Connect with us

LATEST NEWS

ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಪ್ರಹ್ಲಾದ್ ಜೋಶಿ ಆಕ್ರೋಶ

Published

on

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್‌ ದಾಖಲಿಸಿರುವುದರ ಹಿಂದೆ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರರಷ್ಟು ಸರ್ಕಾರದ ಷಡ್ಯಂತ್ರ ಇದು ಎಂದು ಆರೋಪಿಸಿದರು. ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಒಬ್ಬ ಪ್ರಭಾವಿ, ಹಿರಿಯ ರಾಜಕಾರಣಿ ಮೇಲೆ ಈ ರೀತಿ ಸುಳ್ಳು ದೂರು ದಾಖಲಿಸುವುದು ನಿಜಕ್ಕೂ ಅಕ್ಷಮ್ಯ ಎಂದ ಜೋಶಿ, ಕಾನೂನು ರೀತಿ ತನಿಖೆ ಆಗುತ್ತದೆ. ಅವರು ಇದರಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಗೆ ಗೆಲುವು :
ದೇಶಾದ್ಯಂತ ಯುವ ಮತದಾರರೆಲ್ಲ ಮೋದಿ ಅಭಿಮಾನಿಗಳಾಗಿ ಪರಿವರ್ತನೆ ಹೊಂದಿದ್ದು, ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದ ಅವರು, ಶೇ. 90ರಷ್ಟು ಹೊಸ ಮತದಾರರು ಮೋದಿ ಅವರನ್ನು ಬೆಂಬಲಿಸಲಿದ್ದಾರೆ. ಹಾಗಾಗಿ ಈ ಬಾರಿಯೂ ಬಿಜೆಪಿ ದೊಡ್ಡ ಪ್ರಮಾಣದ ಗೆಲುವು ದಾಖಲಿಸಲಿದೆ ಎಂದರು. ಯುವ ಮತದಾರರು ಮೋದಿ ಅವರ ಕಾರ್ಯಗಳನ್ನು ನೋಡಿ ಪ್ರಭಾವಿತರಾಗಿದ್ದಾರೆ. ದೇಶದಲ್ಲಾದ ಬದಲಾವಣೆ ಕಂಡು ಮೋದಿ ಪರ ನಿಂತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವನ್ನು ತಂದುಕೊಡಲು ಸಿದ್ಧರಾಗಿದ್ದಾರೆ ಎಂದರು.

ಸಿಆರ್‌ಎಫ್ ಯೋಜನೆ: 
₹ 110ಕೋಟಿ ಬಿಡುಗಡೆ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಹೆಚ್ಚುವರಿಯಾಗಿ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್‌ನಿಂದ ಕಲಘಟಗಿ ಪಟ್ಟಣದ 25 ಕಿಮಿ ರಸ್ತೆ ಅಭಿವೃದ್ಧಿಗೆ ₹50 ಕೋಟಿ ಹಾಗೂ ಧಾರವಾಡ ನಗರದ ನುಗ್ಗಿಕೇರಿಯಿಂದ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪದ ವರೆಗಿನ 28 ಕಿಮೀ ರಸ್ತೆ ಅಭಿವೃದ್ಧಿಗೆ ₹ 60 ಕೋಟಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅನುದಾನ ಬಿಡುಗಡೆ ಮಾಡಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಗಳ ನಿರ್ಮಾಣಕ್ಕೆ ಅನುಮೋದನೆ ಮತ್ತು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ನನ್ನ ಮನವಿಗೆ ಸ್ಪಂದಿಸಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ. ಈ ಯೋಜನೆಯು ರಾಜ್ಯದಲ್ಲಿ ಮೂಲಸೌಲಭ್ಯವನ್ನು ನವೀಕರಿಸುತ್ತದೆ. ಸಂಪರ್ಕವನ್ನು ಹೆಚ್ಚಿಸುವ ಮೂಲಕ ಆರ್ಥಿಕ ಅಭಿವೃದ್ಧಿ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.

FILM

ನಟಿ ಮೇಲೆ ಲೈಂ*ಗಿಕ ದೌರ್ಜ*ನ್ಯ ಪ್ರಕರಣ : ನಟ ದಿಲೀಪ್ ಖುಲಾಸೆ

Published

on

ಮಂಗಳೂರು/ಕೊಚ್ಚಿ : ಬಹುಭಾಷಾ ನಟಿಗೆ ಲೈಂ*ಗಿಕ ಕಿರುಕು*ಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್‌ರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ. ಹಾಗೆಯೇ, ಸುನೀಲ್ ಎನ್.ಎಸ್. ಅಲಿಯಾಸ್ ಪಲ್ಸರ್ ಸುನಿ ಸೇರಿದಂತೆ 6 ಮಂದಿಯನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ.

