Connect with us

ಹೆತ್ತವರ ಕೊನೆಯ ಆಸೆಯನ್ನು ನೇರವೇರಿಸಿದ ದುಬೈ ಕನ್ನಡಿಗಸ್ ಹೆಲ್ಪ್‌ಲೈನ್ – ಅನಿವಾಸಿ ಕನ್ನಡಿಗರ ಒಕ್ಕೂಟ..!

Published

on

ಹೆತ್ತವರ ಕೊನೆಯ ಆಸೆಯನ್ನು ನೇರವೇರಿಸಿದ ದುಬೈ ಕನ್ನಡಿಗಸ್ ಹೆಲ್ಪ್‌ಲೈನ್ – ಅನಿವಾಸಿ ಕನ್ನಡಿಗರ ಒಕ್ಕೂಟ..!

ದುಬೈ : ದುಬೈ ಕನ್ನಡಿಗಸ್ ಹೆಲ್ಪ್‌ಲೈನ್ , ಅನಿವಾಸಿ ಕನ್ನಡಿಗರ ಒಕ್ಕೂಟ (AKO) ಸಹಾಯದಿಂದ ದುಬೈಯಲ್ಲಿ ಸಾವನ್ನಪ್ಪಿದ ಭಾರತೀಯ ವಲಸಿಗರೊಬ್ಬರ ಪಾರ್ಥಿವ ಶರೀರವನ್ನು ತವರೂರಿಗೆ ವಾಪಾಸು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ,

ಕೊರೋನ ಸಂಕಷ್ಟದ ಸಮಯದಲ್ಲಿ ಮಾನವೀಯತೆ ಮೆರೆದ, ಸೌಹಾರ್ದತೆಯನ್ನು ಎತ್ತಿಹಿಡಿಯುವಂತಹ ಶ್ಲಾಘನೀಯ ಕಾರ್ಯವನ್ನು ಯುಎಈಯ ಕನ್ನಡಿಗರು ನಡೆಸಿದ್ದಾರೆ.

ಅಬುಧಾಬಿಯಲ್ಲಿ ಮೃತರಾಗಿದ್ದ ಕರಾವಳಿಯ ಯುವಕ ಯಶವಂತ್ ಪೂಜಾರಿಯ ಮೃತದೇಹವನ್ನು ಯುಎಇ ಸರ್ಕಾರದ ಎಲ್ಲಾ ನಿಯಮ ಪಾಲಿಸಿ, ಹಲವಾರು ಪರವಾನಗಿಗಳನ್ನು ಪಡೆದು ತಾಯ್ನಾಡಿಗೆ ರವಾನಿಸಲು ಯಶಸ್ವಿಯಾಗಿದೆ.

ಈ ಯಶಸ್ವಿಯ ಹಿಂದೆ ನಡೆಸಿದಂತಹ ಸತತ 13 ದಿನಗಳು ನಡೆಸಿದ ಪರಿಶ್ರಮ ಎಲ್ಲರಿಗೂ ಮಾದರಿಯಾಗಿದೆ.
ಅಬುಧಾಬಿಯಲ್ಲಿ ಕರಾವಳಿಯ ಯುವಕ ಯಶವಂತ ಪೂಜಾರಿಗೆ ಅಫಘಾತವಾಗಿದೆ ಎಂದು ಸುದ್ದಿ ತಿಳಿದು ಅವರ ಕುಟುಂಬದವರ ಸ್ಥಿತಿ ಶೋಚನೀಯವಾಗಿದೆ,

ಸ್ವಲ್ಪ ಸಹಾಯ ಮಾಡಿ ಎಂದಾಗ ಇದನ್ನು ಸವಾಲಾಗಿ ಸ್ವೀಕರಿಸಿ ಅನಿವಾಸಿ ಕನ್ನಡಿಗರ ಒಕ್ಕೂಟ (AKO) ಮತ್ತು ದುಬೈ ಕನ್ನಡಿಗಸ್ ಹೆಲ್ಪ್‌ಲೈನ್ ತಂಡ ಕಾರ್ಯಪ್ರವೃತ್ತರಾದರು.
ಯಶವಂತ್ ಕುರಿತು ಮಾಹಿತಿ ಕಲೆ ಹಾಕಲು ಹೊರಟಾಗ ಆತ ಮೃತಪಟ್ಟಿದ್ದು, ಅನಾಥ ಶವವಾಗಿ ಶವಾಗಾರದಲ್ಲಿ ಇರುವುದು ತಿಳಿದುಬಂದಿದೆ. ಯಶವಂತ್ ಹೆತ್ತವರು ಅವರ ಮಗನ ಮುಖವನ್ನು ಕೊನೆಯ ಬಾರಿಗೆ ನೋಡಬೇಕು,

