Connect with us

LATEST NEWS

ವಿಶ್ವದ ಅತಿ ದೊಡ್ಡ ರೈಲ್ವೆ ಸೇತುವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

Published

on

ಮಂಗಳೂರು/ನವದೆಹಲಿ: ಜಗತ್ತಿನ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯನ್ನು ನಾಳೆ (ಜೂ.6) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.


ಹೌದು, ಪ್ರಧಾನಿ ಮೋದಿ ಶುಕ್ರವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ವಿಶ್ವದ ಅತ್ಯಂತ ಎತ್ತರದ ರೈಲ್ವೇ ಕಮಾನು ಸೇತುವೆಯಾದ ಚೆನಾಬ್ ಸೇತುವೆ ಸೇರಿದಂತೆ 46,000 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ದೇಶದ ಮೊದಲ ಕೇಬಲ್ ಆಧಾರಿತ ರೈಲ್ವೇ ಸೇತುವೆಯಾದ ಅಂಜಿ ಸೇತುವೆ ಹಾಗೂ ಉಧಂಪುರ-ಶ್ರೀನಗರ- ಬಾರಾಮುಲ್ಲಾ ರೈಲು ಲಿಂಕ್ ಯೋಜನೆಯನ್ನೂ ಅವರು ಉದ್ಘಾಟಿಸಲಿದ್ದಾರೆ. ಜತೆಗೆ ವೈಷ್ಣದೇವಿ ಕಟ್ರಾ- ಶ್ರೀನಗರ ನಡುವೆ ಸಾಗುವ ವಂದೇ ಭಾರತ್ ರೈಲಿಗೆ ಹಸುರು ನಿಶಾನೆಯನ್ನು ತೋರಲಿದ್ದಾರೆ.

ಇದನ್ನೂ ಓದಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪಯಣ ಮುಂದೂಡಿಕೆ

ಚೆನಾಬ್ ರೈಲ್ವೆ ಸೇತುವೆಯ ವಿಶೇಷತೆ
ವಿಶ್ವದ ಅತಿ ದೊಡ್ಡ ರೈಲ್ವೆ ಸೇತುವೆಯು ಚೆನಾಬ್ ನದಿಯಿಂದ 359 ಮೀ (1,178 ಅಡಿ) ಎತ್ತರದಲ್ಲಿ ಚೆನಾಬ್ ನದಿಯನ್ನು ವ್ಯಾಪಿಸಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ. ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆಯು ಭೂಕಂಪ ಮತ್ತು ಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳಲು ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ.

ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವಲ್ಲಿ ಈ ಸೇತುವೆ ಮುಖ್ಯ ಪಾತ್ರ ವಹಿಸುತ್ತದೆ. ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲಿನ ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಪ್ರಸ್ತುತ ರಸ್ತೆಯ ಮೂಲಕ 6-7 ಗಂಟೆಗಳಿಗೆ ಹೋಲಿಸಿದರೆ, ಇದರಲ್ಲಿ ಕೇವಲ 3 ಗಂಟೆಗಳು ಬೇಕಾಗುತ್ತದೆ.

ಚೆನಾಬ್ ಸೇತುವೆಯು ಗಂಟೆಗೆ 260 ಕಿ.ಮೀ. ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು 120 ವರ್ಷಗಳ ಜೀವಿತಾವಧಿಯನ್ನು ಹೊಂದಿರುತ್ತದೆ.

ಕೂತುಲಹಕಾರಿ ವೀಡಿಯೋ ಇಲ್ಲಿದೆ

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

bengaluru

ವಿಶೇಷ ಚೇತನ ಯುವತಿಯನ್ನೂ ಬಿಡದ ಕಾಮುಕ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published

on

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ.

ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ.

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿ ಮುಂದಾಗಿದ್ದನು. ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page