿ ಪೂಜೆ ಮಾಡಿಸಲಾಗಿದೆ ಎಂದು ತಕರಾರು ಎತ್ತಿದ್ದಾರೆ.

ಈ ಬಗ್ಗೆ ಕೇರಳದ ಪ್ರಮುಖ ರಾಜಕೀಯ ವಿಶ್ಲೇಷಕ, ಮಾಧ್ಯಮ ಪ್ರತಿನಿಧಿಯಾದ ಹಿರಿಯ ಪತ್ರಕರ್ತ ಓ. ಅಬ್ದುಲ್ಲಾ ಅವರು, ಮಮ್ಮುಟ್ಟಿಯ ಅನುಮತಿ ಇಲ್ಲದೇ ಮೋಹನ್ ಲಾಲ್ ತನ್ನಿಚ್ಛೆಯಂತೆ ಪೂಜೆ ನಡೆಸಿರಲಾರರು. ಮುಮ್ಮುಟ್ಟಿಯ ಅರಿವಿನಿಂದಲೇ ಪೂಜೆ ನಡೆಸಿದ್ದಾದರೆ ಮಮ್ಮುಟ್ಟಿ ಕ್ಷಮೆಯಾಚಿಸಬೇಕು. ಅದು ನಟನ ಕಡೆಯಿಂದ ಆದ ಗಂಭೀರ ಲೋಪ. ಮಮ್ಮುಟ್ಟಿ ಅವರ ಅರಿವಿಗೆ ಬಾರದೆ ಮೋಹನ್ ಲಾಲ್ ಪೂಜೆ ಮಾಡಿದ್ದರೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ಮೋಹನ್ ಲಾಲ್ ಅವರ ಅಯ್ಯಪ್ಪನ ಮೇಲಿನ ನಂಬಿಕೆಯನ್ನು ಸೂಚಿಸುತ್ತದೆ. ಆ ನಂಬಿಕೆ ಆಧಾರದ ಮೇಲೆ ಅವರು ಪೂಜೆ ಮಾಡಿರಬಹುದು.

ಆದಾಗ್ಯೂ, ಮಮ್ಮುಟ್ಟಿ ಅವರ ಸೂಚನೆಯಂತೆ ಪೂಜೆಯನ್ನು ಸಲ್ಲಿಸಿದ್ದರೆ, ಅದು ದೊಡ್ಡ ಅಪರಾಧ. ಏಕೆಂದರೆ ಇಸ್ಲಾಂ ನಂಬಿಕೆಗಳ ಪ್ರಕಾರ, ಮುಸಲ್ಮಾನನಿಗೆ ಅಲ್ಲಾಹುವಲ್ಲದೇ ಅನ್ಯ ದೇವರಿಲ್ಲ. ಈ ಕುರಿತು ಮಮ್ಮುಟ್ಟಿ ತನ್ನ ಸಮುದಾಯಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

ಅಸಮಾಧಾನ ವ್ಯಕ್ತಪಡಿಸಿದ ಮೋಹನ್‌ಲಾಲ್
ವಿಶೇಷ ಪೂಜೆ ಕುರಿತ ರಸೀದಿಯನ್ನು ದೇಗುಲದ ಕೆಲವು ಅಧಿಕಾರಿಗಳೇ ಬಹಿರಂಗಪಡಿಸಿದ್ದಾರೆ ಎಂದು ಮೋಹಾನ್‌ಲಾಲ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ತಿರುವಾಂಕೂರು ದೇವಸ್ವಂ ಮಂಡಳಿಯು,”ನಮ್ಮ ಕಡೆಯಿಂದ ರಸೀದಿಯು ಬಹಿರಂಗಗೊಂಡಿಲ್ಲ” ಎಂದು ಸ್ಪಷ್ಟನೆ ನೀಡಿದೆ.

Continue Reading

LATEST NEWS

SSLC ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published

on

ಬೆಳಗಾವಿ: SSLC ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ದೀಪಿಕಾ ಬಡಿಗೇರ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ SSLC ವಿದ್ಯಾಭ್ಯಾಸ ಮಾಡುತ್ತಿದ್ದಳು.

