Connect with us

LATEST NEWS

ಲಸಿಕೆ ಪಡೆಯಲು ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡದವರಿಗೆ ಎದುರಾದ ಸಮಸ್ಯೆ..!

Published

on

ಮುಂಬೈ:ಕೊರೊನಾ ಮಾಹಾಮಾರಿ ಎಲ್ಲೆಡೆ ತನ್ನ ಕಬಂದ ಬಾಹು ಚಾಚುತ್ತಿದೆ ಆದರೆ ಲಸಿಕಾ ಕೇಂದ್ರದಲ್ಲಿ ಲಸಿಕೆ ಕೊಳ್ಳಲು ಕೆಲವರು ಪರದಾಡುತ್ತಿದ್ದಾರೆ. ಕಾರಣ ಆಧಾರ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಸಮಸ್ಯೆ ಅವರಿಗೆ ಎದುರಾಗಿದೆ. 

ಪಾನ್ ಜೊತೆ ಆಧಾರ್ ಲಿಂಕ್ ಮಾಡಿದವರಿಗೆ ಮಾತ್ರ ಲಸಿಕೆ ನೀಡಲಾಗ್ತಿದೆ. ಆದ್ರೆ ಕೇಂದ್ರಕ್ಕೆ ಲಸಿಕೆ ಪಡೆಯಲು ಬಂದವರಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಪಾನ್-ಆಧಾರ್ ಲಿಂಕ್ ಮಾಡಿದ್ದರು ಎನ್ನಲಾಗಿದೆ. ಹಾಗಾಗಿ ಉಳಿದವರು ಸಮಸ್ಯೆ ಎದುರಿಸಿದ್ದಾರೆಂದು ವರದಿ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಚಿಕಿತ್ಸೆಗೆ ಬೆಡ್ ಸಮಸ್ಯೆ ಎದುರಾಗುತ್ತಿದೆ. ಮುಂದಿನ ಐದು-ಆರು ವಾರಗಳಲ್ಲಿ ಮುಂಬೈಯಲ್ಲಿ ಮೂರು ಜಂಬೊ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಸರ್ಕಾರ ಘೋಷಿಸಿದೆ. ಈ ಮಧ್ಯೆ ಇಂಥ ವಿಚಿತ್ರ ನಿಯಮಗಳನ್ನು ಜಾರಿಗೆ ತರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋ-ವಿನ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಆದ್ರೆ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡವರಿಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿದೆ.

ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳದವರು ಮಧ್ಯಾಹ್ನ 3 ಗಂಟೆ ನಂತ್ರ ಲಸಿಕೆ ಹಾಕಿಸಿಕೊಳ್ಳಬೇಕು. ಆಧಾರ್ ಕಾರ್ಡ್ ಸೇರಿದಂತೆ ಯಾವುದಾದ್ರೊಂದು ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕು.

DAKSHINA KANNADA

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಮೇಲೆ ಜೈಲಲ್ಲೇ ಹಲ್ಲೆ

Published

on

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಸೋಮವಾರ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಏಕಾಏಕಿ ಕಲ್ಲು ಹಾಗೂ ಮಾರಕಾಯುಧಗಳಿಂದ ದಾಳಿ ಮಾಡಲಾಗಿದ್ದು, ಇದರಿಂದ ನೌಷಾದ್‌ಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಚೊಟ್ಟೆ ನೌಷಾದ್ ಹಿನ್ನಲೆ ನೋಡೋದಾದ್ರೆ ಆರೋಪಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಪ್ರತಿಕ್ರಿಯೆ:

ಇನ್ನು ನಗರದ ಜೈಲಿನಲ್ಲಿ ಚೊಟ್ಟೆ ನೌಷಾದ್ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂದಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕ್ವಾರಂಟೈನ್ ಸೆಲ್ ವಿಭಾಗದ ವಿಚಾರಣಾ ಬಂದಿಗಳು ಜೈಲಿನ‌ ಕಚೇರಿ ಮುಂಭಾಗ ನಿಂತು, ಬಿ ಬ್ಯಾರಕ್ ಖೈದಿಗಳನ್ನು ಗೂರಾಯಿಸಿದ್ದರು. ಈ ಕಾರಣಕ್ಕಾಗಿ ಪರಸ್ಪರ ಅವ್ಯಾಚ ಶಬ್ದಗಳೊಂದಿಗೆ ಬೈದಾಡಿಕೊಂಡು ಕೂಗಾಡಿದ್ದರು.

