Connect with us

LATEST NEWS

ವಿದೇಶದಲ್ಲೇ ಠಿಕಾಣಿ ಹೂಡಿದ ಪ್ರಜ್ವಲ್..! ತಾತಾ, ಚಿಕ್ಕಪ್ಪನ ಮನವಿಗೂ ಡೋಂಟ್ ಕ್ಯಾರ್..!

Published

on

ಹಾಸನ/ಮಂಗಳೂರು: ಪ್ರಜ್ವಲ್‌ ರೇವಣ್ಣ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಎಫ್‌ಐಆರ್‌ ಆಗಿದ್ದು, ಎಸ್‌ ಐಟಿ ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದೆ. ಆದರೆ ಇದಕ್ಕೆಲ್ಲಾ ಕ್ಯಾರೆ ಅನ್ನದ ಪ್ರಜ್ವಲ್ ವಿದೇಶದಲ್ಲಿ ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ. ಇನ್ನು ಮೊಮ್ಮಗನಿಂದಾಗಿ ಹೆಚ್‌ಡಿ ದೇವೇಗೌಡ ಹಾಗೂ ಚಿಕ್ಕಪ್ಪ ಕುಮಾರಸ್ವಾಮಿ ಮುಜುಗರಕ್ಕೆ ಒಳಗಾಗಿದ್ದಾರೆ. ದೇವೇಗೌಡರು ಮೊಮ್ಮಗನಿಗೆ ಪತ್ರ ಬರೆಯುವ ಮೂಲಕ ವಿಚಾರಣೆಗ ಹಾಜರಾಗುವಂತೆ ಮನವಿ ಮಾಡಿದರು. ಇನ್ನು ಚಿಕ್ಕಪ್ಪ ಕುಮಾರಸ್ವಾಮಿ ಮನವಿಗೂ ಕ್ಯಾರೇ ಅನ್ನುತಿಲ್ಲ.

ಹೆಚ್‌ಡಿಡಿ, ಹೆಚ್‌ಡಿಕೆ ಮನವಿಗೂ ಕ್ಯಾರೇ ಅನ್ನುತ್ತಿಲ್ಲ ಪ್ರಜ್ವಲ್:

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಪ್ರಜ್ವಲ್ ರೇವಣ್ಣ ಕಾನೂನಿಗೆ ಮಾತ್ರವಲ್ಲದೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಕ್ಕೆ ತಲೆ ನೋವಾಗಿದ್ದಾರೆ. ರಾಜ್ಯಕ್ಕೆ ವಾಪಾಸ್ ಆಗಿ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದರು. ಇವರ ಮನವಿ ಜೊತೆಗೆ ಮಾಜಿ ಪ್ರಧಾನಿ ಹೆಚ್‌ಡಿಡಿ  ಪತ್ರ ಕೂಡಾ ಬರೆದಿದ್ದರು. ಇದೆಲ್ಲವನ್ನೂ ಪ್ರಜ್ವಲ್ ಡೋಂಟ್ ಕ್ಯಾರ್‌ ಮಾಡಿದ್ದಾರೆ. ದೇವೇಗೌಡರ ಮಾನಸಿಕ ಆರೋಗ್ಯದ ದೃಷ್ಟಿಯಿಂದಾದರೂ ಪ್ರಜ್ವಲ್‌ ರಾಜ್ಯಕ್ಕೆ ವಾಪಾಸಗಬೇಕಿತ್ತು. ಆದರೆ ಇದೆಲ್ಲವನ್ನೂ ಕ್ಯಾರೇ ಅನ್ನದ ಪ್ರಜ್ವಲ್ ವಿದೇಶದಲ್ಲಿ ಹಾಯಾಗಿದ್ದಾರೆ. ಇನ್ನು ಜೆಡಿಎಸ್ ಶಾಸಕ ಜಿ. ಟಿ ದೇವೇಗೌಡ ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ..;  ಪೆನ್ ಡ್ರೈವ್ ಪ್ರಕರಣ : ಪುತ್ರ ಪ್ರಜ್ವಲ್ ಬಗ್ಗೆ ಹಾಸನದಲ್ಲಿ ರೇವಣ್ಣ ಪ್ರತಿಕ್ರಿಯೆ