ಮಾ.25ರಂದು ಎಸ್ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಕಡಿಮೆ ಅಂಕ ಬರಬಹುದು ಎಂಬ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ದೀಪಿಕಾಳ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Continue Reading

LATEST NEWS

ಬದಲಾಗಲಿದೆ ಬ್ಯಾಂಕ್ ಸೇವೆಗಳು; RBI ಹೊಸ ರೂಲ್ಸ್

Published

on

ಮಂಗಳೂರು/ನವದೆಹಲಿ : ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತರಲಿದೆ. ಮೇ 1 ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಎಟಿಎಂ ಕ್ಯಾಶ್ ವಿತ್‌ಡ್ರಾಶುಲ್ಕ ಹೆಚ್ಚಳ ಸೇರಿದಂತೆ ಹಲವು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಎಟಿಎಂಗಳಿಂದ ಹಣ ವಿತ್‌ಡ್ರಾ ಮಾಡುವ ಸೇವಾ ಶುಲ್ಕವನ್ನು 2 ರೂ.ಗೆ ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಿದೆ. ಈ ಹಿಂದೆ ಪ್ರತಿ ವಹಿವಾಟಿಗೆ 17 ರೂ. ವಿಧಿಸಲಾಗಿತ್ತು. ಇನ್ನು ಮುಂದಕ್ಕೆ 19 ರೂಪಾಯಿ ಪಾವತಿಸಬೇಕಾಗುತ್ತದೆ.ಎಟಿಎಂ ಇಂಟರ್‌ಚೇಂಜ್ ಶುಲ್ಕ ಅಂದರೆ ಎಟಿಎಂ ಸೇವೆ ಒದಗಿಸುವುದಕ್ಕಾಗಿ ಒಂದು ಬ್ಯಾಂಕ್ ಮತ್ತೊಂದು ಬ್ಯಾಂಕ್‌ಗೆ ವಿಧಿಸುವ ಶುಲ್ಕವಾಗಿದೆ.

ನಿಗದಿತ ಮಿತಿಯನ್ನು ಮೀರಿ ಹೆಚ್ಚು ಬಾರಿ ವಿತ್‌ ಡ್ರಾ ಮಾಡಿದರೆ ಆಗ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿದ್ದು, ಇದನ್ನು 1 ರಿಂದ 2 ರೂ.ವರೆಗೆ ಹೆಚ್ಚಳ ಮಾಡಲಾಗುತ್ತಿದೆ. ಅಕೌಂಟ್ಸ್ ಬ್ಯಾಲೆನ್ಸ್ ಪರಿಶೀಲನೆ ಸೇರಿದಂತೆ ನಾನ್ ಟ್ರಾನ್ಸಾಕ್ಷನ್ ಶುಲ್ಕ 6 ರೂ. ಇದ್ದುದು 7 ರೂ. ವರೆಗೆ ಆಗಲಿದೆ ಎಂದು ತಿಳಿದುಬಂದಿದೆ.

ಮಿನಿಮಮ್ ಬ್ಯಾಲೆನ್ಸ್ ಶುಲ್ಕವನ್ನೂ ಪರಿಷ್ಕರಿಸಲಾಗುತ್ತಿದ್ದು, ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಯಮ ಜಾರಿಗೆ ಬರುವ ಸಾಧ್ಯತೆಗಳಿವೆ.

ಸೇವಿಂಗ್ಸ್ ಬ್ಯಾಂಕ್ ಅಕೌಂಟ್ಸ್‌ನಲ್ಲಿ 100 ರೂ ಇದ್ದವರಿಗೂ ಶೇ.4, 1 ಲಕ್ಷ ಇಟ್ಟವರಿಗೂ ಅಷ್ಟೇ  ಬಡ್ಡಿದರ ಸಿಗುತ್ತದೆ. ಈ ನಿಯಮದಲ್ಲೂ ಬದಲಾವಣೆ ಮಾಡುವ ಯೋಜನೆ ಇದ್ದು, ಹೆಚ್ಚು ಹಣಕ್ಕೆ ಹೆಚ್ಚು, ಕಡಿಮೆ ಹಣಕ್ಕೆ ಕಡಿಮೆ ಬಡ್ಡಿದರ ನಿಗದಿ ಮಾಡಲಾಗುತ್ತಿದೆ.

ಇದನ್ನೂ ಓದಿ : ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

ಎಸ್‌ಬಿಐ, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮೊದಲಾದ ಪ್ರಮುಖ ಬ್ಯಾಂಕ್‌ಗಳು ತಮ್ಮ ವಿಸ್ತಾರ ಕ್ರೆಡಿಟ್ ಕಾರ್ಡ್‌ಗಳ ನಿಯಮದಲ್ಲಿ ಬದಲಾವಣೆ ಮಾಡುತ್ತಿವೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page