Connect with us

LATEST NEWS

Udupi: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸ್‌ ದಾಳಿ-ಇಬ್ಬರ ಬಂಧನ..!

Published

on

ಉಡುಪಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಉಡುಪಿ: ಉಡುಪಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಅಬ್ದುಲ್‌ ಸಲಾಮತ್‌ ಮತ್ತು ಚಂದ್ರಹಾಸ ಬಂಧಿತ ಆರೋಪಿಗಳು.

ಅರೋಪಿಗಳಿಂದ ವೇಶ್ಯಾವಾಟಿಕೆ ವ್ಯವಹಾರಕ್ಕೆ ಬಳಸಿದ ಕಾಂಡೋಮ್‌ ಗಳು, 4 ಮೊಬೈಲ್‌ ಫೋನ್‌, 1 ಕಾರು, 2 ಮೋಟಾರ್‌ ಸೈಕಲ್‌ ಮತ್ತು 10,000 ರೂಪಾಯಿ ನಗದು ವಶ ಪಡಿಸಿಕೊಂಡಿದ್ದಾರೆ.

ಐವರು ಯುವತಿಯರ ಪೈಕಿ ಮೂವರು ಬೆಂಗಳೂರು ಮೂಲದವರು ಹಾಗೂ ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್‌ ಮತ್ತು ಮುಂಬಯಿ ನಿವಾಸಿಗಳಾಗಿದ್ದಾರೆ.

ಅನೈತಿಕ ಚಟುವಟಿಕೆ ನಡೆಸಲು ವ್ಯಕ್ತಿಗಳಿಂದ ಹಣ ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್‌ ಎಂಬಾತ ಪರಾರಿಯಾಗಿದ್ದಾನೆ.

ಇನ್ನೊಂದು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸರು ಶಾಂತಿನಗರದ ಮನೆಯೊಂದಕ್ಕೆ ದಾಳಿ ಮಾಡಿ ಈ ಮನೆಯನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಮನೆಯನ್ನು ಜಪ್ತಿ ಮಾಡಿದ್ದಾರೆ.

DAKSHINA KANNADA

ಉಳ್ಳಾಲ: ಕಡಲ್ಕೊರೆತ ಪೀಡಿತ ಪ್ರದೇಶಕ್ಕೆ ಸ್ಪೀಕರ್ ಖಾದರ್ ಭೇಟಿ

Published

on

ಉಳ್ಳಾಲದ ಕಡಲ್ಕೊರೆತ ಪೀಡಿತ ಐದು ಪ್ರದೇಶಗಳಲ್ಲಿ ಕಲ್ಲು ಹಾಕುವ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಊರವರು ಹಾಗೂ ನಗರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾಮಗಾರಿಗಳ ಪರಿಶೀಲನೆ ನಡೆಸಬೇಕು. ತದನಂತರವೂ ದೂರುಗಳು ಬಂದಲ್ಲಿ ಮೂರನೇ ನಿಯೋಗವನ್ನು ರಚಿಸಿ ಪರಿಶೀಲನೆ ನಡೆಸಿದ ನಂತರವೇ ಗುತ್ತಿಗೆದಾರರಿಗೆ ಬಿಲ್ ಪಾವತಿಸಲಾಗುವುದು ಎಂದು ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.

ಉಳ್ಳಾಲದ ಕಡಲ್ಕೊರೆತ ಬಾಧಿತ ಕೋಟೆಪುರ, ಕೋಡಿ, ಮೊಗವೀರಪಟ್ನ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು. ಹಿಲೆರಿಯಾನಗರ, ಕೈಕೋ, ಸೋಮೇಶ್ವರ ಬೆಟ್ಟಂಪಾಡಿ, ಕೋಡಿ, ಮೊಗವೀರಪಟ್ನ ಮತ್ತು ಉಚ್ಚಿಲ ಪ್ರದೇಶದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದೆ.

