Connect with us

DAKSHINA KANNADA

ಥ್ಯಾಂಕ್ಸ್‌ ತನ್ವೀರಣ್ಣ ಅಂದಿದ್ಯಾಕೆ ಪ್ರತಾಪ್ ಸಿಂಹ..?

Published

on

ಮೈಸೂರು : ಮೈಸೂರು ಸಂಸದ ಪ್ರತಾಪ್ ಸಿಂಹ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಮುಸ್ಲಿಂ ಶಾಸಕ ತನ್ವೀರ್ ಸೇಠ್‌ ಅವರನ್ನು ಅಣ್ಣಾ ಎಂದು ಕರೆದು ಸುದ್ದಿಯಾಗಿದ್ದಾರೆ. ಮೈಸೂರಿನ ಹಿಂದೂ ಹುಲಿ… ಹಿಂದೂ ಸಾಮ್ರಾಟ್‌ ಅಂತ ಕರೆಯಿಸಿಕೊಂಡಿದ್ದ ಪ್ರತಾಪ್ ಸಿಂಹ ಈ ಬಾರಿ ಟಿಕೆಟ್ ವಂಚಿತರಾಗಿದ್ದಾರೆ. ಮೈಸೂರು ರಾಜ ವಂಶಸ್ಥ ಯದುವೀರ್ ಒಡೆಯಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಬೇಸರದಲ್ಲಿರುವ ಪ್ರತಾಪ್ ಸಿಂಹ ಸದ್ಯ ಯಾರು ಕೈಗೂ ಸಿಗುತ್ತಿಲ್ಲವಾದ್ರೂ ಸೋಷಿಯಲ್ ಮೀಡಿಯಾ ಮೂಲಕ ಸುದ್ದಿಯಲ್ಲಿದ್ದಾರೆ. ಟಿಕೆಟ್ ಕೈ ತಪ್ಪಿದಕ್ಕೆ ಹಾಗೂ ತಪ್ಪಲು ಕಾರಣವಾದವರಿಗೆ ದಿನಕ್ಕೊಂದು ಟಾಂಗ್ ಕೊಟ್ಟು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ಸಂಸದ ಪ್ರತಾಪ ಸಿಂಹ

ಮಾತು ಎತ್ತಿದರೆ ಮುಸ್ಲಿಂರ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದ ಪ್ರತಾಪ್ ಸಿಂಹ ಈಗ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರನ್ನು ಅಣ್ಣಾ ಅಂತ ಸಂಭೋದಿಸಿ ಇಕ್ಕಟ್ಟಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ತನ್ವೀರ್ ಸೇಠ್ ಅವರ ಹೇಳಿಕೆಯೊಂದಕ್ಕೆ ತನ್ನ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಪ್ರತಾಪ್ ಸಿಂಹ ತನ್ವೀರ್ ಸೇಠ್‌ ಅವರಿಗೆ ಥ್ಯಾಂಕ್ಸ್ ಅಣ್ಣಾ ಅಂತ ಹಾಕಿದ್ದೇ ಈಗ ದೊಡ್ಡ ಸುದ್ದಿಯಾಗಿದೆ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ವಿಷಾದ ಆಗಿದೆ ಅಂತ ತನ್ವೀರ್ ಸೇಠ್ ಹೇಳಿದ್ದು, “ರಾಜಕಾರಣದಲ್ಲಿ ಏನೆಲ್ಲಾ ಆಗುತ್ತದೆ ಅನ್ನೋದಿಕ್ಕೆ ಪ್ರತಾಪ್ ಸಿಂಹಾಗೆ ಟಿಕೆಟ್ ಕೈತಪ್ಪಿರೋದು ಸಾಕ್ಷಿ” ಅಂತ ಹೇಳಿದ್ದರು.

tanweer paper statement

ತನ್ನ ಪರವಾಗಿ ಮಾತನಾಡಿ ಟಿಕೆಟ್ ಕೈ ತಪ್ಪಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ತನ್ವೀರ್ ಸೇಠ್‌ ಅವರ ಈ ಹೇಳಿಕೆಯ ಪ್ರತಿಯನ್ನಿಟ್ಟುಕೊಂಡು ತನ್ನ ಎಕ್ಸ್ ಖಾತ್ರೆಯಲ್ಲಿ ಹಂಚಿಕೊಂಡ ಪ್ರತಾಪ್ ಸಿಂಹ್ “ಥ್ಯಾಂಕ್ಯೂ ತನ್ವೀರ್ ಅಣ್ಣಾ” ಅಂತ ಧನ್ಯವಾದ ತಿಳಿಸಿದ್ದಾರೆ.

