Connect with us

LATEST NEWS

ಹನಿಟ್ರ್ಯಾಪ್ ಆರೋಪಿಗಳ ಸ್ಥಳ ಮಹಜರು..! ಸತ್ತಾರ್ ಮನೆ ಮುಂದೆ ಪ್ರತಿಭಟನೆ..!

Published

on

ಮಂಗಳೂರು : ಹನಿಟ್ರ್ಯಾಪ್ ಪ್ರಕಣದಿಂದ ಮನನೊಂದು ಜೀವಾಂತ್ಯಗೊಳಿಸಿದ್ದ ಉದ್ಯಮಿ ಮುಮ್ತಾಜ್ ಅಲಿಯ ಆರೋಪಿಗಳ ಸ್ಥಳಮಹಜರು ನಡೆಸಲಾಗಿದೆ. ಕಾವೂರು ಮತ್ತು ಸುರತ್ಕಲ್ ಪೊಲೀಸರು ಬಿಗಿ ಭದ್ರತೆಯಲ್ಲಿ ಕೃಷ್ಣಾಪುರದ 7ನೇ ಬ್ಲಾಕ್‌ನಲ್ಲಿರುವ ಪ್ರಮುಖ ಆರೋಪಿ ಸತ್ತಾರ್ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಮುಮ್ತಾಜ್ ಅಲಿ ಬೆಂಬಲಿಗರು ಸತ್ತಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಮುಮ್ತಾಜ್ ಅಲಿ ಜೀವಾಂತ್ಯಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಅವರ ಸಹೋದರ ಆರು ಜನರ ವಿರುದ್ಧ ದೂರು ನೀಡಿದ್ದರು. ರಹೆಮತ್ ಎಂಬ ಮಹಿಳೆ ಹಾಗೂ ಆಕೆಯ ಪತಿ ಮತ್ತು ಸತ್ತಾರ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿತ್ತು. ರೆಹಮತ್ ಹಾಗೂ ಶಾಫೀ ಎಂಬ ಆರೋಪಿಗಳನ್ನು ಪೊಲೀಸರು ಬಂಟ್ವಾಳ ತಾಲೂಕಿನ ನಂದಾವರದ ಬಳಿ ಬಂಧಿಸಿದ್ದು, ಆರೋಪಿ ಸತ್ತಾರ್ ಮುಂಬೈಗೆ ಪಲಾಯನ ಮಾಡುತ್ತಿದ್ದ ವೇಳೆ ಬಂಧಿಸಲಾಗಿತ್ತು. ರಹೆಮತ್ ಹಾಗೂ ಶಾಫೀ ಕೃಷ್ಣಾಪುರದ 7ನೇ ಬ್ಲಾಕ್‌ನಲ್ಲಿರುವ ಸತ್ತಾರ್ ಮನೆಗೆ ಭೇಟಿ ನೀಡಿದ್ದಾಗಿ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸತ್ತಾರ್ ಸಹಿತವಾಗಿ ಇನ್ನಿಬ್ಬರು ಆರೋಪಿಗಳನ್ನು ಕೃಷ್ಣಾಪುರದ ಸತ್ತಾರ್ ನಿವಾಸಕ್ಕೆ ಕರೆತರಲಾಗಿತ್ತು.

