Connect with us

LATEST NEWS

ಪರಶುರಾಮ ಥೀಂ ಪಾರ್ಕ್‌ ವಿವಾದ : ನಕಲಿ ಪರಶುರಾಮನ ಮೂರ್ತಿ ಸ್ಥಾಪನೆಯಲ್ಲಿ ಮೊದಲ ತಲೆದಂಡ

Published

on

ಉಡುಪಿ : ಕಾರ್ಕಳದ ಉಮಿಕಲ್‌ ಬೆಟ್ಟದ ಪರಶುರಾಮ ಥೀಂ ಪಾರ್ಕ್ ಸಂಬಂಧಿಸಿ ಮಹತ್ವದ ಬೆಳವಣಿಗೆ ಆಗಿದ್ದು, ನಿರ್ಮಿತಿ ಕೇಂದ್ರದ ಉಡುಪಿ ಜಿಲ್ಲೆಯ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿ ಜಿಲ್ಲಾಡಳಿತ ಆದೇಶ ನೀಡಿದೆ. ಈಗಾಗಲೇ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವಿಚಾರಣಾ ಆಯೋಗವು ತನಿಖೆ ಕೈಗೊಂಡಿದೆ.


ಈ ನಿಟ್ಟಿನಲ್ಲಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆಸದಂತೆ ಹಾಗೂ ಅಡ್ಡಿ ಉಂಟು ಮಾಡುವ ಸಾಧ್ಯತೆ ಹಿನ್ನೆಲೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾಗಿದ್ದ ಅರುಣ್‌ ಕುಮಾರ್‌ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಈ ಪ್ರಕರಣದ ಮೊದಲ ತಲೆದಂಡ ಇದಾಗಿದೆ. ಈ ಮೂಲಕ ಭಾರಿ ವಿವಾದ ಸೃಷ್ಟಿಸಿದ್ದ ಥೀಂ ಪಾರ್ಕ್ ಪ್ರಕರಣ ತನಿಖೆ ಭಾರೀ ಕುತೂಹಲ ಮೂಡಿಸಿದೆ.

ತೆರವಾದ ಸ್ಥಾನಕ್ಕೆ ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ನಿರ್ದೇಶಕರಾಗಿದ್ದ ದಿವಾಕರ್‌ ಪಿ. ಅವರಿಗೆ ಹೆಚ್ಚುವರಿಯಾಗಿ ಪ್ರಭಾರ ಆದೇಶ ನೀಡಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ : ಸುರತ್ಕಲ್ : ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾ*ವು
2023ರ ಜನವರಿ 27 ರಂದು ಪರಶುರಾಮ ಥೀಂ ಪಾರ್ಕ್ ಇದನ್ನು ಅಂದಿನ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಉದ್ಘಾಟನೆ ಮಾಡಿದ್ದರು. ನಂತರದ ದಿನಗಳಲ್ಲಿ ಅಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮನ ಮೂರ್ತಿ ಫೈಬರ್‌ನಿಂದ ಕೂಡಿದ್ದೇ ಹೊರತು ಕಂಚಿನ ಪ್ರತಿಮೆ ಅಲ್ಲ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದರು. ಕಾಂಗ್ರೆಸ್‌ ಪಕ್ಷ ಆಡಳಿತಕ್ಕೆ ಬಂದ ಮೇಲೆ ಇದರ ವಿಚಾರಣೆ ಕೈಗೆತ್ತಿಕೊಂಡಿತ್ತು. ಸ್ಥಳೀಯ ಶಾಸಕ ಸುನಿಲ್‌ ಕುಮಾರ್‌ ಅವರ ಮಹತ್ವದ ಈ ಯೋಜನೆಯ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿತ್ತು.

DAKSHINA KANNADA

ಸುರತ್ಕಲ್: ಡ್ರೆಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಭಾರೀ ನಷ್ಟ

Published

on

ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್‌ನ ಪೂವ ಆರ್ಕೆಡ್‌ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ.

ಸುಟ್ಟು ಕರಕಲಾಗಿದ್ದ ಮಳಿಗೆಯು ಕೃಷ್ಣಾಪುರ ನಿವಾಸಿ ಶಮೀಮ್ ಎಂಬವರಿಗೆ ಸೇರಿದ್ದು, ಬಟ್ಟೆ ಬರೆಗಳು ಹಾಗೂ ಯಂತ್ರೋಪಕರಣಗಳು ಸೇರಿ ಕೋಟಿ ರೂ. ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಂಗಡಿಯ ಮೇಲ್ಛಾವಣಿಯಲ್ಲಿನ ಬಟ್ಟೆ ವಿನ್ಯಾಸ ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆ ಕ್ಷಣಾರ್ಧದಲ್ಲಿ ಇಡೀ ಮಳಿಗೆಯನ್ನು ಸುಟ್ಟು ಭಸ್ಮ ಮಾಡಿತು.

ಇದನ್ನೂ ಓದಿ : ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಮೂರು ಮತ್ತು ಎಂಆರ್ ಪಿಎಲ್ ನ ಒಂದು ಅಗ್ನಿ ನಿರೋಧಕ ವಾಹನಗಳು ಸತತ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಮಂಗಳೂರು : ಇಂದಿನಿಂದ 3 ದಿನ ಪಾಂಡೇಶ್ವರದಲ್ಲಿ ಬೃಹತ್ ಐಸ್‌ಕ್ರೀಂ ಪರ್ಬ

Published

on

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾ ಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆ.7, 8 ಮತ್ತು 9ರಂದು 3 ದಿನ 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ.

