Connect with us

LATEST NEWS

ಸತತ 4ನೇ ದಿನವೂ ಪಾಕ್ ಕದನ ವಿರಾಮ ಉಲ್ಲಂಘನೆ; ಭಾರತದಿಂದ ಪ್ರತ್ಯುತ್ತರ

Published

on

ಮಂಗಳೂರು/ಶ್ರೀನಗರ : ಪೆಹಲ್ಗಾಮ್‌ನಲ್ಲಿ ಉಗ್ರರ ದಾ*ಳಿಯಿಂದ ಇಡೀ ಭಾರತ ಕ್ರೋ*ಧದಿಂದಿದೆ. ಭಾರತೀಯ ಸೇನೆ ಉ*ಗ್ರರ ಕಾರ್ಯಾಚರಣೆ ನಡೆಸುತ್ತಿದೆ. ಈ ನಡುವೆ ಮತ್ತೆ  ಪಾಕಿಸ್ತಾನ ತನ್ನ ಬಾಲ ಬಿಚ್ಚಿದೆ.  ಸತತ ನಾಲ್ಕನೇ ದಿನವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ಪಾಕ್ ಪಡೆಗಳು ಗುಂ*ಡಿನ ದಾ*ಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ.

ಅಪ್ರಚೋದಿತ ಗುಂ*ಡಿನ ದಾ*ಳಿ ನಡೆಸಿರುವ  ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ಭಾರತೀಯ ಸೇನೆ ನೀಡಿರುವುದಾಗಿ ವರದಿಗಳು ತಿಳಿಸಿವೆ. ಸತತ ನಾಲ್ಕನೇ ದಿನ ರಾತ್ರಿ ವೇಳೆ ಪಾಕ್‌ ಅಪ್ರಚೋದಿತ ದಾಳಿ* ನಡೆಸಿದೆ. ಕುಪ್ವಾರ ಮತ್ತು ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗುಂ*ಡಿನ ದಾ*ಳಿ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕ್ರಿಕೆಟಿಗ ಅಖ್ತರ್ ಸೇರಿದಂತೆ ಪಾಕಿಸ್ತಾನದ 16 ಯೂಟ್ಯೂಬ್‌ ಚಾನೆಲ್‌ಗಳು ಬ್ಯಾನ್

ಎಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉ*ಗ್ರರು ಗುಂ*ಡಿನ ದಾ*ಳಿ ನಡೆಸಿದ್ದರು. ಘಟನೆಯಲ್ಲಿ 26 ಮಂದಿ ಮೃ*ತಪಟ್ಟಿದ್ದರು. ಹಲವು ಮಂದಿ ಗಾ*ಯಗೊಂಡಿದ್ದರು.  ಈ ಘಟನೆಯ ಬಳಿಕ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕ್ ಪದೇ ಪದೇ ಕದನ ವಿರಾಮ ನಿಯಮ ಉಲ್ಲಂಘಿಸುವ ಉದ್ಧಟತನ ತೋರುತ್ತಿದೆ.

LATEST NEWS

‘ಮೈಸೂರು ಪಾಕ್’ ಹೆಸರನ್ನು ‘ಮೈಸೂರು ಶ್ರೀ’ ಎಂದು ಮರುನಾಮಕರಣ

Published

on

ಜೈಪುರ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೇಳುತ್ತಿದ್ದಂತೆಯೇ ಭಾರತದಲ್ಲಿ ಪಾಕಿಸ್ತಾನದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇದೀಗ ಸ್ವೀಟ್ ಶಾಪ್ ಗಳೂ ಕೂಡ ಸೇರ್ಪಡೆಯಾಗಿದ್ದು, ವಿನೂತನ ರೀತಿಯಲ್ಲಿ ‘ಪಾಕ್’ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಾಜಸ್ಥಾನದ ಜೈಪುರದಲ್ಲಿರುವ ಅಂಗಡಿಗಳು ಪ್ರಸಿದ್ಧ ‘ಮೈಸೂರು ಪಾಕ್’ ಸೇರಿದಂತೆ ವಿವಿಧ ಸಿಹಿತಿಂಡಿಗಳ ಹೆಸರನ್ನು ಬದಲಾಯಿಸಿವೆ.