ಹೇಗಾದರೂ ಮಾಡಿ ಊರಿಗೆ ಮೃತದೇಹವನ್ನು ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದು ಬೇಡಿಕೊಂಡಿದ್ದಾರೆ, ಇದನ್ನು ಚರ್ಚಿಸಿ ಕಾರ್ಯರೂಪಕ್ಕೆ ತರಲು ಅನಿವಾಸಿ ಕನ್ನಡಿಗರ ಒಕ್ಕೂಟದ ರಶೀದ್ ಬಿಜೈ, ಶರೀಫ್ ಸರ್ವೆ, ಬಶೀರ್ ಕೊಡ್ಲಿಪೇಟೆ ಕನ್ನಡಿಗಾಸ್ ಹೆಲ್ಪ್ ಲೈನ್ ನ ಹಿದಾಯತ, ಸಿರಾಜ್ ಪರ್ಲಡ್ಕ, ದಯಾ ಕಿರೋಡಿಯನ್, ನವೀದ್ ಮಾಗುಂಡಿ, , ಅಬುಧಾಬಿಯ ಪ್ರದೀಪ್ ಕಿರೋಡಿಯನ್, ಶ್ರೀಧರ್, ದೀಪ ಹಾಗೂ ಊರಿನಿಂದ ಆಸಿಫ್, ಮುಝಮ್ಮಿಲ್, ಭಾಗ್ಯರಾಜ್, ದೀಪಕ್, ರಾಜೇಶ್ ಮರೋಳಿ ಮತ್ತಿತರನ್ನು ಸೇರಿಸಿ ಮುನ್ನಡೆದರು.

ಕೊರೋನ ಸಂಕಷ್ಟದ ಈ ಸೂಕ್ಷ್ಮ ಸಮಯದಲ್ಲಿ ಪೋಸ್ಟ್ ಮಾರ್ಟಮ್ ನಡೆಸಿ ಸಹಜ ಸಾವು ಎಂದು ಖಚಿತಪಡಿಸಿ, ಕೋವಿಡ್ ಟೆಸ್ಟ್ ನಡೆಸಿ ನೆಗೆಟಿವ್ ವರದಿ ಬಂದ ನಂತರವೂ ಯಶವಂತ ಪಾಸ್ಪೋರ್ಟ್, ವಿಸಾ, ಎಮಿರೇಟ್ಸ್ ಕಾರ್ಡ್ ಯಾವುದೂ ಇರದೇ ಊರಿಗೆ ಕಳುಹಿಸುವ ವ್ಯವಸ್ಥೆ ಮಾಡಲು ಪರವಾನಗಿ ಪಡೆಯುವುದು ಅಸಾಧ್ಯ ಎಂಬಂತಿದ್ದಾಗ ಭಾರತೀಯ ರಾಯಭಾರಿ ಕಚೇರಿಯಲ್ಲಿ ರಶೀದ್ ಬಿಜೈ ನೇತೃತ್ವದಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಮತ್ತು ಎಲ್ಲಾ ಪರವಾನಗಿ ಕೆಲಸ ತ್ವರಿತವಾಗಿ ನಡೆಯಿತು,

ಈ ಸಂದರ್ಭದಲ್ಲಿ ದುಬೈ ಕಾನ್ಸುಲೇಟ್ ಮತ್ತು ಕಾರ್ಗೋ ಸಂಬಂಧಿಸಿದ ಎಲ್ಲಾ ಕೆಲಸಕ್ಕೂ ಅನಿವಾಸಿ ಕನ್ನಡಿಗರ ಒಕ್ಕೂಟ ಮತ್ತು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ಸಂಪೂರ್ಣ ಸಹಕಾರ ನೀಡಿದೆ.

