Connect with us

LATEST NEWS

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

Published

on

ಮಂಗಳೂರು/ಬೆಂಗಳೂರು: ಆಪರೇಷನ್ ಸಿಂಧೂರ್ ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಇದರ ಮಧ್ಯ ಇದೀಗ ಕರ್ನಾಟಕದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಇದನ್ನೂ ಓದಿ: ಪಾಕ್‌ನಿಂದ ಶೆಲ್ ದಾಳಿ; ಭಾರತೀಯ ಯೋಧ ಹುತಾತ್ಮ

ಇದರ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ.

LATEST NEWS

ಬದಲಾಯ್ತು ಗೂಗಲ್ ಲೋಗೋ; 10 ವರ್ಷಗಳ ಬಳಿಕ ಆಧುನಿಕ ಟಚ್

Published

on

ನವದೆಹಲಿ: ಸುಮಾರು 10 ವರ್ಷಗಳ ನಂತರ ಗೂಗಲ್ ಮತ್ತೊಮ್ಮೆ ತನ್ನ ಐಕಾನಿಕ್ ‘G’ ಲೋಗೋವನ್ನು ಬದಲಾಯಿಸಿದೆ.

2015 ರಲ್ಲಿ, ಗೂಗಲ್ ತನ್ನ ಕ್ಲಾಸಿಕ್ ಲೋಗೋವನ್ನು ಆಧುನಿಕ ಟೈಪ್‌ಫೇಸ್ ಪ್ರಾಡಕ್ಟ್ ಸ್ಯಾನ್ಸ್ ಗೆ ಬದಲಾಯಿಸಿತು. ಈಗ 2025 ರಲ್ಲಿ, ಕಂಪನಿಯು ಇದಕ್ಕೆ ಹೊಸ ದೃಶ್ಯ ತಿರುವನ್ನು ಸೇರಿಸಿದೆ.

ಹೊಸ ಲೋಗೋದಲ್ಲಿ ಗೂಗಲ್ ತನ್ನ ಬ್ರ್ಯಾಂಡ್‌ನ ಗುರುತಾಗಿರುವ ನೀಲಿ, ಕೆಂಪು, ಹಸಿರು ಮತ್ತು ಹಳದಿ ಎಂಬ ನಾಲ್ಕು ಸಾಂಪ್ರದಾಯಿಕ ಬಣ್ಣಗಳನ್ನು ಉಳಿಸಿಕೊಂಡಿದೆ. ಆದರೆ ಈ ಬಾರಿ ವಿನ್ಯಾಸದಲ್ಲಿ ಹೊಸ ತಿರುವು ಇದೆ.

ಇದನ್ನೂ ಓದಿ: ಹೊಸದಾಗಿ ನಿರ್ಮಾಣವಾಗುತ್ತಿರುವ ಮನೆಗೆ ನೀರು ಹಾಕಲು ಹೋಗಿ ಬಾಲಕಿ ಸಾವು

ಮೊದಲು ಈ ಬಣ್ಣಗಳನ್ನು G ಲೋಗೋದಲ್ಲಿ ಬ್ಲಾಕ್ ಶೈಲಿಯಲ್ಲಿ ಕಾಣಲಾಗುತ್ತಿತ್ತು. ಈಗ ಅದೇ ಬಣ್ಣಗಳನ್ನು ಗ್ರೇಡಿಯಂಟ್‌ನಲ್ಲಿ ಅಂದರೆ ಬೆಳಕಿನಿಂದ ಗಾಢ ಛಾಯೆಗಳವರೆಗೆ ಕಾಣಬಹುದು. ಇದು ಜನರಿಗೆ ಕ್ರಿಯಾತ್ಮಕ ಮತ್ತು ಆಧುನಿಕ ಅನುಭವವನ್ನು ನೀಡುತ್ತದೆ. ಗೂಗಲ್‌ನ ಈ ಹೊಸ ಲೋಗೋ ಕಂಪನಿಯು ಈಗ ತನ್ನ ಹಳೆಯ ನೋಟವನ್ನು ಮೀರಿ ಹೆಚ್ಚು ಸ್ಮಾರ್ಟ್, ಫ್ಯೂಚರಿಸ್ಟಿಕ್ ಮತ್ತು ಎಐ-ಪವರ್ಡ್​ ಬ್ರ್ಯಾಂಡಿಂಗ್‌ನತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ.

Continue Reading

LATEST NEWS

ಆರ್‌ಸಿಬಿ ತಂಡಕ್ಕೆ ಮೊದಲ ಮ್ಯಾಚ್; ಇಲ್ಲಿದೆ ನೋಡಿ IPL 2025ರ ಪರಿಷ್ಕೃತ ವೇಳಾಪಟ್ಟಿ

Published

on

ಮಂಗಳೂರು/ಮುಂಬೈ: ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಡಿಮೆಯಾಗಿದ್ದು, ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶನಿವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ.