ಇನ್ಮುಂದೆ Pak ಅಲ್ಲ Shree

ರಾಜಸ್ಥಾನದ ಜೈಪುರದ ಅಂಗಡಿ ಮಾಲೀಕರು ‘ಪಾಕ್‌’ ಹೆಸರಿರುವ ತಿನಿಸುಗಳ ಹೆಸರನ್ನೇ ಬದಲಾಯಿಸಿದ್ದಾರೆ. ಅದರಲ್ಲೂ ಕರ್ನಾಟಕದ ಮೈಸೂರಿನ ಪ್ರಸಿದ್ಧ ‘ಮೈಸೂರು ಪಾಕ್’ ಹೆಸರನ್ನೂ ಕೂಡ ಬದಲಾಯಿಸಲಾಗಿದೆ. ‘ಮೈಸೂರು ಪಾಕ್’ ಹೆಸರನ್ನು ‘ಮೈಸೂರು ಶ್ರೀ’ ಎಂದು ಬದಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು

ಸಿಹಿ ತಿನಿಸುಗಳಲ್ಲಿನ ‘ಪಾಕ್’ ಪದಕ್ಕೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲದಿದ್ದರೂ, ಪಾಕ್ ಎಂಬ ಹೆಸರು ಇರಬಾರದು ಎಂದು ವ್ಯಾಪಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ‘ಮೋತಿ ಪಾಕ್’ ಅನ್ನು ‘ಮೋತಿ ಶ್ರೀ’ ಎಂದು, ‘ಗೊಂಡ್ ಪಾಕ್’ ಅನ್ನು ‘ಗೊಂಡ್ ಶ್ರೀ’ ಎಂದೂ, ‘ಮೈಸೂರು ಪಾಕ್’ ಅನ್ನು ‘ಮೈಸೂರು ಶ್ರೀ’ ಎಂದು ಮರುನಾಮಕರಣ ಮಾಡಿದ್ದೇವೆ’ ಎಂದು ಅಂಗಡಿ ಮಾಲೀಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Continue Reading

LATEST NEWS

ಬೆಂಗಳೂರಿನಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು

Published

on

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ದ್ವಿಗುಣಗೊಳ್ಳುತ್ತಿದೆ.

ಇದೀಗ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೊರೋನಾ ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಕೋವಿಡ್-19ಗೆ ಒಬ್ಬ ಬಲಿಯಾಗಿದ್ದು, ರಾಜ್ಯದಲ್ಲಿ ಇಂದು 5 ಹೊಸ ಕೇಸ್‌ಗಳು ದಾಖಲಾಗಿವೆ. ಇದರ ಬೆನ್ನಲ್ಲ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ಒತ್ತಾಯಿಸುತ್ತಿದೆ.

ಇದನ್ನೂ ಓದಿ: ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

ಹೌದು, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನ 5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ ಹಾಗೂ ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರೀಯ ಪ್ರಕರಣಳಿದ್ದು, ಇದರಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.

Continue Reading

DAKSHINA KANNADA

ಪ್ರಚೋದನಕಾರಿ ಪೋಸ್ಟ್: 4 ಇನ್ಸ್ಟಾಗ್ರಾಂ, 1 ಪೇಸ್ಬುಕ್ ಪೇಜ್ ರದ್ದು

Published

on

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ.

“ವಿಎಚ್‌ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್‌ ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ ಪೊಲೀಸ್ ಠಾಣೆ, “ಡಿಜೆ ಭರತ್ 2008” ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, “ಕರಾವಳಿ ಅಫೀಶಿಯಲ್ ಇನ್‌ಸ್ಟಾಗ್ರಾಂ ಪೇಜ್” ವಿರುದ್ಧ ಪಾಂಡೇಶ್ವರ ಠಾಣೆ ಮತ್ತು “ಆಶಿಕ್ ಮೈಕಾಲ’ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಈ ಪ್ರಕರಣಗಳ ತನಿಖೆಯನ್ನು ಸೆನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page