ಅದೇ ರೀತಿ ಊರಿನಲ್ಲಿ ಬೇಕಾದ ಎಲ್ಲಾ ಕಾನೂನಾತ್ಮಕ ಕೆಲಸವನ್ನು ನ್ಯಾಯವಾದಿ ಉಲ್ಲಾಸ್ ಪಿಂಟೋ ಮಾಡಿದರೆ, ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯವರನ್ನು ಕಂಡು ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ನೀಡಿ ಸಹಕರಿಸಿದ ಅಥಾವುಲ್ಲಾ ಜೋಕಟ್ಟ (SDPI) ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸಹಕರಿಸಿದ ಅಧಿಕಾರಿಗಳಾದ ಯತೀಶ್ ಉಳ್ಳಾಲ, ಪ್ರವೀಣ್ ಕುಮಾರ್ ಸರ್ ಸೇವೆ ಅನನ್ಯವಾಗಿದೆ,

ಮೃತದೇಹ ರವಾನಿಸಲು ಉಂಟಾಗುವ ಖರ್ಚುನ್ನು ಕನ್ನಡಿಗರ ತಂಡವೇ ಸಂಪೂರ್ಣವಾಗಿ ಭರಿಸಲಿದೆ ಎಂದು ಭರವಸೆ ನೀಡಿದರು, ಅಬುಧಾಬಿಯಲ್ಲಿದ್ದ ಮೃತದೇಹ ದುಬೈ ಮೂಲಕ ತಾಯ್ನಾಡಿಗೆ ತಲುಪಬೇಕೆಂದು ಅಂತಿಮವಾದಾಗ ದುಬೈನಲ್ಲಿ ಪೊಲೀಸ್ ಮತ್ತು ಇತರ ಪರವಾನಗಿ ಕೆಲಸವನ್ನು ಹಮೀದ್ ಸತ್ತಿಕಲ್ಲ್ ನಡೆಸಿಕೊಟ್ಟು ಅಬುಧಾಬಿಯಿಂದ ದುಬೈ ತಲುಪಿ ದುಬೈನಲ್ಲಿ ನವೀದ್ ಮಾಗುಂಡಿ, ದಯಾ ಕಿರೋಡಿಯನ್, ಇಮ್ರಾನ್ ಖಾನ್, ಯಶವಂತ್ ಕರ್ಕೇರಾರವರು ಜೊತೆಗೂಡಿ ವಿಮಾನದಲ್ಲಿ ರವಾನಿಸುವ ಅಂತಿಮ ಕೆಲಸದಲ್ಲಿ ಪಾಲ್ಗೊಂಡು ಸಹಕರಿಸಿದರು.

ಅದೇ ರೀತಿ ಮ್ರತ ದೇಹ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ತಲುಪಿದಾಗ ಖಲೀಲ್ ತಂಡ ಸಹಕರಿಸಿತು.
ಈ ಕುರಿತು ಮಾತನಾಡಿದ ಅನಿವಾಸಿ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ರಶೀದ್ ಬಿಜೈ, ಎಲ್ಲಕ್ಕಿಂತಲೂ ಮಿಗಿಲಾದದ್ದು ಮಾನವಧರ್ಮ,ಯಶವಂತ್ ನಮ್ಮ ಊರಿನ ಹುಡುಗ, ಕನ್ನಡಿಗ, ಹಾಗಾಗಿ ಇದು ನಮ್ಮ ಕರ್ತವ್ಯ, ಕೊನೆಗೂ ಯಶವಂತನ ತಾಯಿಗೆ ಆತನ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿಲಿದೆ ಎಂಬ ಖುಷಿ ಇದೆ,