prathap x photo

ಕಟ್ಟರ್‌ ಹಿಂದುತ್ವವಾದಿಯಾಗಿದ್ದ ಪ್ರತಾಪ್ ಸಿಂಹ ಅವರಿಗೆ ಮೈಸೂರು ಬಸ್ ನಿಲ್ದಾಣದ ಗೋಪುರ ಕೂಡಾ ಗುಂಬಜ್ ಮಾದರಿಯಾಗಿ ಕಂಡಿತ್ತು. ಇದ್ದ ಬದ್ದ ವಿಚಾರಕ್ಕೆ ಹಿಂದು ಮುಸ್ಲಿಂ ಟಚ್‌ ಕೊಟ್ಟು ಅರಚಾಡುತ್ತಿದ್ದ ಪ್ರತಾಪ್ ಸಿಂಹ ತನ್ವೀರ್ ಸೇಠ್‌ ಅವರನ್ನು ಅಣ್ಣಾ ಅಂದಿದಕ್ಕೆ ಹಿಂದುತ್ವವಾದಿಗಳಿಂದಲೇ ಟೀಕೆಗೆ ಒಳಗಾಗಿದ್ದಾರೆ. ಕೆಲವರು ಉತ್ತಮ ಸಲಹೆ ನೀಡಿದ್ರೆ ಇನ್ನು ಕೆಲವರು ಉಗಿದು ಉಪ್ಪಿನಕಾಯಿ ಹಾಕಿದ್ದಾರೆ. ನಿಮ್ಮ ರಾಜಕಾರಣಕ್ಕೆ ಜನರನ್ನು ಬಲಿ ಮಾಡಿದ್ದೀರಾ ಅಂತ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಈ ಬರಹ ಡಿಲೀಟ್ ಮಾಡಿ ನಿಮ್ಮ ಮಾನ ಉಳಿಸಿಕೊಳ್ಳಿ ಅಂತ ಸಲಹೆ ಕೂಡಾ ನೀಡಿದ್ದಾರೆ.

DAKSHINA KANNADA

ಬಾಲಕನ ಕತ್ತು ಹೊಕ್ಕು ಎದೆ ಸೀಳಿದ್ದ ತೆಂಗಿನ ಗರಿ; ವೆನ್ಲಾಕ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

Published

on

ಮಂಗಳೂರು: ಆಡುವಾಗ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆಯನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮಾಡಲಾಗಿದೆ.

ಮಡಿಕೇರಿ ಆಸ್ಪತ್ರೆಯಿಂದ ಆಗಮಿಸಿದ 12 ವರ್ಷದ ಬಾಲಕನಿಗೆ ಈ ಯಶಸ್ವಿ ಚಿಕಿತ್ಸೆ ನಡೆಸಲಾಗಿದ್ದು, ಬಾಲಕನ ಕುತ್ತಿಗೆಯಲ್ಲಿ ಹೊಕ್ಕಿ ಎದೆಯನ್ನು ಸೀಳಿದ್ದ ಮರದ ತುಂಡನ್ನು ಯಶಸ್ವಿಯಾಗಿ ತೆಗೆಯಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕಾರ್ಡಿಯೋಥೋರ್ಯಾಸಿಕ್ ಮತ್ತು ವಾಸ್ಕುಲರ್ ಸರ್ಜರಿ ವಿಭಾಗ ಡಾ. ಸುರೇಶ್ ಪೈ ಅವರ ನೇತೃತ್ವದಲ್ಲಿ ಈ ಸರ್ಜರಿ ನಡೆಸಲಾಗಿತ್ತು.

ಇದೊಂದು ತೀರಾ ಕ್ಲಷ್ಟಕರ ಶಸ್ತ್ರಚಿಕಿತ್ಸೆಯಾಗಿದ್ದು, ಸಿಟಿವಿಎಸ್ ತಂಡ ಇಂದು ಮುಂಜಾನೆ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ. ವೆನ್ಲಾಕ್ ಆಸ್ಪತ್ರೆಯ ವೈಧ್ಯರ ತಂಡದ ಈ ಕಾರ್ಯಕ್ಕೆ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಮತ್ತು ಅಧೀಕ್ಷರರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Continue Reading

DAKSHINA KANNADA

ಪಾಲೆಮಾರ್ ಗಾರ್ಡನ್ ನಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ..! ಗೌರವ ಪ್ರಶಸ್ತಿ ಪ್ರದಾನ..!

