Connect with us

LATEST NEWS

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇನ್‌ಸ್ಪೆಕ್ಟರ್ ವರ್ಗಾವಣೆ

Published

on

ಮಂಗಳೂರು: ರಾಜ್ಯದಲ್ಲಿ 179 ಪೊಲೀಸ್ ಇನ್‌ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರ ಶನಿವಾರ ಆದೇಶ ಹೊರಡಿಸಿದ್ದು, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲೂ ಹಲವರನ್ನು ವರ್ಗಾವಣೆ ಗೊಳಿಸಲಾಗಿದೆ.


ಬರ್ಕೆ ಠಾಣೆಯ ಜ್ಯೋತಿರ್ಲಿಂಗ ಹೊನ್ನಕಟ್ಟೆ ಅವರನ್ನು ಬೆಂಗಳೂರು ಸಿಸಿಬಿಗೆ, ಸಿಸಿಆರ್‌ಬಿಯಲ್ಲಿದ್ದ ಸಿದ್ದಗೌಡ, ಭಜಂತ್ರಿ ಕಂಕನಾಡಿ ನಗರ ಠಾಣೆಗೆ, ಕಂಕನಾಡಿ ನಗರ ಠಾಣೆಯಲ್ಲಿದ್ದ ಅಶೋಕ್ ಪಿ. ಉತ್ತರ ಕನ್ನಡ ಮಹಿಳಾ ಠಾಣೆಗೆ, ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರು ಮಂಗಳೂರು ಮಹಿಳಾ ಠಾಣೆಗೆ, ರಾಜ್ಯ – ಗುಪ್ತ ವಾರ್ತೆಯಲ್ಲಿದ್ದ ಮಂಜುನಾಥ ಪಾಂಡೇಶ್ವರ ಠಾಣೆಗೆ, ದಕ್ಷಿಣ ಸಂಚಾರಿ ಠಾಣೆಯಿಂದ ಗುರುದತ್ ಕಾಮತ್ ಸಿಸಿಆರ್‌ಬಿಗೆ, ಬಾಗಲಕೋಟೆ ಬಾದಾಮಿ ವೃತ್ತದಿಂದ ರಮೇಶ್ ಎಚ್. ಹನಾಪುರ ದಕ್ಷಿಣ ಸಂಚಾರ ಠಾಣೆಗೆ, ಡಿಸಿಆರ್‌ ಇಯಿಂದ ವಿನಾಯಕ ಬಿಲ್ಲವ ಎಸಿಬಿಗೆ, ಮಂಗಳೂರು ಮಹಿಳಾ ಠಾಣೆಯಿಂದ ರೇವತಿ ಎನ್. ಸಿಎಸ್‌ಪಿಗೆ ವರ್ಗಾವಣೆ ಗೊಂಡಿದ್ದಾರೆ.

BELTHANGADY

ಬೆಳ್ತಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ನಗದನ್ನು ದೋಚಿ ಪರಾರಿಯಾದ ಕಳ್ಳ

Published

on

ಬೆಳ್ತಂಗಡಿ: ರಾತ್ರಿಯ ವೇಳೆ ಮನೆಮಂದಿ ಎಲ್ಲಾ ನಿದ್ದೆಗೆ ಜಾರಿದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುವಿನ ಮನೆಯಲ್ಲಿ ಏ.23ರಂದು ರಾತ್ರಿ ನಡೆದಿದೆ.

ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಕಳ್ಳರು ಹಿಂಬದಿ ಬಾಗಿಲಿನಿಂದ ಬೀಗ ಮುರಿದು ಮನೆಯೊಳಗೆ ಬಂದದ್ದು ಮಾತ್ರವಲ್ಲದೇ ಸುಮಾರು 5 ಪವನ್ ನಷ್ಟು ಚಿನ್ನ, ಮೂರು ಸಾವಿರ ರೂಪಾಯಿ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ಮನೆಯವರು ತಿಳಿಸಿದ್ದಾರೆ. ಅಲ್ಲದೇ ಮನೆಯ ಬ್ಯಾಗ್‌ಗಳನ್ನು ಕದ್ದುಕೊಂಡು ಹೋಗಿದ್ದು, ಬಳಿಕ ಅದರಲ್ಲಿ ಏನೂ ಇಲ್ಲದ್ದನ್ನು ನೋಡಿ ಪಕ್ಕದ ಅಂಗಳದಲ್ಲಿ ಬಿಸಾಕಿ ಹೋಗಿದ್ದಾರೆ.