ಎರಡು ದಿನಗಳಲ್ಲಿ ರಾಜ್ಯಕ್ಕೆ ಪ್ರಜ್ವಲ್ ಬರುವಿಕೆಯ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದ್ದಾರೆ.  ಈ ಪ್ರಕರಣವನ್ನು ವಿನಾ ಕಾರಣ ಡ್ರ್ಯಾಗ್‌ ಮಾಡೋದು ಬೇಡ, ತನಿಖೆಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಇದರಿಂದ ಟೀಕೆಗಳು ತಪ್ಪಬಹುದು ಎಂಬ ಲೆಕ್ಕಾಚಾರದಲ್ಲಿ ದಳಪತಿಗಳಿದ್ದರು. ಇದೇ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ನಿರಂತರ ಟೀಕಿಸಿಕೊಂಡು ಬಂದಿದೆ.

ಇನ್ನು ಯಾವುದೇ ಮನವಿಗೂ ತಲೆಕೆಡಿಸಿಕೊಳ್ಳದ ಪ್ರಜ್ವಲ್ ವಿದೇಶದಲ್ಲಿ ಆರಾಮವಾಗಿದ್ದಾರೆ.  ತಮ್ಮ ಮೇಲೆ ಯಾವುದೇ ಆರೋಪ ಬಂದರೂ ಕೂಡಾ ರಾಜ್ಯದಲ್ಲೇ ಇದ್ದು ಎದುರಿಸಬೇಕಿತ್ತು.  ನಾನು ರಾಜ್ಯಕ್ಕೆ ವಾಪಾಸ್‌ ಆಗದೆ ವಿದೇಶದಲ್ಲಿದ್ದು ಪ್ರಕರಣದಿಂದ ಪಾರಾಗಬಹುದು ಅನ್ನೋದು ಅವರ ಲೆಕ್ಕಾಚಾರ. ಆದರೆ ಅದೇನೆ ಇರಲಿ ವಿಚಾರಣೆಗ ಹಾಜರಾಗುವ ಮೂಲಕ ಕುಟುಂಬಕ್ಕೆ ಆಗುವ ಮುಜುಗರವನ್ನು ಪ್ರಜ್ವಲ್ ತಪ್ಪಿಸಬೇಕಾಗಿದೆ.

LATEST NEWS

ಅಹಮದಾಬಾದ್ ವಿಮಾನ ಪತನ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ನಿಧ*ನ

Published

on

ಮಂಗಳೂರು/ಅಹಮದಾಬಾದ್: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ವಿಮಾನ ದುರಂತದಲ್ಲಿ ಮೃ*ತಪಟ್ಟಿದ್ದಾರೆ.


ಏರ್ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಮೃ*ತಪಟ್ಟಿರುವುದು ದೃಢವಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತದ ಸಾ*ವಿಗೆ ಸಂತಾಪ ಸೂಚಿಸಿದ್ದಾರೆ.

 

Continue Reading

LATEST NEWS

ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

Published

on

ಗುಜರಾತ್​​ನ ಅಹಮದಾಬಾದ್​ನಲ್ಲಿ ಲಂಡನ್​​ಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ.


ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಯಾವುದೇ ವಿಮಾನ/ ಹೆಲಿಕಾಪ್ಟರ್‌ ಪತನವಾದರೂ ಪತನದ ತನಿಖೆಯಲ್ಲಿ ಪ್ರಮುಖ ಪಾತ್ರವಹಿಸುವುದು ಬ್ಲ್ಯಾಕ್‌ ಬಾಕ್ಸ್‌.