Published

on

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಇದರ ಪ್ರೆಸ್ ಕ್ಲಬ್ ದಿನಾಚರಣೆ ಮತ್ತು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ನಡೆದಿದೆ.

ಮೋರ್ಗನ್ಸ್ ಗೇಟ್‌ ಸಮೀಪದ ಪಾಲೆಮಾರ್ ಗಾರ್ಡನ್‌ ಎಂಫಸೀಸ್ ಇಲ್ಲಿ ಕಾರ್ಯಕ್ರಮ ಆಯೋಜಸಲಾಗಿತ್ತು. 2024 ನೇ ಸಾಲಿನ ಪ್ರೆಸ್ ಕ್ಲಬ್ ಗೌರವ ಸನ್ಮಾನ ಕಾರ್ಯಕ್ರಮ ನಡೆದಿದ್ದು, ವಿಜಯ ಕರ್ನಾಟಕದ ಮಹಮ್ಮದ್ ಆರೀಫ್ ಪಡುಬಿದ್ರೆ, ವಿಶ್ವವಾಣಿಯ ಜಿತೇಂದ್ರ ಕುಂದೇಶ್ವರ, ಸುದ್ದಿ ಬಿಡುಗಡೆ ಪತ್ರಿಕೆಯ ಭಾಸ್ಕರ್ ರೈ ಕಟ್ಟ, ಹೊಸದಿಂಗತದ ರಘುರಾಮ್ ನಾಯಕ್, ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಇವರುಗಳನ್ನು ಸನ್ಮಾನಿಸಲಾಗಿದೆ.

ಈ ಗೌರವ ಪುರಸ್ಕಾರ ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದ  ಮಂಗಳೂರು, ಇಬ್ರಾಹಿಂ ಅಡ್ಕಸ್ಥಳ ಮತ್ತು ವಿಜಯಕೋಟ್ಯಾನ್ ಪಡು ಅವರನ್ನು ಕೂಡಾ ಗೌರವಿಸಲಾಗಿದೆ.

ಇದಲ್ಲದೆ ಜಿಲ್ಲಾ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತ ಪುಷ್ಪರಾಜ್, ಸಂದೀಪ್ ಮತ್ತು ಸುಖಪಾಲ್ ಪೊಳಲಿ ಅವರನ್ನೂ ಕೂಡಾ ಸನ್ಮಾನಿಸಲಾಗಿದೆ. 2024 ರ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಣೇಶ್ ಕುಲಾಲ್ ಅವರಿಗೆ ಲಭಿಸಿದ್ದು , ಮಾಜಿ ಸಚಿವ ಕೃಷ್ಣ ಪಾಲೆಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ.ಹರೀಶ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರೆಸ್ ಕ್ಲಬ್ ದಿನಾಚರಣೆಯನ್ನು ಮಾಜಿ ಮೇಯರ್ ದಿವಾಕರ್ ಕದ್ರಿ ಅವರು ಉದ್ಘಾಟಿಸಿದ್ದಾರೆ.ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Continue Reading

DAKSHINA KANNADA

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹೀಂ ನವಾಝ್ ಆಯ್ಕೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ ನವಾಝ್ ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರಿಯಂಗಳ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಅವರು ಬಂಟ್ವಾಳ ಹ್ಯೂಮನ್ ವೆಲ್ಫೇರ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾಗಿ, ಆಸರೆ ಸೇವಾ ಫೌಂಡೇಶನ್ ಕಾರ್ಯದರ್ಶಿ, ನವೋದಯ ಅಟೋ-ರಿಕ್ಷಾ ಚಾಲಕ-ಮಾಲಕರ ಸಂಘ ಗೌರವಧ್ಯಕ್ಷರಾಗಿ, ಬಂಟ್ವಾಳ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಸದಸ್ಯ, ತೆಂಗು ಬೆಳೆಗಾರರ ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ 2024ರ ಆಗಸ್ಟ್ ತಿಂಗಳಿನಲ್ಲಿ ಮತದಾನ ನಡೆದಿತ್ತು. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page