ಈ ಕೆಲಸದಲ್ಲಿ ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಸಹೃದಯಿ ಸಹೋದರರು ಸಹಕಾರ ನೀಡಿದ್ದಾರೆ, ವಿಶೇಷವಾಗಿ ಹಿದಾಯತ್ ಹಾಗೂ ಇತರ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು, ಅಲ್ಲದೇ ಯಶವಂತ್ ಕುಟುಂಬಕ್ಕೆ ಆರ್ಥಿಕವಾಗಿ ಸಹಾಯ ಮಾಡಲು ಅನಿವಾಸಿ ಕನ್ನಡಿಗರು ಮುಂದೆ ಬಂದಿದ್ದು, ಅದನ್ನೂ ಶೀಘ್ರದಲ್ಲೇ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

https://www.youtube.com/watch?v=XhLuxvWui8Y

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ

Published

on

ಮಂಗಳೂರು : ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರ ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಮೂತ್ರಪಿಂಡ (ಕಿಡ್ನಿ) ಆರೈಕೆಯ  ಸೇವೆಯನ್ನು ಒತ್ತಿ ಹೇಳಿದೆ. ಮೂತ್ರಪಿಂಡದ ಆರೋಗ್ಯ ಮತ್ತು ರೋಗ ತಡೆಗಟ್ಟುವ ಆರೈಕೆಯ ಕುರಿತು ಜಾಗೃತಿ ಹೆಚ್ಚಿಸುವ ಈ ನೇತೃತ್ವವನ್ನು ಆಸ್ಪತ್ರೆಯ ನೆಫ್ರಾಲಜಿ ವಿಭಾಗವು ಕೈಗೊಂಡಿದೆ.

ಈ ವಿಭಾಗವು ಅತ್ಯಾಧುನಿಕ ಕಿಡ್ನಿ ಕಸಿ ಸೇವೆಯನ್ನು ಹಾಗೂ ದಕ್ಷಿಣಕನ್ನಡದ ಅತಿದೊಡ್ಡದಾದ ಡಯಾಲಿಸಿಸ್‌ ಘಟಕವನ್ನು ಹೊಂದಿದ್ದು, 24 ಗಂಟೆ ನಿರಂತರ ಸೇವೆಗೆ ಮುಡಿಪಾಗಿರುವ ಮತ್ತು ಹೆಚ್ಚು ಅನುಭವಿ ನೆಫ್ರಾಲಜಿಸ್ಟ್‌ಗಳನ್ನು ಹೊಂದಿರುವ ಏಕೈಕ ಘಟಕವಾಗಿದ್ದು, ಸದಾ ರೋಗಿಯ ಆರೈಕೆಗೆ ಮುಡಿಪಾಗಿರುವ ಗುರಿಯನ್ನು ಹೊಂದಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ನೆಫ್ರಾಲಜಿ ತಜ್ಞ, ಡಾ ಅಶೋಕ್‌ ಭಟ್‌, ವಿಶ್ವ ಕಿಡ್ನಿ ದಿನ  ಮೂತ್ರಪಿಂಡದ ಆರೋಗ್ಯವನ್ನು ಆದ್ಯತೆಯನ್ನಾಗಿ ಪರಿಗಣಿಸುವಂತೆ ನೆನಪಿಸುವ ದಿನ. ರೋಗ ಲಕ್ಷಣಗಳು ಸಮಸ್ಯೆ ಮುಂದುವರಿದ ಹಂತ ತಲುಪಿದಾಗ ಗೋಚರವಾಗುವ ಕಾರಣದಿಂದ  ಸಾಕಷ್ಟು ರೋಗಿಗಳು ಆರಂಭಿಕ ಹಂತದಲ್ಲಿ ಸಮಸ್ಯೆಯ ಕುರಿತು ಅರಿವು ಹೊಂದಿರುವುದಿಲ್ಲ. ಆರೋಗ್ಯಕರ ಜೀವನಶೈಲಿ ಹೊಂದುವುದು, ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣ, ಹೈಡ್ರೇಟ್‌ ಆಗಿರುವುದು, ನಿಯಮಿತ ರಕ್ತ, ಮೂತ್ರ ಹಾಗೂ ಆರೋಗ್ಯ ಪರೀಕ್ಷೆಯಿಂದ ಕಿಡ್ನಿ ರೋಗದ ಅಪಾಯವನ್ನು ತಗ್ಗಿಸಬಹುದು. ರೋಗ ತಡೆಗಟ್ಟುವುದೇ ದೀರ್ಘ ಕಾಲದ ಕಿಡ್ನಿ ಆರೋಗ್ಯಕ್ಕೆ ದಾರಿ. ಪ್ರತಿಯೊಬ್ಬರು ನೆಫ್ರೊಲಾಜಿ ತಜ್ಞರನ್ನು ಭೇಟಿ ಮಾಡಿ ಸಮಸ್ಯೆಗೆ ಸಲಹೆಯನ್ನು ಪಡೆಯಬೇಕು ಎಂದರು.