ಈ ತಣ್ಣನೆಯ ಚಳಿಗೂ ಐಸ್‌ಕ್ರೀಂ ಎಂದಾಕ್ಷನ ಬಾಯಲ್ಲಿ ನೀರು ಬರುವವರೇ ಹೆಚ್ಚು. ಹಾಗಾಗಿ ಅಂತಹ ಐದ್‌ಕ್ರೀಂ ಪ್ರಿಯರಿಗೆ ಬಿಗ್ ಗುಡ್‌ನ್ಯೂಸ್ ಸಿಕ್ಕಿದ್ದು,  ಭರ್ಜರಿ ಐಸ್ ಕ್ರೀಮ್ ಪರ್ಬ ಇಂದಿನಿಂದ ಮೂರು ದಿನ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ.

ಯಾವೆಲ್ಲಾ ಐಸ್‌ಕ್ರೀಂ ಸಂಸ್ಥೆಗಳು ಭಾಗಿಯಾಗಲಿದೆ ?

ಮಂಗಳೂರನ್ನು ‘ಐಸ್ ಕ್ರೀಮ್ ಕ್ಯಾಪಿಟಲ್ ಆಫ್ ಇಂಡಿಯಾ’ ಎಂದು ಕರೆಯುತ್ತಾರೆ. ಎಲ್ಲಾ ಐಸ್ ಕ್ರೀಮ್ ಸಂಸ್ಥೆಗಳನ್ನ ಒಂದೇ ಸೂರಿನಡಿ ಸೇರಿಸಬೇಕು ಅನ್ನುವ ಆಲೋಚನೆಯಲ್ಲಿ ಈ ಕಾರ್ಯಕ್ರಮ ಆಯೋಜಕರದ್ದು, ಈ ಬಾರಿ 14ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಐಡಿಯಲ್ – ಪಬ್ಬಾಸ್ , ಹ್ಯಾಂಗ್ಯೋ, ಮ್ಯಾಂಗೋ ಬೆರ್ರಿಸ್ , ಎಂಚಿ ಕ್ರಂಚಿ – ದಿ ಮಿಲೆಟ್ ಹೌಸ್ , ಸ್ಕೂಪ್ಸೊ , ಕೈಲಾರ್ಸ್ , ಸ್ವಿರ್ಲಿಯೊ , ಎಫ್ 5, ಐಸ್ ಕ್ರೀಮ್ ಆಂಡ್ ಮೋರ್ , ಫ್ರೂಟ್ ಪೊಪ್ಜ್ , ಫ್ಲೇವರ್ಸ್ , ಹೈವ್ ಸ್ಕ್ಯೂಬ್ , ಬೊನ್ ಬೊನ್ಸ್, ಕ್ಯಾಮೆರಿ ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳು ಪಾಲ್ಗೊಳ್ಳಲಿದೆ.

 

Continue Reading

DAKSHINA KANNADA

ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

Published

on

ಸುರತ್ಕಲ್: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿ ಗಾಯಗೊಂಡಿರುವ ಘಟನೆ ಜೋಕಟ್ಟೆಯ ಕಳವಾರು ಎಂಬಲ್ಲಿ ನಿನ್ನೆ (ಫೆ.6) ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಕಾನ ಕಾಪ್ರಿಗುಡ್ಡ ನಿವಾಸಿ ರವಿ ಹಾಗೂ ಅವರ ಪತ್ನಿ ಗಾಯಳುಗಳು ಎಂದು ಗುರುತಿಸಲಾಗಿದೆ. ಅಪಘಾತದಿಂದ ದಂಪತಿಗೆ ಗಾಯಗಳಾಗಿದ್ದು, ಅವರನ್ನು ಕಾನದ ಆಸ್ಪತ್ರೆಗೆ ರವಾನಿಸಲಾಗಿದೆ.

ತಮ್ಮ ಪತ್ನಿಯೊಂದಿಗೆ ರವಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಜೋಕಟ್ಟೆ ಕಳವಾರು ಬಳಿ ಕಾರಿನ ಬ್ರೇಕ್ ಫೇಲ್ ಆಗಿದೆ.‌ ಕಾರನ್ನು ನಿಯಂತ್ರಣಕ್ಕೆ ತರಲೆಂದು ಯತ್ನಿಸಿದಾಗ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದರ ಪರಿಣಾಮ ಒಂದು ವಿದ್ಯುತ್ ಕಂಬ ನೆಲಕ್ಕೆ ಉರುಳಿದ್ದು, ಹೈಟೆನ್ಷನ್ ವಯರ್ ರಸ್ತೆಯಲ್ಲಿ ಬಿದ್ದಿದೆ.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಅಪಘಾತದ ರಭಸಕ್ಕೆ ಕಾರು ಜೋಕಟ್ಟೆ ಬಜ್ಪೆ ರಸ್ತೆಯಿಂದ ಎಸ್‌.ಇ.ಆರ್‌.ಝೆಡ್ ರಸ್ತೆಗೆ ಉರುಳಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page