Connect with us

STATE

ವಯನಾಡಿನಲ್ಲಿ ಜಯಭೇರಿಯತ್ತ ಪ್ರಿಯಾಂಕಾ ಗಾಂಧಿ

Published

on

ತಿರುವನಂತಪುರಂ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 2 ಲಕ್ಷದ 16 ಸಾವಿರ ಮತಗಳೊಂದಿಗೆ ಗೆಲುವಿನತ್ತ ಮುನ್ನುಗ್ಗುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪ್ರಿಯಾಂಕಾ ಗಾಂಧಿ ಚೊಚ್ಚಲ ಗೆಲುವು ಸಾಧಿಸಲಿದ್ದಾರೆ. ಮೊದಲ ಚುನಾವಣೆಯಲ್ಲೇ ಪ್ರಿಯಾಂಕಾ ಭಾರೀ ಅಂತರ ಕಾಯ್ದುಕೊಂಡಿದ್ದಾರೆ.

ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ ಹಾಗೂ ಬಿಜೆಪಿಯ ನವ್ಯಾ ಹರಿದಾಸ್ ಅವರನ್ನು ಪ್ರಿಯಾಂಕಾ ಅವರು ಹಿಂದಿಕ್ಕಿ ಗೆಲುವು ಸಾಧಿಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

LATEST NEWS

ತನ್ನ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳನ್ನು ಹತ್ಯೆ ಮಾಡಿದ ಮಹಿಳೆ; ಕಾರಣ ಕೇಳಿದ್ರೆ ಶಾಕ್ ಆಗ್ತಿರಾ!

Published

on

ಪಾಣಿಪತ್: ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರಣಿ ಕೊಲೆ ಪ್ರಕರಣವೂ ಜನರನ್ನು ಬೆಚ್ಚಿಬೀಳಿಸಿದೆ. ಕೆಟ್ಟ ಮಕ್ಕಳಿದ್ದರೂ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎಂಬ ಮಾತನ್ನು ಈ ಘಟನೆ ಸುಳ್ಳು ಮಾಡಿದೆ. ಇಲ್ಲೊಬ್ಬ ತಾಯಿ ತನ್ನ ಸ್ವಂತ ಮಗುವನ್ನು ಸೇರಿ ಸಂಬಂಧಿಕರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.


ನೌಲ್ತಾ ಗ್ರಾಮದ ಪೂನಂ(32) ಕೃತ್ಯ ಎಸಗಿದ ತಾಯಿ.

ಪೂನಂ ಕಳೆದ ಎರಡು ವರ್ಷಗಳಲ್ಲಿ, ತನ್ನ ಮೂರು ವರ್ಷದ ಮಗು ಸೇರಿದಂತೆ ನಾಲ್ಕು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮದುವೆ ಮನೆಯಲ್ಲಿ ರಾದ್ಧಾಂತ ಮಾಡಿದ ವರನ ಕುಟುಂಬ; ಕಾರಣ ಏನು ಗೊತ್ತಾ?

ನಾಲ್ಕು ಮಕ್ಕಳ ಕೊಲೆ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆಯ ರಹಸ್ಯ ಬಯಲಾಗಿದ್ದು, ಮಕ್ಕಳ ಸೌಂದರ್ಯದ ಬಗ್ಗೆ ಆಕೆಗಿದ್ದ ಅತಿಯಾದ ಅಸೂಯೆಯೇ ಈ ಕೊಲೆಗಳಿಗೆ ಕಾರಣ ಎಂದು ತಿಳಿದುಬಂದಿದೆ.

Continue Reading

LATEST NEWS

ಬಸ್ಸಿಗೆ ಬೈಕ್ ಡಿ*ಕ್ಕಿ; ಯುವಕ ಸಾ*ವು

Published

on

ಮಂಗಳೂರು/ಬೆಂಗಳೂರು : ಬಸ್ಸಿಗೆ  ಬೈಕ್  ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿರುವ ಘಟನೆ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯ 48ರ ಮಾದನಾಯಕನಹಳ್ಳಿ ಬಳಿ ನಡೆದಿದೆ.

ನಾಗಸಂದ್ರದ ವಿದ್ಯಾನಗರ ನಿವಾಸಿ, ಸುಮಂತ್. ಜೆ. ಗೌಡ (21) ಮೃ*ತ ಬೈಕ್ ಸವಾರ. ಸ್ನೇಹಿತನನ್ನು ನೋಡಲು ಹೋಗುತ್ತಿದ್ದ ವೇಳೆ ಈ ಅ*ಪಘಾ*ತ ಸಂಭವಿಸಿದೆ.

ಚಲಿಸುತ್ತಿದ್ದ ಖಾಸಗಿ ಬಸ್ ನಿಲ್ಲಿಸಿದ ಪರಿಣಾಮ ಹಿಂದೆ ಬೈಕ್‌ನಲ್ಲಿ ಬರುತ್ತಿದ್ದ ಸುಮಂತ್ ಕಂಟ್ರೋಲ್ ಸಿಗದೇ ಬಸ್ಸಿಗೆ ಡಿಕ್ಕಿಯಾಗಿದ್ದಾನೆ. ಪರಿಣಾಮ ಗಂ*ಭೀರ ಗಾ*ಯಗೊಂಡು  ಸುಮಂತ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾನೆ.

ಇದನ್ನೂ ಓದಿ : ಗಿಲ್ಲಿ ಮನೆಯಿಂದ ಬಂತು ಶುಭ ಸುದ್ದಿ; ಏನು ಗೊತ್ತಾ?

ಈ ಬಗ್ಗೆ  ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ಕನ್ನಡದ ನಿರ್ದೇಶಕ ಸಾವು

Published

on

ಶಿವಮೊಗ್ಗ: ಸಾವು ಅನ್ನೋದು ಯಾವಾಗ ಹೇಗೆ ಬರುತ್ತದೆ ಎಂದು ಊಹಿಸೋದು ತುಂಬಾನೇ ಕಷ್ಟ. ಅದೆಷ್ಟೋ ಕಲಾವಿದರು ಅಭಿನಯ ಮಾಡುತ್ತಿರುವಾಗಲೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ ಕನ್ನಡದ ನಿರ್ದೇಶಕರೊಬ್ಬರು ಸಿನಿಮಾ ಚಿತ್ರೀಕರಣದ ವೇಳೆಯೇ ಕುಸಿದು ಬಿದ್ದ ಪರಿಣಾಮ ಬುಧವಾರ (ಡಿ.03) ಮೃತಪಟ್ಟಿದ್ದಾರೆ. ಸಂಗೀತ್ ಸಾಗರ್ ಮೃತಪಟ್ಟ ನಿರ್ದೇಶಕ.


ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ಪಾತ್ರಧಾರಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಆ ವೇಳೆ ನಿರ್ದೇಶಕ ಸಾಗರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಏನೂ ಪ್ರಯೋಜನ ಆಗಿಲ್ಲ.

ಇದನ್ನೂ ಓದಿ: ಮದುವೆ ಮನೆಯಲ್ಲಿ ರಾದ್ಧಾಂತ ಮಾಡಿದ ವರನ ಕುಟುಂಬ; ಕಾರಣ ಏನು ಗೊತ್ತಾ?

ಮೃತ ನಿರ್ದೇಶಕ ಸಂಗೀತ್ ಸಾಗರ್ ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page