ಹಿರಿಯ ನೆಫ್ರಾಲಜಿ ತಜ್ಞ ಡಾ.ಸುಶಾಂತ್‌ ಕುಮಾರ್ ಮಾತನಾಡಿ, ಎಲ್ಲಾ ಕಿಡ್ನಿ ಸಮಸ್ಯೆಗೆ ಡಯಾಲಿಸಿಸ್‌ ಒಂದೇ ಪರಿಹಾರವಲ್ಲ. ಡಯಾಲಿಸಿಸ್‌ ಸಿಕೆಡಿಯಲ್ಲಿ 5ನೇ ಹಂತದಲ್ಲಿ ಅಥವಾ ತೀವ್ರ ಪ್ರಮಾಣದ ಸಮಸ್ಯೆಗಳು ಕಂಡು ಬಂದಾಗ ಆರಂಭಿಸಬೇಕಾಗುತ್ತದೆ. ಡಯಾಲಿಸಿಸ್‌ಗೆ ಹೋಲಿಸಿದಾಗ ಸಿಕೆಡಿ ಅಥವಾ ಕಿಡ್ನಿ ಫೆಲ್ಯೂರ್ ಸಮಸ್ಯೆಗೆ ಮೂತ್ರಪಿಂಡದ ಕಸಿ ಉತ್ತಮ ವಿಧಾನ. ಕಿಡ್ನಿ ಕಸಿ ಯಶಸ್ಸಿನ ಪ್ರಮಾಣವು ಹೆಚ್ಚಾಗಿದೆ. ಆದರೆ ಇದು ಸೂಕ್ತವಾದ ದಾನಿಗಳು ಸಿಕ್ಕಾಗ ಮಾತ್ರ ಸಾಧ್ಯ. ಮರಣ ಹೊಂದಿರುವವರಿಂದ ಅಂಗಾಂಗ ದಾನ ಪಡೆಯಲು ನಮ್ಮಲ್ಲಿ ಸರ್ಕಾರದ ಯೋಜನೆಯಾದ ಜೀವ ಸಾರ್ಥಕತೆ ಕಾರ್ಯಕ್ರಮವಿದೆ. ಅದೇ ರೀತಿ ಜೀವಂತ ದಾನಿಗಳಿಂದ ದಾನ ಪಡೆಯಲು ನಮ್ಮ ಆಸ್ಪತ್ರೆಯಲ್ಲಿ ಸಮಿತಿಯಿದ್ದು ಅಂಗಾಂಗ ದಾನ ಆ್ಯಕ್ಟ್‌ಗೆ ಅನುಗುಣವಾಗಿ ಎಲ್ಲಾ ರೀತಿಯ ಅನುಮತಿ, ಕಾನೂನು ಅಗತ್ಯತೆಗಳನ್ನು ಪೂರೈಸಲಾಗುತ್ತದೆ ಎಂದರು.

