Connect with us

DAKSHINA KANNADA

Zika Virus : ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ ಏನು?

Published

on

ಮಂಗಳೂರು: ರಾಜ್ಯದಲ್ಲಿ ಝಿಕಾ ವೈರಸ್ ನಿಂದಾಗಿ ಜನರು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರ ಏನು ಮಾಡಬೇಕು ಎನ್ನುವುದರ ಬಗ್ಗೆ ತಿಳಿಯೋಣ.

ಝಿಕಾ ರೋಗದ ಲಕ್ಷಣಗಳೇನು?

ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಜನರು ಯಾವ ನಿಯಮ ಪಾಲಿಸಬೇಕು?

ರೋಗದ ಲಕ್ಷಣ ಕಂಡು ಬಂದರೆ ಕೂಡಲೇ ಜನರು ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಈ ಮೂಲಕ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳಬಾರದು ಎಂಬ ಸಲಹೆಯನ್ನು ಆರೋಗ್ಯ ಇಲಾಖೆ ನೀಡಿದೆ.

ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಬೇಕು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ ಏನು?

  • ನೀರು ಶೇಖರಣಾ ಪರಿಕರಗಳನ್ನು (ಟ್ಯಾಂಕ್‌, ಟಬ್‌ ಇತ್ಯಾದಿ) ಮುಚ್ಚಿಡಬೇಕು. ಅಲ್ಲದೆ, ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು.
  • ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
  • ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
  • ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page