ಪೊಲೀಸರು ಸ್ಥಳ ಮಹಜರಿಗೆ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆ ಮುಮ್ತಾಜ್ ಅಲಿಯ ನೂರಾರು ಬೆಂಬಲಿಗರು ಸತ್ತಾರ್ ಮನೆಯ ಮುಂದೆ ಜಾಮಾಯಿಸಿದ್ದಾರೆ. ಈ ವೇಳೆ ಘೋಷಣೆಗಳನ್ನು ಕೂಗಿ ಸತ್ತಾರ್ ಹಾಗೂ ರಹೆಮತ್‌ಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸುರತ್ಕಲ್ ಹಾಗೂ ಕಾವೂರು ಪೊಲೀಸರು ಹೆಚ್ಚಿನ ಭದ್ರತೆಯಲ್ಲಿ ಸ್ಥಳಮಹಜರಿಗೆ ಬಂದಿದ್ದು, ಸತ್ತಾರ್ ಮನೆಯ ಮುಂದೆ ಜಮಾಯಿಸಿದ್ದ ಜನರನ್ನು ನಿಯಂತ್ರಿಸಿದ್ದಾರೆ. ಈ ವೇಳೆ ಕೊಂಚ ಕಾಲ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿತ್ತಾದರೂ, ಪೊಲೀಸರು ಆರೋಪಿಗಳ ಸ್ಥಳಮಹಜರು ನಡೆಸಿ ವಾಪಾಸಾಗಿದ್ದಾರೆ.  ಸಮಾಜ ಸೇವಕನಾಗಿ, ಧಾರ್ಮಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಮುಮ್ತಾಜ್ ಅಲಿ ರಹೆಮತ್ ಎಂಬ ಮಹಿಳೆಯ ಕಿರುಕುಳದಿಂದ ಜೀವಾಂತ್ಯಗೊಳಿಸಿದ್ದರು.

 

LATEST NEWS

ಮೃತ ರಾಕೇಶ್ ಪೂಜಾರಿ ಕುಟುಂಬಕ್ಕೆ 1 ಕೋಟಿ ಪರಿಹಾರ ..! ಸಾಮಾಜಿಕ ಜಾಲತಾಣದಲ್ಲಿ ಭಾರೀ ಒತ್ತಾಯ ..!

Published

on

ಮಂಗಳೂರು : ಇಡೀ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಡಿದಂತಹ ಘಟನೆಯೊಂದು ನಡೆದಿದ್ದು, ಇಡೀ ಕನ್ನಡಿಗರನ್ನು ಕಾಮಿಡಿ ಮೂಲಕ ನಕ್ಕು ನಲಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿ ಕುಟುಂಬ ಹಾಗೂ ನಾಡಿನ ಹಿರಿಯ ಕಲಾವಿದರೆಲ್ಲರೂ ಸಂತಾಪ ಸೂಚಿಸಿದ್ದಾರೆ. ಇದೀಗ ರಾಕೇಶ್ ಪೂಜಾರಿ ಕುಟುಂಬಕ್ಕೆ ಕಾಂತಾರ ಚಿತ್ರತಂಡವು ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ನಟ ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸುತ್ತಿರುವ ಕಾಂತಾರ-1 ಸಿನಿಮಾದಲ್ಲಿ ರಾಕೇಶ್ ಪೂಜಾರಿ ಅಭಿನಯಿಸಿದ್ದರು. ಇಂತಹ ಸಮಯದಲ್ಲೇ ಸಂಭವಿಸಿದ ನಟನ ಸಾವು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಹಾಗಾಗಿ ಕಾಂತಾರ ಸಿನಿಮಾ ತಂಡದಿಂದ 1 ಕೋಟಿ ರೂ. ಪರಿಹಾರವನ್ನು ರಾಕೇಶ್ ಪೂಜಾರಿ ಕುಟುಂಬಕ್ಕೆ ನೀಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯ ಮಾಡಲಾಗುತ್ತಿದೆ.

ಇದನ್ನೂ ಓದಿ : ‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ ..?’ ; ಸ್ವಾಮೀಜಿ ಪ್ರಶ್ನೆಗೆ ಕೊಹ್ಲಿ ಹೇಳಿದ್ದೇನು ಗೊತ್ತಾ ..?

ರಾಕೇಶ್ ಪೂಜಾರಿ ಅಭಿಮಾನಿಗಳು ಹಾಗೂ ಕನ್ನಡ ಸಿನಿಮಾ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದು, ಈವರೆಗೆ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

Continue Reading

LATEST NEWS

‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ ..?’ ; ಸ್ವಾಮೀಜಿ ಪ್ರಶ್ನೆಗೆ ಕೊಹ್ಲಿ ಹೇಳಿದ್ದೇನು ಗೊತ್ತಾ ..?