ಹೌದು, ಈಗಾಗಲೇ ಗುಜರಾತ್ ಟೈಟನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್‌ನ ಉಳಿದ ಪಂದ್ಯಗಳಿಗಾಗಿ ಸಿದ್ದತೆಗಳನ್ನು ಆರಂಭಿಸಿವೆ. ಈ ಸಿದ್ದತೆಗಳ ನಡುವೆ ಮತ್ತೊಂದು ಮಾಹಿತಿ ಕೂಡ ಹೊರಬಿದ್ದಿದೆ. ಅದೇನೆಂದರೆ.. ಐಪಿಎಲ್ ಪುನರಾಂಭಗೊಳ್ಳುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದೊಂದಿಗೆ ಎಂಬುದು. ಹೀಗಾಗಿ ಆರ್‌ಸಿಬಿ ಅಭಿಮಾನಿಗಳಿಗೆ ಈ ಸುದ್ದಿ ಮತ್ತಷ್ಟು ಖುಷಿ ಕೊಟ್ಟಿದೆ. ಇನ್ನು ಈ ಬಾರಿಯ ಫೈನಲ್ ಪಂದ್ಯವನ್ನು ಜೂನ್ 3ರಂದು ಆಯೋಜಿಸಲು ನಿರ್ಧರಿಸಲಾಗಿದೆ.

ಐಪಿಎಲ್ 2025ರ ಪರಿಷ್ಕೃತ ವೇಳಾಪಟ್ಟಿ

Continue Reading

LATEST NEWS

ಜಿಮ್ಸ್ ಆಸ್ಪತ್ರೆಯಲ್ಲಿ ಕೈ ಕೊಟ್ಟ ಲಿಫ್ಟ್; ಗೋಡೆ ಒಡೆದು 9 ಮಂದಿ ಸಿಬ್ಬಂದಿಯ ರಕ್ಷಣೆ

Published

on

ಕಲಬುರಗಿ: ಆಸ್ಪತ್ರೆಯಲ್ಲಿ ಲಿಫ್ಟ್ ಕೈ ಕೊಟ್ಟಿದ್ದು, ಇದರ ಪರಿಣಾಮ ಲಿಫ್ಟ್ ಒಳಗಡೆ ಇದ್ದ 9 ಮಂದಿ ಸಿಬ್ಬಂದಿಯನ್ನು ಗೋಡೆ ಒಡೆದು ರಕ್ಷಣೆ ಮಾಡಿದ ಘಟನೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ 9 ಗಂಟೆಗೆ ಏಕಾ ಏಕಿ ಲಿಫ್ಟ್ ಕೈ ಕೊಟ್ಟಿದೆ. ಇದರ ಪರಿಣಾಮ ಲಿಫ್ಟ್ ಒಳಗಡೆ ಇದ್ದ ಒಂಭತ್ತು ಜನ ಸಿಬ್ಬಂದಿ ಉಸಿರಾಡಲು ಪರದಾಡುವಂತಾಯಿತು. ಹೊರಗಡೆ ಬರಲಾಗದೆ ಕಂಗಾಲಾಗಿದ್ದರು. ತಕ್ಷಣವೇ ಲಿಫ್ಟ್​ನಲ್ಲಿದ್ದ ಒರ್ವ ಸಿಬ್ಬಂದಿ ತಾಂತ್ರಿಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ‌‌. ತಕ್ಷಣವೇ ಲಿಫ್ಟ್​​ನಲ್ಲಿ ಸಿಲುಕಿದ 9 ಮಂದಿಯ ರಕ್ಷಣೆಗಾಗಿ ಸಿಬ್ಬಂದಿ ಮುಂದಾಗಿದ್ದಾರೆ.

ಬಳಿಕ ತಡೆ ಗೋಡೆ ಇರುವ ಕಡೆ ಲಿಫ್ಟ್ ಸಿಲುಕಿದ ಪರಿಣಾಮ ಒಳಗಿನವರನ್ನು ರಕ್ಷಣೆ ಮಾಡಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಲಿಫ್ಟ್ ದುರಸ್ತಿ ಆಗದ ಕಾರಣ ಡ್ರಿಲ್ಲಿಂಗ್ ಮಷಿನ್ ಬಳಸಿ ತಡೆಗೋಡೆಯನ್ನು ಒಡೆದು ಲಿಫ್ಟ್ ಒಳಗಿದ್ದವರನ್ನು ರಕ್ಷಿಸಲಾಯಿತು.

Continue Reading
Advertisement

Trending

Copyright © 2025 Namma Kudla News

You cannot copy content of this page