Connect with us

LATEST NEWS

ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ದಾಳಿ : ಸ್ಥಳೀಯ ಮುಸಲ್ಮಾನರಿಂದ ಹಿಂದೂಗಳ ರಕ್ಷಣೆ

Published

on

ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ದಾಳಿ : ಸ್ಥಳೀಯ ಮುಸಲ್ಮಾನರಿಂದ ಹಿಂದೂಗಳ ರಕ್ಷಣೆ

ಕರಾಚಿ: ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಪಾಕಿಸ್ತಾನದ (Pakistan) ಮೂಲಭೂತವಾದಿಗಳು ಹಿಂದೂ ದೇವಾಲಯವನ್ನು ಮತ್ತೆ ಗುರಿಯಾಗಿಸಿಕೊಂಡಿದ್ದಾರೆ. ಗಲಭೆಕೋರರು ಮತ್ತೊಮ್ಮೆ ಸಿಂಧ್ (Sindh) ಪ್ರಾಂತ್ಯದ ಹಿಂದೂ ದೇವಾಲಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.

ಸಿಂಧ್ ಪ್ರಾಂತ್ಯದ ಶೀತಲ್ ದಾಸ್ ಕ್ಯಾಂಪಸ್‌ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಈ ಮಧ್ಯೆ ಗಲಭೆಕೋರರು ಹಿಂದೂ ಕುಟುಂಬಗಳ ಮೇಲೂ ದಾಳಿ ಮಾಡಲು ಪ್ರಯತ್ನಿಸಿದವು, ಆದರೆ ಸ್ಥಳೀಯ ಮುಸ್ಲಿಮರ ವಿರೋಧದಿಂದಾಗಿ ಅದು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ.ಸ್ಥಳೀಯ ಮಾಧ್ಯಮಗಳ ಪ್ರಕಾರ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು. ಆದರೆ ಹಿಂದೂ ಕುಟುಂಬಗಳ ಮೇಲೆ ದೌರ್ಜನ್ಯಕ್ಕೆ ಮುಂದಾಗಿದ್ದ ಗಲಭೆಕೋರರ ವಿರುದ್ಧ ಆ ಪ್ರದೇಶದಲ್ಲಿ ವಾಸಿಸುವ ಮುಸ್ಲಿಮರ ವಿರೋಧದಿಂದಾಗಿ ಗಲಭೆಕೋರರು ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಶೀತಲ್ ದಾಸ್ ಸಂಕೀರ್ಣದಲ್ಲಿ ಸುಮಾರು 300 ಹಿಂದೂ (Hindu) ಕುಟುಂಬಗಳು ಮತ್ತು 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿವೆ.ಕ್ಯಾಂಪಸ್‌ನ ಬಾಗಿಲಿನ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಗಲಭೆಕೋರರು ಹೆದರಿ ಓಡಿಹೋದರು ಎಂದು ಆ ಪ್ರದೇಶದ ನಿವಾಸಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ಬಗ್ಗೆ ವಿವರಿಸಿರುವ ಅವರು ಗಲಭೆಕೋರರು ಇಲ್ಲಿನ ದೇವಾಲಯವನ್ನು (Temple) ಧ್ವಂಸ ಮಾಡಿದರು, ನಂತರ ಅವರು ಹಿಂದೂ ಕುಟುಂಬಗಳನ್ನು ಪ್ರವೇಶಿಸಲು ಮುಂದಾದರು. ಆದರೆ ಹತ್ತಿರ ವಾಸಿಸುತ್ತಿದ್ದ ಮುಸ್ಲಿಮರು ತಕ್ಷಣವೇ ಗೇಟ್ ಬಳಿ ಬಂದು ಹಿಂದೂಗಳ ರಕ್ಷಣೆಗೆ ಮುಂದಾಗಿದ್ದಾರೆ. ಜನಸಮೂಹವನ್ನು ಕಂಡು ಧಂಗಾದ ಗಲಭೆಕೋರರು ತಕ್ಷಣವೇ ಪರಾರಿಯಾದರು ಎಂದು ತಿಳಿದುಬಂದಿದೆ

ಪಾಕಿಸ್ತಾನದ ಪೇಶಾವರದಲ್ಲಿ ಪ್ರಬಲ ಸ್ಫೋಟ, 7 ಮಂದಿ ಸಾವು, 70ಕ್ಕೂ ಅಧಿಕ ಜನರಿಗೆ ಗಾಯ

ಗಲಭೆಕೋರರ ದಾಳಿಯಲ್ಲಿ ದೇವಾಲಯದ ಮೂರು ವಿಗ್ರಹಗಳು ಹಾನಿಗೊಂಡಿವೆ ಎಂದು ಘಟನೆ ಬಗ್ಗೆ ಪೊಲೀಸರು ದೃಢಪಡಿಸಿದ್ದು ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮುಸ್ಲಿಂ ಕುಟುಂಬಗಳು ತಕ್ಷಣ ಸಹಾಯಕ್ಕಾಗಿ ತಲುಪಿದ್ದರಿಂದ ಅನಾಹುತ ತಪ್ಪಿದಂತಾಗಿದೆ ಎಂದು ಹೇಳಲಾಗಿದೆ.

ಅದೇ ಸಮಯದಲ್ಲಿ ಮಾಹಿತಿಯ ಪ್ರಕಾರ ಈ ಘಟನೆಯ ನಂತರ 60ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಶೀತಲ್ ದಾಸ್ ಕ್ಯಾಂಪಸ್ ಅನ್ನು ತೊರೆದು ನಗರದ ಇತರ ಪ್ರದೇಶಗಳಲ್ಲಿ ವಾಸಿಸಲು ತೆರಳಿದ್ದಾರೆ.

ಮೂರನೇ ದಾಳಿ:
ಮುಸ್ಲಿಂ ಬಹುಸಂಖ್ಯಾತ ಪಾಕಿಸ್ತಾನದ 220 ಮಿಲಿಯನ್ ಜನಸಂಖ್ಯೆಯಲ್ಲಿ ಸುಮಾರು ಎರಡು ಪ್ರತಿಶತ ಹಿಂದೂಗಳು ಮತ್ತು ಅವರಲ್ಲಿ ಹೆಚ್ಚಿನವರು ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆ. ಸಿಂಧ್‌ನ ಹಿಂದೂ ದೇವಾಲಯದ ಮೇಲೆ ನಡೆದಿರುವ ಮೂರನೇ ದಾಳಿ ಇದಾಗಿದೆ. ಇದಕ್ಕೂ ಮುನ್ನ ಹಿಂದೂ ದೇವಾಲಯಗಳನ್ನು ಎರಡು ಬಾರಿ ಗುರಿಯಾಗಿಸಲಾಗಿದೆ. ಈ ದಾಳಿಗಳು ಪಾಕಿಸ್ತಾನ ಸರ್ಕಾರ ಅಲ್ಪಸಂಖ್ಯಾತರ ರಕ್ಷಣೆಯ ಹಕ್ಕುಗಳನ್ನು ಬಹಿರಂಗಪಡಿಸುತ್ತವೆ ಮತ್ತು ಇಮ್ರಾನ್ ಸರ್ಕಾರದ ಅವಧಿಯಲ್ಲಿ ಹಿಂದೂಗಳಿಗೆ ಬೆದರಿಕೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದಕ್ಕೆ ಕನ್ನಡಿ ಹಿಡಿದಂತಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page