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ನುಗ್ಗಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಆಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯವರು ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ.

ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ. ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಬಸ್‌ನಲ್ಲಿ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಬಸ್ ನಿರ್ವಾಹಕನನ್ನು ಬಂಧಿಸಿದ ಕೊಣಾಜೆ ಪೊಲೀಸರು

Published

on

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿದ ಸರ್ಕಾರಿ ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

 

ಮುಡಿಪು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ ನಲ್ಲಿ ಯುವತಿಗೆ ಬಸ್ ನಿರ್ವಾಹಕ ಕಿರುಕುಳ ನೀಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಆಧಾರದಲ್ಲಿ ಕೊಣಾಜೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡು ಆರೋಪಿ ನಿರ್ವಾಹಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Watch Video: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಸ್ ನಿರ್ವಾಹಕನ ಅಸಭ್ಯ ವರ್ತನೆ

ಆರೋಪಿ ಪ್ರದೀಪ್ ಕಶಪ್ಪ ನಾಯ್ಕರ್ ಎಂದು ಗುರುತಿಸಲಾಗಿದ್ದು, ಆರೋಪಿಯ ವಿರುದ್ಧ ಬಿಎನ್ ಎಸ್ 75 ಮತ್ತು 76 ರಂತೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

ಜಮ್ಮು:  ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ; ಓರ್ವ ಯೋಧ ಹು*ತಾತ್ಮ

Published

on

ಮಂಗಳೂರು/ಜಮ್ಮು : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾ*ಳಿ ದೇಶವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೇ ಭಯೋತ್ಪಾದಕರ ಕ್ರೌ*ರ್ಯಕ್ಕೆ ಭಾರತೀಯರು ಆಕ್ರೋಶಗೊಂಡಿದ್ದಾರೆ. ಭಾರತೀಯ ಸೇನೆ ಉ*ಗ್ರರನ್ನು ಮಟ್ಟ ಹಾಕಲು ಕಾರ್ಯಾಚರಣೆಗಿಳಿದಿವೆ. ಜಮ್ಮುವಿನ ಉಧಂಪುರ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ತಡರಾತ್ರಿ ಸೇನಾ ಕಾರ್ಯಾಚರಣೆ ನಡೆದಿದ್ದು, ಯೋಧರೊಬ್ಬರು ಹು*ತಾತ್ಮರಾಗಿದ್ದಾರೆ.

ಸಾಂದರ್ಭಿಕ ಚಿತ್ರ

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸೇನಾ ತುಕಡಿಗಳು ಡುಡು ಬಸಂತ್‌ಗರ್ ಬಳಿಯ ಕಾಡಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉ*ಗ್ರರು ಹಾಗೂ ಯೋಧರ ನಡುವೆ ಗುಂ*ಡಿನ ಕಾ*ಳಗ ನಡೆದಿದೆ. ಈ ವೇಳೆ ಯೋಧರೊಬ್ಬರು ತೀವ್ರವಾಗಿ ಗಾ*ಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃ*ತರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ.

ಸ್ಥಳದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಉಗ್ರರ ಸುಳಿವು ನೀಡಿದವರಿಗೆ 20ಲಕ್ಷ ರೂ. ಬಹುಮಾನ ಘೋಷಣೆ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭ*ಯೋತ್ಪಾದಕರು ಮಂಗಳವಾರ(ಎ.22) ಗುಂ*ಡಿನ ದಾ*ಳಿ ನಡೆಸಿದ್ದರು. ಇಬ್ಬರು ಕನ್ನಡಿಗರು ಸೇರಿ 28 ಮಂದಿ ಜೀ*ವ ಕಳೆದುಕೊಂಡಿದ್ದು, 20 ಜನರು ಗಾ*ಯಗೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page