ಸೌಲಭ್ಯಗಳ ಕುರಿತು ಮಾತನಾಡಿದ ನೆಫ್ರಾಲಜಿ ವಿಭಾಗದ ಎಚ್‌ಒಡಿ ಡಾ.ಮಯೂರ್ ಪ್ರಭು, ಕೆಎಂಸಿ ಆಸ್ಪತ್ರೆ ಮಂಗಳೂರಿನಲ್ಲಿ ನಮ್ಮ ದಕ್ಷಿಣ ಕನ್ನಡದಲ್ಲೇ  ಅತಿದೊಡ್ಡ ಡಯಾಲಿಸಿಸ್‌  ಕೇಂದ್ರಗಳಲ್ಲಿ ಒಂದಾದ ಅಡ್ವಾನ್ಸ್ಡ್ ಡಯಾಲಿಸಿಸ್‌ ಸೇವೆ, ತಜ್ಞ ಮೂತ್ರಪಿಂಡ ಕಸಿ ತಂಡ ಮತ್ತು ಅಡ್ವಾನ್ಸ್ಡ್ ಡಯಾಗ್ನೋಸ್ಟಿಕ್‌ ಸೇವೆ ಬೆಂಬಲದ ಬಹು ವಿಭಾಗೀಯ ಚಿಕಿತ್ಸಾ ಸೇವೆಯನ್ನು ಒಳಗೊಂಡ ಸಮಗ್ರ ನೆಫ್ರಾಲಜಿ ಸೌಲಭ್ಯವನ್ನು ರೂಪಿಸಿದ್ದೇವೆ. ನಮ್ಮ ತಂಡವು ಅತಿದೊಡ್ಡ ತಜ್ಞರ ತಂಡವಾಗಿದ್ದು ವರ್ಷದ 365 ದಿನವೂ 24 ಗಂಟೆಗಳ ಆರೋಗ್ಯ ಸೇವೆಯನ್ನು ನೀಡುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್‌ ದಾ*ಳಿ

ನಾವು ರೋಗಿ ಕೇಂದ್ರಿತ ಸೇವೆಗಳಾದ ಬೆಡ್‌ಸೈಡ್‌ ಟ್ರೀಟ್‌ಮೆಂಟ್‌, ಐಸಿಯುನಲ್ಲಿ ಡಯಾಲಿಸಿಸ್‌ ಸೌಲಭ್ಯ, ಶೂನ್ಯ ಹರಡುವಿಕೆಯ ವಿಧಾನದೊಂದಿಗೆ ಎಚ್‌ಐವಿ ಮತ್ತು ಎಚ್‌ಬಿಎಸ್‌ಎಜಿ ಸೋಂಕಿತರಿಗೆ ವಿಶೇಷ ಡಯಾಲಿಸಿಸ್‌ ಸೌಲಭ್ಯ, ಸುಸಜ್ಜಿತ ಎಚ್‌ಡಿಎಫ್‌ ಡಯಾಲಿಸಿಸ್ ಘಟಕ ಮತ್ತು ನಿಯಮಿತ ಡಯಾಲಿಸಿಸ್ ಅಗತ್ಯವಿರುವ ಹಾಸಿಗೆ ಹಿಡಿದ ರೋಗಿಗಳಿಗೆ ಮೀಸಲಾದ ಸಾರಿಗೆ ಬೆಂಬಲವನ್ನು ಒದಗಿಸಲಾಗುತ್ತದೆ. ಈ ಪ್ರದೇಶದಲ್ಲಿ ರೋಗಿ-ಕೇಂದ್ರಿತ ನೆಫ್ರಾಲಜಿ ಸೇವೆಗಳನ್ನು ವಿಸ್ತರಿಸುವುದನ್ನು ಮುಂದುವರಿಸುವುದರೊಂದಿಗೆ ಮೂತ್ರಪಿಂಡದ ಕಾಯಿಲೆಗಳ ಜಾಗೃತಿ, ಆರಂಭಿಕ ಪತ್ತೆ ಮತ್ತು ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಬಲಪಡಿಸುವ ತನ್ನ ಬದ್ಧತೆಯನ್ನು ಆಸ್ಪತ್ರೆ ಪುನರುಚ್ಚರಿಸುತ್ತದೆ ಎಂದರು.

Continue Reading

LATEST NEWS

ಬೆಂಗಳೂರು: ಟಿಪ್ಪರ್‌ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಜೀವಾಂತ್ಯ!