ಬ್ಲಾಕ್ ಬಾಕ್ಸ್‌ ಅಂದರೆ ಏನು?
ಬ್ಲಾಕ್ ಬಾಕ್ಸ್‌ ಅಂದರೆ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಎರಡು ದೊಡ್ಡ ಲೋಹದ ಪಟ್ಟಿಗೆಗಳಾಗಿದ್ದು, ಹೆಚ್ಚಿನ ವಿಮಾನಗಳಲ್ಲಿ ಒಂದನ್ನು ಮುಂಭಾಗದಲ್ಲಿ ಮತ್ತು ಇನ್ನೊಂದು ಹಿಂಭಾಗದಲ್ಲಿ ಇರಿಸಬೇಕಾಗುತ್ತದೆ. ಈ ರೆಕಾರ್ಡರ್‌ಗಳು ವಿಮಾನ ಹಾರಾಟದ ಬಗ್ಗೆ ಮಾಹಿತಿಯನ್ನು ದಾಖಲಿಸುತ್ತವೆ ಮತ್ತು ವಿಮಾನ ಅಪಘಾತಕ್ಕೆ ಕಾರಣವಾಗುವ ಘಟನೆಗಳನ್ನು ಪುನರ್‌ನಿರ್ಮಿಸಲು ಸಹಕಾರಿಯಾಗುತ್ತವೆ.

ಸಾಮಾನ್ಯವಾಗಿ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿರುತ್ತದೆ.

ಇದನ್ನೂ ಓದಿ: ಅಹಮದಾಬಾದ್: ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ

ಬ್ಲ್ಯಾಕ್ ಬಾಕ್ಸ್ ಹೆಸರು; ಬಣ್ಣ ಕಿತ್ತಳೆ
ವಿಮಾನದಲ್ಲಿ ಇರಿಸಿರುವ ಈ ಪೆಟ್ಟಿಗೆಗಳನ್ನು ಬ್ಲ್ಯಾಕ್‌ ಬಾಕ್ಸ್ ಎಂದು ಕರೆದರೂ ಸಹ ಇದು ಕಪ್ಪಗೆ ಇರುವುದಿಲ್ಲ. ಈ ಕಪ್ಪು ಪೆಟ್ಟಿಗೆಗಳು ಜ್ವಲಂತ, ಹೆಚ್ಚಿನ ಗೋಚರತೆಗಾಗಿ ಕಿತ್ತಳೆ ಬಣ್ಣದ್ದಾಗಿರುತ್ತವೆ. ಇದರಿಂದಾಗಿ ಕ್ರ್ಯಾಶ್ ಸೈಟ್‌ನಲ್ಲಿ ಅವುಗಳನ್ನು ಹುಡುಕುವ ಸಿಬ್ಬಂದಿಗಳು ಅವುಗಳನ್ನು ಹುಡುಕಲು ಸುಲಭವಾಗಿರುತ್ತದೆ.

ಬ್ಲ್ಯಾಕ್ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ ?
ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲ್ಯಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

ಡೇಟಾ ರಿಕವರ್ ಮಾಡುವುದು ಹೇಗೆ?
ಕಪ್ಪು ಪೆಟ್ಟಿಗೆಗಳಿಂದ ರಿಕವರ್‌ ಆದ ಡೇಟಾವನ್ನು ವಿಶ್ಲೇಷಿಸಲು ಸಾಮಾನ್ಯವಾಗಿ 10-15 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಮಧ್ಯೆ, ತನಿಖಾಧಿಕಾರಿಗಳು ಏರ್ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿಯಿಂದ ಹೇಳಿಕೆ ಪಡೆಯುವುದು ಮತ್ತು ಎಟಿಸಿ ಹಾಗೂ ಪೈಲಟ್‌ಗಳ ನಡುವಿನ ಸಂಭಾಷಣೆಯ ರೆಕಾರ್ಡಿಂಗ್‌ಗಳಂತಹ ಇತರ ಸುಳಿವುಗಳಿಗಾಗಿಯೂ ನೋಡುತ್ತಾರೆ ಎಂದು ತಿಳಿದುಬಂದಿದೆ.

Continue Reading

LATEST NEWS

ಏರ್‌ ಇಂಡಿಯಾ ವಿಮಾನ ದುರಂತ; ಪ್ರಧಾನಿ ಮೋದಿ ಸಂತಾಪ

Published

on

ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್‌’ನಲ್ಲಿ ನಡೆದ ಈ ದುರಂತವು “ಪದಗಳಿಗೆ ಮೀರಿದ ಹೃದಯವಿದ್ರಾವಕ” ಎಂದು ಪ್ರಧಾನಿ ಹೇಳಿದರು. ಅಲ್ಲದೇ ಈ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಪ್ರಧಾನಿ ಮೋದಿ X ನಲ್ಲಿ ಬರೆದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page