Connect with us

LATEST NEWS

ಅಮೇರಿಕಾ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಪಟ್ಲ ಸತೀಶ್ ಶೆಟ್ಟಿ ಯಕ್ಷಗಾನ ತಂಡ

Published

on

“ಅಮೇರಿಕಾದಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಗೌರವ ಅವಿಸ್ಮರಣೀಯ” -ಪಟ್ಲ ಸತೀಶ್ ಶೆಟ್ಟಿ

ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು.

ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ ಅವರು, “ವಿದೇಶಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ವಿಚಾರ” ಎಂದರು.

“ಅಮೇರಿಕಾದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಣೆ ಮಾಡಿದ್ದಾರೆ. ಇದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೇರಿಕಾ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರ ಪ್ರಮುಖರು ಅಮೆರಿಕದ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು ಅವರಿಗೆ ಧನ್ಯವಾದಗಳು” ಎಂದರು.

ಪ್ರೊ.ಎಂ.ಎಲ್. ಸಾಮಗ ಮಾತನಾಡಿ, “ಅಮೇರಿಕಾದ ಜನರು ನಮ್ಮ ಯಕ್ಷಗಾನ ತಂಡದ ಮೇಲೆ ತೋರಿಸಿದ ಪ್ರೀತಿ ಮರೆಯಲಾಗದ್ದು. ಪ್ರತೀ ಪ್ರದರ್ಶನಕ್ಕೂ 500 ಜನರಿಗಿಂತ ಕಡಿಮೆ ಜನರು ಸೇರುತ್ತಿರಲಿಲ್ಲ. ನಮ್ಮ ತಂಡದಲ್ಲಿ ಕಲಾವಿದರು ಮಿತಿಯಲ್ಲಿ ಇದ್ದುದರಿಂದ ಅದಕ್ಕೆ ಸೂಕ್ತ ಎನಿಸುವ ಪ್ರಸಂಗ ಆಡಿ ತೋರಿಸಬೇಕಿತ್ತು. ಕೆಲವರು ತಾವು ವೇಷ ಹಾಕುತ್ತೇವೆ ಎಂದು ಮುಂದೆ ಬಂದರು ಮತ್ತೂ ಕೆಲವರು ಭಾಗವತಿಕೆ ಕಲಿಯಲು ಮುಂದೆ ಬಂದರು. ಆನ್ ಲೈನ್ ಕ್ಲಾಸ್ ಬಗ್ಗೆಯೂ ವಿಚಾರಿಸಿದ್ದಾರೆ. ಮುಂದೆ ಆ ಬಗ್ಗೆ ಯೋಚನೆ ಮಾಡುತ್ತೇವೆ“ ಎಂದರು.

ಪಟ್ಲ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.

ಅಮೇರಿಕಾ ನಗರಗಳಲ್ಲಿ “ಪಟ್ಲ ಫೌಂಡೇಶನ್ ಡೇ”!

ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಪ್ರದರ್ಶಿಸಿದ ಯಕ್ಷಗಾನ ಹಾಗೂ ಪಟ್ಲ ಫೌಂಡೇಷನ್ ಕಾರ್ಯ ಚಟುವಟಿಕೆಯನ್ನು ಮೆಚ್ಚಿ ಅಮೆರಿಕದ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್‌ಫೀಲ್ಡ್ ನಗರದ ಮೇಯರ್ ಸ್ಟೀವನ್ ವಿ. ಪೋಂಟೊ ಅವರು ಆಗಸ್ಟ್ 18 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ. ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಅವರು ಜುಲೈ 27 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ.

LATEST NEWS

ಖಾವಿ ವೇಷದಲ್ಲಿ ಮನೆಗೆ ಬರ್ತಾರೆ, ಭಸ್ಮ ಹಾಕ್ತಾರೆ-ಇಂಥವರನ್ನು ಕಂಡ್ರೆ ಹುಷಾರಾಗಿರಿ..!