ಇದನ್ನೂ ಓದಿ: ಮನೆ ಮುಂದೆ ಕಟ್ಟಿದ್ದ 3 ಹಸುಗಳ ಕಳ್ಳತನ

ಸಿಮೆಂಟ್ ಬ್ಲಾಕ್‌ನ್ನು ಒಡೆದು ಅದರ ತುಂಡುಗಳನ್ನು ಎಸೆದಿದ್ದರು. ಬಿ‌ ಬ್ಯಾರಕ್‌ನ ಖೈದಿಗಳು ಮಧ್ಯ ದ್ವಾರದ ಗೇಟ್‌ನ್ನು ದೂಡಿ ಹೊರಬಂದು ಕಛೇರಿಯ ಡೋರಿನ ಗ್ಲಾಸ್‌ನ್ನು ಕೈನಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ವಿಚಾರಣಾ ಸಿಬಂದಿ ಒಬ್ಬನಿಗೆ ಕಾಲಿಗೆ ರಕ್ತ ಗಾಯವಾಗಿದೆ. ಮಂಗಳೂರಿನ ಕಾರಾಗೃಹದ ಅಧೀಕ್ಷಕರು, ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Continue Reading

DAKSHINA KANNADA

ಪವಿತ್ರ ಹಜ್ ಯಾತ್ರೆ ಕೈಗೊಂಡ ಸ್ಪೀಕರ್‌ ಯು.ಟಿ. ಖಾದರ್‌

Published

on

ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಅವರು ಈ ವರ್ಷದ ಪವಿತ್ರ ಹಜ್ ಯಾತ್ರೆಯನ್ನು ಕೈಗೊಂಡಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ಮಂಗಳೂರಿನ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಬಳಿಕ ಮಾತನಾಡಿದ ಯು.ಟಿ.ಖಾದರ್‌ ಅವರು ‘ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ಹಜ್ ಯಾತ್ರೆ ಪವಿತ್ರವಾದುದು. ಅದು ಎಲ್ಲರಿಗೂ ದಕ್ಕುವಂತದ್ದಲ್ಲ. ಹಣವಿದ್ದೂ ಹಜ್ ಯಾತ್ರೆ ಮಾಡಲಾಗದವರು ಇದ್ದಾರೆ. ಹಣವಿಲ್ಲದವರಿಗೂ ಈ ಸೌಭಾಗ್ಯ ಲಭಿಸುತ್ತದೆ. ನಾನು ಹಜ್ ಯಾತ್ರೆ ಮಾಡಲು ಯಾವುದೇ ಪೂರ್ವಸಿದ್ಧತೆ ಮಾಡಿದವನಲ್ಲ. ಅನಿರೀಕ್ಷಿತವಾಗಿ ನನಗೆ ಮತ್ತು ನನ್ನ ಸಹೋದರ ಇಫ್ತಿಕಾರ್ ಹಾಗೂ ಕುಟುಂಬದ ಸದಸ್ಯರಿಗೆ ಈ ಅವಕಾಶ ಲಭಿಸಿದೆ. ನಮ್ಮ ನಾಡು, ಸಮಾಜದ ಮತ್ತು ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ’ ಎಂದು ಹೇಳಿದರು.

ಇದೇ ವೇಳೆ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್‌ಕೇರ್ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡಾ ಬೀಳ್ಕೊಡಲಾಯಿತು. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೇನೆಪೊಯ ವಿಶ್ವ ವಿದ್ಯಾಲಯದ ಕುಲಾಧಿಪತಿ ಡಾ.ವೈ.ಅಬ್ದುಲ್ಲಾ ಕುಂಞಿ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ದ.ಕ.ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಮತ್ತಿತರರು ಉಪಸ್ಥಿತರಿದ್ದರು.

 

Continue Reading

LATEST NEWS

ಮನೆ ಮುಂದೆ ಕಟ್ಟಿದ್ದ 3 ಹಸುಗಳ ಕಳ್ಳತನ

Published

on

ಬೆಂಗಳೂರು: ಮನೆ ಮುಂದೆ ಕಟ್ಟಿದ್ದ 3 ಹಸುಗಳು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಪ್ಪ ಎಂಬುವರಿಗೆ ಸೇರಿದ 12 ಹಸುಗಳಲ್ಲಿ ಮೂರು ಹಸುಗಳನ್ನು ಕದಿಯಲಾಗಿದೆ. ಈ ಮೂರು ಹಸುಗಳಲ್ಲಿ, ಒಂದು ಹಸು ಇನ್ನೇರಡು ತಿಂಗಳಲ್ಲಿ ಕರು ಹಾಕುತ್ತಿತ್ತು. ಇನ್ನೆರಡು ಹಸುಗಳಿಂದ ಮನೆ ನಡೆಸುವಷ್ಟು ಆದಾಯ ಬರುತ್ತಿತ್ತು.

ಇದನ್ನೂ ಓದಿ: ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಇತಂಹ ಹಸುಗಳನ್ನು ಖತರ್ನಾಕ್ ಕಳ್ಳರು ಕದ್ದಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page