ಶಾಶ್ವತ ಪರಿಹಾರ ಕಂಡುಕೊಂಡ ಹಿನ್ನೆಲೆಯಲ್ಲಿ ಕೆಲಕಾಲ ಸಂರಕ್ಷಿತವಾಗಿತ್ತು. ಕಳೆದ ಬಾರಿ ಊರಿನವರ ಸಮ್ಮುಖದಲ್ಲಿ ಬೇಕಾದ ಅನುದಾನದ ರೂಪುರೇಷೆ ತಯಾರಿಸಿ ಸಂಬಂಧಿಸಿದ ಮೀನುಗಾರಿಕಾ ಮತ್ತು ಬಂದರು ಇಲಾಖೆಗಳ ಸಚಿವ ಮಾಂಕಳ್ ವೈದ್ಯ ಹಾಗೂ ಮುಖ್ಯಮಂತ್ರಿಗೆ ಜೊತೆ ಸಭೆ ನಡೆಸಿ ಒಂದು ವರ್ಷದ ಮುಂಚೆಯೇ ಅನುದಾನ ಬಿಡುಗಡೆ ಮಾಡಿ ಟಂಡರ್ ನಡೆಸಿ ವ್ಯವಸ್ಥಿತವಾಗಿ ಕೋಟೆಪುರ, ಮೊಗವೀರಪಟ್ನ, ಸೀಗ್ರೌಂಡ್, ಬಟ್ಟಂಪಾಡಿ, ಉಚ್ಚಿಲ ಐದು ಕಡೆಗಳಲ್ಲಿ ಕೆಲಸ ಆರಂಭಿಸಲಾಗಿದೆ. ಕಾಮಗಾರಿ ಪರಿಶೀಲನೆಗೆ ಊರವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ ಎಂದರು.

ಇದನ್ನೂ ಓದಿ: ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ಈ ಸಂದರ್ಭ ನಗರಸಭೆ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಸ್ವಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಮೊದಲಾದವರಿದ್ದರು.

Continue Reading

DAKSHINA KANNADA

ರಾಜ್ಯ ಕಾಂಗ್ರೆಸ್‌ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ವೇದವ್ಯಾಸ ಕಾಮತ್

Published

on

ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೇತೃತ್ವದಲ್ಲಿ ಜೂನ್ 23 ರಂದು ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ತನಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 94 ಸಿ ಹಕ್ಕು ಪತ್ರಗಳಿಗೆ 9/11 ನೀಡುತ್ತಿಲ್ಲ. ಇ-ಖಾತಾ ಹೆಸರಿನಲ್ಲಿ ಜನಸಾಮಾನ್ಯರಿಗೆ ಸಂಕಷ್ಟವಾಗಿದೆ. ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆ ಮಾಡುತ್ತಿಲ್ಲ. ಅರ್ಹ ಬಿಪಿಎಲ್ ಕಾರ್ಡ್ ಗಳ ರದ್ದತಿ ಮತ್ತು ನೂತನ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುತ್ತಿಲ್ಲ. ಮಂಗಳೂರು ಪಾಲಿಕೆಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರಕಾರ ವಿಶೇಷ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು ಇದೆಲ್ಲವನ್ನೂ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

Continue Reading

DAKSHINA KANNADA

ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

Published

on

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಜೂನ್.21) ಬೆಳಿಗ್ಗೆ 11.30 ಗಂಟೆಗೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಎಂಜಿನಿಯರಿಂಗ್‌, ಯೋಜನೆ, ಕಂದಾಯ, ಲೆಕ್ಕ ಪತ್ರವಿಭಾಗದಲ್ಲಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಉಡುಪಿ: ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ..!

ಲೋಕಾಯುಕ್ತ ಪ್ರಭಾರ ಎಸ್ ಪಿ ಕುಮಾರ ಚಂದ್ರ ಅವರ ನೇತೃತ್ವದಲ್ಲಿ ಇಬ್ಬರು ಡಿವೈಎಸ್‌ಪಿ, ನಾಲ್ಕು ಮಂದಿ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಗಳಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page