Published

on

ಕಾರ್ಕಳ: ಸ್ವಾಮೀಜಿಗಳ ವೇಷದಲ್ಲಿ ಕೆಲವರು ವಾಹನವೊಂದರಲ್ಲಿ ಮನೆ ಮನೆಗೆ ತೆರಳುತ್ತಿರುವ ಕುರಿತಂತೆ ಫೋಟೊ ಮತ್ತು ಎಚ್ಚರಿಕೆಯ ಸಂದೇಶ ನೀಡುವ ಆಡಿಯೋವೊಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಈ  ಸ್ವಾಮೀಜಿ ವೇಷಧಾರಿಗಳು ಕಾರ್ಕಳದ ಮಿಯ್ಯಾರ್ ಪರಿಸರದಲ್ಲಿ ರಿಕ್ಷಾ ಟೆಂಪೊ ಮಾದರಿಯ ವಾಹನದಲ್ಲಿ ಪ್ರಯಾಣಿಸುತ್ತಾ ಮನೆ ಮನೆಗೆ ತೆರಳುತ್ತಿದ್ದಾರೆ.

ಮನೆಯೊಂದಕ್ಕೆ ತೆರಳಿ ಅಲ್ಲಿದ್ದ ಮಹಿಳೆಗೆ ಭಸ್ಮ ಹಾಕಿರುವುದು ಮತ್ತು ಪರಿಸರದ ಜನರು ಬಂದು ಈ ವೇಷಧಾರಿಗಳನ್ನು ಅಲ್ಲಿಂದ ಓಡಿಸಿದ್ದಾರೆ ಎಂದು ವ್ಯಕ್ತಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಇಂತಹ ಕಪಟ  ಸ್ವಾಮೀಜಿ ವೇಷಧಾರಿಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಬೇಕೆಂಬ ಎಚ್ಚರಿಕೆಯ ಸಂದೇಶವನ್ನು ಆಡಿಯೋದಲ್ಲಿ ಉಲ್ಲೇಖಿಸಲಾಗಿದೆ.

ಇವರು ಎಂಎಚ್‌ ರಿಜಿಸ್ಟ್ರೇಷನ್‌ ಹೊಂದಿರುವ ವಾಹನದಲ್ಲಿ  ಆಗಮಿಸಿದ್ದು ಉತ್ತರ ಭಾರತದಿಂದ ಬಂದ ಕಪಟರಾಗಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವ ಇಂತಹ ಸ್ವಾಮೀಜಿಗಳ ಬಗ್ಗೆ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading

LATEST NEWS

ತನ್ನ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳನ್ನು ಹತ್ಯೆ ಮಾಡಿದ ಮಹಿಳೆ; ಕಾರಣ ಕೇಳಿದ್ರೆ ಶಾಕ್ ಆಗ್ತಿರಾ!

Published

on

ಪಾಣಿಪತ್: ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರಣಿ ಕೊಲೆ ಪ್ರಕರಣವೂ ಜನರನ್ನು ಬೆಚ್ಚಿಬೀಳಿಸಿದೆ. ಕೆಟ್ಟ ಮಕ್ಕಳಿದ್ದರೂ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎಂಬ ಮಾತನ್ನು ಈ ಘಟನೆ ಸುಳ್ಳು ಮಾಡಿದೆ. ಇಲ್ಲೊಬ್ಬ ತಾಯಿ ತನ್ನ ಸ್ವಂತ ಮಗುವನ್ನು ಸೇರಿ ಸಂಬಂಧಿಕರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.


ನೌಲ್ತಾ ಗ್ರಾಮದ ಪೂನಂ(32) ಕೃತ್ಯ ಎಸಗಿದ ತಾಯಿ.

ಪೂನಂ ಕಳೆದ ಎರಡು ವರ್ಷಗಳಲ್ಲಿ, ತನ್ನ ಮೂರು ವರ್ಷದ ಮಗು ಸೇರಿದಂತೆ ನಾಲ್ಕು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮದುವೆ ಮನೆಯಲ್ಲಿ ರಾದ್ಧಾಂತ ಮಾಡಿದ ವರನ ಕುಟುಂಬ; ಕಾರಣ ಏನು ಗೊತ್ತಾ?

ನಾಲ್ಕು ಮಕ್ಕಳ ಕೊಲೆ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆಯ ರಹಸ್ಯ ಬಯಲಾಗಿದ್ದು, ಮಕ್ಕಳ ಸೌಂದರ್ಯದ ಬಗ್ಗೆ ಆಕೆಗಿದ್ದ ಅತಿಯಾದ ಅಸೂಯೆಯೇ ಈ ಕೊಲೆಗಳಿಗೆ ಕಾರಣ ಎಂದು ತಿಳಿದುಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page