Connect with us

bangalore

ಶಾಕಿಂಗ್ ನ್ಯೂಸ್: ಬಿಗ್ ಬಾಸ್ ಮನೆಗೆ ಬಿತ್ತು ಬೀಗ..!

Published

on

ಮಂಗಳೂರು/ರಾಮನಗರ: ಅತಿ ಹೆಚ್ಚು ವೀಕ್ಷಣೆ ಪಡೆಯುವ ಶೋ ಬಿಗ್ ಬಾಸ್. ಬಿಗ್ ಬಾಸ್ ಯಾವಾಗ ಆರಂಭ ಆಗುತ್ತೋ ಅಂತ ಕಾಯುತ್ತಿದ್ದವರಿಗೆ ಬಿಗ್ ಬಾಸ್ ಸೀಸನ್ 12 ಆರಂಭವಾಗಿ ಖುಷಿ ಕೊಟ್ಟಿತ್ತು. ಆದ್ರೆ, ಈಗ ಶಾಕ್ ಆಗಿದೆ. ಬಿಗ್ ಬಾಸ್ ಗೆ ಸಂಕಷ್ಟ ಎದುರಾಗಿದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ  ಬೀಗ ಹಾಕಲಾಗಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಹಾಕಿದ್ದಾರೆ.

ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್‌ ಒಳಗೆ ಪರಿಶೀಲನೆ ನಡೆಸಿದರು.

ನೋಟಿಸ್ ಪಡೆಯಲು ಜಾಲಿವುಡ್ ಆಡಳಿತ ಮಂಡಳಿ ನಿರಾಕರಿಸಿದಾಗ ಜಾಲಿವುಡ್ ಸ್ಟುಡಿಯೋಸ್‌ ಸಿಬ್ಬಂದಿಯನ್ನು ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡರು. ನೋಟಿಸ್ ಸ್ವೀಕರಿಸೋದಕ್ಕೆ ಬರಲು ಅರ್ಧ ಗಂಟೆ ಬೇಕಾಯಿತಾ ಎಂದು ಪ್ರಶ್ನಿಸಿದರು.

ಕೊನೆಗೆ ಜಾಲಿವುಡ್ ಆಡಳಿತ ಮಂಡಳಿ ನೋಟಿಸ್‌ ಸ್ವೀಕರಿಸಿತು. ನಾಳೆಯಿಂದ ಜಾಲಿವುಡ್ ಸ್ಟುಡಿಯೋಸ್‌ ಯಾವುದೇ ಕಾರ್ಯಾಚರಣೆ ಮಾಡಬಾರದು. ಎಲ್ಲಾ ಕಾರ್ಯ ಚಟುವಟಿಕೆ ಸ್ಥಗಿತ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.  ಸ್ವತಃ ತಾವೇ ನಿಂತು ಸ್ಟುಡಿಯೋಸ್ ಗೆ ತಹಶೀಲ್ದಾರ್‌ ಬೀಗ ಜಡಿದರು.

 

bangalore

ಇವಳು ಹೆಣ್ಣೋ…ಹೆಮ್ಮಾರಿಯೋ..! ಸಾಕಿದ ನಾಯಿ ಮರಿಯನ್ನೇ ನೆಲಕ್ಕೆ ಬಡಿದು ಸಾಯಿಸಿದ ಕೇರ್ ಟೇಕರ್..!

Published

on

ಬೆಂಗಳೂರು: ಮಹಿಳೆಯೋರ್ವಉ ಎಸಗಿದ  ಕೃತ್ಯ ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಮನೆಕೆಲಸದಾಕೆಯೊಬ್ಬಳು ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

ಅಕ್ಟೋಬರ್ 31ರಂದು ಕೃತ್ಯ ನಡೆದಿದ್ದು, ಮನೆ ಕೆಲಸದಾಕೆ ನಡೆಸಿರುವ ಅಮಾನವೀಯ ಕೃತ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ನಾಯಿ ಸಾಯಿಸಿದ ಬಳಿಕ ಲಿಫ್ಟ್ ಹೊರಗೆ ಹೋಗಿ ಪ್ರಜ್ಞೆ ತಪ್ಪಿ ಬಿತ್ತು ಎಂದು ಮಹಿಳೆ ಕಥೆ ಕಟ್ಟಿದ್ದಳು.

ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಮಾಹಿತಿ ದೊರಕಿದೆ. ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳೆ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

bangalore

ಪತಿಯನ್ನೇ ಮುಗಿಸಲು ಸಿನಿಮಾ ಸ್ಟೈಲ್ ನಲ್ಲಿ ಸ್ಕೆಚ್ ಹಾಕಿದ ಪತ್ನಿ, ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

Published

on

ಮೈಸೂರು: ಸಿನಿಮೀಯ ಶೈಲಿಯಲ್ಲಿ ಪ್ಲ್ಯಾನ್ ರೂಪಿಸಿ ಮಹಿಳೆಯೋರ್ವಳು ತಾಳಿ ಕಟ್ಟಿದ ಗಂಡನನ್ನೇ ಮುಗಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಸಂಗೀತಾ ಗಂಡನ ಮುಗಿಸಲು ಪ್ಲಾನ್ ಮಾಡಿದ ಆರೋಪಿ. ಈಕೆ ಪತಿಯ ಜೀವ ತೆಗೆಯಲು ಸಹೋದರರನ್ನೇ ಬಳಸಿಕೊಂಡಿರುವ ಆರೋಪ ಇದೆ.

ಪ್ರಕರಣ ಸಂಬಂಧ ಈಕೆಯ ಸಹೋದರ ಸಂಜಯ್, ಸಹೋದರನ ಸ್ನೇಹಿತ ವಿಘ್ನೇಶ್ ಹಾಗೂ ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ. ಸಂಗೀತಾ, ರಾಜೇಂದ್ರ ಎಂಬಾತನನ್ನು ಮದುವೆ ಆಗಿದ್ದಳು. ಇಬ್ಬರ ಸಂಸಾರ ಆರಂಭದಲ್ಲಿ ಚೆನ್ನಾಗಿಯೇ ಇತ್ತು. ಕೆಲವು ತಿಂಗಳುಗಳಿಂದ ಕೌಟುಂಬಿಕ ಕಲಹ ಉಂಟಾಗಿತ್ತು. ಅದೇ ಕಾರಣಕ್ಕೆ ಸಂಗೀತಾ ಗಂಡನ ಮುಗಿಸಲು ಪ್ಲಾನ್ ಮಾಡಿದ್ದಾಳೆ.

ಸಹೋದರನ ಜೊತೆ ಸೇರಿಕೊಂಡು ದರೋಡೆ ಪ್ಲಾನ್ ರೂಪಿಸಿ ಹತ್ಯೆ ಮಾಡಲು ನಿರ್ಧರಿಸಿದ್ದಳು. ಅದರಂತೆ ಅಕ್ಟೋಬರ್ 25 ರಂದು ರಾಜೇಂದ್ರ- ಸಂಗೀತಾ ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಸ್ಕೂಟರ್​ನಲ್ಲಿ ಹೋಗ್ತಿದ್ದಾಗ ಪ್ಲಾನ್ ಪ್ರಕಾರವೇ ದರೋಡೆ ಗ್ಯಾಂಗ್ ಎಂಟ್ರಿಯಾಗಿತ್ತು. ಸಂಗೀತಾಳ ಚಿನ್ನದ ಸರ ಕಸಿಯಲು ಪ್ರಯತ್ನಿಸುತ್ತಾರೆ.

ಅದನ್ನು ತಡೆಯಲು ರಾಜೇಂದ್ರ ಮುಂದೆ ಬಂದಿದ್ದಾನೆ. ಆಗ ರಾಜೇಂದ್ರನಿಗೆ ಡ್ರ್ಯಾಗರ್​​ನಿಂದ ಓರ್ವ ಇರಿದಿದ್ದಾನೆ. ನಂತರ ದರೋಡೆ ಗ್ಯಾಂಗ್ ಅಲ್ಲಿಂದ ಪರಾರಿ ಆಗಿತ್ತು. ಘಟನೆಯ ನಂತರ ರಾಜೇಂದ್ರ ನಂಜನಗೂಡು ಪೊಲೀಸರಿಗೆ ಮಾಹಿತಿ ನೀಡಿದ್ದ. ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ಮಾಡಿದಾಗ ಪೊಲೀಸರಿಗೆ ಒಂದಷ್ಟು ಅನುಮಾನ ಬಂದಿದೆ. ಕೊನೆಗೆ ತಮ್ಮದೇ ಶೈಲಿಯಲ್ಲಿ ಸಂಗೀತಾಳನ್ನ ವಿಚಾರಣೆಗೆ ಒಳಪಡಿಸಿದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ.

 

 

 

Continue Reading

bangalore

ನೆಲಮಂಗಲ ಹೈವೇಯಲ್ಲಿ ಭೀಕರ ಅಪಘಾತ-ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

Published

on

ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಶಿವಲಿಂಗ ಗೌಡ(60), ಪ್ರಮೀಳಾ (55) ಮೃತಪಟ್ಟ ದುರ್ದೈವಿಗಳು.

ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಅದೇ ಸಂದರ್ಭ ಈ ದುರಂತ ನಡೆದಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page