Published

on

VIRAL : ಭಾರತೀಯರ ನೆಚ್ಚಿನ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಈ ಬಾರಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದಾರೆ. ಬಳಿಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ತಾವು ಆರಾಧಿಸುವಂತಹ ಪ್ರೇಮಾನಂದ ಮಹಾರಾಜ್ ಸ್ವಾಮೀಜಿಯ ವಾಸಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರೇಮಾನಂದ ಮಹಾರಾಜರು ವಿರಾಟ್ ಕೊಹ್ಲಿಗೆ ‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ..? ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಅಚ್ಚರಿಯ ಉತ್ತರ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿಲ್ಲದಿದ್ದಾಗ, ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದರು. ಅಲ್ಲಿಂದ ಆಶೀರ್ವಾದ ಪಡೆದ ನಂತರ, ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ ಕೊಹ್ಲಿ ಭಾರತವನ್ನು ಚಾಂಪಿಯನ್ ಮಾಡಿದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದ್ದರು. ಈಗ ಮತ್ತೊಮ್ಮೆ ಕೊಹ್ಲಿ ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಬಾರಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿದ್ದು, ಕೊಹ್ಲಿ ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ : ‘ಆಪರೇಷನ್‌ ಸಿಂದೂರ್’ ನಂತರದ ಮುಂದಿನ ಕ್ರಮದ ಕುರಿತು ಇಂದು ಮಹತ್ವದ ಸಭೆ

ಕೊಹ್ಲಿ ಸ್ವಾಮೀಜಿಯನ್ನು ಭೇಟಿಯಾದ ಸಂದರ್ಭ, ಮಹಾರಾಜ್ ಜಿ ಕೊಹ್ಲಿ ಬಳಿ ‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ..?’ ಎಂದು ಕೇಳಿದರು. ಅದಕ್ಕೆ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ ಕೊಹ್ಲಿ. ಕೊಹ್ಲಿ ದಂಪತಿ ಜೊತೆ ಸ್ವಾಮೀಜಿ  ಬಹಳ ಹೊತ್ತು ಮಾತನಾಡಿದ್ದಾರೆ. ಇನ್ನು ಮಹಾರಾಜ್ ಜೀ ಹೇಳುತ್ತಿರುವುದನ್ನು ಕೊಹ್ಲಿ ಗಮನವಿಟ್ಟು ಕೇಳುತ್ತಿದ್ದರು. ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾದ ನಂತರ ಕೊಹ್ಲಿ ಮತ್ತು ಅನುಷ್ಕಾ ತುಂಬಾ ಸಂತೋಷದಿಂದ ಕಾಣುತ್ತಿದ್ದರು. ಇಬ್ಬರ ಮುಖದಲ್ಲೂ ತೃಪ್ತಿಯ ಭಾವ ಸ್ಪಷ್ಟವಾಗಿ ಕಾಣುತ್ತಿತ್ತು.

Continue Reading

LATEST NEWS

ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಪೋ*ಟ, ಐವರಿಗೆ ಗಂ*ಭೀರ ಗಾಯ

Published

on

ಉಡುಪಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಫೋ*ಟಗೊಂಡು, ಐವರು ಗಂ*ಭೀರ ಗಾಯಗೊಂಡಿದ್ದಾರೆ.

ನಿನ್ನೆ (ಮೇ.13) ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂ*ಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂ*ಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಷ್ಟಕ್ಕೂ ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನವಷ್ಟೆ.

ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕೆ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

ಈ ಸಂದರ್ಭ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಅಧಿಕಾರಿಗಳು ಹಾಗೂ ಬಂದರಿನಲ್ಲಿ ನೂರಾರು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.
ಜೊತೆಗೆ ಕರಾವಳಿ ಕಾವಲು ಪಡೆಯ ಶಸ್ತ್ರಸಜ್ಜಿತ ಸಿಬ್ಬಂದಿಗಳು ಬೋಟ್‌ನಲ್ಲಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ: ಆದಂಪುರ್‌ ವಾಯುನೆಲೆಯಲ್ಲಿ ಪ್ರಧಾನಿ ಮೋದಿ

ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ನೀಡಲಾಗಿದೆ. ಮೀನುಗಾರರು 3 ಬೋಟ್‌ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page