Published

on

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್‌ ಲಾರಿ ಹರಿದು 4ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನ 21 ವರ್ಷದ ಕೃತಿಕಾ ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಲ್ಲಿ ಕೃತಿಕಾ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿನಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗೆಳತಿ ಹಂಸಾ ಜೊತೆ ಕೃತಿಕಾ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಚಲಿಸುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ, ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಕೂಟಿ ಚಲಾಯಿಸುತ್ತಿದ್ದ ಹಂಸಾ ಎಡಭಾಗಕ್ಕೆ ಬಿದ್ರೆ, ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಕೃತಿಕಾ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಶಾಲಾ ಕಟ್ಟಡದಿಂದ ಜಿ*ಗಿದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ

ಹಂಸಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಂಗೇರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಬಗ್ಗೆ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದೇನು?

ಮೈಸೂರು ರಸ್ತೆಯಲ್ಲಿರುವ ಆರ್.ಆರ್ ಆಸ್ಪತ್ರೆ ಎಕ್ಸಿಟ್ ಗೇಟ್ ನಲ್ಲಿ ಅಪಘಾತ ನಡೆದಿದೆ. ಇಬ್ಬರು ಮೆಡಿಕಲ್ ವಿದ್ಯಾರ್ಥಿನಿ ಬೈಕ್ ನಲ್ಲಿ ತೆರಳುತ್ತಿದ್ದರು. ಬೆಂಗಳೂರಿಂದ ಮೈಸೂರು ಕಡೆಗೆ ಹೋಗ್ತಿದ್ದ ಲಾರಿ ಡಿಕ್ಕಿ ಆಗಿದೆ. ಹಿಂಬದಿ ಸವಾರಿಣಿ ಸಾವನ್ನಪ್ಪಿದ್ದಾರೆ, ಚಾಲಕಿಗೆ ಗಾಯವಾಗಿದೆ. ಮೃತಳು ಆರ್.ಆರ್.ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದಾರೆ.

Continue Reading

International news

ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್‌ ದಾ*ಳಿ

Published

on

ಮಂಗಳೂರು/ಟೆಹ್ರಾರ್ : ಯುಎಇ ಬಂದರಿನಿಂದ ಹೊರಟಿದ್ದ ಥಾಯ್ ಧ್ವಜದ ಸರಕು ಹಡಗಿನ ಮೇಲೆ ಹಾರ್ಮುಜ್ ಜಲಸಂಧಿಯ ಬಳಿ ದಾ*ಳಿ ನಡೆಸಲಾಗಿದೆ.

ಇಪ್ಪತ್ತು ನಾವಿಕರನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಥಾಯ್ ಕಂಪೆನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕ ನೌಕೆ ಮಯೂರಿ ನಾರಿ ಹೆಸರಿನ ನೌಕೆ ಮೇಲೆ ದಾಳಿ ನಡೆಸಲಾಗಿದೆ.

ಈ ನೌಕೆ ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿನತ್ತ ಸಾಗುತ್ತಿತ್ತು. ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವಾಗ ಈ ದಾ*ಳಿ ನಡೆದಿದೆ. ದಾ*ಳಿಯ ಹೊಣೆಯನ್ನು ಇರಾನ್ ಹೊತ್ತುಕೊಂಡಿದೆ.

ಇದನ್ನೂ ಓದಿ : ಇಸ್ರೇಲ್‌-ಇರಾನ್‌ ಸಂಘರ್ಷ; ಕಿಮ್‌ ಜಾಂಗ್‌ ಉನ್‌ ಎಂಟ್ರಿ..ಬೆಂಬಲ ಯಾರಿಗೆ!?

20 ನಾವಿಕರನ್ನು ತೆಪ್ಪಗಳ ಮೂಲಕ ಒಮಾನಿ ನೌಕಾಪಡೆ ರಕ್ಷಿಸಿದ್ದು, ಉಳಿದ ಮೂವರು ನೌಕೆಯಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. 178 ಮೀಟರ್ ಉದ್ದವಿರುವ ಈ ಹಡಗು 30,000 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಸದ್ಯ ದಾ*ಳಿಯ ಬಗ್ಗೆ ತನಿಖೆ ನಡೆಸುವುದಾಗಿ ರಾಯಲ್ ಥಾಯ್ ನೌಕಾಪಡೆ ಹೇಳಿಕೆ ನೀಡಿದೆ.

 

 

 

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page