2017 ರಲ್ಲಿ ನಟಿಯನ್ನು ಅಪಹರಿಸಿ ಲೈಂ*ಗಿಕ ದೌರ್ಜ*ನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಸುದೀರ್ಘ ವಿಚಾರಣೆ ನಡೆಸಿದ ಎರ್ನಾಕುಲಂ ಪ್ರಿನ್ಸಿಪಾಲ್ ಸೆಷನ್ಸ್ ನ್ಯಾಯಾಲಯ ಇಂದು(ಡಿ.08) ಮಹತ್ವದ ತೀರ್ಪು ಪ್ರಕಟಿಸಿದ್ದು, ನಟ ದಿಲೀಪ್‌ರನ್ನು ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಎನ್.ಎಸ್.ಸುನಿಲ್ ಅಲಿಯಾಸ್ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಬಿ.ಮಣಿಕಂದನ್, ವಿ.ಪಿ.ವಿಜೀಶ್, ಎಚ್. ಸಲೀಂ(ವಡಿವಲ್ ಸಲೀಂ) ಮತ್ತು ಪ್ರದೀಪ್ ಅವರನ್ನು ತಪ್ಪಿತಸ್ಥರೆಂದು ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ ವರ್ಗೀಸ್ ಘೋಷಿಸಿದರು.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ತಮಿಳು, ತೆಲುಗು ಹಾಗೂ ಮಲಯಾಳ ಭಾಷೆಯಲ್ಲಿ ನಟಿಸಿದ್ದ ನಟಿಯೊಬ್ಬರನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು 2017ರಲ್ಲಿ ದೂರು ನೀಡಲಾಗಿತ್ತು. ನಟ ದಿಲೀಪ್ ಸೇರಿದಂತೆ 10 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಕೃತ್ಯದಲ್ಲಿ ನೇರವಾಗಿ ಭಾಗವಹಿಸದಿದ್ದರೂ ಘಟನೆಯ ಮುಖ್ಯ ಸೂತ್ರಧಾರ ನಟ ದಿಲೀಪ್‌ ಕುಮಾರ್‌ ಎಂಬುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿತ್ತು. ಸಂತ್ರಸ್ತ ನಟಿಯ ಮೇಲಿನ ವೈಯಕ್ತಿಕ ದ್ವೇಷದಿಂದ ಅತ್ಯಾ*ಚಾರಕ್ಕೆ ಸುಪಾರಿ ನೀಡಿದ್ದರು ಎಂದು ದಿಲೀಪ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಆದರೆ, ದಿಲೀಪ್ ಇದನ್ನು ಅಲ್ಲಗಳೆದಿದ್ದು, ತಾನೇನು ತಪ್ಪು ಮಾಡಿಲ್ಲವೆಂದು ವಾದಿಸಿದ್ದರು.

Continue Reading

LATEST NEWS

ಬೆಟ್ಟ ಹತ್ತುವಾಗ ಕಾಲು ಜಾರಿ ಬಿ*ದ್ದು ವೃದ್ಧ ಸಾ*ವು

Published

on

ಮಂಗಳೂರು/ರಾಮನಗರ : ಬೆಟ್ಟ ಹತ್ತುವಾಗ ಕಾಲು ಜಾ*ರಿ ಬಿ*ದ್ದು ವೃದ್ಧ ಸಾ*ವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ, 65 ವರ್ಷದ ರೇವಣ್ಣ ಮೃ*ತ ದು*ರ್ದೈವಿ.

ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾ*ರಿ ಕಂದಕಕ್ಕೆ ಬಿ*ದ್ದು, ಸ್ಥಳದಲ್ಲೇ ಕೊನೆಯು*ಸಿರೆಳೆದಿದ್ದಾರೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶ*ವ ಮೇಲಕ್ಕೆತ್ತಿದ್ದಾರೆ. ಘಟನೆ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ : ಡಿಸ್ಕಸ್ ಥ್ರೋನಲ್ಲಿ ಮಂಗಳೂರಿನ ಕೃತಿ ಎನ್.ಪಿ ಪ್ರಥಮ

Published

on

ಮಂಗಳೂರು/ಬೆಂಗಳೂರು : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ 2025-2026 ನಡೆಯಿತು.

ಡಿಸ್ಕಸ್ ಥ್ರೋ ವಿಭಾಗದಲ್ಲಿ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಮಾಣಿಯ ವಿದ್ಯಾರ್ಥಿನಿ  ಕೃತಿ. ಎನ್.ಪಿ ಪ್ರಥಮ ಸ್ಥಾನ ಪಡೆದಿದ್ದು,  ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾಳೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ಕೃತಿ ಗೋಳ್ತಮಜಲು ಗ್ರಾಮದ ನಿವಾಸಿ ದಿನೇಶ್.ಬಿ ಮತ್ತು ತೇಜಾಕ್ಷಿ ದಂಪತಿ ಪುತ್ರಿ.

Continue Reading
Advertisement

Trending

Copyright © 2025 Namma Kudla News

You cannot copy content of this page